
ಕಾರ್ಕಳದ ಪ್ರಖರ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿಯವರಿಂದ ದೇಶಭಕ್ತಿಯ ಮಾತುಗಳು
ಸೈನ್ಯದಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ನಾಳೆ ಕುಕ್ಕುಂದೂರು ವಿಜೇತ ಶಾಲಾ ಮೈದಾನದಲ್ಲಿ ವಂದನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕಾರ್ಕಳದ ಪ್ರಖರ ಯುವ ವಾಗ್ಮಿ ಶ್ರೀಕಾಂತ್ ಶೆಟ್ಟಿಯವರು ದೇಶಭಕ್ತಿ ಮಾತುಗಳನ್ನಾಡಲಿದ್ದಾರೆ.
ಸಂಜೆ ೪ ಗಂಟೆಗೆ ಬೆಳ್ಮಣ್ಣ್ ಪೇಟೆಯಿಂದ ಕುಕ್ಕುಂದೂರು ವಿಜೇತ ವಿಶೇಷ ಶಾಲಾ ಕ್ರೀಡಾಂಗಣದವರೆಗೆ ಬೃಹತ್ ವಾಹನ ಜಾಥಾ ನಡೆಯಲಿದ್ದು, ತದನಂತರದಲ್ಲಿ ವಾಗ್ಮಿ ಶ್ರೀಕಾಂತ್ ಶೆಟ್ಟಿ ದೇಶಭಕ್ತಿ ಮಾತುಗಳು ನಡೆಯಲಿವೆ. ಸಂಜೆ ೬.೩೦ಕ್ಕೆ ಸರಿಯಾಗಿ ತುಳು ನಾಟಕ ರಂಗದಲ್ಲಿ ಇತಿಹಾಸವನ್ನು ನಿರ್ಮಿಸಿದ ಶಿವ ದೂತೆ ಗುಳಿಗೆ ನಾಟಕ ಪ್ರದರ್ಶನವಾಗಲಿದೆ.














