ಪತ್ತೊಂಜಿಕಟ್ಟೆ:ಶ್ರೀ ಮಹಾಲಿಂಗೇಶ್ವರ ಯುವಕ-ಮಹಿಳಾ ಮಂಡಲ(ರಿ.) ಮಂಡಲ ವಾರ್ಷಿಕ ಕ್ರೀಡಾಕೂಟ
ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ.) ಮತ್ತು ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.), ಪತ್ತೊಂಜಿಕಟ್ಟೆ, ಪೆರ್ವಾಜೆ ಇದರ ವಾರ್ಷಿಕೋತ್ಸವದ ಅಂಗವಾಗಿ ವಾರ್ಷಿಕ ಕ್ರೀಡಾಕೂಟ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು.
ಸಂಘದ ಹಿರಿಯ ಸದಸ್ಯರೂ, ಗೌರವ ಸಲಹೆಗಾರರಾದ ಹೆನ್ರಿ ಸಾಂತ್ಮಯೂರ್ರವರು ಕ್ರೀಡಾಕೂಟವನ್ನು ಉದ್ಘಾಟಿಸಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಗೆ ಪ್ರತೀ ವರ್ಷವೂ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿರುವ ಸಂಘಕ್ಕೆ ಶುಭ ಹಾರೈಸಿದರು. ಯುವಕ ಮಂಡಲದ ಅಧ್ಯಕ್ವರಾದ ದಿನೇಶ್ ಕೊರಳಕೋಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮಹಿಳಾ ಮಂಡಲದ ಕಾರ್ಯದರ್ಶಿ ಅರುಂಧತಿ ಬಿ. ಆಚಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾ ಕಾರ್ಯದರ್ಶಿಗಳಾದ ಸುರೇಶ್ ಸುವರ್ಣ ಹಾಗೂ ಶ್ರೀಮತಿ ರೂಪಾ ಹರೀಶ್ ಶೆಟ್ಟಿ ಇವರು ಕ್ರೀಡಾ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಯುವಕ ಮಂಡಲದ ಕಾರ್ಯದರ್ಶಿ ಶ್ರೀ ರಾಘವೇಂದ್ರ ಶೆಟ್ಟಿ, ಜತೆಕಾರ್ಯದರ್ಶಿ ಶ್ರೀ ರವೀಂದ್ರ ಸಫಲಿಗ, ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಎಲ್ಲ ಪಧಾಧಿಕಾರಿಗಳು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.