
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ. ಪೂಜಾರಿ ಇವರು 100ಮೀ. ಹಾಗೂ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

            










