
ಕಾರ್ಕಳದ ಮಿಯ್ಯಾರಿನ ದೇಂದಬೆಟ್ಟು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸುಡುಮದ್ದು ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ಮಾಡಿದ ಪೊಲೀಸರು ವಿವಿಧ ಕಂಪೆನಿಗೆ ಸೇರಿದ ವಿವಿಧ ಬಗೆಯ 1 ಕೋಟಿಯ 34 ಲಕ್ಷದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಪಟಾಕಿ ದಾಸ್ತಾನಿನ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಕಳ ಪೊಲೀಸ್ ಉಪನಿರೀಕ್ಷಕರು ತನ್ನ ತಂಡಗಳೊಂದಿಗೆ ದಾಳಿ ನಡೆಸಿ ಆರೋಪಿಗಳಾದ ಸತ್ಯೇಂದ್ರ ನಾಯಕ್, ಶೀಕಾಂತ್ ನಾಯಕ್, ರಮಾನಂದ್ ನಾಯಕ್ ನನ್ನು ಬಂಧಿಸುವುದರ ಜೊತೆಗೆ 1,34,05,266/- ರೂ. ಮೌಲ್ಯದ ಪಟಾಕಿ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












