Home ಕಾರ್ಕಳ ನಿರೀಕ್ಷಿತಂ ಸಂದಾನಂ ಕಿರುಚಿತ್ರದ ಚಿತ್ರೀಕರಣ ಆರಂಭ

ನಿರೀಕ್ಷಿತಂ ಸಂದಾನಂ ಕಿರುಚಿತ್ರದ ಚಿತ್ರೀಕರಣ ಆರಂಭ

0

 

ನಿರೀಕ್ಷಿತಂ ಸಂದಾನಂ ಎಂಬ ನಾಮಾಂಕಿತದ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಗೊಳ್ಳಲಿದ್ದು, ಇದೀಗ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಬಿ. ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಕೊಟ್ಟಿದ್ದಾರೆ.

ಪ್ರವೀಣ್ ಜೆ.ಕೆ. ಅವರ ಕಥೆ ಹಾಗೂ ನಿರ್ದೇಶನದಲ್ಲಿ ಹಾಗೂ ರಾಜೇಶ್ ಬೊಂಬೆ, ಪ್ರಯಾಣ್ ಕ್ರಿಯೇಷನ್ಸ್ ರವರ ನಿರ್ಮಾಪಕತ್ವದಲ್ಲಿ ಮೂಡಿಬರಲಿರುವ ಕಿರುಚಿತ್ರದಲ್ಲಿ ಚಿತ್ರಗ್ರಹಣ ನಿರ್ದೇಶಕರಾಗಿ ಸಾಗರ್, ನಿರ್ದೇಶಕರಾಗಿ ಸಾತ್ವಿಕ್ ಶಂಕರ್ ಶೆಟ್ಟಿ ಮತ್ತು ನವೀಶ್ ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ.

ಅ. ೧೫ ರಂದು ಕ್ರಿಯೇಟಿವ್ ಮೀಡಿಯಾ ವತಿಯಿಂದ ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ನಡೆದಿದ್ದು, ಪ್ರಮುಖ ನಟರಾಗಿ ಶಶಿ ಶಿರ್ಲಾಲ್, ರೂಪ ಶೆಟ್ಟಿ, ವಿನಾಯಕ್ ಕುಲಾಲ್ , ಹರಿ ನಿಟ್ಟೆ ರವರು ಬಣ್ಣ ಹಚ್ಚಲಿದ್ದಾರೆ.

ಚಿತ್ರೀಕರಣ ಮುಹೂರ್ತ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರವೀಣ್ ಜೆ.ಕೆ., ಸಹ ನಿರ್ದೇಶಕರಾದ ಸಾತ್ವಿಕ್ ಶಂಕರ್ ಶೆಟ್ಟಿ ಮತ್ತು ನವೀಶ್ ಶೆಟ್ಟಿ, ಸುನಿಲ್ ಕಡ್ತಲ, ಚಿತ್ರಗ್ರಹಣ ನಿರ್ದೇಶಕ ಸಾಗರ್ ಮೊದಲಾದವು ಉಪಸ್ಥಿತರಿದ್ದರು.

 

ಜಾಹೀರಾತು    

NO COMMENTS

LEAVE A REPLY

Please enter your comment!
Please enter your name here