
ಯೆನೆಪೊಯ ತಾಂತ್ರಿಕ ಮಹಾವಿದ್ಯಾಲಯ ಮೂಡುಬಿದರೆಯಲ್ಲಿ ನಡೆದ ಅಂತರ್ ಕಾಲೇಜು ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಯಲ್ಲಿ ಕೆ.ಎಮ್.ಇ.ಎಸ್ ಕುಕ್ಕುಂದೂರು ಕಾರ್ಕಳದ ದ್ವಿತೀಯ ಪಿ.ಯು.ಸಿ. ವಿಜ್ಞಾನ ದ ಮುವಾಜ್ ನೇತೃತ್ವದ ತಂಡ ವರ್ಕಿಂಗ್ ಮಾಡೆಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಸ್ಟಿಲ್ ಮಾಡೆಲ್ ವಿಭಾಗದಲ್ಲಿಯೂ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ಸ್ಫರ್ಧೆಯಲ್ಲಿ ಗೆದ್ದು ಕಾಲೇಜಿಗೆ ಕೀರ್ತಿಯನ್ನು ತಂದಿರುವ ವಿಜ್ಞಾನದ ವಿದ್ಯಾರ್ಥಿ ಮುವಾಜ್ ತಂಡದವರನ್ನು ಸಂಸ್ಥೆಯ ಅಧ್ಯಕ್ಷರಾಗಿರುವ ಕೆ.ಎಸ್. ಇಮ್ತಿಯಾಜ್ ಅಹಮ್ಮದ್ ರವರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ಕೆ.ಬಾಲಕೃಷ್ಣ ರಾವ್ ರವರು ಅಭಿನಂದಿಸಿದ್ದಾರೆ.
ಕಾಲೇಜಿನ ಕಂಪ್ಯೂಟರ್ ಉಪನ್ಯಾಸಕ ರಾಘವೇಂದ್ರ ಭಟ್ ತಂಡದ ಟೀಮ್ ಮೆನೇಜರ್ ಆಗಿ ಸಹಕರಿಸಿದ್ದರು.












