Home Blog Page 41

ಕಾರ್ಕಳ : ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುನಿಯಾಲು ಉದಯಕುಮಾರ್ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಅತ್ಯಂತ ಹಾಸ್ಯಾಸ್ಪದ -‌ ನವೀನ್‌ ನಾಯಕ್

0

 

ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಅತ್ಯಂತ ಹಾಸ್ಯಾಸ್ಪದ ಸಂಗತಿಯಾಗಿದ್ದು, ಕೊಲೆಗಾರ ಶಾಂತಿಮಂತ್ರ ಪಠಿಸಿದಂತಾಗಿದೆ. ಪರಶುರಾಮ ಥೀಂ ಪಾರ್ಕ್ ಬಗ್ಗೆ ಇಲ್ಲಸಲ್ಲದ ಅಪಸ್ವರ ಎತ್ತಿ ಯೋಜನೆಯ ಅನುಷ್ಠಾನ ವಿಳಂಬವಾಗುವುದಕ್ಕೆ ಹಾಗೂ ಪ್ರವಾಸೋದ್ಯಮ ಕುಂಟಿತಗೊಳ್ಳುವುದಕ್ಕೆ ಉದಯಕುಮಾರ್ ಶೆಟ್ಟಿಯವರ ರಾಜಕೀಯ ಅವಕಾಶವಾದಿತನವೇ ಕಾರಣವಾಗಿದ್ದು, ಕಾರ್ಕಳದ ಜನತೆ ಈ ದ್ರೋಹವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು BJP ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಗುಡುಗಿದ್ದಾರೆ. .

ಪ್ರತಿಮೆ ವಿಚಾರದಲ್ಲಿ ದಾಖಲಾಗಿದ್ದ ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿ ಕಾರ್ಕಳ ನ್ಯಾಯಾಲಯದಲ್ಲಿ ಸಲ್ಲಿಸಿದ ಆರೋಪಪಟ್ಟಿ ಉದಯಕುಮಾರ್ ಶೆಟ್ಟಿ ಇದುವರೆಗೆ ಮಾಡಿಕೊಂಡು ಬಂದಿದ್ದ ಟೂಲ್ ಕಿಟ್ ರಾಜಕಾರಣವನ್ನು ಬಟಾಬಯಲು ಮಾಡಿದೆ. ಪೈಬರ್ ಪ್ರತಿಮೆ ಎಂಬ ಉದಯಕುಮಾರ್ ಶೆಟ್ಟಿ ಆರೋಪ ಶುದ್ಧಸುಳ್ಳು ಎಂಬುದು ಸಾಬೀತಾಗುತ್ತಿದ್ದಂತೆ ಉದಯಕುಮಾರ್ ಶೆಟ್ಟಿ ಈಗ ಸಾರ್ವಜನಿಕ ಹಿತಾಸಕ್ತಿಯ ನಾಟಕ ಪ್ರಾರಂಭಿಸಿದ್ದಾರೆ.

ಪರಶುರಾಮ ಪ್ರತಿಮೆ ಹಾಗೂ ಥೀಂ ಪಾರ್ಕ್ ವಿಚಾರದಲ್ಲಿ ಶಾಶಕ ಸುನೀಲ್ ಕುಮಾರ್ ಅವರ ನಿಲುವು ಪ್ರಾರಂಭದಿಂದಲೂ ಸ್ಥಿರವಾಗಿಯೇ ಇದೆ. ಪ್ರಾರಂಭದಿಂದಲೂ ಯೋಜನೆಗೆ ಹಣ ಬಿಡುಗಡೆ ಮಾಡಿ ಪ್ರವಾಸೋದ್ಯಮಕ್ಕೆ ಮುಕ್ತಗೊಳಿಸಿ ಎಂದೇ ಅವರು ಆಗ್ರಹಿಸುತ್ತಿದ್ದಾರೆ. ಆದರೆ ಉದಯಕುಮಾರ್ ಶೆಟ್ಟಿ ಪದೇ ಪದೇ ನಿಲುವು ಬದಲಾಯಿಸಿದ್ದಾರೆ. ಪ್ರಕರಣ ದಾಖಲಿಸಿದ್ದು, ಪ್ರತಿಭಟನೆ ನಡೆಸಿದ್ದು, ನ್ಯಾಯಾಲಯದ ಮೆಟ್ಟಿಲೇರಿದ್ದೆಲ್ಲ ಆದ ಮೇಲೆ ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿರುವುದೂ ಅನುಮಾನಾಸ್ಪದ ನಡೆಯೇ ಆಗಿದೆ.

ಪರಶುರಾಮ ಪ್ರತಿಮೆ ಸ್ಥಾಪನೆಯಾಗಬೇಕೆಂದು‌ ಉದಯಕುಮಾರ್ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಉದ್ದೇಶ ಶುದ್ದಿಯ ಬಗ್ಗೆ ಹಲವು ಅನುಮಾನಗಳಿವೆ. ಇವರಿಗೆ ಬೇಕಿರುವುದು ಪ್ರತಿಮೆಯೂ ಅಲ್ಲ, ಪ್ರವಾಸೋದ್ಯಮವೂ ಅಲ್ಲ. ರಾಜಕೀಯ ಲಾಭ ಹಾಗೂ ಮುಖ ಉಳಿಸಿಕೊಳ್ಳುವ ಪ್ತಯತ್ನ ಮಾತ್ರ ಇದರ ಹಿಂದೆ ಇದೆ.

ಪೈಬರ್ ಪ್ರತಿಮೆ ಎಂದು ಅಪಪ್ರಚಾರ ಮಾಡಿದ ಉದಯಕುಮಾರ್ ಶೆಟ್ಟಿ ಗ್ಯಾಂಗ್ ಥೀಂ ಪಾರ್ಕ್ ಗೆ ಕಳೆದ ಎರಡು ವರ್ಷದಿಂದ ನಯ್ಯಾಪೈಸೆ ಹಣ ಬಿಡುಗಡೆಯಾಗುವುದಕ್ಕೆ ಬಿಟ್ಟಿಲ್ಲ. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಧಕ್ಕೆಯಾಗಿರುವುದು ಮಾತ್ರವಲ್ಲ ಕರಾವಳಿ ಜನರ‌ ನಂಬಿಕೆಯ ಮೇಲೂ ಗದಾಪ್ರಹಾರ ಉಂಟಾಗಿದೆ.

ಈ ಪ್ರತಿಮೆ ನಿರ್ಮಾಣ ಕಾರ್ಯ ಮುಂದಿನ ಚುನಾವಣೆಯವರೆಗೂ ಹೀಗೆ ಸ್ಥಗಿತವಾಗಿರಬೇಕು.‌ಇದೊಂದು ಚುನಾವಣಾ ಸರಕಾಗಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮೂಲಕ ಹೇಳಿಕೆ ಕೊಡಿಸಿದ್ದ ಉದಯಕುಮಾರ್ ಶೆಟ್ಟಿ ಈಗ ಇದ್ದಕ್ಕಿದ್ದಂತೆ ಪ್ರತಿಮೆ ಪರ ನಿಲ್ಲುತ್ತಾರೆಂದರೆ ನಂಬಲು ಸಾಧ್ಯವೇ ? ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿಂದೆ ಕಾರ್ಕಳ ಕಾಂಗ್ರೆಸ್ ಮುಖಂಡರ ಹಿತಾಸಕ್ತಿ ಅಡಕವಾಗಿದ್ದು ಇಂಥ ಅವಕಾಶವಾದಿ ರಾಜಕಾರಣವನ್ನು ಪ್ರಜ್ಞಾವಂತ‌ ಜನತೆ ಯಾವ ಮುಲಾಜು ಇಲ್ಲದೇ ತಿರಸ್ಕರಿಸುತ್ತಾರೆಂಬ ನಂಬಿಕೆ ಇದೆ. ಪ್ರತಿಮೆ ಹಾಗೂ ಯೋಜನೆ ವಿಚಾರದಲ್ಲಿ ಅಪಪ್ರಚಾರ ನಡೆಸಿದ ಉದಯಕುಮಾರ್ ಶೆಟ್ಟಿ ಹಾಗೂ ಆತನ ಪಟಾಲಂ ವಿರುದ್ಧ ಸುಳ್ಳು ಸುದ್ದಿ ಹಾಗೂ ದ್ವೇಷ ಹಂಚಿಕೆಯ ಪ್ರಕರಣ ದಾಖಲಿಸಿ ಕಾಂಗ್ರೆಸ್ ಸರ್ಕಾರ ಜೈಲಿಗಟ್ಟಬೇಕೆಂದು ಸಾರ್ವಜನಿಕರ ಆಗ್ರಹ. ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಕಾರ್ಯಕ್ರಮಗಳ ಅನುದಾನವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ-ಗಂಗಾಧರ ಗೌಡ

0

ಎಸ್ ಸಿ ಎಸ್ ಪಿ ಟಿ ಎಸ್ ಪಿ ಕಾರ್ಯಕ್ರಮಗಳ 2025 -26 ನೇ ಸಾಲಿನ ಅನುದಾನವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. 2013 ರ SCSP – TSP ಕಾಯ್ದೆಯಯ 7(D) ರದ್ದಾದಂತೆ 7(C) ಯೂ ರದ್ದುಗೊಳಿಸಿ ಆ ಮೂಲಕ ಪರಿಶಿಷ್ಟರ ಪೂರ್ಣ ಪಾಲು ಪರಿಶಿಷ್ಟರಿಗೆ ಗ್ಯಾರಂಟಿಯಾಗಲಿ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಾರ್ಕಳ: SVT ಮಹಿಳಾ ಕಾಲೇಜಿನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್‌ ಉದ್ಯೋಗ ಮೇಳದ ಮಾಹಿತಿ ಶಿಬಿರ

0

 

ಆಗಸ್ಟ್ 01 ಮತ್ತು 02 ನೇ ತಾರೀಖಿನಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಎಂಬ ಬೃಹತ್ ಉದ್ಯೋಗ ಮೇಳದ ಅಂಗವಾಗಿ ನಾಳೆ ಬೆಳಿಗ್ಗೆ 09.30 ಗಂಟೆಗೆ ಕಾರ್ಕಳದ ಎಸ್ ವಿ ಟಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಾಹಿತಿ ಶಿಬಿರ ನಡೆಯಲಿದೆ.

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಲಿದ್ದು, ಉದ್ಯೋಗ ಮೇಳದ ಕುರಿತಾಗಿ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಸಂಸ್ಥೆಗಳ ಆಯ್ಕೆಗಳ ಬಗ್ಗೆ ಪೂರ್ವಭಾವಿಯಾಗಿ ಮಾಹಿತಿ ನೀಡಲಿದ್ದಾರೆ.

ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಉದ್ಯೋಗಾಕಾಂಕ್ಷಿಗಳು ಹಾಗೂ ಯುವ ಸಮೂಹ ಈ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಆಳ್ವಾಸ್ ಪ್ರಗತಿ ಎಂಬ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತತ 7 ದಿನ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

0

 

ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ 7 ದಿನಗಳ ಕಾಲ 170 ಗಂಟೆ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ್ದಾರೆ.

ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ಮಾಡಿದ್ದು, ಪ್ರದರ್ಶನದ ಪ್ರತಿ ದಿನ ರಾತ್ರಿ ಒಂದು ಗಂಟೆ ಹಾಗೂ ಮೂರು ಗಂಟೆಗೊಮ್ಮೆ 15 ನಿಮಿಷಗಳ ಕಾಲ ಮಾತ್ರ ವಿರಾಮ ಪಡೆದಿದ್ದಾರೆ. ಈ ಸಮಯದಲ್ಲಿ ಕನಿಷ್ಟ ಪ್ರಮಾಣದ ಆಹಾರ ಸೇವಿಸಿರುತ್ತಾರೆ ರೆಮೋನಾ. ನಿರಂತರ ವೈದ್ಯರ ಸಲಹೆ, ಫಿಸಿಯೋಥೆರಪಿ ಆರೈಕೆಯೊಂದಿಗೆ ಈ ಪ್ರದರ್ಶನ ನಡೆಸಿದ್ದಾರೆ.

ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲರಿಪ್ಪು ಜತಿಸ್ವರ, ವರ್ಣ, ಪದವರ್ಣ, ತಿಲ್ಲಾನಗಳೊಂದಿಗೆ ಲಘು ಶಾಸ್ತ್ರೀಯ, ದೇವರನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ ರೆಮೋನಾ. ಈ ಹಿಂದೆ ಮಹಾರಾಷ್ಟ್ರದ ಸೃಷ್ಟಿ ಸುಧೀರ್ ಜಗತಾಪ್ ಎಂಬ 16 ವರ್ಷದ ಬಾಲಕಿ ನಿರಂತರ 127 ಗಂಟೆ ಕಥಕ್ ನೃತ್ಯ ಪ್ರದರ್ಶನ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಾರೆ. ಇದೀಗ ರೆಮೋನಾ ಈ ದಾಖಲೆಯನ್ನು ಮುರಿದು 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಈಕೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಷ್ಯಾದ ಮುಖ್ಯಸ್ಥ ಡಾ.ಮನೀಶ್ ವಿಷ್ನೋಯಿ ಅವರು ನೂತನ ದಾಖಲೆಯ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ.

ಶವಗಳನ್ನು ಹೂತಿಟ್ಟಿರುವ ಪ್ರಕರಣ; SIT ಮುಖ್ಯಸ್ಥರ ಬದಲಾವಣೆಗೆ ಮಾಜಿ DYSP ಅನುಪಮಾ ಶೆಣೈ ಆಗ್ರಹ

0

 

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಪ್ರಕರಣದ ತನಿಖೆಗೆ ರಚಿಸಲಾದ SIT ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ನೇಮಕವನ್ನು ರದ್ದುಗೊಳಿಸಬೇಕು ಎಂದು ಮಾಜಿ DYSP ಅನುಪಮಾ ಶೆಣೈ ಒತ್ತಾಯಿಸಿದ್ದಾರೆ.

ಸೋಮವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣವ್ ಮೊಹಾಂತಿ ಸೈಬರ್ ಅಪರಾಧದಲ್ಲಿ ನೈಪುಣ್ಯತೆಯನ್ನು ಹೊಂದಿದ್ದಾರೆಯೇ ಹೊರತು, ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಸೂಕ್ತ ವ್ಯಕ್ತಿಯಲ್ಲ. ಈ ಹಿಂದೆ DYSP ಎಂ.ಪಿ. ಗಣಪತಿಯವರು ಸಚಿವ ಕೆ.ಜೆ.ಜಾರ್ಜ್ ಅವರಿಂದಾಗಿ ಬಹಳಷ್ಟು ಕಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆ.ಜೆ.ಜಾರ್ಜ್ ಜತೆ IPS ಅಧಿಕಾರಿಗಳಾದ ಎ.ಎಂ.ಪ್ರಸಾದ್ ಮತ್ತು ಪ್ರಣವ್ ಮೊಹಾಂತಿ ಅವರ ಹೆಸರನ್ನೂ ಉಲ್ಲೇಖಿಸಿದ್ದರು ಎಂದು ಹೇಳಿದ್ದಾರೆ.

ಹಾಗಾಗಿ SIT ಮುಖ್ಯಸ್ಥರಾಗಿ ಮೊಹಾಂತಿಯವರ ನೇಮಕದಲ್ಲಿ ಕೆ.ಜೆ.ಜಾರ್ಜ್ ರಾವ್ ರವರ ಕೈವಾಡವಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಸರ್ಕಾರ ಕೂಡಲೇ ಪೋಲೀಸರ ಭಾವನೆಗೆ ಗೌರವ ಕೊಟ್ಟು ಪ್ರಣವ್ ಮೊಹಾಂತಿ ನೇಮಕವನ್ನು ರದ್ದುಗೊಳಿಸಿ ಡಾ| ಕೆ. ರಾಮಚಂದ್ರ ರಾವ್ ಅಥವಾ ದಯಾನಂದ್ ಅವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಅಣ್ಣಪ್ಪಸ್ವಾಮಿ ದುರ್ಬುದ್ಧಿ ನೀಡುವುದಿಲ್ಲ

ಈ ಪ್ರಕರಣದಲ್ಲಿ ಪ್ರಶ್ನೆ ಎದ್ದಿರುವುದು ಅಣ್ಣಪ್ಪ ಸ್ವಾಮಿಯ ಬಗ್ಗೆ. ಅಣ್ಣಪ್ಪಸ್ವಾಮಿ ಧರ್ಮಸ್ಥಳದ ಕ್ಷೇತ್ರಪಾಲ, ಕ್ಷೇತ್ರರಕ್ಷಕ. ಅಣ್ಣಪ್ಪಸ್ವಾಮಿ ಸತ್ಯಧರ್ಮದ ಪ್ರತೀಕ. ಅಣ್ಣಪ್ಪಸ್ವಾಮಿ ಪೊಲೀಸರಿಗೆ ದುರ್ಬುದ್ಧಿ ನೀಡುವುದಿಲ್ಲ ಎಂದರು.

ಅವಿನಾಶ್ ಜಿ ಶೆಟ್ಟಿಗೆ ಜೇಸಿಐ ಸಾಧನ ಪ್ರಶಸ್ತಿ

0

 

ಜೇಸಿಐ ಭಾರತ ವಲಯ 15 ರ ಮೃದಂಗ ವಲಯ ಸಮ್ಮೇಳನ ಜೆಸಿಐ ಮಡಂತ್ಯಾರು ಘಟಕದ ಅತಿಥ್ಯದಲ್ಲಿ ಬಹಳ ಅದ್ಧೂರಿಯಾಗಿ ನಡೆಯಿತು. ಜೇಸಿಐ ಕಾರ್ಕಳದಿಂದ ವಲಯದ ವ್ಯವಹಾರ ಸಮ್ಮೇಳನದ, ಸಾಧನಶ್ರೀ ಪ್ರಶಸ್ತಿಗೆ ಜೇಸಿಐ ಕಾರ್ಕಳ ದ ಬಿಸಿನೆಸ್ ವಿಭಾಗದ ಉಪಾಧ್ಯಕ್ಷರು, ಬಿಸಿನೆಸ್ ಐಕಾನ್, ಸಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡು, ತನ್ನದೇ ಆದ ಸೇವೆಯನ್ನು ಮಾಡುತ್ತಿರುವ ಆದರ್ಶ ಯುವಕ ಅವಿನಾಶ್ ಜಿ ಶೆಟ್ಟಿಯವರು ಭಾಜನರಾಗಿದ್ದಾರೆ.

ಸಾಧನಶ್ರೀ ಪ್ರಶಸ್ತಿಯನ್ನು ವಲಯ ಅಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಶ್ ಬಿಎ ಅವರು ಗಣ್ಯರ ಸಮ್ಮುಖದಲ್ಲಿ ಅವಿನಾಶ್ ಶೆಟ್ಟಿಯವರಿಗೆ ನೀಡಿ ಗೌರವಿಸಿದರು. ವ್ಯವಹಾರ ವಿಭಾಗದಲ್ಲಿ ಜೇಸಿಐ ಕಾರ್ಕಳಕ್ಕೆ ವಿನ್ನರ್ ಪ್ರಶಸ್ತಿಯೊಂದಿಗೆ ಹಲವಾರು ಮನ್ನಣೆಗಳು ದೊರಕಿದೆ.

ಈ ಸಂಧರ್ಭದಲ್ಲಿ ಜೇಸಿಐ ಕಾರ್ಕಳದ ಅಧ್ಯಕ್ಷರು ಶ್ವೇತಾ ಎಸ್ ಜೈನ್, ವಲಯ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರು ವಿಘ್ನೇಶ್ ಪ್ರಸಾದ್, ಹಾಗೂ ಸುಶಾಂತ್ ಶೆಟ್ಟಿ , ಪೂರ್ವ ವಲಯ ಅಧ್ಯಕ್ಷ ಗಿರೀಶ್ ಎಸ್ ಪಿ, ವ್ಯವಹಾರ ವಿಭಾಗದ ನಿರ್ದೇಶಕರು ಅಶೋಕ್ ಗುಂಡಿಯಲ್ಕೆ , ಜೇಸಿಐ ಮಡಂತ್ಯಾರು ಘಟಕ ಅಧ್ಯಕ್ಷೆ ಅಮಿತಾ ಅಶೋಕ್ ಉಪಸ್ಥಿತರಿದ್ದರು.

ಕಾರ್ಕಳ : ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಬಿವಿನ್ಯಾಸ ಕಾರ್ಯಕ್ರಮ

0

 

ಹೊಸದಾಗಿ ಪ್ರಥಮ ಬಿಕಾಂ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಬಿವಿನ್ಯಾಸ ಕಾರ್ಯಕ್ರಮವನ್ನು ಕಾರ್ಕಳದ ಎಂ ಪಿ ಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಕಾಲೇಜಿನ ಅಭಿವೃಧ್ದಿ ಸಮಿತಿಯ ಸದಸ್ಯರು ಹಾಗೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವರ್ಮ ಅಜ್ರಿ ಎಂ. ಇವರು ಆಗಮಿಸಿ ಕಾಲೇಜು ಬೆಳೆದು ಬಂದ ಇತಿಹಾಸ ಹಾಗೂ ಗುಣಮಟ್ಟ ಸಾಧನೆಯ ಬಗ್ಗೆ ಉಲ್ಲೇಖಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್‌ ರಾವ್‌ ಅಭ್ಯಾಗತರಾಗಿ ಆಗಮಿಸಿ ಕಾಲೇಜಿನ ಸೌಕರ್ಯಗಳ ಉತ್ತಮ ಬಳಕೆಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್‌ ರೈ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರಸ್ತುತ ಎಲ್ಲಾ ಸರಕಾರಿ ಪದವಿ ಕಾಲೇಜುಗಳು ಉತ್ಕ್ರಷ್ಥ ಶಿಕ್ಷಣ ಸೌಲಭ್ಯ ನೀಡುತ್ತಿವೆ ಎಂದು ಹೇಳಿದರು. ಅಲ್ಲದೆ ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ ಮತ್ತು ಬದ್ದತೆಯಿಂದ ಅಧ್ಯಯನ ಮಾಡುವಂತೆ ಹಿತವಚನ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಂತರೀಕ ಗುಣಮಟ್ಟ ಖಾತರಿ ಕೋಶದ ಸಂಚಾಲಕರಾದ ಸುಷ್ಮಾರಾವ್‌ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಬಾಗದ ಮುಖ್ಯಸ್ಥೆ ಪ್ರೋಫೆಸರ್‌ ಡಾ.ಚಂದ್ರಾವತಿರವರು ಪ್ರಾಸ್ಥಾವಿಕ ಮಾತುಗಳನ್ನಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಸುದರ್ಶನ್‌ ಪಿ ವಂದನಾರ್ಪಣೆಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಅಕ್ಷತಾ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಕ್ರೈಸ್ಟ್ ಕಿಂಗ್ : ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಹಾಗೂ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆಯ ಬಾಲಕರ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.

ಪ್ರಾಥಮಿಕ ಶಾಲಾ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಖುಷಿ ಶೆಟ್ಟಿ, ವಿಶ್ಮಿತಾ, ಆರನೇ ತರಗತಿಯ ತ್ರಿಷ್ಮ ಎಸ್. ಹಾಗೂ ಕೆಟ್ಲಿನ್ ಏಂಜೆಲ್ ಪಿಂಟೊ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ ಪ್ರೌಢಶಾಲಾ ಬಾಲಕರ ತಂಡವನ್ನು ಪ್ರತಿನಿಧಿಸಿದ್ದ ಹತ್ತನೇ ತರಗತಿಯ ಗೌರವ್ ಆರ್, ಪ್ರಥಮ್ ಶೆಟ್ಟಿ, ಶೋಭಿತ್ ಕೆ. ಎಚ್. ಹಾಗೂ ಅಚ್ಚು ವಿದ್ಯೋಪಾರ್ಜ್ ಗುರುಕುಲಂ ಮತ್ತು ಒಂಬತ್ತನೇ ತರಗತಿಯ ಗ್ಯಾಲ್ವಿನ್ ಜೋಯಲ್ ಪಿಂಟೊ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್ ಹಾಗೂ ಕು.ಲಾವಣ್ಯ ತಂಡಗಳ ನೇತೃತ್ವ ವಹಿಸಿದ್ದರು.

ಕಾರ್ಕಳ :ಅಖಿಲ ಭಾರತ ಗೋಡಂಬಿ ಸಂಘದ ಅಧ್ಯಕ್ಷರಾಗಿ ಬೋಳ ರಾಹುಲ್ ಕಾಮತ್ ಪುನರಾಯ್ಕೆ

0

ಅಖಿಲ ಭಾರತ ಗೋಡಂಬಿ ಸಂಘದ ಅಧ್ಯಕ್ಷರಾಗಿ ಬೋಳಾಸ್ ಅಗ್ರೋ ಪೈವೇಟ್ ಲಿ. ನ ನಿರ್ದೇಶಕ ಬೋಳ ರಾಹುಲ್ ಕಾಮತ್ ಮುಂದಿನ 2 ವರ್ಷಗಳ ಅವಧಿಗೆ ಪುನರಾಯ್ಕೆಯಾಗಿದ್ದಾರೆ.

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ

0

 

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 28 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು.

ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಪರವಾಗಿ ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡುತ್ತ ” ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿ ರವರು ” ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ ” ಎಂದು ಹೇಳುತ್ತಾ ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ಮಾತುಗಳನ್ನಾಡಿದರು.

ಕಾರ್ಯಗಾರದಲ್ಲಿ 2025 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೆ 2025 ನೇ ಸಾಲಿನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು.

2025 ರಲ್ಲಿ ಅರ್ಥಶಾಸ್ತ್ರ ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ವಿನ್ಸೆಂಟ್ ವಿನೋದ್ ಡಿಸೋಜಾ, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ಬೆಳ್ಮಣ್ಣು ಇವರನ್ನು ಅಭಿನಂದಿಸಲಾಯಿತು.

2025 ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ಗೋಪಾಲ್ ಭಟ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿ ಮತ್ತು ನಾಗರಾಜ್ ವೈದ್ಯ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಳಿಯಂಗಡಿ.ಇವರನ್ನು ಸನ್ಮಾನಿಸಲಾಯಿತು.

ಕಾರ್ಯಗಾರದಲ್ಲಿ ಪೂರ್ವಾಹ್ನ “ಎರಡನೇ ವರ್ಷದ ಅರ್ಥಶಾಸ್ತ್ರದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ ” ಎಂಬ ವಿಚಾರದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ ಶೆಟ್ಟಿ ಇವರು ವಿಚಾರ ಮಂಡಿಸಿದರು.

ಅಪರಾಹ್ನ ” ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು ” ಎಂಬ ವಿಚಾರದ ಕುರಿತು ಸರ್ಕಾರಿ ಸ್ವತಂತ್ರ ಪಿ.ಯು. ಕಾಲೇಜು, ಹಾಸನದ ಅರ್ಥಶಾಸ್ತ್ರ ಉಪನ್ಯಾಸಕರಾದ ಧರ್ಮೇಂದ್ರ ಬಿ.ಜಿ ಇವರು ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ. ಎಚ್. ರವರು ಸ್ವಾಗತಿಸಿ, ಉಪನ್ಯಾಸಕಿ ಜ್ಯೋತಿ ಕೊಲ್ಲೂರು ರವರು ವಂದಿಸಿದರು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ರವರು ಕಾರ್ಯಕ್ರಮ ನಿರ್ವಹಿಸಿದರು.