Home Blog Page 84

ಕಾರ್ಕಳ:ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಿದ ರೀಲ್ಸ್ ರಾಣಿ ಪ್ರತಿಮಾ

0

ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಕಾರ್ಕಳ ಅಜೆಕಾರು ದೆಪ್ಪುಜೆಯಲ್ಲಿ ನಡೆದಿದೆ.

ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಂದವಿತ್ತು.ರೀಲ್ಸ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.

ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು.ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ ದಿಲೀಪ್ ವಿಷ ಪದಾರ್ಥವನ್ನು ಪ್ರತಿಮಳ ಕೈಗೆ ಕೊಟ್ಟಿದ್ದು ,ಅದನ್ನ ಆಹಾರದಲ್ಲಿ ಬೆರೆಸಿ ಕೊಟ್ಟಿದ್ದಾರೆ.ಸ್ಲೋ ಪಾಯಿಸನ್ ನಿಂದಾಗಿ ಬಾಲಕೃಷ್ಣರಿಗೆ ವಾಂತಿ ಭೇದಿ ಶುರುವಾಗಿದೆ.

ಪ್ಲಾನ್ ಪ್ರಕಾರ ಬಾಲಕೃಷ್ಣ ನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿಂದ ಕಾಮಾಲೆ ರೋಗ ಇದೆ ಎಂದು ಮಣಿಪಾಲ ಅಸ್ಪತ್ರೆ ,ಅಲ್ಲಿಂದ ವೆನ್ಲಾಕ್ ಅಲ್ಲಿಂದ ಬೆಂಗಳೂರಿನ ವಿಕ್ಟೋರಿಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅಕ್ಟೋಬರ್ 19 ರಂದು ಮನೆಗೆ ಕರೆದುಕೊಂಡು ಬಂದಿದ್ದು,ಬಳಿಕ ಅಕ್ಟೋಬರ್ 20 ರಂದು ಬೆಳಗ್ಗೆ ತನ್ನ ಪ್ರಿಯಕರ ಜೊತೆ ಸೇರಿಕೊಂಡು ಬೆಡ್ ಶೀಟ್ ನಿಂದ ಉಸಿರುಗಟ್ಟಿ ಸಾಯಿಸಿದ್ದಾರೆ.

ಬಳಿಕ ಬಾಲಕೃಷ್ಣ ಅಸೌಖ್ಯದಿಂದ ಸಾವನ್ನಾಪ್ಪಿದ್ದಾರೆ ಎಂದು ಹೇಳಿ ನಂಬಿಸಿದ್ದರು.ಅದ್ರೆ ಬಾಲಕೃಷ್ಣ ಕುಟುಂಬಸ್ಥರಿಗೆ ಈ ಬಗ್ಗೆ ಸಂಶಯ ಮೂಡಿದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.ಆದರೆ ಅಸಲಿ ವಿಚಾರ ಹೊರ ಬಿದ್ದಿದ್ದು,ತಾವು ಸ್ಲೋ ಪಾಯಿಸನ್ ಕೊಟ್ಟು ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾರೆ.ಪೊಲೀಸರು ಪ್ರತಿಮಾ ಹಾಗೂ ಆಕೆಗೆ ಪ್ರಿಯಕರ ದಿಲೀಪ್ ಹೆಗ್ಡೆ ಎಂಬುವವನನ್ನು ವಶಕ್ಕೆ ಪಡೆದಿದ್ದಾರೆ.

 

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅವಿನಾಶ್ ಜಿ. ಶೆಟ್ಟಿ

0

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ ನ 2024-25ನೇ ಸಾಲಿನ ಅಧ್ಯಕ್ಷರಾಗಿ ಅವಿನಾಶ್ ಜಿ. ಶೆಟ್ಟಿ ಆಯ್ಕೆಯಾಗಿದ್ದಾರೆ.

ಕಳೆದ 2 ವರ್ಷಗಳಿಂದ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿದ್ದ ಅವರು ಈ ವರ್ಷವೂ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಬಜಗೋಳಿ ಟೈಗರ್ಸ್-ಹುಲಿವೇಷದ ಉಳಿದ ಹಣ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಹಸ್ತಾಂತರ

0

ಬಜಗೋಳಿ ಟೈಗರ್ಸ್ ಹುಲಿವೇಷದ ಉಳಿದ ಹಣ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಹಸ್ತಾಂತರ

ಬಜಗೋಳಿ ಟೈಗರ್ಸ್ ವತಿಯಿಂದ ಊರಿನ ಸಮಸ್ತ ಸಹಕಾರದಿಂದ ದಸರಾ ಮಹೋತ್ಸವದ ಸಂದರ್ಭದಲ್ಲಿ ಹುಲಿವೇಷದ ಮೂಲಕ ಸಂಗ್ರಹವಾಗಿ ಉಳಿದ ಮೊತ್ತವನ್ನು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

 

ಐಟಿ ಕುಸಿತ, ಬರಗಾಲದ ನಡುವೆಯೂ ರಾಜ್ಯದ ಜಿಡಿಪಿ ದೇಶದಲ್ಲಿಯೇ ಅಧಿಕ-ಸಿಎಂ ಸಿದ್ದರಾಮಯ್ಯ ಸಂತಸ

0

ಐಟಿ ಕುಸಿತ, ಬರಗಾಲದ ನಡುವೆಯೂ ರಾಜ್ಯದ ಜಿಡಿಪಿ ದೇಶದಲ್ಲಿಯೇ ಅಧಿಕ-ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ರಾಜ್ಯವು 2023-24ನೇ ಸಾಲಿನಲ್ಲಿ ಶೇ 10.2 ರಷ್ಟು ಜಿಎಸ್‌ಡಿಪಿ ಪ್ರಗತಿ ದಾಖಲಿಸಿದ್ದು, ಇದು ಇಡೀ ದೇಶದಲ್ಲೇ ಅತ್ಯಧಿಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್‌ ಸರಕಾರದ ಹಲವು ಜನಪರ ಯೋಜನೆಗಳು ಹಾಗೂ ಅಭಿವೃದ್ಧಿಯ ಫಲ ಎಲ್ಲ ವರ್ಗಗಳಿಗೂ ತಲುಪಿರುವುದನ್ನು ಇದು ಖಾತರಿಪಡಿಸಿದೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ‘ಕರ್ನಾಟಕದ ಆರ್ಥಿಕ ಮಾದರಿ’ಯ ಯಶಸ್ಸನ್ನು ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳು, ”ಕೇಂದ್ರ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಇದೆ. ಕಳೆದ ವರ್ಷ ರಾಜ್ಯವು ತೀವ್ರ ಬರಗಾಲಕ್ಕೆ ತುತ್ತಾಗಿ ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ ಕರ್ನಾಟಕ ಆರ್ಥಿಕವಾಗಿ ಉತ್ತಮ ಬೆಳವಣಿಗೆ ದಾಖಲಿಸಿದೆ,” ಎಂದು ತಿಳಿಸಿದ್ದಾರೆ.

”ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಶೇ.4 ರಷ್ಟು ಅಂದಾಜಿಸಿತ್ತು. ಆದರೆ, ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ಧಿಯ ದರ ಶೇ 13.1 ರಷ್ಟಾಗಿದೆ. ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಇದರಿಂದ ಸ್ಪಷ್ಟವಾಗಿದೆ,” ಎಂದಿದ್ದಾರೆ.

”2024-25ನೇ ಹಣಕಾಸು ವರ್ಷಕ್ಕೆ ಎನ್‌ಎಸ್‌ಸಿ ಕರ್ನಾಟಕ ರಾಜ್ಯದಲ್ಲಿ ಶೇ 9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ 10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಿದೆ. 2024ರ ಸೆಪ್ಟೆಂಬರ್‌ವರೆಗೆ ರಾಜ್ಯದ ಜಿಎಸ್‌ಟಿ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಶೇ.10 ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದೆ. ಇದು ಉತ್ತಮ ಆರ್ಥಿಕತೆಯನ್ನು ದೃಢಪಡಿಸುತ್ತದೆ. ಉತ್ತಮ ಆಡಳಿತ ಹಾಗೂ ಬಹುವಲಯಗಳ ಅಭಿವೃದ್ಧಿಯಿಂದ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ,” ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ. ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ಉದ್ಯಮ ರಂಗದ ತಜ್ಞರ ಅಭಿಪ್ರಾಯವಾಗಿದೆ ಎಂದು ಸಿಎಂ ಹೇಳಿದ್ದಾರೆ.

 

 

 

ಕಾರ್ಕಳ:ದೀಪಾವಳಿ ಹಬ್ಬದೊಳಗೆ ಪಡಿತರ ಚೀಟಿ ನೀಡದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು-ಸಂತೋಷ್ ಅಮೀನ್ ಎಚ್ಚರಿಕೆ

0

ಕಾರ್ಕಳ:ದೀಪಾವಳಿ ಹಬ್ಬದೊಳಗೆ ಪಡಿತರ ಚೀಟಿ ನೀಡದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು-ಸಂತೋಷ್ ಅಮೀನ್ ಎಚ್ಚರಿಕೆ

ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಬಂದದ್ದಿನಿಂದ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದೆ. ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದೀಚೆಗೆ ಯಾವುದೇ ಅಭಿವೃದ್ಧಿ ಚಟುವಟಿಕೆ ಮರೀಚಿಕೆಯಾಗಿದೆ.ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದರೂ, ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸರಿಯಾಗಿ ಪಡಿತರ ಅಕ್ಕಿ ನೀಡದೆ ವಿಳಂಭ ಮಾಡುತ್ತಿದೆ. ಯಾವುದೇ ಸುಳ್ಳು ಕಾರಣ ನೀಡಿ ಬಡ ಜನರಿಗೆ ಕಾಂಗ್ರೆಸ್ ಸರ್ಕಾರ ವಂಚನೆ ಮಾಡುತಿದ್ದೆ. ಈ ತಿಂಗಳ ಪಡಿತರ ಅಕ್ಕಿಯನ್ನು ಈವರೆಗೂ ನೀಡಿಲ್ಲ. ಈ ತಿಂಗಳ ಕೊನೆಯಲ್ಲಿ ದೀಪಾವಳಿ ಹಬ್ಬ ಬರಲಿದೆ. ಕನಿಷ್ಠ ಹಬ್ಬದ ಮೊದಲಾದರೂ ಪಡಿತರ ಅಕ್ಕಿಯನ್ನು ನೀಡಬೇಕು. ಒಂದು ವೇಳೆ ಹಬ್ಬದ ಒಳಗೆ ಅಕ್ಕಿ ನೀಡದಿದ್ದರೆ, ಗ್ರಾಮ ಪಂಚಾಯತ್ ಸದಸ್ಯರೆಲ್ಲರೂ ಒಟ್ಟಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಅಮೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪಡಿತರ ಮಾತ್ರವಲ್ಲದೆ, ಸರ್ಕಾರದ ಇನ್ನಿತರ ಸವಲತ್ತಿಗಳೂ ಕೂಡ ಬಡ ಜನರಿಗೆ ನೀಡುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿ ಮಾನ್ಯ ಸಿದ್ದರಾಮಯ್ಯ ನವರ, ಮಾತೆತ್ತಿದರೆ ನಾವು ಬಡವರ ಪರ, ಬಡವರ ಸರ್ಕಾರ ಎಂದು ಹೇಳುತ್ತಿದ್ದಾರೆ. ಬಡವರ ಹೆಸರು ಹೇಳಿಕೊಂಡು, ಅಧಿಕಾರ ಪಡೆದ ಸಿದ್ದರಾಮಯ್ಯ ಈಗ ಬಡವರನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಪ್ರಸ್ತುತ ತನ್ನ ಕುರ್ಚಿ ಗಟ್ಟಿ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಸ್ಥಳೀಯವಾಗಿ ಸರ್ಕಾರದ ಸವಲತ್ತುಗಳನ್ನು ನಂಬಿಕೊಂಡು ಬರುತ್ತಿರುವ ಬಡ ಜನರ ಪಾಡು ಕಷ್ಟದಾಯಕವಾಗಿದೆ. ಸರ್ಕಾರ ಈ ಕೂಡಲೇ ಎಚ್ಛೆತ್ತುಕೊಳ್ಳದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕಾರ್ಕಳ:ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕ್ರೈಸ್ಟ್ ಕಿಂಗ್ ನ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ನ ಹತ್ತನೇ ತರಗತಿಯ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಹತ್ತನೇ ಕ್ರೈಸ್ಟ್ ಕಿಂಗ್ ತರಗತಿಯ ಗಣ್ಯ ಪೂಜಾರಿ ರಾಷ್ಟçಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ ಇವರ ಜಂಟಿ ಆಶ್ರಯದಲ್ಲಿ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ಗಣ್ಯ ಪೂಜಾರಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.

ಮುಂದೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಗಣ್ಯ ಪೂಜಾರಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾಳೆ. ಸಾಧಕ ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಕಾರ್ಕಳ:ದೀಪಾವಳಿ ಹಬ್ಬದ ಪ್ರಯುಕ್ತ ನ್ಯೂ ಪವನ್ ಜ್ಯುವೆಲ್ಲರ್ಸ್ ನಲ್ಲಿ ವಿಶೇಷ ಕೊಡುಗೆ

0

ಕಾರ್ಕಳ:ದೀಪಾವಳಿ ಹಬ್ಬದ ಪ್ರಯುಕ್ತ ನ್ಯೂ ಪವನ್ ಜ್ಯುವೆಲ್ಲರ್ಸ್ ನಲ್ಲಿ ವಿಶೇಷ ಕೊಡುಗೆ

ಕಾರ್ಕಳ:ಸದಾಶಿವ ಟವರ್ಸ್ ನಲ್ಲಿರುವ ನ್ಯೂ ಪವನ್ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಆಕರ್ಷಕ ಆಫರ್ ಗಳು ಪ್ರಾರಂಭಗೊಂಡಿದೆ.ದೀಪಾವಳಿಯ ಪ್ರಯುಕ್ತ ಚಿನ್ನ,ಬೆಳ್ಳಿ ವಜ್ರಾಭರಣಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ರಿಯಾಯಿತಿ ಸಿಗಲಿದೆ.

ಬೆಳ್ಳಿಯ ಸಾಮಗ್ರಿ ಪ್ರತೀ ಕೆಜಿಗೆ ರೂ.3,000ರಿಯಾಯಿತಿ,ಚಿನ್ನಾಭರಣಗಳಿಗೆ ಪ್ರತೀ ಗ್ರಾಂ 200ರೂ. ಗೆ ರಿಯಾಯಿತಿ ಮತ್ತು ಪ್ರತೀ ಕ್ಯಾರೆಟ್ ವಜ್ರಾಭರಣಕ್ಕೆ ರೂಪಾಯಿ 7,000 ರಿಯಾಯಿತಿ ಸಿಗಲಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೇಟಿ ನೀಡಿ:ನ್ಯೂ ಪವನ್ ಜ್ಯುವೆಲ್ಲರ್ಸ್ ಸದಾಶಿವ ಟವರ್ಸ್ ಅನಂತಶಯನ ರಸ್ತೆ ಕಾರ್ಕಳ:ಮೊಬೈಲ್-831049199

ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಕಾರ

0

ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ.

ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಏಕ ಸದಸ್ಯ ಪೀಠ ಇಂದು ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.

ಕೃಷ್ಣ ಶೆಟ್ಟಿ ಯವರ ಪರವಾಗಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಬೆಂಗಳೂರಿನ ವಿ ಕೆ ಶ್ರೀಕಾಂತ್ ರವರು ವಾದ ವನ್ನು ಮಂಡಿಸಿರುತ್ತಾರೆ.ಆರೋಪಿ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ರವರು, ನಿರ್ಮಿತಿ ಕೇಂದ್ರದ ಪರ ದಿನೇಶ್ ಹೆಗ್ಡೆ ಉಳಿಪಾಡಿ ಹಾಗೂ ಸರಕಾರದ ಪರವಾಗಿ ಬಿ ಏನ್ ಜಗದೀಶರವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ.

 

ಬಜಗೋಳಿ:ಪವರ್ ಕೇರ್ ಬ್ಯಾಟರಿ ಸೇಲ್ಸ್ & ಸರ್ವಿಸ್ ಸೆಂಟರ್ ಶುಭಾರಂಭ

0

ಬಜಗೋಳಿ:ಪವರ್ ಕೇರ್ ಬ್ಯಾಟರಿ ಸೇಲ್ಸ್ & ಸರ್ವಿಸ್ ಸೆಂಟರ್ ಶುಭಾರಂಭ

ಪವರ್ ಕೇರ್ ಬ್ಯಾಟರಿ, ಸೋಲಾರ್, ಇನ್ವರ್ ಟರ್ ಸೇಲ್ಸ್ & ಸರ್ವಿಸ್ ನ ಕೇಂದ್ರವು ಬಜಗೋಳಿ ಕರ್ಮಾರ್ ಕಟ್ಟೆ ಬಳಿ ಅಗ್ನಿಲಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ.ಡಿ.ಅತಿಕಾರಿ ನೆರವೇರಿಸಿದರು.

ಈ ಸಂಧರ್ಭದಲ್ಲಿ ಕೆ.ಎಂ.ಎಫ್ ನಿರ್ದೇಶಕ ಸುಧಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಕುಮಾರ್, ರಜತ್ ರಾಮ್ ಮೋಹನ್ ಹಾಗೂ ರಮಾಕಾಂತ್ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

 

 

ಕಾರ್ಕಳ:ಪ್ರಕಾಶ್ ಹಾಗೂ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಆಫರ್

0

ಕಾರ್ಕಳ:ಪ್ರಕಾಶ್ ಹಾಗೂ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಆಫರ್

ಚಿನ್ನ ಕೊಳ್ಳುವವರಿಗೆ ಭರ್ಜರಿ ಸಿಹಿ ಸುದ್ದಿಯೊಂದಿದೆ.
ಈ ದೀಪಾವಳಿ ಚಿನ್ನದ ಆಭರಣಗಳನ್ನು ಖರೀದಿಸಲು ಉತ್ತಮ ಸಂದರ್ಭವಾಗಿದೆ.

ಕಾರ್ಕಳ ಪ್ರಕಾಶ್ ಜ್ಯುವೆಲ್ಲರ್ಸ್ ಮತ್ತು ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಆಫರ್ ಪ್ರಾರಂಭಗೊಂಡಿದೆ.ಅಕ್ಟೊಬರ್ 19 ನಿಂದ ನವೆಂಬರ್ 10ರ ವರೆಗೆ ಪ್ರತೀ ಗ್ರಾಂ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಗೆ 350ರೂಪಾಯಿವರೆಗೆ ರಿಯಾಯಿತಿ ಲಭ್ಯವಿದೆ.

ಅಲ್ಲದೆ ಗ್ರಾಹಕರ ಹಳೆಯ 916 ಚಿನ್ನವನ್ನು ಅತೀ ಹೆಚ್ಚಿನ ದರದಲ್ಲಿಎಕ್ಸ್ ಚೇಂಜ್ ಮಾಡುವ ಅವಕಾಶವಿದೆ.ಇದೀಗ ಕಾರ್ಕಳದ ಪ್ರಕಾಶ್ ಮತ್ತು ಜೋಡುರಸ್ತೆಯ ಸ್ವರ್ಣ ಪ್ರಕಾಶ್ ಈ ಎರಡೂ ಜ್ಯೂವೆಲ್ಲರ್ಸ್ ಗಳಲ್ಲಿ ಲಭ್ಯವಿದೆ .
ಅತ್ಯುತ್ತಮ ಡಿಸೈನ್ಸ್,ಲೈಟ್ ವೈಟ್ ನೆಕ್ಲೆಸ್ , antique ಬಳೆಗಳು, antique ಹಾರಾ, ಮತ್ತು ವಜ್ರದ ಆಭರಣಗಳು ಲಭ್ಯವಿದೆ.
ಆರ್ಡರ್ ಆಧಾರದ ಮೇಲೆ ನಾವು ನಿಮ್ಮ ವಿಶೇಷ ಸಮಾರಂಭಗಳಿಗಾಗಿ 14kt ಮತ್ತು 18kt ವಜ್ರದ ಆಭರಣಗಳನ್ನು ಅತ್ಯಂತ ಕೈಗೆಟುಕುವ ದರದಲ್ಲಿ ನೀಡುತ್ತೇವೆ

ಚಿನ್ನಾಭರಣಗಳನ್ನು ಖರೀದಿಸಲು ಇದೆ ಸುಸಂದರ್ಭವಾಗಿದ್ದು ಇಂದೇ ಭೇಟಿ ನೀಡಿ ಪ್ರಕಾಶ್ ಜೆವೆಲ್ಲರ್ಸ್ ಕಾರ್ಕಳ ಮತ್ತು ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್, ಜೋಡುರಸ್ತೆ ಕಾರ್ಕಳ

ಯಾವುದೇ ವಿಚಾರಣೆಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:
ಪ್ರಕಾಶ್ ಜೆವೆಲ್ಲರ್ಸ್ ಕಾರ್ಕಳ – 8762117314
ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್, ಜೋಡುರಸ್ತೆ ಕಾರ್ಕಳ – 7204429777