
ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿಯ ಮಾಹಿತಿ ಕಾರ್ಯಾಗಾರ ಹಾಗೂ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮ
ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಮಾನವಿಕ ಸಂಘ ಹಾಗೂ ಯುವಸ್ಪಂದನ ಉಡುಪಿ ಇದರ ಸಹಯೋಗದೊಂದಿಗೆ ಕೌಶಲ್ಯ ಅಭಿವೃದ್ಧಿಯ ಮಾಹಿತಿ ಕಾರ್ಯಾಗಾರ ಹಾಗೂ ಮಾನವಿಕ ಸಂಘದ ಉದ್ಘಾಟನೆ ಜರುಗಿತು.
ಕಾರ್ಯಕ್ರಮದಲ್ಲಿ ಶ್ಯಾಮಲ ಸಲಹೆಗಾರರು ಹಾಗೂ ಯುವಸ್ಪಂದನದ ಕೇಂದ್ರದಲ್ಲಿ ಯುವಪರಿವರ್ತಕರಾಗಿ ಕಾರ್ಯನಿರ್ವಹಿಸುತ್ತಿರುವ ಸುನೀತಾ ಇವರು ಸಂವಹನ, ಧೃಢನಿಶ್ಚಯ ಮತ್ತು ಸಹಾಯ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯದ ಬಗ್ಗೆ ಮಾತನಾಡಿ, ಬೇರೆ ಬೇರೆ ಚಟುವಟಿಕೆಗಳ ಮೂಲಕ ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆಯಾದ ಪ್ರೋ ಗೀತಾ. ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾನವಿಕ ಸಂಘದ ನಿರ್ದೇಶಕರಾದ ಸೋನಾ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ವೇತಾ ವಂದಿಸಿದರು. ಅನನ್ಯ ತೃತೀಯ ಬಿ.ಕಾಂ ಕಾರ್ಯಕ್ರಮ ನಿರ್ವಹಿಸಿದರು.
ಜಾಹೀರಾತು




