ಕಾರ್ಕಳ:ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಶೌರ್ಯ. ಜಿ. ಶೆಟ್ಟಿ ದ್ವಿತೀಯ ಸ್ಥಾನ
ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ, ಇದರ ವತಿಯಿಂದ ಬೈಂದೂರಿನ ಕಿರಿಮಂಜೇಶ್ವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶೌರ್ಯ ಜಿ.ಶೆಟ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಇವನು ತೆಳ್ಳಾರು ನಿವಾಸಿಗಳಾದ ಗೋಪಾಲ ಶೆಟ್ಟಿ ಹಾಗೂ ಶ್ರೀಮತಿ ಸುಕನ್ಯಾ ಶೆಟ್ಟಿಯವರ ಪುತ್ರನಾಗಿದ್ದಾನೆ.