
ಲಯನ್ಸ್ ಕ್ಲಬ್ ಕಾರ್ಕಳ ಸೆಂಟ್ರಲ್ ಇದರ ಉದ್ಘಾಟನಾ ಹಾಗೂ ಪದಗ್ರಹಣ ಸಮಾರಂಭ ಅ.5 ರಂದು ಕಾರ್ಕಳ ಇನ್ ಹೋಟೆಲ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ವಾಯ್ಸ್ ಆಫ್ ಆರಾದನ ಸಂಸ್ಥೆಯ ಹೆಜ್ಜೆ ಗೆಜ್ಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದ.ಕ. ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಪದ್ಮಪ್ರಸಾದ್ ಜೈನ್ ರವರು ದೀಪ ಬೆಳಗಿಸಿ ಚಾಲನೆ ನೀಡಿ ಶುಭಹಾರೈಸಿದರು.
ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ Ln. ಗಿರೀಶ್ ರಾವ್, ವಾಯ್ಸ್ ಆಫ್ ಆರಾದನ ಸಂಸ್ಥೆಯ ನಿರ್ದೇಶಕಿಯರಾದ ಪದ್ಮಶ್ರೀ ಭಟ್, Ln. ವಲೇರಿಯನ್ ಹಾಗೂ ಕಾರ್ಕಳ ಲಯನ್ಸ್ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷರಾದ Ln. ಅರುಣ್ ಶೆಟ್ಟಿಗಾರ್, ಕಾರ್ಯದರ್ಶಿ ದತ್ತಾತ್ರೇಯ, ಕೋಶಾಧಿಕಾರಿ Ln. ಮಂಜುನಾಥ್ ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.












