Home ಕಾರ್ಕಳ ನ. 19 ರಂದು ಹೆಬ್ರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನದ ಸಂಭ್ರಮ : ಹಲವರಿಗೆ ಅಭಿನಂದನೆ

ನ. 19 ರಂದು ಹೆಬ್ರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನದ ಸಂಭ್ರಮ : ಹಲವರಿಗೆ ಅಭಿನಂದನೆ

0

 

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಹೆಬ್ರಿ ಕಾರ್ಕಳ ಇದರ ವತಿಯಿಂದ ಇದೇ ನವಂಬರ್‌ 19 ರಂದು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ 3 ಗಂಟೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನದ ಸಂಭ್ರಮಾಚರಣೆಯ ಸಲುವಾಗಿ ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌‌ ಅಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ಅವರು ಹೆಬ್ರಿಯ ಚೈತನ್ಯ ಸಭಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ನಿವೃತ್ತ ತಹಶೀಲ್ಧಾರ್‌ ಶಾಂತಾರಾಮ ಚಿಪ್ಣೂಣಕರ್‌, ವಕೀಲ ಹೆಬ್ರಿ ಶೇಖರ ಮಡಿವಾಳ್‌ ಕಾರ್ಕಳ, ಮುಖಂಡರಾದ ಮುನಿಯಾಲು ಗೋಪಿನಾಥ ಭಟ್‌, ಶುಭದ್‌ ರಾವ್‌ ಕಾರ್ಕಳ, ಉದ್ಯಮಿ ಪ್ರವೀಣ್‌ ಬಲ್ಲಾಳ್‌ ಹೆಬ್ರಿ, ಹೆಬ್ರಿ ಎಸ್.ಆರ್.‌ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ, ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌‌ ಕಾರ್ಯದರ್ಶಿ ದೀಪಾ ಭಂಡಾರಿ, ಕೋಶಾಧಿಕಾರಿ ಜನಾರ್ಧನ್‌ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜೇಶ ಭಂಡಾರಿ, ಎಚ್.ವಾದಿರಾಜ ಶೆಟ್ಟಿ, ನವೀನ್‌ ಕೆ ಅಡ್ಯಂತಾಯ, ಸುಕುಮಾರ್‌ ಮುನಿಯಾಲ್‌, ಗೋಪಿನಾಥ ಭಟ್‌ ಮುನಿಯಾಲು, ಮೋಹನದಾಸ ನಾಯಕ್‌ ಶಿವಪುರ, ಜಗದೀಶ ಹೆಗ್ಡೆ ಕಡ್ತಲ, ಜಗನ್ನಾಥ ಕುಲಾಲ್‌ ಶಿವಪುರ, ಬೈಕಾಡಿ ಮಂಜುನಾಥ ರಾವ್‌ ಶಿವಪುರ, ಪ್ರಕಾಶ ಪೂಜಾರಿ ಮಾತಿಬೆಟ್ಟು, ಜಾನ್‌ ಟೆಲ್ಲಿಸ್‌ ಅಜೆಕಾರು ಮತ್ತು ವೇದಿಕೆಯ ಅಜೀವ ಸದಸ್ಯರು ಭಾಗವಹಿಸುವರು.

ಅಭಿನಂದನೆ : ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್‌ ಉಡುಪಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪೊಲೀಸ್‌ ಅಧಿಕಾರಿ ಚಾರ ಹೆರ್ಗಲ್ಲು ಸುಜನ್‌ ಶೆಟ್ಟಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿವಿಧ ಕ್ಷೇತ್ರಗಳ ಸಾಧಕರಾದ ಸಾಹಿತಿ ಬಿಪಿನ್‌ ಚಂದ್ರಪಾಲ್‌ ನಕ್ರೆ, ಚಾರ ಪ್ರದೀಪ್‌ ಹೆಬ್ಬಾರ್‌, ಡಾ. ಗೋಪಾಲ ಪೂಜಾರಿ ಶಿವಪುರ, ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್‌ ನ ಶೇಖರ್‌ ಶೇರಿಗಾರ್‌ ಹೆಬ್ರಿ, ಮಾವಿನಕಟ್ಟೆ ಶಂಕರ ಶೆಟ್ಟಿ ಮುನಿಯಾಲು, ವೀಣಾ ಆರ್‌ ಭಟ್‌, ಸಮಾಜ ಸೇವಕರಾದ ಧಾರ್ಮಿಕ ಮುಂದಾಳು ಹೆಬ್ರಿ ಭಾಸ್ಕರ ಜೋಯಿಸ್‌, ಸಮಾಜಸೇವಕ ಎಚ್.ಜನಾರ್ಧನ್‌ ಹೆಬ್ರಿ, ಮಹಾಬಲ ನಾಯ್ಕ್‌ ಬೇಳಂಜೆ, ಕ್ರೀಡಾ ಸಾಧಕ ದೈಹಿಕ ಶಿಕ್ಷಣ ಪರಿವೀಕ್ಷಕ ನಿತ್ಯಾನಂದ ಶೆಟ್ಟಿ, ಶಿಕ್ಷಕ ಪ್ರಸಂಗಕರ್ತ ಪಿ.ವಿ.ಆನಂದ ಸಾಲಿಗ್ರಾಮ ಸಹಿತ ಹಲವರಿಗೆ ಅಭಿನಂದನೆ ನಡೆಯಲಿದೆ ಎಂದು ನೀರೆ ಕೃಷ್ಣ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಹೆಬ್ರಿ ಕಾರ್ಕಳದ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜೇಶ ಭಂಡಾರಿ, ಎಚ್.ವಾದಿರಾಜ ಶೆಟ್ಟಿ, ನವೀನ್‌ ಕೆ ಅಡ್ಯಂತಾಯ, ಸುಕುಮಾರ್‌ ಮುನಿಯಾಲ್‌, ಮೋಹನದಾಸ ನಾಯಕ್‌ ಶಿವಪುರ, ಜಗನ್ನಾಥ ಕುಲಾಲ್‌ ಶಿವಪುರ, ಭೂನ್ಯಾಯ ಮಂಡಳಿ ಸದಸ್ಯ ರಾಘವೇಂದ್ರ ನಾಯ್ಕ್‌ ಇಂದಿರಾನಗರ ಉಪಸ್ಥಿತರಿದ್ದರು.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here