ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ| ಇಂದಿರಾ ಗಾಂಧಿಯವರ ಪುಣ್ಯತಿಥಿ ಕಾರ್ಯಕ್ರಮ

0

 

ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಪುಣ್ಯತಿಥಿ ಕಾರ್ಯಕ್ರಮವನ್ನು ನಿಂಜೂರು ಶ್ರೀ ಗುರು ನಿತ್ಯಾನಂದ ಸಭಾಭವನದಲ್ಲಿ ನಡೆಸಲಾಯಿತು.

ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸುವುದರ ಮೂಲಕ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಕೆಲಸ, ಸಾಧನೆ ಹಾಗೂ ಸಮರ್ಪಣೆ ಮತ್ತು ಸೇವಾ ಮನೋಭಾವವನ್ನು ಸ್ಮರಿಸುತ್ತಾ ಗೌರವ ಸಮರ್ಪಿಸಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಎಂ ಶೆಟ್ಟಿ ಪಳ್ಳಿ ಅವರು ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಅವರ ಸಾದನೆಯ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ದಿನಕರ ಶೆಟ್ಟಿ, ಮಾಜಿ ಮಂಡಲ ಪ್ರಧಾನರಾದ ಚಂದ್ರಶೇಖರ ಶೆಟ್ಟಿ ಪಳ್ಳಿ, ಕಾರ್ಕಳ ತಾಲೂಕು ಗ್ಯಾರಂಟೀ ಸಮಿತಿ ಸದಸ್ಯ ಸಂತೋಷ ಶೆಟ್ಟಿ ಮಾಜಿ ಪ್ರಧಾನಿ ಅವರ ಸಾಧನೆ ಮತ್ತು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ನಿಂಜೂರು ಬೂತ್ ಅಧ್ಯಕ್ಷ ನೆಲ್ಸನ್ ಡಿಸೋಜ ಸ್ವಾಗತಿಸಿದರು, ನಿಂಜೂರು ಮಹಿಳಾ ಕಾಂಗ್ರೆಸ್ ಸಮಿತಿ ಬೂತ್ ಅಧ್ಯಕ್ಷ ಫ್ಲೋರಿನ್ ಧನ್ಯವಾದವಿತ್ತರು. ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಲ್ಸನ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

   

LEAVE A REPLY

Please enter your comment!
Please enter your name here