ಕಾರು ಸ್ಫೋಟಕ್ಕೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ದೆಹಲಿ

0

 

ರಾಷ್ಟ್ರ ರಾಜಧಾನಿ ದೆಹಲಿ ನ. 10 ರಂದು ಕಾರು ಸ್ಫೋಟಕ್ಕೆ ಬೆಚ್ಚಿ ಬಿದ್ದಿದೆ. ಕೆಂಪು ಕೋಟೆ ಸಮೀಪ ಸಂಜೆ ಕಾರು ಸ್ಫೋಟಗೊಂಡು ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ ಕನಿಷ್ಠ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆ ಹೆಚ್ಚಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಸದ್ಯ ಕಾರು ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಕಾರಿನ ಸಿಎನ್‌ಜಿ ಸಿಲಿಂಡರ್‌ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ. ಅದಾಗ್ಯೂ ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಮಧ್ಯೆ ಉಗ್ರರ ನೆರಳು ಈ ಸ್ಫೋಟದ ಹಿಂದಿದ್ಯಾ ಎನ್ನುವ ಸಂಶಯ ಮೂಡತೊಡಗಿದೆ.

LEAVE A REPLY

Please enter your comment!
Please enter your name here