ಹೆಬ್ರಿ:ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ.
ಹೆಬ್ರಿ:ಅಣ್ಣ ತಮ್ಮ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ಹೆಬ್ರಿ ತಾಲೂಕು ನಾಲ್ಕೂರು ಗ್ರಾಮದ ಅರಮನೆಜಡ್ಡು ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರನ್ನು ಮಂಜುನಾಥ್ (35) ಎಂದು ಗುರುತಿಸಲಾಗಿದೆ.
ಮಂಜುನಾಥ ಮತ್ತು ವಿಶ್ವನಾಥ ರವರು ಆಗಾಗ ಗಲಾಟೆ ಮಾಡುತ್ತಿದ್ದರು. ಮಂಜುನಾಥನು, ವಿಶ್ವನಾಥನ ಬಳಿ ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದಾಗ, ವಿಶ್ವನಾಥ ಕೋಪಗೊಂಡು ದೊಣ್ಣೆಯಿಂದ ಹೊಡೆದಾಗ ಮಂಜುನಾಥ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.