ಬಿಜೆಪಿ ಪಕ್ಷದ ಸೂತ್ರಧಾರ ಮನಸ್ಥಿತಿ ಈ ದೇಶದ ಮಹಿಳೆಯರ ವಿರುದ್ಧವಾಗಿದೆ. ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯಿಂದ ಸಾಬೀತಾಗಿದೆ..
ಅನಿತಾ ಡಿಸೋಜ ಬೆಳ್ಮಣ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್ ಕಾರ್ಕಳ.
ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಮಂಡ್ಯದಲ್ಲಿ ಇತ್ತೀಚೆಗೆ ನೀಡಿರುವ ಹೇಳಿಕೆ ಎರಡು ಕೋಮಿನ ನಡುವೆ ದ್ವೇಷ ಹರಡಿಸುವಂತದ್ದು. ಇಂತಹ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ಧಾಖಲಿಸಬೇಕಿತ್ತು. ಆದರೆ ಸಮುದಾಯದವರು ದೂರು ನೀಡಿದ ಬಳಿಕ ಪೊಲೀಸರು ಎಫ್ ಐ ಆರ್ ಮಾಡಿದ್ದಾರೆ.
ಮರ್ಯಾದಪುರುಷೋತ್ತಮ ರಾಮನನ್ನು ಹಿಂದೂ ಧಾರ್ಮಿಕತೆಗೆ ಬಳಸಿಕೊಂಡು ವೈಭವಿಕರಿಸುವ ಇವರು ಕಾಲಕಾಲಕ್ಕೆ ಈ ರೀತಿಯ ಜೀವವಿರೋಧಿ ಹೇಳಿಕೆ ಕೊಡುತ್ತಾ ಬಂದಿದ್ದಾರೆ. ನಾಗರಿಕ ಸಮಾಜದ ವರ್ತನೆಗಳನ್ನು ತಿರಸ್ಕರಿಸುವ ಇವರ ಹೇಳಿಕೆಗಳು ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಹಿಳೆಯರಿಗೆ ಮಾಡಿದ ಅವಮಾನ ಮತ್ತು ಹೀಗಳಿಕೆಯಾಗಿದೆ.
ನ್ಯಾಷನಲ್ ಕ್ರೈಂ ರಿಪೋರ್ಟ್ ಬ್ಯೂರೋ 2022ರಲ್ಲಿ ದೇಶದಲ್ಲಿ ಮಹಿಳೆಯರ ವಿರುದ್ಧ4,45,256 ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ.2019-21ರ ಅವಧಿಯಲ್ಲಿ 13.13 ಲಕ್ಷ ಮಹಿಳೆಯರು ಮತ್ತು ಹುಡುಗಿಯರು ಕಾಣೆಯಾಗಿದ್ದಾರೆ ಎಂದು ವರದಿ ನೀಡಿದೆ. ಮಹಿಳೆಯರ ಅಸ್ತಿತ್ವಕ್ಕೆ ದಕ್ಕೆ ಆಗುತ್ತಿರುವ ಇಂಥ ದುರಿತಕಾಲದಲ್ಲಿ ಅವರಿಗೆ ಒತ್ತಾಸೆಯಾಗಿ ನಿಲ್ಲ ಬೇಕಾಗಿರುವುದು ಮಾನವ ಧರ್ಮ.
ಆದರೆ ಕಲ್ಲಡ್ಕ ಪ್ರಭಾಕರ ಭಟ್ಟನಂತತವರು ಇದಕ್ಕೆ ಪ್ರತಿಕೂಲವಾಗಿ ವರ್ತಿಸುತ್ತಾ ಮಹಿಳೆಯರ ಘನತೆ ಗೌರವಕ್ಕೆ ಧಕ್ಕೆ ತರುತ್ತಿರುವುದು ಇದೇ ಮೊದಲಲ್ಲ ಇಂತಹ ಸಂದರ್ಭದಲ್ಲಿ ನೆಲದ ಕಾನೂನು ತನ್ನ ಕೆಲಸ ಮಾಡಿದರೆ ಇಂತಹ ಕ್ಷುದ್ರ ಮನಸ್ಸಿನ ಜನರು ಸಹ ಬಂದಿಯಲ್ಲಿರುತ್ತಾರೆ. ಆದ್ದರಿಂದ ಸರಕಾರ ಕೂಡಲೇ ಕಾನೂನು ಕ್ರಮ ಕೈಗೊಂಡು ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.