ಕಾರ್ಕಳದ ಹೊಸ್ಮಾರಿನ ರಾಜ್ಯ ಹೆದ್ದಾರಿಯಲ್ಲಿ ಕಾರು ಚಾಲಕನೋರ್ವನು ತನ್ನ ಕಾರನ್ನು ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬೈಕ್ ಸವಾರನ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ.
ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನ ಸಂಬಂಧಿ ಕಿಶೋರ್ ಅವರು ನೀಡಿದ ದೂರಿನ ಅನ್ವಯ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















