
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾಗಭೂಷಣ ಜೋಶಿ ಮಾಳ, ಕಾರ್ಯಾಧ್ಯಕ್ಷರಾದ ಗಜಾನನ ಮರಾಠೆ, ಪ್ರಧಾನ ಕಾರ್ಯದರ್ಶಿ ಶ್ರೀರಾಮ ಸೇರಿಗಾರ, ಜೊತೆ ಕಾರ್ಯದರ್ಶಿ ನಾಗಭೂಷಣ ಮರಾಠೆ, ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ, ಕೋಶಾಧಿಕಾರಿ ಗೀತಾ, ಸದಸ್ಯರಾದ ರವೀಂದ್ರನಾಥ ಜೋಶಿ, ವೆಂಕಟೇಶ್ ಗೋರೆ, ಮುಖ್ಯ ಶಿಕ್ಷಕರು ಹಳೆ ವಿದ್ಯಾರ್ಥಿ ಸದಸ್ಯರು ಮತ್ತು ಊರಿನವರು ಶಾಲಾಭಿಮಾನಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಾಹೀರಾತು




