ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಫ್ತಿಯಲ್ಲಿ, ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದದಿ ಪಡಿಸಲು ಒಟ್ಟು 4.50 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಸರ್ಕಾರದ ಆಡಳಿತಾತ್ಮಕ ಅನುಮೋದನೆಯಾಗಿದೆ.
ಕಾರ್ಕಳದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಮುಖ ಸೇತುವೆಗಳ ಮರು ನಿರ್ಮಾಣದ ಪೈಕಿ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ನಕ್ರೆ ರಂಗನಪಲ್ಕೆ ಜಿಲ್ಲಾ ಮುಖ್ಯರಸ್ತೆಯ ಪರಪು ಎಂಬಲ್ಲಿ ಸೇತುವೆಯ ಮರು ನಿರ್ಮಾಣ ಕಾಮಗಾರಿ, ರೆಂಜಾಳ ನೆಲ್ಲಿಕಾರು ಜಿಲ್ಲಾ ಮುಖ್ಯರಸ್ತೆಯ ರೆಂಜಾಳ ಗ್ರಾಮ ಪಂಚಾಯತ್ ಬಳಿ ಸೇತುವೆಯ ಮರು ನಿರ್ಮಾಣ ಹಾಗೂ ಬೋಳ ಗ್ರಾಮದ ಶ್ರೀ ಮೃತ್ಯುಂಜಯ ಸ್ವಾಮಿ ದೇವಸ್ಥಾನದ ಬಳಿ ಸೇತುವೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ.
ಸಾರ್ವಜನಿಕರ ಹಾಗೂ ವಾಹನಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 04.50 ಕೋಟಿ ರೂ ಅನುದಾನ ಮಂಜೂರಾಗಿ, ಸದ್ರಿ ಸೇತುವೆಗಳ ಮರು ನಿರ್ಮಾಣ ಕಾರ್ಯಕ್ಕೆ ಸರಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಶಾಸಕ ವಿ. ಸುನಿಲ್ ಕುಮಾರ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















