ಕಾರ್ಕಳದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಫೆಡರೇಷನ್ ಆಫ್ ಕ್ವಾರಿ ಒನರ್ಸ್ ಅಸೋಸಿಯೇಷನ್ ನ ರಾಜ್ಯ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಆಗ್ರಹಿಸಿದ್ದಾರೆ.
ಈ ದುಷ್ಕೃತ್ಯದಲ್ಲಿ ಪಾಲ್ಗೊಂಡವರಿಗೆ ಕಠಿಣ ಶಿಕ್ಷೆ ಆಗಬೇಕು. ಇಲ್ಲವಾದರೆ ಸಂಘಟನೆಗಳೊಂದಿಗೆ ಸೇರಿ ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಮಾದಕ ದ್ರವ್ಯ ಕಡಿವಾಣ:
ತನಿಖೆಯ ಪ್ರಾಥಮಿಕ ಹಂತದಲ್ಲಿ ಯುವತಿ ಮಾದಕ ದ್ರವ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ.ಜಿಲ್ಲೆಯಲ್ಲಿ ಸೇರಿದಂತೆ ರಾಜಯ್ಯದಲ್ಲಿ ರಾರೋಷವಾಗಿ ಮಾದಕ ದ್ರವ್ಯಗಳ ದಂದೆ ನಡೆಯುತ್ತಿದೆ.ಪೊಲೀಸರು ಇದರ ಹಿಂದೆ ಇರುವವರನ್ನು ಬಂಧಿಸಬೇಕು.ಯುವ ಸಮಾಜ ಮಾದಕ ದ್ರವ್ಯದ ವ್ಯಸನಿಗಳಾಗುತ್ತಿದ್ದರೆ.ಪೊಲೀಸರು ಈ ಕೂಡಲೇ ಕಾರ್ಯ ಪ್ರವೃತ್ತರಾಗಿ ದಂಧೆಯನ್ನು ಮಟ್ಟಹಾಕಬೇಕು ಎಂದು ಅವರು ಹೇಳಿದ್ದಾರೆ.