Wednesday, April 8, 2026
Google search engine
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
Homeಕಾರ್ಕಳಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ.

ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದ 30ಕ್ಕೂ ಹೆಚ್ಚು ಸಿಬ್ಬಂದಿ ಟಾರ್ಚ್ ಹಾಕಿಕೊಂಡು ಮಧ್ಯರಾತ್ರಿವರೆಗೂ ಹುಡುಕಾಡಿದರೂ ಬಾಲಕಿಯ ಸುಳಿವು ಸಿಗಲಿಲ್ಲ. ಬೆಟ್ಟಗುಡ್ಡಗಳ ಕಾಡಿನ ಪ್ರದೇಶ, ಮಂಜು ಹಾಗೂ ಭಾರೀ ಕತ್ತಲು ಕವಿದಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿ ಎಲ್ಲರೂ ವಾಪಸ್ಸಾಗಿದ್ದರು. ಸ್ಥಳಕ್ಕೆ ಮಧ್ಯರಾತ್ರಿಯೇ ಎಎಸ್ಪಿ ಜಯಕುಮಾರ್ ಕೂಡ ಭೇಟಿ ನೀಡಿದ್ದರು.

ಇಂದು ಬೆಳಗ್ಗೆ ಮತ್ತೆ 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅರಣ್ಯ ಇಲಾಖೆ ಡ್ರೋನ್ ಮೂಲಕ ಬಾಲಕಿಯ ಪತ್ತೆಗೆ ಮುಂದಾಗಿದ್ದಾರೆ. ಬಾಲಕಿ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ಬಾಲಕಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments