Home Blog Page 94

ಕಾರ್ಕಳ:ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

0

ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ದೂರು ದಾಖಲಿಸಿದ್ದಾರೆ.

ಕಾರ್ಕಳ:ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ದೂರು ದಾಖಲಿಸಿದ್ದಾರೆ.

ಆ.5ರಂದು ಪರಶುರಾಮ ಥೀಮ್‌ ಪಾರ್ಕ್‌ ನ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕುರಿತಂತೆ ಏಕವಚನದಲ್ಲಿ ಬೈದು ಅವಮಾನ ಮಾಡಿದ್ದಲ್ಲದೆ,ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಮಣಿಪಾಲ ಠಾಣಾ ಅಪರಾಧ ಕ್ರಮಾಂಕ : 200/2024 ಕಲಂ: ಕಲಂ 224 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

ಕಾರ್ಕಳ:ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧೆ

0

ಕಾರ್ಕಳ:ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧೆ

ಯುವ ಕಾಂಗ್ರೆಸ್​ನಲ್ಲಿ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಯಲಿದ್ದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧಿಸುತ್ತಿದ್ದಾರೆ.

ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ,ಉಡುಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಜೊತೆಗೆ ಶಾರದಾ ಮಹೋತ್ಸವ ಸಮಿತಿ ಬಜಗೋಳಿ ಇದರ ಪ್ರಧಾನ ಕಾರ್ಯದರ್ಶಿಯಾಗಿ,ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತ ರಕ್ಷಣಾ ಸಮಿತಿ(ರಿ.) ಇದರ ಅಧ್ಯಕ್ಷರಾಗಿ, ಪೂರ್ವ ವಿದ್ಯಾರ್ಥಿ ಸಂಘ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ನರ್ಸ್ ಮೇಲೆ ಅತ್ಯಾಚಾರವೆಸಗಿ ಕೊಲೆ

0

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ, ನರ್ಸ್ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಬಿಲಾಸ್‌ಪುರದ ಕಾಶಿಪುರ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ನರ್ಸ್, ಪಕ್ಕದ ರಾಜ್ಯ ಉತ್ತರಾಖಂಡದ ಉಧಮ್ ನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಜುಲೈ 30ರ ಸಂಜೆ ಆಸ್ಪತ್ರೆಯಿಂದ ಹೊರಬಂದ ನರ್ಸ್, ಉತ್ತಾರಾಖಂಡದ ರುದ್ರಪುರದ ಇಂದ್ರ ಚೌಕ್‌ನಿಂದ ಇ-ರಿಕ್ಷಾ ಹತ್ತಿ ಮನೆ ಕಡೆ ಹೊರಟ್ಟಿದ್ದರು. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಆದರೆ, ಆಕೆ ಮನೆ ತಲುಪಿರಲಿಲ್ಲ.

ಮರುದಿನ ನರ್ಸ್ ಸಹೋದರಿ ತನ್ನ ಅಕ್ಕ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಇದಾಗಿ 8 ದಿನಗಳ ಬಳಿಕ, ಆಗಸ್ಟ್ 8ರಂದು ಉತ್ತರ ಪ್ರದೇಶ ಪೊಲೀಸರು ದಿಬ್ದಿಬಾ ಗ್ರಾಮದ ಆಕೆಯ ಮನೆಯಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಶವ ಪತ್ತೆ ಹಚ್ಚಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಹಂತಕನ ಪತ್ತೆಗೆ ತಂಡ ರಚಿಸಿದ್ದರು. ಮೃತ ಮಹಿಳೆಯ ಕಳವಾದ ಮೊಬೈಲ್ ಫೋನ್ ಅನ್ನು ಪೊಲೀಸರು ಟ್ರೇಸ್ ಮಾಡಿದಾಗ ಅದು ಧರ್ಮೇಂದ್ರ ಕುಮಾರ್ ಎಂಬಾತನ ಬಳಿ ಇರುವುದು ಗೊತ್ತಾಗಿದೆ. ಇದರಿಂದ ಅತ್ಯಾಚಾರ ಮತ್ತು ಕೊಲೆ ಆರೋಪಿ ಧರ್ಮೇಂದ್ರ ಎಂಬುವುದು ಪೊಲೀಸರಿಗೆ ಖಚಿತವಾಗಿದೆ.

ಪೊಲೀಸರು ಆರೋಪಿ ಧರ್ಮೇಂದ್ರ ಕುಮಾರ್ ಅನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಆತ
ಉತ್ತರ ಪ್ರದೇಶದ ಬರೇಲಿಯ ದಿನಗೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಜುಲೈ 30ರಂದು ಆಸ್ಪತ್ರೆಯಲ್ಲಿ ಕೆಲಸ ಮುಗಿಸಿದ ನರ್ಸ್ ಒಂಟಿಯಾಗಿ ಮನೆಗೆ ಮರಳುತಿದ್ದರು. ಈ ವೇಳೆ ಧರ್ಮೇಂದ್ರ ಕುಮಾರ್ ಆಕೆಯನ್ನು ಅಡ್ಡಗಟ್ಟಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಧಮ್‌ ನಗರ ಎಎಸ್‌ಪಿ ಮಂಜುನಾಥ್ ಟಿಸಿ “ನರ್ಸ್ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದಾಗ, ದಾಳಿ ನಡೆಯುವುದಕ್ಕೂ ಮುನ್ನವೇ ಆಕೆ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ ಎಂಬುವುದು ತಿಳಿದು ಬಂದಿತ್ತು. ನಂತರ ಆಗಸ್ಟ್ 8ರಂದು ಆಕೆಯ ಗ್ರಾಮದ ಸಮೀಪ ಪೊದೆಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಾದಕ ವ್ಯಸನಿಯಾಗಿದ್ದು, ಆತನಿಗೆ ನರ್ಸ್ ಪರಿಚಯವಿರಲಿಲ್ಲ. ಆಕೆ ಹೋಗುತ್ತಿರುವುದನ್ನು ನೋಡಿ ತಡೆದಿದ್ದ. ಆತನಿಂದ ತಪ್ಪಿಸಿಕೊಳ್ಳಲು ನರ್ಸ್ ಪ್ರಯತ್ನಪಟ್ಟರೂ ಆಗಿಲ್ಲ. ಆರೋಪಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿದ್ದ. ಕೃತ್ಯದ ಬಳಿಕ ಆಕೆಯ ಮೊಬೈಲ್, 3 ಸಾವಿರ ರೂಪಾಯಿ ದುಡ್ಡು ಮತ್ತಿತರ ವಸ್ತುಗಳನ್ನು ದೋಚಿ ಪರಿಯಾಗಿದ್ದಾನೆ ಎಂದು ಎಎಸ್‌ಪಿ ಹೇಳಿದ್ದಾರೆ.

ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

0

ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

ನಿಟ್ಟೆ: ಆಗಸ್ಟ್ 15 ರಂದು ಮಣಿಪಾಲದಲ್ಲಿ ಕೆನರಾ ಬ್ಯಾಂಕ್ ನಡೆಸಿದ ಪ್ರತಿಷ್ಠಿತ 3 ನೇ ಆವೃತ್ತಿಯ ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ಕ್ರೀಡಾಪಟುಗಳು ಹಲವಾರು ಪದಕಗಳು ಮತ್ತು ನಗದು ಬಹುಮಾನವನ್ನು ಗೆದ್ದಿದ್ದಾರೆ. ಡಾ. ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ನಂದಿನಿ ಹಾಫ್ ಮ್ಯಾರಥಾನ್ (ಮುಕ್ತ ವಿಭಾಗ) ನಲ್ಲಿ ಚಿನ್ನದ ಪದಕವನ್ನು ಪಡೆದರು.

ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ 3 ಕಿ.ಮೀ (ಮುಕ್ತ ವಿಭಾಗ) ನಲ್ಲಿ ಚಿನ್ನದ ಪದಕವನ್ನು ಪಡೆದರು. ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ 3 ಕಿ.ಮೀ (ಜೂನಿಯರ್ ವಿಭಾಗ) ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರು. ಜೂನಿಯರ್ ವಿಭಾಗದಲ್ಲಿ 9 ನೇ ತರಗತಿಯ ರಕ್ಷಿತ್ ಕಂಚಿನ ಪದಕ ಪಡೆದರು. ಇದರೊಂದಿಗೆ ಕ್ರೀಡಾಪಟುಗಳು ಒಟ್ಟು 27,000 ರೂ.ಗಳ ನಗದು ಬಹುಮಾನವನ್ನು ಗೆದ್ದು ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುವರು.

ಕಾರ್ಕಳ:ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ,ಸವಾರ ಗಂಭೀರ

0

ಕಾರ್ಕಳ:ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ,ಸವಾರ ಗಂಭೀರ

ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಎರ್ಲಪಾಡಿ ಗ್ರಾಮದ ಜಾರ್ಕಳ ಬಳಿ ನಡೆದಿದೆ.ಪರಿಣಾಮವಾಗಿ ಸವಾರ ಸುಧೀರ್ ಗಂಭೀರ ಗಾಯಗೊಂಡಿದ್ದಾರೆ.

ಆ.15ರಂದು ಸುಧೀರ್‌ ರವರು ಮಣಿಪಾಲದಲ್ಲಿ ಕೆಲಸ ಮುಗಿಸಿ ಬೆಳಿಗ್ಗಿನ ಜಾವ 4:00 ಗಂಟೆಗೆ ಎರ್ಲಪಾಡಿ ಗ್ರಾಮದ ಜಾರ್ಕಳ ಬಳಿ ಬರುತ್ತಿರುವಾಗ ಸ್ಕೂಟಿ ಹತೋಟಿ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸುಧೀರ್‌ ರವರ ತಲೆಗೆ ಗಂಭೀರ ಗಾಯವಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

0

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಆಗಸ್ಟ್ 15 ನಮಗೆ ಐತಿಹಾಸಿಕ ದಿನ ಮತ್ತು ನಮಗೆ ಸ್ವಾತಂತ್ರ್ಯ ನೀಡಿದ ಆ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆ ಎಂದರು.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ ಎಂದು ತಿಳಿಸಿದರು.

ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ ಪ್ರಮುಖ ದೇಶಗಳಲ್ಲಿ 5 ನೇ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು 100% ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಭಾರತದ ಜನರ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಪ್ರಸ್ತುತ ದೇಶ ಮತ್ತು ವಿಶ್ವದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ‘ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡಬೇಕು. ಪ್ಯಾರಿಸ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ ಎಲ್ಲಾ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆಗಳು ಎಂದು ಅವರು ಹೇಳಿದರು.

ನಮ್ಮ ದೇಶದ ಆರ್ಥಿಕತೆಯನ್ನು ಬಲಪಡಿಸಲು, ಪರಿಸರವನ್ನು ಸಂರಕ್ಷಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಮತ್ತು ದೇಶದ ಭವಿಷ್ಯದ ಪೀಳಿಗೆಗಳು ನಮ್ಮ ಬಗ್ಗೆ ಉತ್ತಮ ಗ್ರಹಿಕೆಯನ್ನು ಬೆಳೆಸಿಕೊಳ್ಳುವಂತೆ ಶ್ರಮಿಸೋಣ ಎಂದು ಗೌರವಾನ್ವಿತ ರಾಜ್ಯಪಾಲರು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿಗಳಾದ ಪ್ರಭುಶಂಕರ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿಗಳಾದ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿಗಳ ಯೋಗೇಶ್ ಉಪಧ್ಯಾಯ್,ಎಡಿಸಿ ಸಾಬುಥಾಮಸ್, ಎಡಿಸಿ ಸಂದೀಪ್ ಶರ್ಮಾ, ಒಎಸ್ ಡಿಗಳಾದ ಶಂಕರ್ ಲಾಲ್ ಗುಜರ್, ಆದರ್ಶ್ ಪಾಸ್ವಾನ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೆರ್ವಾಜೆ:ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ

0

ಪೆರ್ವಾಜೆ:ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆಯಲ್ಲಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಕಾರ್ಕಳದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಚ್ ಇವರು ನೆರವೇರಿಸಿದರು.

ಎಸ್ ಡಿಎಂಸಿ ಅಧ್ಯಕ್ಷ ರವಿಕಾಂತ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಚಂದ್ರಶೇಖರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮುಖ್ಯ ಅತಿಥಿಗಳಾಗಿ ಪ್ರದೀಪ್ ರಾಣೆ, ಪುರಸಭಾ ಸದಸ್ಯರು ಕಾರ್ಕಳ, ರವಿಚಂದ್ರ ಕಾರಂತ್ ದೈಹಿಕ ಶಿಕ್ಷಣಾಧಿಕಾರಿ ಕಾರ್ಕಳ,ಸಂಜೀವ ದೇವಾಡಿಗ, ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಕ. ರಾ. ಪ್ರಾ. ಶಾ. ಶಿ. ಸಂಘ ಉಡುಪಿ,ಸಂತೋಷ್ ಕುಮಾರ್ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿಗಳು ಕಾರ್ಕಳ, ಪ್ರಕಾಶ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ದೈ. ಶಿ. ಸಂಘ ಉಡುಪಿ,ಶಶಿಧರ್ ಶೆಟ್ಟಿ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಸುಮಾ ಎಸ್ ಡಿ ಎಂ ಸಿ ಉಪಾಧ್ಯಕ್ಷರು, ಜ್ಯೋತಿ ಸಿ ಆರ್ ಪಿ ಸಾಣೂರು ಕ್ಲಸ್ಟರ್, ದಿವಾಕರ್ ಮುಖ್ಯೋಪಾಧ್ಯಾಯರು, ಸ. ಪ್ರೌ. ಶಾಲೆ ಪೆರ್ವಾಜೆ ಮುಂತಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿಪ್ರಮೀಳಾ ಸ್ವಾಗತಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್ ಎಂ. ವಂದಿಸಿದರು. ಸಹ ಶಿಕ್ಷಕಿ ಆಶಾ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

86 ಸಿಮ್‌ ಕಾರ್ಡ್‌‌ ಹೊಂದಿದ್ದ ಇಬ್ಬರ ಬಂಧನ

0

ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್‌ ಕಾರ್ಡ್‌‌ಗಳು, 2 ಮೊಬೈಲ್‌ ಫೊನ್‌ಗಳು,ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಬಂಧಿತ ಆರೋಪಿಗಳು. ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ ಸೂಚನೆಯಂತೆ ತಮ್ಮ ಗೆಳೆಯರು,
ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.

ಆರೋಪಿಗಳು ಕಳೆದ ಜನವರಿ ಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್‌ ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

A1 ಸೂಪರ್ ಮಾರ್ಟ್ ಜೋಡುರಸ್ತೆಯಲ್ಲಿ “ಬಿಗ್ ವಿನ್“ಆಫರ್

0

ಗ್ರಾಹಕರು 1000 ರೂ. ಮೇಲ್ಪಟ್ಟು ಜೊತೆಗೆ ಏರಿಯಲ್ ಲಿಕ್ವಿಡ್ ಡಿಟರ್ಜೆಂಟ್ ಖರೀದಿಸಿದರೆ ವಾಷಿಂಗ್ ಮೆಷಿನ್ ಸೇರಿದಂತೆ ಹಲವು ಬಹುಮಾನ ಗೆಲ್ಲುವ ಸುವರ್ಣಾವಕಾಶ.

A1 ಸೂಪರ್ ಮಾರ್ಟ್ ಜೋಡುರಸ್ತೆಯಲ್ಲಿ “ಬಿಗ್ ವಿನ್“ಆಫರ್

ಕಾರ್ಕಳ ಜೋಡುರಸ್ತೆಯಲ್ಲಿರುವ A1 ಸೂಪರ್ ಮಾರ್ಟ್ ನಲ್ಲಿ ಬಿಗ್ ವಿನ್ ಆಫರ್ ಪ್ರಾರಂಭಗೊಂಡಿದೆ.ಮನೆಗೆ ಬೇಕಾಗಿರುವ ಎಲ್ಲಾ ಗೃಹೋಪಯೋಗಿ ವಸ್ತುಗಳ ಮೇಲೆ ಬಂಪರ್ ಆಫರ್ ಲಭ್ಯವಿದೆ.

ಒಂದು ಸಾವಿರ ರೂಪಾಯಿ ಮೇಲ್ಪಟ್ಟು ಖರೀದಿ ಜೊತೆಗೆ ಏರಿಯಲ್ ಲಿಕ್ವಿಡ್ ಡಿಟರ್ಜೆಂಟ್ ಕೊಂಡರೆ ಲಕ್ಕಿ ಕೂಪನ್ ಸಿಗಲಿದೆ.ಲಕ್ಕಿ ಕೂಪನ್ ವಿಜೇತರಿಗೆ ವಾಷಿಂಗ್ ಮೆಷೀನ್,ಮಿಕ್ಷರ್ ಗ್ರೈ೦ಡರ್ ಹಾಗು ಸ್ಪಿನ್ ಮಾಪ್ ಬಹುಮಾನವಾಗಿ ಸಿಗಲಿದೆ.

ಮುಂದಿನ ಮೂರು ತಿಂಗಳವರೆಗೆ ಈ ಆಫರ್ ನಡೆಯಲ್ಲಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-6360078834.

ಅಯಪ್ಪನಗರ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

0

ಅಯಪ್ಪನಗರ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ನಿವೃತ್ತ ಪೋಲೀಸ್ ಅಧಿಕಾರಿ ಪಡುಬಿದ್ರಿ  ಬಾಲಕೃಷ್ಣ ರಾವ್ ಮತ್ತು ಅವರ ಮಿತ್ರರ ದಿನೇಶ್ ರಾವ್ ಕಾಮಾಕ್ಷಿಪಾಳ್ಯ ಬೆಂಗಳೂರು ಇವರ ಸಹಕಾರದಲ್ಲಿ ಕಾರ್ಕಳ ಕುಕ್ಕುಂದೂರು ಅಯಪ್ಪನಗರ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸುಮಾರು 100 ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಬದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕಾರ್ಕಳ ಪುರಸಭಾ ಸದಸ್ಯ, ಕಾಂಗ್ರೇಸ್ ಮುಖಂಡರಾದ ಶುಭದರಾವ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದೊಂದು ಪ್ರತಿಭೆ ಅಡಗಿದೆ ಶಿಕ್ಷಕರು ಆ ಪ್ರತಿಭೆಯನ್ನು ಗುರುತಿಸುವಲ್ಲಿ ಆಸಕ್ತಿವಹಿಸಿದರೆ ನಮ್ಮ ಪ್ರತಿಭೆಗಳು ದೇಶದ ಸಂಪತ್ತಾಗಿ ಬೆಳೆಯುತ್ತವೆ, ವಿದ್ಯಾರ್ಥಿಗಳಿಗೆ ಸರಕಾರದಿಂದ ಅನೇಕ ಸವಲತ್ತುಗಳು ಘೋಷಣೆಯಾದರೂ ಕೆಲವರಿಗೆ ಅದು ಸರಿಯಾಗಿ ತಲುಪುತ್ತಿಲ್ಲ, ಸವಲತ್ತು ವಂಚಿತ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಅಗತ್ಯವಿದೆ ಇಂತಹ ದಾನಿಗಳಿಂದ ಇದು ಸಾದ್ಯ ಅವರ ಸಹಕಾರವನ್ನು ಸದಾ ಸ್ಮರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಹೇಮಂತ್ ಆಚಾರ್ಯ, ಕುಮಾರಿ ಮಿಷಾ ರಾವ್, ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.