Saturday, July 27, 2024

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

Homeಕಾರ್ಕಳಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ 'ವೇಷ' ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ...

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ

ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌.ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ ‘ವೇಷ’ ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ‘ವೇಷ’ದ ಬಗ್ಗೆ ಮಾಹಿತಿ ನೀಡಿದರು.

ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ‘ವೇಷ’ ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ,ನಾಯಕನಿಗೆ ಯಾವುದೊ ಒಂದು ಸಂದರ್ಭ ‘ವೇಷ’ ಹಾಕುವ ಹಾಗೆ ಮಾಡುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ ‘ವೇಷ’ ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ.
ಈ ತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್.

“ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ.’ವೇಷ’ ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ.ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ-ನಿರ್ಮಾಪಕ ರಾಘವೇಂದ್ರ,

ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಲಿಖಿತ ಶೆಟ್ಟಿ ಬೂದಾಡಿ, ನೇಹಾ ಗೌಡ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ‘ವೇಷ’ ಚಿತ್ರದ ಕುರಿತು ಮಾತನಾಡಿದರು.ಚಿತ್ರದ ವಿತರಣೆಯನ್ನ ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್ ಗೌಡ ಅವರು ಮಾಡಲಿದ್ದಾರೆ.

ರಾಘವೇಂದ್ರ ಮೂಲತಃ ಹೆಬ್ರಿಯವರಾಗಿದ್ದು ರಂಗಭೂಮಿ ಕಲಾವಿದರಾಗಿದ್ದಾರೆ.ವೇಷ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.ಅಲ್ಲದೆ ಇದೆ ಸಿನಿಮಾದ ನಿರ್ಮಾಪಕರಾಗಿ ಬಹುದೊಡ್ಡ ಜವಾಬ್ದಾರಿ ನಿರ್ವಹಿಸಿದ್ದಾರೆ.ರಾಜ್ಯದಾದ್ಯಂತ ಬಿಡುಗಡೆಯಾಗಿರುವ ವೇಷ ಸಿನಿಮಾ ಕಾರ್ಕಳದ ಮೂವಿ ಪ್ಲಾನೆಟ್ ನಲ್ಲಿ ನಾಲ್ಕು ಷೋ ಪ್ರದರ್ಶನಗೊಳ್ಳಲಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

Homeಕಾರ್ಕಳಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ 'ವೇಷ' ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ...

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ

ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌.ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ ‘ವೇಷ’ ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ‘ವೇಷ’ದ ಬಗ್ಗೆ ಮಾಹಿತಿ ನೀಡಿದರು.

ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ‘ವೇಷ’ ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ,ನಾಯಕನಿಗೆ ಯಾವುದೊ ಒಂದು ಸಂದರ್ಭ ‘ವೇಷ’ ಹಾಕುವ ಹಾಗೆ ಮಾಡುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ ‘ವೇಷ’ ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ.
ಈ ತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್.

“ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ.’ವೇಷ’ ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ.ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ-ನಿರ್ಮಾಪಕ ರಾಘವೇಂದ್ರ,

ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಲಿಖಿತ ಶೆಟ್ಟಿ ಬೂದಾಡಿ, ನೇಹಾ ಗೌಡ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ‘ವೇಷ’ ಚಿತ್ರದ ಕುರಿತು ಮಾತನಾಡಿದರು.ಚಿತ್ರದ ವಿತರಣೆಯನ್ನ ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್ ಗೌಡ ಅವರು ಮಾಡಲಿದ್ದಾರೆ.

ರಾಘವೇಂದ್ರ ಮೂಲತಃ ಹೆಬ್ರಿಯವರಾಗಿದ್ದು ರಂಗಭೂಮಿ ಕಲಾವಿದರಾಗಿದ್ದಾರೆ.ವೇಷ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.ಅಲ್ಲದೆ ಇದೆ ಸಿನಿಮಾದ ನಿರ್ಮಾಪಕರಾಗಿ ಬಹುದೊಡ್ಡ ಜವಾಬ್ದಾರಿ ನಿರ್ವಹಿಸಿದ್ದಾರೆ.ರಾಜ್ಯದಾದ್ಯಂತ ಬಿಡುಗಡೆಯಾಗಿರುವ ವೇಷ ಸಿನಿಮಾ ಕಾರ್ಕಳದ ಮೂವಿ ಪ್ಲಾನೆಟ್ ನಲ್ಲಿ ನಾಲ್ಕು ಷೋ ಪ್ರದರ್ಶನಗೊಳ್ಳಲಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

Homeಕಾರ್ಕಳಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ 'ವೇಷ' ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ...

ಕಾರ್ಕಳದ ರಾಘವೇಂದ್ರ ಡಿ.ಜಿ ನಿರ್ಮಾಪಕನಾಗಿ, ನಾಯಕ ನಟನಾಗಿ ಅಭಿನಯಿಸಿರುವ ‘ವೇಷ’ ಸಿನಿಮಾ ನಾಳೆ ರಾಜ್ಯದಾದ್ಯಂತ ತೆರೆಗೆ

ಪ್ಲಾನೆಟ್ ಚಿತ್ರಮಂದಿರದಲ್ಲಿ ಪ್ರದರ್ಶನ

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌.ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ ‘ವೇಷ’ ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ‘ವೇಷ’ದ ಬಗ್ಗೆ ಮಾಹಿತಿ ನೀಡಿದರು.

ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ‘ವೇಷ’ ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ,ನಾಯಕನಿಗೆ ಯಾವುದೊ ಒಂದು ಸಂದರ್ಭ ‘ವೇಷ’ ಹಾಕುವ ಹಾಗೆ ಮಾಡುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ ‘ವೇಷ’ ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ.
ಈ ತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್.

“ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ.’ವೇಷ’ ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ.ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ-ನಿರ್ಮಾಪಕ ರಾಘವೇಂದ್ರ,

ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಲಿಖಿತ ಶೆಟ್ಟಿ ಬೂದಾಡಿ, ನೇಹಾ ಗೌಡ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ‘ವೇಷ’ ಚಿತ್ರದ ಕುರಿತು ಮಾತನಾಡಿದರು.ಚಿತ್ರದ ವಿತರಣೆಯನ್ನ ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್ ಗೌಡ ಅವರು ಮಾಡಲಿದ್ದಾರೆ.

ರಾಘವೇಂದ್ರ ಮೂಲತಃ ಹೆಬ್ರಿಯವರಾಗಿದ್ದು ರಂಗಭೂಮಿ ಕಲಾವಿದರಾಗಿದ್ದಾರೆ.ವೇಷ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.ಅಲ್ಲದೆ ಇದೆ ಸಿನಿಮಾದ ನಿರ್ಮಾಪಕರಾಗಿ ಬಹುದೊಡ್ಡ ಜವಾಬ್ದಾರಿ ನಿರ್ವಹಿಸಿದ್ದಾರೆ.ರಾಜ್ಯದಾದ್ಯಂತ ಬಿಡುಗಡೆಯಾಗಿರುವ ವೇಷ ಸಿನಿಮಾ ಕಾರ್ಕಳದ ಮೂವಿ ಪ್ಲಾನೆಟ್ ನಲ್ಲಿ ನಾಲ್ಕು ಷೋ ಪ್ರದರ್ಶನಗೊಳ್ಳಲಿದೆ.

ಇನ್ನು ಹೆಚ್ಚಿನ ಸುದ್ದಿಗಳು.

LEAVE A REPLY

Please enter your comment!
Please enter your name here

RELATED ARTICLES

Most Popular

Recent Comments

Times of karkala Add