ಕಾರ್ಕಳ: ಹೊಸ ಮೊಬೈಲ್ ಕೊಡಲು ಒಪ್ಪದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ

0

 

ತಾಯಿಯೊಂದಿಗೆ ಹೊಸ ಮೊಬೈಲ್ ಕೊಡಬೇಕೆಂದು ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಬಾಲಕ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಳಿಕೆ ಬಳಿ ನಡೆದಿದೆ.

ಸುಮಂತ್ (16) ಮೃತ ಬಾಲಕ ಎಂದು ತಿಳಿದು ಬಂದಿದೆ. ಈತನು ನಿಟ್ಟೆ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ನ. ೧೨ ರಂದು ಮನೆಯಲ್ಲಿ ತನ್ನ ತಾಯಿಯೊಂದಿಗೆ ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದು, ಆತನನ್ನು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ.

ಕೊಡ್ಸರಬೆಟ್ಟು ಎಂಬಲ್ಲಿ ಸೂರ್ಯಕಾಂತ ಶೆಟ್ಟಿ ಎಂಬುವವರ ಜಾಗದಲ್ಲಿರುವ ಕಲ್ಲಿನ ಕೋರೆಯ ನಿಂತ ನೀರಿನ ಬಳಿ ಆತನ ಚಪ್ಪಲಿ ಕಂಡುಬಂದಿದ್ದು, ಅನುಮಾನಗೊಂಡು ನೀರಿನಲ್ಲಿ ಹುಡುಕಾಡಿದಾಗ ಆತನ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಮೃತನ ಸಂಬಂಧಿ ನೀಡಿದ ದೂರಿನ ಅನ್ವಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here