ಮಾಳ:ಲಘು ಸಂಗೀತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾ
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಿರಿ ಮಂಜೇಶ್ವರ ಇಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿನ ವಿದ್ಯಾರ್ಥಿ ವಿದ್ಯಾ ಇವರು ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇವಳಿಗೆ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ಕಾರ್ಯದರ್ಶಿಯಾದ ಗೀತಾ ಹಾಗೂ ಸದಸ್ಯರು ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ನಾಗಭೂಷಣ್ ಮರಾಠೆ ಹಾಗೂ ಸದಸ್ಯರು ಮುಖ್ಯ ಶಿಕ್ಷಕರು ಶಿಕ್ಷಕರು ಅಭಿನಂದಿಸಿದ್ದಾರೆ.