ಕಾರ್ಕಳ: SVT ಕಾಲೇಜಿನ ವಾಣಿಜ್ಯ ಸಂಘದ ಉದ್ಘಾಟನೆ; ಬ್ಯಾಂಕಿಂಗ್, KSET ಪರೀಕ್ಷೆಗಳ ತಯಾರಿ ಬಗ್ಗೆ ಮಾಹಿತಿ ಕಾರ್ಯಾಗಾರ

0

 

ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಪ್ರಸ್ತುತ ಸಾಲಿನ ವಾಣಿಜ್ಯ
ಸಂಘದ ಉದ್ಘಾಟನಾ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮದಲ್ಲಿ ಯೂನಿಯನ್ ಬ್ಯಾಂಕ್ ಕಾರ್ಕಳ ಇಲ್ಲಿನ ಅಧಿಕಾರಿಯಾದ ಕು. ಪ್ರತೀಕ್ಷಾ ಪೈ ಇವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ Banking, KSET ಪರೀಕ್ಷೆಗಳ ತಯಾರಿಯನ್ನು ಯಾವ ರೀತಿ ಮಾಡಬಹುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾಲೇಜಿನ ಪ್ರಾಂಶುಪಾಲೆಯಾದ ಪ್ರೊ. ಗೀತಾ ಜಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸೀತಾರಾಮ ನಾಯಕ್, ವಾಣಿಜ್ಯ ಸಂಘದ ಉಪನ್ಯಾಸಕರಾಗಿರುವ ಕು. ಭಾಗ್ಯ, ವಿಜೇತಾ, ಅರ್ಪಿತಾ ಉಪಸ್ಥಿತರಿದ್ದರು. ಕು. ಅರ್ಪಿತಾ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಕು.ವೈಷ್ಣವಿ ಪೈ ದ್ವಿತೀಯ ಬಿ.ಕಾಂ ವಂದಿಸಿದರು. ಕು. ಮುನೀರಾ ಪ್ರಥಮ ಬಿ.ಕಾಂ ಕಾರ್ಯಕ್ರಮ ನಿರೂಪಿಸಿದರು.

   

LEAVE A REPLY

Please enter your comment!
Please enter your name here