ಕಾರ್ಕಳ:ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ನ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

0

ಕ್ರೈಸ್ಟ್ ಕಿಂಗ್: ಕ್ರಿಕೆಟ್ ಪಂದ್ಯಾಟದಲ್ಲಿ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಎಸ್.ಎಂ.ಎಸ್ ಪ್ರೌಢಶಾಲೆ ಬ್ರಹ್ಮಾವರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ಮನನ್ ವಿ ಜೈನ್, ತನ್ಮಯ್ ಯು ಶೆಟ್ಟಿ, ಏಳನೇ ತರಗತಿಯ ವಿನೀತ್ ಪೂಜಾರಿ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.

   

LEAVE A REPLY

Please enter your comment!
Please enter your name here