ಫೆ.26:ಜೋಡುರಸ್ತೆಯಲ್ಲಿ ಮಾನಸ ಕಂಫರ್ಟ್ಸ್ ಶುಭಾರಂಭ
ಕಾರ್ಕಳ:ಜೋಡುರಸ್ತೆಯ ಕಾರ್ಲ ಸಿಟಿಸೆಂಟರ್ ಕಟ್ಟಡದಲ್ಲಿ ಫೆ.26 ಬೆಳಿಗ್ಗೆ 10 ಗಂಟೆಗೆ ಮಾನಸ ಕಂಫರ್ಟ್ಸ್ ಶುಭಾರಂಭಗೊಳ್ಳಲಿದೆ.
ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದು, ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಕಳ ಶಾಸಕ,ಮಾಜಿ ಸಚಿವ ವಿ.ಸುನೀಲ್ ಕುಮಾರ್,ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ್ ಪೂಜಾರಿ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ,ಉದಯ ಕೃಷ್ಣಯ್ಯ ಚಾರಿಟೇಬಲ್ ಅಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲ್,ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಜ್ಞಾನಸುಧಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕ ಡಾ.ಗಣನಾಥ ಶೆಟ್ಟಿ,ನ್ಯಾಯವಾದಿ ಶೇಖರ್ ಮಡಿವಾಳ,ನ್ಯಾಯವಾದಿ ಮಣಿರಾಜ್ ಶೆಟ್ಟಿ,ಪುರಸಭಾ ಸದಸ್ಯ ಅಷ್ಪಕ್ ಅಹಮದ್,ನಿಟ್ಟೆ ಸಂತೋಷ್ ಕ್ಯಾಶ್ಯುಸ್ ಮಾಲಕ ಸಂತೋಷ್ ಡಿ ಸಿಲ್ವಾ ಮತ್ತಿತರ ಗಣ್ಯರು ಉಪಸ್ಥಿತರಿಲಿದ್ದಾರೆ.













