ಜೇಸಿಐ ಕಾರ್ಕಳ: 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಅವಿನಾಶ್‌ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸುಶಾಂತ್ ಶೆಟ್ಟಿ ಆಯ್ಕೆ

0

2026ನೇ ಸಾಲಿನ ಜೇಸಿಐ ಕಾರ್ಕಳದ ನೂತನ ಅಧ್ಯಕ್ಷರಾಗಿ ಅಮ್ಮನ ನೆರವು ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಅವಿನಾಶ್ ಜಿ. ಶೆಟ್ಟಿ, ಕಾರ್ಯದರ್ಶಿಯಾಗಿ ಸಿವಿಲ್ ಇಂಜಿನೀಯರ್ ಸುಶಾಂತ್ ಶೆಟ್ಟಿ ಹಿರಿಯಂಗಡಿ ಅವರು ಆಯ್ಕೆಯಾಗಿದ್ದಾರೆ.

ಅವಿನಾಶ್ ಜಿ. ಶೆಟ್ಟಿಯವರು ಕೆಲವು ವರ್ಷಗಳಿಂದ ಕಾರ್ಕಳದ ಆಸುಪಾಸಿನ ಸರ್ಕಾರಿ ಶಾಲೆಗಳಲ್ಲಿ ಕಲಿತು ಉನ್ನತ ಶ್ರೇಣಿಯ ಅಂಕ ಗಳಿಸಿದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟು ವಿದ್ಯಾರ್ಥಿಗಳ ಜೀವನ ಬೆಳಗಿಸುವಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ, ಪ್ರತಿ ದೀಪಾವಳಿಯಂದು ಗಾಂಧಿ ಮೈದಾನದಲ್ಲಿ ಪಟಾಕಿ ಅಂಗಡಿ ಇಟ್ಟು, ಬಂದಂತಹ ಲಾಭವನ್ನು ಭಜನಾ ತಂಡಗಳ ಸಮವಸ್ತ್ರ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳಿಗೆ ಮುಡಿಪಾಗಿಟ್ಟಿದ್ದಾರೆ.

ನ. 13ರಂದು ಜೇಸಿಐ ಕಾರ್ಯಾಲಯದಲ್ಲಿ ಜೇಸಿಐ ಅಧ್ಯಕ್ಷೆ ಶ್ವೇತಾ ಜೈನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಈ ವೇಳೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸುಶ್ಮಿತಾ ರಾವ್, ರಕ್ಷಿತ್ ರಾವ್, ಶಿವ ಕುಮಾರ್, ಶಾಹಿನ್ ರಿಜ್ವಾನ್ ಖಾನ್, ರೇವತಿ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ರಿಜ್ವಾನ್ ಖಾನ್, ಕೋಶಾಧಿಕಾರಿಯಾಗಿ ಮಂಜುನಾಥ್ ಡಿ. ಅವರು ಆಯ್ಕೆಗೊಂಡರು.

ಚುನಾವಣಾಧಿಕಾರಿಯಾಗಿ ಪ್ರಚಿತ್ ಕುಮಾರ್, ಸದಸ್ಯರಾಗಿ ಡಾ. ಮುರಳೀಧ‌ರ್ ಭಟ್, ವಿಶ್ವೇಶ್ ಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಜೇಸಿಐ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here