Home Blog Page 23

ರೋಟರಿ ಕ್ಲಬ್ ಕಾರ್ಕಳಕ್ಕೆ ಜಿಲ್ಲಾ ಪ್ರಶಸ್ತಿ

0

 

ಉಡುಪಿ ಜಿಲ್ಲೆಯ ಸಾಸ್ಥಾನದಲ್ಲಿ ಏರ್ಪಡಿಸಿದ್ದ 2024- 25 ನೇ ಸಾಲಿನ ಉಡುಪಿ ,ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಕಂದಾಯ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182 ರ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ “ಕಲ್ಯಾಣ ಸಂಗಮ” ದಲ್ಲಿ ರೋಟರಿ ಕ್ಲಬ್ ಕಾರ್ಕಳ ಸಾರ್ವಜನಿಕ ಸೇವೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ವಿವಿಧ ವಿಭಾಗಗಳಲ್ಲಿ 30 ಪ್ರಶಸ್ತಿಗಳನ್ನು 24-25 ನೇ ಸಾಲಿನ ಅಧ್ಯಕ್ಷ ಇಕ್ಬಾಲ್ ಅಹ್ಮದ್ ರವರಿಗೆ ನೀಡಿ ಗೌರವಿಸಲಾಯಿತು . 24-25 ನೇ ಸಾಲಿನ ಎಕ್ಸಲೆನ್ಸಿ ಅವಾರ್ಡ್ ಅನ್ನು ಪಡೆಯಿತು. ಅಲ್ಲದೆ ಜಿಲ್ಲಾ ಮೆಂಬರ್ ಶಿಪ್ ವೈಸ್ ಚೇರ್ಮನ್ ಕಾರ್ಕಳ ಕ್ಲಬ್ಬಿನ ಸದಸ್ಯೆ ರೇಖಾ ಉಪಾಧ್ಯಾಯ ಇವರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ 24-25ನೇ ಸಾಲಿನ ಕಾರ್ಯದರ್ಶಿ ಗಣೇಶ ಸಾಲಿಯಾನ್, ಮಾಜಿ ಜಿಲ್ಲಾ ಗವರ್ನರ್ ಡಾ.ಭರತೇಶ್ ಆದಿರಾಜ್, ಮಾಜಿ ಸಹಾಯಕ ಗವರ್ನರ್ ಶೈಲೇಂದ್ರ ರಾವ್, ವಲಯ ಸೇನಾನಿ ಜಾನ್ ಡಿ ಸಿಲ್ವ,2025-26ನೇ ಸಾಲಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಕಾರ್ಯದರ್ಶಿ ಚೇತನ್ ನಾಯಕ್, ಶೇಖರ್ ಹೆಚ್, ಶ್ರೀಶ ಭಟ್, ಪದ್ಮಪ್ರಸಾದ್ ಜೈನ್ ,ಚೇತನ್ ಕುಮಾರ್ ,ಜೆರಾಲ್ಡ್ ಕುಟೀನ್ಹೊ, ಸುಬ್ರಹ್ಮಣ್ಯ ದೇವಾಡಿಗ, ಸುರೇಶ ನಾಯಕ್, ಸೌಜನ್ಯ ಉಪಾಧ್ಯಾಯ,ವಿಜೇಂದ್ರ ಕುಮಾರ್ , ಪ್ರಭಾತ್ ಕುಮಾರ್ ಎನ್, ಸತೀಶ್ ಜಿ. ಶೆಟ್ಟಿ, ನವೀನ್ ಸುವರ್ಣ, ಬಾಲಕೃಷ್ಣ ದೇವಾಡಿಗ,ಡಾ.ಆಶಾ ಹೆಗಡೆ, ರೇಖಾ ಉಪಾಧ್ಯಾಯ, ಹರ್ಷಿಣಿ ವಿಜಯರಾಜ್, ಜ್ಯೋತಿ ಪದ್ಮನಾಭ, ಮಮತ ಶೆಟ್ಟಿ ಭಾಗವಹಿಸಿದ್ದರು.

ಪ್ರಧಾನ ಮಂತ್ರಿ ಬಾಲಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿರುವ ದೀಪೇಶ್ ದೀಪಕ್ ಶೆಣೈಗೆ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಗೌರವ ಸನ್ಮಾನ

0

 

ಅಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತದಲ್ಲಿರುವ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈಗೆ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ವಲಯದಲ್ಲಿ ನಡೆದ ಭವ್ಯ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಖಿಲ ಭಾರತ ಮಟ್ಟದ ಶೈಕ್ಷಣಿಕ ಸಾಧನೆ ಹಾಗೂ ಧೈರ್ಯ/ಸಾಹಸ ದ ಕ್ಷೇತ್ರದಲ್ಲಿ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕೊಡಮಾಡುವ ಅತ್ಯುನ್ನತ ಗೌರವಯುತ ಪ್ರಶಸ್ತಿಯಾದ “ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ (PMRBP)”ಗೆ ನಾಮನಿರ್ದೇಶನಗೊಂಡಿದ್ದಕ್ಕಾಗಿ ಗೌರವಿಸಲ್ಪಟ್ಟರು.

ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಸನ್ಮಾನವನ್ನು ನೆರವೇರಿಸಿದರು. ಉಡುಪಿ ವಲಯದ ರಾಜಯೋಗಿನಿ ಬಿ.ಕೆ. ಸುಮಾ, ಬಿ.ಕೆ. ರಘುರಾಮ, ದೀಪಕ್ ಹಾಗೂ ಇತರ ಹಿರಿಯ ಸದಸ್ಯರ ಸಾನ್ನಿಧ್ಯದಲ್ಲಿ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಸಿಲಾಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಅಣ್ಣಪೂರ್ಣಾ ರಾವ್, ಎನ್.ಎಸ್.ಜಿ. ಕಮಾಂಡೋ ವಿಜಯ್ ಎಸ್. ಪುತ್ರನ್ ಹಾಗೂ ನಿವೃತ್ತ ಸೈನಿಕ ಕೋತಂಡ ರಾಮನ್ ಉಪಸ್ಥಿತರಿದ್ದರು.

ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಈಗ ತನ್ನ ಸುವರ್ಣೋತ್ಸವದ ಹಂತವನ್ನು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಹೆಮ್ಮೆಯ ಸನ್ಮಾನವನ್ನು ಪಡೆದ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಗೆ, ಮುಖ್ಯಶಿಕ್ಷಕಿ ಶ್ರೀಮತಿ ವಿನೋದ ಶೆಟ್ಟಿ , ಅಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿ ಡಾ. ಶ್ರೀಧರ ರಂಗನಾಥ ಪೈ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ರಕ್ಷಕ-ಶಿಕ್ಷಕ ಸಂಘ ಮತ್ತು ಶಾಲಾ ಹಳೆ ವಿದ್ಯಾರ್ಥಿಗಳ ಸಂಘ ಜೊತೆಗೆ ಶಾಲಾ ಸಮುದಾಯವು ದೀಪೇಶ್ ಅವರನ್ನು ಹಾರ್ದಿಕವಾಗಿ ಅಭಿನಂದಿಸಿ, ಅವರ ಭವಿಷ್ಯದ ಪ್ರಯತ್ನಗಳಿಗೆ ಉಜ್ವಲವಾದ ಯಶಸ್ಸು ಕೋರಿದ್ದಾರೆಂದು ಪ್ರಕಟಣೆಯಲ್ಲಿ ತಿಳಿದ್ದಾರೆ.

 

ಸಾಣೂರು: ಸರಕಾರಿ ಪ. ಪೂ.ಕಾಲೇಜಿನ ಶೌಚಾಲಯ ಉದ್ಘಾಟನೆ ಹಾಗೂ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ

0

 

ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಜಂಟಿ ಅನುದಾನದಿಂದ ಗ್ರಾಮ ಪಂಚಾಯತ್ ಸಾಣೂರು ನಿರ್ಮಿಸಿ ಕೊಟ್ಟಿರುವ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಸಾಣೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಯಾಗಿದ್ದ ಭಾರತ ಪೆಟ್ರೋಲಿಯಂನ ವಿಶ್ರಾಂತ ಉದ್ಯೋಗಿ ರವಿದಾಸ್ ಭಟ್ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತಗಳನ್ನಾಡಿದರು.

ಸಾಣೂರು ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರಸಾದ್ ಪೂಜಾರಿ ಅವರು ಮಾತನಾಡುತ್ತಾ, ವಿದ್ಯಾ ಸಂಸ್ಥೆಯ ಸರ್ವಾಂಗೀಣ ಪ್ರಗತಿಗೆ ಸಹಕರಿಸುವುದಾಗಿ ಹೇಳಿದರು.

ವಿವಿಧ ಸಂಘ ಸಂಸ್ಥೆಗಳು ನಡೆಸಿದ ಬೇರೆ ಬೇರೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಕಲಿಯುವಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸಾಣೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯನಿ ಲವೀನ ಮೇಲ್ವಿಟ, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮಾಧವ ಭಂಡಾರ್ಕರ್, ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಕಳ : ಮುಖ್ಯಮಂತ್ರಿಗಳಿಂದ ಒಂದು ಲಕ್ಷ ರೂ. ಪ್ರೋತ್ಸಾಹ ಧನವನ್ನು ಸ್ವೀಕರಿಸಿದ ಸಾಧಕಿ ವಿನುತಾಗೆ ಅಭಿನಂದನೆ

0

 

ಮಿಯ್ಯಾರಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿನಿ ವಿನುತಾ ಇವರು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಟಾಪ್ 15 ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಂದ ನೀಡಲಾಗುವ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಸಿದ ವಿದ್ಯಾರ್ಥಿಗಳಲ್ಲಿ ವಿನುತಾ ಒಬ್ಬರಾಗಿದ್ದಾರೆ. ವಿನುತಾ ವೈದ್ಯಕೀಯ ಕೋರ್ಸನ್ನು ಆಯ್ಕೆ ಮಾಡಿಕೊಂಡಿದ್ದು, ರಾಜ್ಯದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗೆ ದಾಖಲಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಉಡುಪಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿರುವ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆ‌ರ್. ಲಮಾಣಿ, ಕಾಲೇಜಿನ ಪ್ರಾಂಶುಪಾಲರಾಗಿರುವ ಮಲ್ಲಿಕಾರ್ಜುನ ಕುರಿ, ಗಣಕ ವಿಜ್ಞಾನ ಉಪನ್ಯಾಸಕರು ಹಾಗೂ ನಿಲಯಪಾಲಕರಾದ ತುಳಸಿ ಗಾಯತ್ರಿದೇವಿ, ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ ಬರ್ಲಾಯ, ಅಂಗ್ಲ ಭಾಷಾ ಉಪನ್ಯಾಸಕರಾದ ಸುಪ್ರೀತ, ಕನ್ನಡ ಭಾಷಾ ಉಪನ್ಯಾಸಕರಾದ ಭರತ್‌ರಾಜ್ ಕೆ.ಎನ್., ಜೀವಶಾಸ್ತ್ರ ಉಪನ್ಯಾಸಕರಾದ ಸುಷ್ಮಾ ಹೆಗಡೆ, ರಸಾಯನಶಾಸ್ತ್ರ ಉಪನ್ಯಾಸಕರಾದ ಸಂಧ್ಯಾ ಆಚಾರ್ಯ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

 

 

ಅಂತರಾಷ್ಟ್ರೀಯ ಕ್ರೀಡೆ – ಕೆ.ಎಂ.ಇ.ಎಸ್ ಸಂಸ್ಥೆಗೆ ಬೆಳ್ಳಿಯ ಗರಿ

0

 

ಕಾರ್ಕಳ ತಾಲೂಕಿನ ನೀರೆ ಬೈಲೂರು ಮೂಲದ ಮುಂಬೈಯಲ್ಲಿ ಉದ್ಯಮಿಯಾಗಿರುವ
ಶಿಶುಪಾಲ ಶೆಟ್ಟಿ ಮತ್ತು ಶ್ವೇತಾಶೆಟ್ಟಿಯವರ ಮಗನಾದ ಸನ್ವಿತ್ ಶೆಟ್ಟಿಯವರು
ಹೈದಬಾದಿನಲ್ಲಿ ನಡೆದ ಫಸ್ಟ್ ಏಷಿಯನ್ ಓಪನ್ ಅಂತರಾಷ್ಟ್ರೀಯ ಟೆಕ್ವ್ಯಾಂಡೋ
ಚಾಂಪಿಯನ್ ನಲ್ಲಿ ರನ್ನರ್ ಅಫ್ ವೈಯಕ್ತಿಕ ಚಾಂಪಿಯನ್ ಶಿಪ್ ಬೆಳ್ಳಿಯ
ಪದಕವನ್ನು ಪಡೆದು ಸಂಸ್ಥೆಗೆ ಅಂತರಾಷ್ಟ್ರೀಯ ಮಟ್ಟದ ಕೀರ್ತಿಯನ್ನು ತಂದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕೆ.ಎಂ.ಇ.ಎಸ್. ವಿದ್ಯಾಸಂಸ್ಥೆ ಕುಕ್ಕುಂದೂರು ಕಾರ್ಕಳದಲ್ಲಿ
ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸನ್ವಿತ್ ಶೆಟ್ಟಿ ಈ ಸಾಧನೆಯನ್ನು
ಮಾಡಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು
ಕಂಚಿನ ಪದಕವನ್ನು, ಶೃಂಗೇರಿಯಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ
ಪದಕವನ್ನು, ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಎರಡು ಚಿನ್ನದ
ಪದಕಗಳನ್ನು ಪಡೆದಿದ್ದಾರೆ.

ಟೆಕ್ವ್ಯಾಂಡೋ ಚಾಂಪಿಯನ್ ಸನ್ವಿತ್ ಶೆಟ್ಟಿಯವರಿಗೆ ಸಂಸ್ಥೆಯ ಅಧ್ಯಕ್ಷರಾದ
ಕೆ.ಎಸ್. ಇಮ್ತಿಯಾಜ್ ಅಹಮ್ಮದ್, ಪ್ರಾಂಶುಪಾಲರಾದ ಕೆ.ಬಾಲಕೃಷ್ಣ ರಾವ್,
ದೈಹಿಕ ಶಿಕ್ಷಕರಾದ ಸತೀಶ್ಚಂದ್ರ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕ ವೃಂದದವರು
ಶುಭಾಷಯಗಳನ್ನು ಕೋರಿದ್ದಾರೆ. ಕೋಚ್ ಸುರೇಶ್ ದೇವಾಡಿಗ ಅಭಿನಂದಿಸಿದ್ದಾರೆ.

ಹೆಬ್ರಿ: ಎಸ್.ಆರ್.ಪ. ಪೂ. ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

0

 

ಹಿಂದಿ ದೇಶವನ್ನು ಒಗ್ಗೂಡಿಸುವ ಭಾಷೆ – ಅನಂತ್ ರಾಮ್ ನಾಯಕ್

ಎಸ್ ಆರ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಹಾಗೂ ರಾಜ್ಯಮಟ್ಟದ ಹಿಂದಿ ಭಾಷಾತಜ್ಞರು ಆದ ಅನಂತ್ ರಾಮ್ ನಾಯಕ್ ಅವರು ‘ವಿಶ್ವಭಾಷೆಗಳಲ್ಲಿ ಹಿಂದಿ ಮೂರನೇ ಸ್ಥಾನದಲ್ಲಿದ್ದು ಸುಮಾರು 170ಕ್ಕೂ ಹೆಚ್ಚು ದೇಶಗಳಲ್ಲಿ ಹಿಂದಿ ಭಾಷೆಯನ್ನಾಡುವ ಜನರಿದ್ದಾರೆ. ಹಿಂದಿ ಉದಾರ ಹೃದಯದ ಭಾಷೆಯಾಗಿದ್ದು, ತನ್ನ ವಿಶೇಷತೆಯ ಕಾರಣದಿಂದ ಅನ್ಯ ಭಾಷೆಯನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಹಿಂದಿ ಯಾವುದೇ ಒಂದು ಪ್ರದೇಶದ ಭಾಷೆಯಲ್ಲ. ದೇಶದಲ್ಲಿ ಯಾವುದೇ ಭೇದವಿಲ್ಲದೆ ಮಾತನಾಡುವ ಭಾಷೆಯಾಗಿದೆ. ದೇಶವನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತದೆ’ ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿಯವರು ಮಾತನಾಡುತ್ತ ‘ಹಿಂದಿಯನ್ನು ಸಹ ಪ್ರಧಾನ ಭಾಷೆಯಾಗಿ ಬಳಸಲಾಗುತ್ತಿದೆ. ಭಾಷೆಗಳ ಆಯ್ಕೆ ನಮ್ಮದೆ ಆಗಿರುವುದರಿಂದ ಆಯ್ದುಕೊಂಡ ಭಾಷೆಗಳಿಗೆ ಪ್ರಾಮುಖ್ಯತೆ ಕೊಡುವುದು ನಮ್ಮ ಕರ್ತವ್ಯ’ ಎಂದು ಹೇಳಿದರು.

ಹಿಂದಿ ದಿವಸದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ವನಿತಾ ತೋಳಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ರಚನಾ ನಿರೂಪಿಸಿ, ಖಾಝಿ ಇಲ್ಹಾಮ್ ವಂದಿಸಿದರು.

ಕಾರ್ಕಳ ಜ್ಞಾನಸುಧಾ : ಥ್ರೋಬಾಲ್ ಪಂದ್ಯಾಟದಲ್ಲಿ ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ

0

 

ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ. ಪ್ರಸನ್ನ ಎಂ. ಎಸ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪಂದ್ಯಾಟವನ್ನು ಉದ್ಘಾಟಿಸಿದ, ಕೌನ್ಸಿಲರ್-ಸೈಕೋಲಜಿಸ್ಟ್ ಡಾ.ಪ್ರಸನ್ನ ಹೆಗ್ಡೆ ಮಾತನಾಡಿ, ಸೋಲು ಗೆಲುವಿನ ಸಮನ್ವಯತೆಯ ಭಾವನೆ ಕ್ರೀಡೆಯಲ್ಲಿ ಮಾತ್ರ ಇರಲು ಸಾಧ್ಯ. ಕ್ರೀಡಾಸ್ಫೂರ್ತಿ ಹೊಂದಿದವರು ಒತ್ತಡ ರಹಿತ ಬದುಕನ್ನು ಹೊಂದಿರುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಕ್ರೀಡಾ ಸಂಯೋಜಕರು ಶ್ರೀ ಶರತ್ ರಾವ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸಂತೋಷ್ ಉಪಸ್ಥಿತರಿದ್ದರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿ, ದೈ.ಶಿ.ನಿರ್ದೇಶಕಿ ಸೌಜನ್ಯ ಹೆಗ್ಡೆ ವಂದಿಸಿದರು.

ಸಮಾರೋಪ ಸಮಾರಂಭ :
ಸಾಮಾಜಿಕ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯಕ್ಕೆ ಹಾಗೂ ಎಲ್ಲರ ಬೆಸೆಯುತ ವಿಶ್ವಭಾವೈಕ್ಯತೆಗೆ ಕ್ರೀಡೆ ಕಾರಣಾವಾಗಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸೀತರಾಮ್ ಭಟ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ದೈಹಿಕ ಶಿಕ್ಷಣ ನಿದೇರ್ಶಕರಾದ ಅರುಣ್, ಸೌಜನ್ಯ ಹೆಗ್ಡೆ, ಕಿರಣ್ ಮತ್ತು ರೇಷ್ಮಾ ಸಾಲಿಸ್ ಉಪಸ್ಥಿತರಿದ್ದರು.

ಫಲಿತಾಂಶ :
ಬಾಲಕಿಯರ ವಿಭಾಗ –
ಪ್ರಥಮ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ಗಣಿತನಗರ (ಅಲ್ ರೌಂಡರ್ : ಅಪೇಕ್ಷಾ ಎ ಭಗವತಿ, ಬೆಸ್ಟ್ಸರ್ವಿಸ್ : ಹರ್ಷಿತಾ ಎಚ್.ಎಸ್),
ದ್ವಿತೀಯ ಸ್ಥಾನ : ಎಸ್.ವಿ.ಟಿ. ಮಹಿಳಾ ಪದವಿ ಪೂರ್ವ ಕಾಲೇಜು, ಕಾರ್ಕಳ. (ಡಿಫೆಂಡರ್ – ಚೈತ್ರಾ),

ಬಾಲಕರ ವಿಭಾಗ –
ಪ್ರಥಮ : ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು, ಕಾರ್ಕಳ, (ಅಲ್‌ರೌಂಡರ್ – ಅಬ್ರಹಾರ್, ಬೆಸ್ಟ್ ಸರ್ವಿಸ್ – ಅನೀಶ್)
ದ್ವಿತೀಯ : ಕೆ.ಎಂ.ಇ.ಎಸ್ ಪದವಿ ಪೂರ್ವ ಕಾಲೇಜು, ಕುಕ್ಕುಂದೂರು, (ಡಿಫೆಂಡರ್ – ರೋಹನ್)

ಕಾರ್ಕಳ : ಜ್ಞಾನಸುಧಾದ ಮೂವರು ರಾಜ್ಯ ಮಟ್ಟಕ್ಕೆ ಆಯ್ಕೆ

0

 

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಕಾರ್ಕಳ: ರೋಟರಿ ಕ್ಲಬ್ ವತಿಯಿಂದ ಆಮ್ಲಜನಕ ಸಾಂದ್ರೀಕರಣ ಘಟಕ ಕೊಡುಗೆ

0

 

ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ಕ್ರಿಸ್ತ ಸೇವಕಿ ಆಶ್ರಮ ಪರ್ಪಲೆ ಕಾರ್ಕಳ ಇಲ್ಲಿನ ಆಶ್ರಮದ ವಾಸಿಗಳಾದ ಹಿರಿಯ ನಾಗರಿಕರಿಗೆ ಆಮ್ಲಜನಕ ಸಾಂದ್ರೀಕರಣ ಘಟಕ ಹಸ್ತಾಂತರ ಕಾರ್ಯಕ್ರಮವು ಆಶ್ರಮದ ಸಭಾಂಗಣದಲ್ಲಿ ನಡೆಯಿತು.

ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ಭರತೇಶ್ ಆದಿರಾಜ್ ಮಾತನಾಡುತ್ತಾ ಈ ಆಶ್ರಮಕ್ಕೆ ಪ್ರತಿ ವರ್ಷ ನಮ್ಮ ಸಂಸ್ಥೆ ಭೇಟಿ ನೀಡಿ ಹಿರಿಯರಿಗೆ ಸಹಕಾರ ನೀಡುತ್ತಾ ಬಂದಿದೆ. ಅದರಂತೆ ಈ ಬಾರಿ ಅವರ ಉಪಯೋಗಕ್ಕಾಗಿ ರೂ.40,000 ವೆಚ್ಚದ ಆಮ್ಲಜನಕ ಸಾಂದ್ರೀಕರಣ ಘಟಕ ನೀಡುತ್ತಿದ್ದೇವೆ. ಇದರ ಸದುಪಯೋಗ ಅವರಿಗಾಗಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ ಇಂತಹ ಕಾರ್ಯಕ್ರಮಗಳನ್ನು ಮಾಡುವುದು ಸಮುದಾಯ ಸೇವೆಗಾಗಿ ಇರುವ ಕ್ಲಬ್ಬಿನ ಆದ್ಯ ಕರ್ತವ್ಯವೂ ಆಗಿದೆ ಎಂದರು.

ಕ್ಲಬ್ಬಿನ ಮಾಜಿ ಕಾರ್ಯದರ್ಶಿ ಗಣೇಶ್ ಸಾಲಿಯನ್ ಅವರು ಅವರ ತಾಯಿ ಜಯಂತಿ ಸಾಲಿಯಾನ್ ಅವರ ಹೆಸರಿನಲ್ಲಿ ಹಣ್ಣು ಹಂಪಲನ್ನು ಕೊಡುಗೆಯಾಗಿ ನೀಡಿದರು.

ಆಶ್ರಮದ ರೇವರೆಂಡ್ ಫಾದರ್ ಪ್ರಭುರಾಜ್ ಕ್ಲಬ್ಬಿನ ವತಿಯಿಂದ ಮಾಡುತ್ತಿರುವ ಈ ಸೇವಾ ಕಾರ್ಯವು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ರೋಟರಿಯ ಮಾಜಿ ಸಹಾಯಕ ಗವರ್ನರ್ ಶೈಲೇಂದ್ರ ರಾವ್, ಮಾಜಿ ವಲಯ ಸೇನಾನಿ ಸುರೇಶ್ ನಾಯಕ್, ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಉಪಾಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಸದಸ್ಯರಾದ ವಿಜೇಂದ್ರ ಕುಮಾರ್, ಮೇಜರ್ ಡೋನರ್ ಸುವರ್ಣ ನಾಯಕ್, ಸದಸ್ಯರಾದ ಡಯಾಸ್ ಚೆರಿಯನ್ , ಬಾಲಕೃಷ್ಣ ದೇವಾಡಿಗ, ಹರ್ಷಿಣಿ ವಿಜಯರಾಜ್ ,ಮಮತಾ ಶೆಟ್ಟಿ, ಅಲೆನ್ ಡಿ ಸೋಜಾ ಉಪಸ್ಥಿತರಿದ್ದರು .ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯಾರಾದ ಮಾನಸ ವಿ ನಾಯಕ್, ಹರ್ಷಿತ ವಿ ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.