
ಅ.5 ರಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ರಿಕ್ಷಾವೊಂದು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದ್ದು, ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಅ.7 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಝಾರ್ಖಂಡ್ ಮೂಲದ ರಾಜೇಶ್ ಎಂದು ಗುರ್ತಿಸಲಾಗಿದ್ದು, ಇವರು ಸ್ನೇಹಿತರೊಂದಿಗೆ ನಂದಳಿಕೆಯ ಜೀಸಸ್ ವುಡ್ ಇಂಡಸ್ಟ್ರೀಸ್ ನಲ್ಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಎಂದಿನಂತೆ ರಾತ್ರಿ ವೇಳೆ ಬೆಳ್ಮಣ್ಣು ಪೇಟೆಗೆ ತೆರಳಿ ಹಿಂತಿರುಗುವಾಗ ಈ ದುರ್ಘಟನೆ ನಡೆದಿದೆ.
ಈ ಬಗ್ಗೆ ಮೃತರ ಸ್ನೇಹಿತ ರೂಪಾನ್ ಮರಾಂಡಿ ನೀಡಿರುವ ದೂರಿನ ಅನ್ವಯ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು




