Home Blog Page 24

ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿಯಿಂದ ಕ್ರೀಡಾ ಪೋತ್ಸಾಹಕ ಸಹಾಯ ಧನ ವಿತರಣೆ

0

ಸಾರ್ವಜನಿಕ‌ ಶ್ರೀ ಗಣೇಶೋತ್ಸವ ಸಮಿತಿಯಿಂದ ಕ್ರೀಡಾ ಪೋತ್ಸಾಹಕ ಸಹಾಯ ಧನ ವಿತರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ‌ಸಮಿತಿ ಬಸ್ ಸ್ಟ್ಯಾಂಡ್ ಕಾರ್ಕಳ ಇದರ ಲೆಕ್ಕಪತ್ರ ಮಂಡನೆ ಸಭೆಯು ಸ್ಥಾಪಕಾದ್ಯಕ್ಷ ಶುಭದರಾವ್ ಅಧ್ಯಕ್ಷತೆಯಲ್ಲಿ ಅದಿತ್ಯವಾರ ರಾಧಾಕೃಷ್ಣ ಸಭಾ ಭವನದಲ್ಲಿ ನಡೆಯಿತು.

ಕಳೆದ 18 ವರ್ಷಗಳಿಂದ ಗಣೇಶೋತ್ಸವ ಆಚರಣೆಯಿಂದ ಉಳಿಕೆ ಮೊತ್ತದಲ್ಲಿ ಸಾರ್ವಜನಿಕರಿಗೆ ವೈದ್ಯಕೀಯ, ಶೈಕ್ಷಣಿಕ, ಹಾಗೂ ಕ್ರೀಡಾ ಪ್ರೋತ್ಸಾಹಕ ಸಹಾಯ ಧನವನ್ನು ವಿತರಿಸುತ್ತಾ ಬರುತ್ತಿದ್ದು ಈ ವರ್ಷವೂ ರೂ 50,000 ಸಾವಿರ ಹಣವನ್ನು ಕ್ರೀಡಾ ಪ್ರೋತ್ಸಾಹಕ ಸಹಾಯ ಧನವಾಗಿ ವಿತರಣೆ ಮಾಡಲಾಗುತಿದೆ ಪ್ರತಿಭಾವಂತ ಬಡ ಕ್ರೀಡಾಪಟುಗಳಿಗೆ ಈ ಸಹಾಯ ಧನವು ಉಪಯುಕ್ತವಾಗಲಿದೆ ಎಂದು ಶುಭದರಾವ್ ತಿಳಿಸಿದರು.

ಸಮಿತಿ ಸದಸ್ಯರಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವೇದ ಮೂರ್ತಿ ಅತ್ತೂರು ವಾದಿರಾಜ ಆಚಾರ್ಯ ವಿತರಿಸಿದರು ವಿಶೇಷ ಸೇವಾ ಕಾರ್ಯ ಕೈಕೊಂಡ ನವೀನ್ ರಾವ್, ನಾಗೇಶ್ ಹೆಗ್ಡೆ, ಜ್ಯೋತಿ ಸತೀಶ್, ಆನಂದ್ ನಾಯಕ್, ಮಂಜುನಾಥ್ ಜೋಗಿ ಹಾಗೂ ದ್ರುವ ಕಾಮತ್ ಮೊದಲಾದವರನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ಸುರೇಶ್ ದೇವಾಡಿಗ, ಉಪಾದ್ಯಕ್ಷರಾದ ರಾಜರಾಮ್ ಕಾಮತ್, ಶಿವಾಜಿ ರಾವ್ ಉಪಸ್ಥಿತರಿದ್ದರು.

ಸದಸ್ಯರಾದ ಸುಖೇಶ್ ಕೋಟ್ಯಾನ್ ಸ್ವಾಗತಿಸಿ ಪ್ರಕಾಶ್ ಸಪಲಿಗ ಧನ್ಯವಾದವಿತ್ತರು ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ನಿರೂಪಿಸಿದರು‌.

ರೋಟರಿ ಸಮುದಾಯ ದಳ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು-37ನೇ ವರ್ಷದ ಮೊಸರು ಕುಡಿಕೆ ಸಾರ್ವಜನಿಕ ಕಾರ್ಯಕ್ರಮ

0

ರೋಟರಿ ಸಮುದಾಯ ದಳ ಹಾಗೂ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು, ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 37ನೇ ವರ್ಷದ ಮೊಸರು ಕುಡಿಕೆ ಸಾರ್ವಜನಿಕ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಣ್ಣು, ನಿಟ್ಟೆ ಇಲ್ಲಿ ನಡೆಯಿತು.

ವಿವಿಧ ವಯೋಮಾನದವರಿಗೆ ನಾನಾ ರೀತಿಯ ಆಕರ್ಷಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಶೇಷ ಆಕರ್ಷಣೆಯಾಗಿ ಎರಡು ಸ್ತರಗಳಲ್ಲಿ ಮುದ್ದು ಕೃಷ್ಣ ಸ್ಪರ್ಧೆ ನಡೆದಿದ್ದು, ಸರ್ವರ ಮನಸೂರೆಗೊಂಡಿತು. ಮುಖ್ಯ ಅಭ್ಯಾಗತರಾಗಿ ಮಾತೃ ಸಂಸ್ಥೆ ರೋಟರಿ ಕ್ಲಬ್ ನಿಟ್ಟೆ ಇದರ ಅಧ್ಯಕ್ಷರಾದ ರೊI ಡಾ. ಕೆ. ರಘುನಂದನ್ ರಾವ್, ರೋಟರಿ ಜಿಲ್ಲೆ – 3182ನ ಪಬ್ಲಿಕ್ ಇಮೇಜ್ ಜಿಲ್ಲಾ ಉಪಾಧ್ಯಕ್ಷರಾದ ರೊI ರೇಖಾ ಉಪಾಧ್ಯಾಯ, ಝೋನಲ್ ಲೆಫ್ಟಿನೆಂಟ್ ರೊI ಪ್ರಶಾಂತ್ ಬೆಳಿರಾಯ, RCCಯ ಪೂರ್ವ ಜಿಲ್ಲಾ ಪ್ರತಿನಿಧಿ ವೆಂಕಟಕೃಷ್ಣ ಕುಮಾರ್, ಸ್ಥಳೀಯ ಗ್ರಾಮ ಪಂಚಾಯತ್ ಪ್ರತಿನಿಧಿ ಹಾಗೂ RCC ಕ್ರೀಡಾ ಕಾರ್ಯದರ್ಶಿ  ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು, ಸಂದರ್ಭೋಚಿತ ಮಾತುಗಳನ್ನಾಡಿದರು. ವೇದಿಕೆಯಲ್ಲಿ ರೋಟರಿ ಸಮುದಾಯ ದಳದ ಸಭಾಪತಿ ರೊI ಡಾ. ದಿಲೀಪ್ ಕುಮಾರ್, ರೋಟರಿ ಸಮುದಾಯ ದಳದ ಕಾರ್ಯದರ್ಶಿ ಶ್ರೀಧರ ವಿ. ಆಚಾರ್ಯ ಮತ್ತು  ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.) ಕೆಮ್ಮಣ್ಣು, ನಿಟ್ಟೆ ಇದರ ಕಾರ್ಯದರ್ಶಿ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ SSLC ಹಾಗೂ PUCಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸ್ಥಳೀಯರಾದ ಕುಮಾರಿ ಪೃತ್ವಿ, ಕುಮಾರಿ ನಿರೀಕ್ಷಾ ದೇವಾಡಿಗ ಮತ್ತು ಸುಮಿತ್ ರವರಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಅಭಿನಂದಿಸಲಾಯಿತು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

 

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಕೆಮ್ಮಣ್ಣು ಇಲ್ಲಿನ ಪರಿಚಾರಕರು ಹಿರಿಯರಾದ ನಾರಾಯಣ ದೇವಾಡಿಗ, ಕೃಷಿ ಕ್ಷೇತ್ರದ ಸಾಧಕ ಸುದಾಮ ಶೆಟ್ಟಿ, ದುಡ್ಡು ಮನೆ, ಬೋಳ ಹಾಗೂ ಹಿರಿಯ ನಾಗರಿಕರು ಹಾಗೂ ಕೃಷಿಕರಾದ ಶ್ರೀ ವಾಸು ಬಿ. ಕೋಟ್ಯಾನ್ ಇವರನ್ನು ಗೌರವಿಸಲಾಯಿತು.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ.), ಕೆಮ್ಮಣ್ಣು, ನಿಟ್ಟೆ ಇದರ ಅಧ್ಯಕ್ಷರಾದ ರೊI ಡಾ. ಪ್ರಶಾಂತ್ ಕುಮಾರ್ ಸ್ವಾಗತಿಸಿದರು. ಹಿರಿಯರು ಮಾರ್ಗದರ್ಶಕರಾದ ರೊI ಕೆ. ಅನಿಲ್ ಕುಮಾರ್, ಶಂಕರ್ ಪೂಜಾರಿ ಹಾಗೂ  ಉಮೇಶ್ ಕೋಟ್ಯಾನ್ ಸನ್ಮಾನ ಪತ್ರ ವಾಚಿಸಿದರು. ವಿಠಲ್ ಆಚಾರ್ಯ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಗಣೇಶ್ ಭಟ್ ವಂದಿಸಿದರು. ಪೂರ್ವಾಧ್ಯಕ್ಷ  ಸತೀಶ್ ಶೆಟ್ಟಿ, ಅಗ್ಗ್ಯೊಟ್ಟು ಕಾರ್ಯಕ್ರಮ ನಿರೂಪಿಸಿದರು.

 

ಉಡುಪಿ:ಇಂದು (ಸೆ.15) ಗಿರಿಜಾ ಸರ್ಜಿಕಲ್ಸ್ ಎದುರು ಮುಂಬೈ ಆಲಾರೇ ಗೋವಿಂದ ತಂಡದಿಂದ ಮಡಕೆ ಒಡೆಯುವ ಪ್ರದರ್ಶನ

0

ಉಡುಪಿ:ಗಿರಿಜಾ ಸರ್ಜಿಕಲ್ಸ್ ಎದುರು ಮುಂಬೈ ಆಲಾರೇ ಗೋವಿಂದ ತಂಡದಿಂದ ಮಡಕೆ ಒಡೆಯುವ ಪ್ರದರ್ಶನ

ಶ್ರೀ ಸಾಯಿಲಕ್ಷ್ಮಿ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಂಬೈ ಬಾಲಮಿತ್ರ ವ್ಯಾಯಾಮ ಶಾಲೆಯ ಮಂದಿ ಸದಸ್ಯರ ಆಲಾರೇ ಗೋವಿಂದ ತಂಡದಿಂದ ಇಂದು (ಸೆ.15ಕ್ಕೆ) ಮಿತ್ರಪ್ರಿಯ ಆಸ್ಪತೆಯ ಬಳಿಯ ಗಿರಿಜಾ ಸರ್ಜಿಕಲ್ ಮುಂಬಾಗ ಅಡಿ ಎತ್ತರದಲ್ಲಿ ಮಡಕೆ ಒಡೆಯುವ ಪ್ರದರ್ಶನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

ಕ್ರೈಸ್ಟ್ ಕಿಂಗ್: ಪದವಿಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

0

 

ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇದರ ವತಿಯಿಂದ ಕಾರ್ಕಳದ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಉಡುಪಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ, ರಕ್ಷಾ, ರುಫಿಯಾ ಬಾನು, ಸಾಚಿ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರೀತಾ, ಅದಿತಿ ಆಚಾರ್ಯ, ಶ್ರಾವ್ಯ ಶೆಟ್ಟಿ, ದ್ವಿತೀಯ ವಾಣಿಜ್ಯ ನೇಹಾ ವಿ, ರವೀನಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರುತ ತಂಡವನ್ನು ಪ್ರತಿನಿಧಿಸಿದ್ದರು. ವರುಣ ಶೆಟ್ಟಿ ಬೆಸ್ಟ್ ಅ್ಯಟಾಕರ್ ಪ್ರಶಸ್ತಿ ಪಡೆದರೆ ಶ್ರಾವ್ಯ ಶೆಟ್ಟಿ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡರು.

ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್, ಲಾವಣ್ಯ ತಂಡವನ್ನು ತರಬೇತುಗೊಳಿಸಿದ್ದರು.

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಬಗೆಗಿನ ಸೆಂಟರ್ ಆಫ್ ಎಕ್ಸಲೆನ್ಸ್

0

 

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಬಗೆಗಿನ ಸೆಂಟರ್ ಆಫ್ ಎಕ್ಸಲೆನ್ಸ್
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

ನಿಟ್ಟೆ ತಾಂತ್ರಿಕ ಕಾಲೇಜಿನ ಸೈಬರ್ ಸೆಕ್ಯೂರಿಟಿ ವಿಭಾಗದ ಮುಖ್ಯಸ್ಥ ಡಾ.ರೋಷನ್ ಫರ್ನಾಂಡಿಸ್ ಮತ್ತು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಸಹಯೋಗಗಳ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ ಈ ಕೇಂದ್ರವು ಜಾಗತಿಕ ಜ್ಞಾನ ವಿನಿಮಯ, ವಿಶೇಷ ತರಬೇತಿ ಮತ್ತು ಅಂತರರಾಷ್ಟ್ರೀಯ ವೃತ್ತಿ ಅವಕಾಶಗಳನ್ನು ಉತ್ತೇಜಿಸುತ್ತಿದೆ. ವಿದ್ಯಾರ್ಥಿಗಳು ಈಗಾಗಲೇ ಜಪಾನ್ ನಲ್ಲಿ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ ಹಲವರು ಸ್ಟೈಫಂಡ್ ನೊಂದಿಗೆ ಇಂಟರ್ನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ಈ ಉಪಕ್ರಮವು ಶೀಘ್ರದಲ್ಲೇ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮಗಳಾಗಿ ಮತ್ತು ಡಿಜಿಟಲ್ ವಿಧಿವಿಜ್ಞಾನ ಸುಧಾರಿತ ಸೌಲಭ್ಯಗಳಾಗಿ ವಿಸ್ತರಿಸಲಿದೆ. ಸಂಶೋಧನೆ ಮತ್ತು ಅಂತರರಾಷ್ಟ್ರೀಯ ಸಹಯೋಗದ ಬಲದೊಂದಿಗೆ ಕೇಂದ್ರವು ಡಿಜಿಟಲ್ ಬೆದರಿಕೆಗಳನ್ನು ಪರಿಹರಿಸಲು ಕಾರ್ಯಪ್ರವೃತ್ತವಾಗಲಿದೆ. ಈ ಉತ್ಕೃಷ್ಟತಾ ಕೇಂದ್ರವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಎನ್ ವಿನಯಾ ಹೆಗ್ಡೆ ಅವರು ವಿಲ್ ಡಿಸೈನ್ ಜಪಾನ್ ನ ಅಧಿಕಾರಿಗಳಾದ ನವೋಟಕಾ ತಗುಚಿ,ಹಿರೋಶಿ ನಕಯಾಮಾ ಮತ್ತು ತಕಾಶಿ ತ್ಸುಜಿಯುಚಿ ಅವರ ಸಮ್ಮುಖದಲ್ಲಿ ಸೆ.೧೫ ರಂದು ಉದ್ಘಾಟಿಸಲಿದ್ದಾರೆ.

ಕ್ರೈಸ್ಟ್ ಕಿಂಗ್: ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರಿಹಾನ್‌ಶೇಖ್‌ಗೆ ಬೆಳ್ಳಿಪದಕ

0

 

ಜಿಲ್ಲಾ ಪಂಚಾಯತ್ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳದ ಕೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಿಹಾನ್ ಶೇಖ್ ಬೆಳ್ಳಿಯ ಪದಕ ಪಡೆದುಕೊಂಡಿದ್ದಾನೆ.

ಕಾರ್ಕಳ ಬಿಜೆಪಿ ಮಂಡಲದಲ್ಲಿ ಸೇವಾ ಪಕ್ಷಿಕಾ ಅಭಿಯಾನದ ಅಂಗವಾಗಿ ಕಾರ್ಯಾಗಾರ

0

 

ದೇಶದಲ್ಲಿ ಬಲಿಷ್ಠ ಹಾಗೂ ಜನಪರ, ಭ್ರಷ್ಟಾಚಾರ ರಹಿತ ಆಡಳಿತ ನೀಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ “ಸೇವಾ ಪಾಕ್ಷಿಕ” ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ದೇಶಾದ್ಯಂತ “ಸೇವಾ ಪಾಕ್ಷಿಕ” ಅಭಿಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆ.17 ರಿಂದ ಮಹಾತ್ಮ ಗಾಂಧಿ ಜನ್ಮದಿನ ಅ. 02 ರ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದೆ. ಇದರ ಅಂಗವಾಗಿ ಕಾರ್ಕಳ ಮಂಡಲದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಸೇವಾ ಪಕ್ಷಿಕಾ ಅಭಿಯಾನವು ಸೆ. 17 ರಿಂದ ಅ. 2 ರವರೆಗೆ ದೇಶವ್ಯಾಪಿಯಾಗಿ ನಡೆಯಲಿರುವ ಸೇವಾ ಕಾರ್ಯಕ್ರಮಗಳ ಸರಣಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಜೊತೆಗೆ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸ್ಮರಿಸುವ ಉದ್ದೇಶ ಹೊಂದಿದೆ. ಇದರಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನವೀನ್ ನಾಯಕ್ ತಿಳಿಸಿದರು.

ಈ ಅಭಿಯಾನವು “ಸೇವೆ, ಸುಶಾಸನ ಮತ್ತು ಗರೀಬ್ ಕಲ್ಯಾಣ” ಎಂಬ ಪಾರ್ಟಿಯ ಪ್ರಮುಖ ತತ್ವದ ಆಧಾರದ ಮೇಲೆ “ಸೇವೆ ಪರಮ ಧರ್ಮ” ಎಂಬ ಮನೋಭಾವದಿಂದ ಸಮಾಜದ ವಿವಿಧ ವರ್ಗಗಳನ್ನು ಸಂಪರ್ಕಿಸಿ, ಜನರ ಹಿತಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶವನ್ನು ಹೊಂದಿದೆ.

ಮುಂದಿನ ದಿನಗಳಲ್ಲಿ ಕಾರ್ಕಳ ಮಂಡಲದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ತಪಾಸಣೆ ಶಿಬಿರ ಹಾಗೂ ಯುವಜನರನ್ನು ಒಳಗೊಂಡ ಕಾರ್ಯಕ್ರಮಗಳನ್ನು ನಡೆಸಲಾಗುವುದು.

ಈ ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಮಣಿರಾಜ್ ಶೆಟ್ಟಿ, ಸೇವಾ ಪಕ್ಷಿಕಾದ ಮಂಡಲ ಸಂಚಾಲಕರಾದ ಸತೀಶ್ ಬೋಳ, ರವೀಂದ್ರ ಕುಮಾರ್, ಪ್ರವೀಣ್ ಸಾಲಿಯಾನ್, ವಿವಿಧ ಶಕ್ತಿಕೇಂದ್ರಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ ಸ್ವಾಗತಿಸಿದರು, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

oplus_2
oplus_2
oplus_2
oplus_2

ಕ್ರೈಸ್ಟ್ ಕಿಂಗ್ : ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದ ಐವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳು ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ತಂಡವನ್ನು ಪ್ರತಿನಿಧಿಸಿದ್ದ ಐವರು ವಿದ್ಯಾರ್ಥಿಗಳು ಮೈಸೂರು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಎಂಟನೇ ತರಗತಿಯ ದಿಯಾ ಪೋಲ್, ಶ್ರುತ ರಾವ್, ಪಾವನಿ, ಕನಿಷ್ಕ ಕುಲ್ದೀಪ್ ಹಾಗೂ ಸಾನ್ವಿ ಎಂ ನಾಯಕ್ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದು, ಇವರು ವಿಭಾಗಮಟ್ಟದ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಬೈಲೂರು: ಸರಕಾರಿ ಕಾಲೇಜಿನ ಬಾಲಕಿಯರ ತಂಡ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ

0

 

ಕಾರ್ಕಳದ ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಸೆ. 11 ರಂದು ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಹುಡುಗಿಯರ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಆಸಿನಿ, ಭೈರವಿ ಮತ್ತು ಸುಚಿತ್ರ ಜಿಲ್ಲಾ ಮಟ್ಟದ ಪಂದ್ಯಾಟಕ್ಕಾಗಿ ಕಾರ್ಕಳ ತಂಡದಲ್ಲಿ ಸ್ಥಾನವನ್ನು ಗಳಿಸಿದ್ದಾರೆ. ಇದರೊಂದಿಗೆ ಹುಡುಗರ ತಂಡದ ಅತ್ಯುತ್ತಮ ಆಟಗಾರ ಆದಿತ್ಯ ಕೂಡ ಜಿಲ್ಲಾ ಮಟ್ಟದ ಪಂದ್ಯಾಟಕ್ಕಾಗಿ ಕಾರ್ಕಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡದ ಸಾಧನೆಗಾಗಿ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ತಂಡದ ತರಬೇತುದಾರರಾದ ದೈಹಿಕ ಶಿಕ್ಷಕ ಫೆಡ್ರಿಕ್ ರೆಬೆಲ್ಲೋ, ಕ್ರೀಡಾ ಸಂಚಾಲಕರಾದ ಉಪನ್ಯಾಸಕ ಗಾಡ್ಫ್ರೆಡ್ ಡಿ ಕರ್ಕಡ, ಹಳೆಯ ವಿದ್ಯಾರ್ಥಿ ಅಭಿಮನ್ಯು ಇವರನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ಕಾರ್ಕಳ: ಅಡಿಕೆ ಕಳವು ಪ್ರಕರಣ; 12 ಬಾಲ ಆರೋಪಿಗಳು ಅರೆಸ್ಟ್

0

 

ರೂ. 5 ಲಕ್ಷ ಮೌಲ್ಯದ 1100 ಕೆಜಿ ಅಡಕೆ ವಶ

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಮುಂಡ್ಕೂರು ತೋಟದ ಮನೆಯಲ್ಲಿ ಆ. 23ರಂದು ನಡೆದ ಅಡಕೆ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ತಾಂತ್ರಿಕ ಆಯಾಮದಲ್ಲಿ ತನಿಖೆ ಕೈಗೊಂಡ ‌ಪೊಲೀಸರು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ಅಚ್ಚರಿಯೂ ಆಗಿದ್ದಾರೆ‌. ಎಲ್ಲಾ 12 ಆರೋಪಿಗಳು ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ವಿಚಾರಣೆ ವೇಳೆ ಬಟ್ಟೆ ಖರೀದಿ, ಇನ್ನಿತರೆ ಮೋಜು ಮಾಡಲು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.
12 ಮಂದಿಯನ್ನು ಬಂಧಿಸಿ, 5 ಲಕ್ಷ ರೂ. ಮೌಲ್ಯದ 1100 ಕೆಜಿ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಬಾಲ ಅಪರಾಧಿಗಳನ್ನು ಪೊಲೀಸರು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ್ದಾರೆ.

ಈ ಕಾರ್ಯಾಚರಣೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿ ರಾಮ್ ಶಂಕರ್ ಮಾರ್ಗದರ್ಶನದಲ್ಲಿ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ, ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐಗಳಾದ ಪ್ರಸನ್ನ ಎಂ.ಎಸ್., ಸುಂದರ, ಎಎಸ್ಐಗಳಾದ ಪ್ರಕಾಶ್, ಸುಂದರ ಗೌಡ, ಸಿಬ್ಬಂದಿ ರುದ್ರೇಶ್, ಚಂದ್ರಶೇಖರ, ಮಹಂತೇಶ್ , ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ಸಿಬ್ಬಂದಿ ದಿನೇಶ್, ನಿತಿನ್ ಅವರ ತಂಡವು ಕಾರ್ಯಾಚರಣೆ ನಡೆಸಿದ್ದಾರೆ.