Home ಕಾರ್ಕಳ ಕಾರ್ಕಳ: ಅಕ್ರಮ ಕಲ್ಲು ಗಣಿಗಾರಿಕಾ ಪ್ರದೇಶಕ್ಕೆ ಪೋಲೀಸರ ದಾಳಿ

ಕಾರ್ಕಳ: ಅಕ್ರಮ ಕಲ್ಲು ಗಣಿಗಾರಿಕಾ ಪ್ರದೇಶಕ್ಕೆ ಪೋಲೀಸರ ದಾಳಿ

0

 

ಜಾರ್ಕಳ ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯ ಕೋರೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಅ.22 ರಂದು ನಡೆದಿದೆ.

ಕಾರ್ಕಳ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ರವರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಎರ್ಲಪಾಡಿ ಗ್ರಾಮದ ಜಾರ್ಕಳದ ಗಣಿಗಾರಿಕಾ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ರಾಜೇಶ್ ಶೆಟ್ಟಿ ಎಂಬಾತ ಯಾವುದೇ ಪರವಾನಿಗೆ ಹೊಂದದೇ, ಕಪ್ಪು ಕಲ್ಲುಗಳನ್ನು ಮಾರಾಟಕ್ಕಾಗಿ ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಸ್ವಂತ ಲಾಭಕ್ಕಾಗಿ ಗಣಿಗಾರಿಕೆ ನಡೆಸಿ ಕಳವು ಮಾಡಿದ್ದಾಗಿ ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು    

NO COMMENTS

LEAVE A REPLY

Please enter your comment!
Please enter your name here