Home Blog Page 12

ಕ್ರೈಸ್ಟ್ ಕಿಂಗ್: ರಾಷ್ಟ್ರೀಯ ಹಿಂದಿ ದಿನಾಚರಣೆ

0

ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು.

ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ ಎಸ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಎಲ್ಲಾ ಭಾಷೆಗಳಿಗೆ ತಮ್ಮದೇ ಆದ ಮಹತ್ವವಿದೆ. ಭಾಷೆಗಳಲ್ಲಿ ಪರಿಪೂರ್ಣತೆಯಿದ್ದರೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಿಂದಿ ಭಾಷೆಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು” ಎಂದು ಹೇಳಿ ಹಿಂದಿ ಭಾಷೆಯ ವ್ಯಾಕರಣ ವಿಶೇಷತೆಯ ಬಗ್ಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮಾತನಾಡಿ “ಯಾವುದೇ ಭಾಷೆಯನ್ನು ಕಲಿತಾಗ ಜೀವನದಲ್ಲಿ ಅನಿವಾರ್ಯ ಸಂದರ್ಭದಲ್ಲಿ ನಮ್ಮ ಸಹಾಯಕ್ಕೆ ಬರುತ್ತದೆ” ಎಂದು ಹೇಳಿದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಹಿಂದಿ ಉಪನ್ಯಾಸಕಿ ಶ್ರೀಮತಿ ಶಾಹಿನಾ ಬಾನು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಶಮೀನಾ ಅಮೀರ್ ಪ್ರಸ್ತಾವನೆಗೈದರೆ ವಿದ್ಯಾರ್ಥಿ ಬ್ರೋವಿನ್ ಅಗೇರಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಸುದೀಕ್ಷಾ ಸ್ವಾಗತಿಸಿ ಸ್ಲೀಟಾ ಪ್ರೀಮಲ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ಶನ್ವಿತಾ ವಂದಿಸಿದರು.

ಬಾಸ್ಕೆಟ್ ಬಾಲ್:ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು, ನಿಟ್ಟೆಯ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜು, ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಾದ ಅಭಿಲಾಶ್ ಡಿ. ಅಲ್ಮೇಡಾ, ಅಗ್ರಜ್ ಸಿ. ಗೌಡ, ದಕ್ಷ ಎ. ಶೆಟ್ಟಿ, ಪ್ರಣೀತ್ ಎಸ್., ಪ್ರೀತಮ್ ಪಿ., ಶಿವ ಪಟೇಲ್ ಹೆಚ್.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

ಕ್ರೈಸ್ಟ್ ಕಿಂಗ್: ರೋವರ್ಸ್ ಮತ್ತು ರೇಂಜರ್ಸ್ ಪುನಶ್ಚೇತನಾ ಕಾರ್ಯಾಗಾರ

0

 

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸದಸ್ಯರಿಗೆ ಒಂದು ದಿನದ ಪುನಶ್ಚೇತನಾ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಅವರು ದೀಪ ಬೆಳಗಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪ್ರಕೃತಿ ಹಾಗೂ ಸಮಾಜದಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ತಿರುಗಿ ಏನು ಕೊಡುತ್ತೇವೆ ಎಂದು ಯೋಚಿಸಬೇಕು. ಹಿಂತಿರುಗಿ ಏನನ್ನಾದರೂ ನೀಡುವಲ್ಲಿ ಸ್ಕೌಟ್ ಗೈಡ್ಸ್ನಂತಹ ಸಂಸ್ಥೆಗಳು ನಮಗೆ ಅವಕಾಶ ಮಾಡಿಕೊಡುತ್ತವೆ. ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು ಮಕ್ಕಳಲ್ಲಿ ಕೌಶಲ ವೃದ್ಧಿಸಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗುತ್ತವೆ” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಭಾರತ್ ಸ್ಕೌಟ್ಸ್ ಗೈಡ್ಸ್ನ ಉಡುಪಿ ಜಿಲ್ಲಾ ಮುಖ್ಯಸ್ಥರಾದ ಡಾ.ಗಣನಾಥ ಎಕ್ಕಾರು ಅವರು ಮಾತನಾಡಿ “ಸಮಾಜ ಸೇವೆ ನಮ್ಮ ಜೀವನದ ಅವಿಭಾಜ್ಯ ಭಾಗವಾಗಬೇಕು, ವಿದ್ಯಾರ್ಥಿಗಳು ಸೇವಾಭಾವನೆ ಬೆಳೆಸಿಕೊಂಡು ಸಮಾಜಮುಖಿ ವ್ಯಕ್ತಿಗಳಾಗಿ ಬೆಳೆಯಬೇಕು” ಎಂದು ಹೇಳಿದರು.

ಅತಿಥಿಗಳಾಗಿದ್ದ ಉಡುಪಿ ಜಿಲ್ಲಾ ಗೈಡ್ಸ್ ಆಯುಕ್ತರಾದ ಶ್ರೀಮತಿ ಜ್ಯೋತಿ ಪೈ ಅವರು ಮಾತನಾಡಿ “ಮಕ್ಕಳು ತಂದೆ-ತಾಯಿ, ಗುರುಗಳು ಹಾಗೂ ಜನ್ಮಭೂಮಿಯನ್ನು ಎಂದಿಗೂ ಮರೆಯಬಾರದು, ಗೈಡ್ಸ್ನಂತಹ ಸಂಸ್ಥೆಗಳು ನಮ್ಮನ್ನು ಪರೋಪಕಾರಿಗಳನ್ನಾಗಿ ಮಾಡುತ್ತವೆ. ಮಕ್ಕಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಕಾರ್ಕಳ ಸ್ಥಳೀಯ ಸಂಸ್ಥೆಗಳ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ ಮನೋಹರ್ ಅವರು ಸ್ಕೌಟ್ ಗೈಡ್ಸ್ ಗೀತೆಗಳ ಗಾಯನದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮಿನಾರಾಯಣ ಕಾಮತ್ ಅವರು ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಮೊಬೈಲ್ ಮತ್ತು ಸಾಮಾಜಿಕ ಜಾಲಾತಾಣಗಳ ಚಟಗಳಿಂದ ಹೊರಬರಲು ಹಾಗೂ ನಮ್ಮ ದೇಹವನ್ನು ಸದೃಢವಾಗಿಸಲು ರೋವರ್ಸ್ ಮತ್ತು ರೆಂಜರ್ಸ್ ಗಳಂತಹ ಚಟುವಟಿಕೆಗಳು ತುಂಬಾ ಸಹಕಾರಿ” ಎಂದು ಹೇಳಿದರು.

ಉಡುಪಿ ಜಿಲ್ಲಾ ಸ್ಕೌಟ್ಸ್ನ ಸಹಾಯಕ ಆಯುಕ್ತರಾದ ವಿತೇಶ್ ಕಾಂಚನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಇಡೀ ದಿನದ ಪುನಶ್ಚೇತನಾ ಕಾರ್ಯಾಗಾರದ ತರಬೇತಿ ನಡೆಸಿಕೊಟ್ಟರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕಿ, ರೇಂಜರ್ ಲೀಡರ್ ಕು.ಅಭಿನಯ ಸ್ವಾಗತಿಸಿ ದೈಹಿಕ ಶಿಕ್ಷಣ ನಿರ್ದೇಶಕ, ರೋರ‍್ಸ್ ಸ್ಕೌಟ್ ಲೀಡರ್ ಕೃಷ್ಣಪ್ರಸಾದ್ ಪ್ರಸ್ತಾವನೆಗೈದರು. ಉಪನ್ಯಾಸಕ ಉಮೆಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ನಿಟ್ಟೆ: 5,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ

0

 

ಸೆಪ್ಟೆಂಬರ್ 23 ರಂದು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ 5,000 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ದ್ವಿತಿಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ನಂದಿನಿ ಅವರು ಬೆಳ್ಳಿ ಪದಕ ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಅವರು 5 ನೇ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಯನ್ನು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

ಕಾರ್ಕಳ: ಲಲಿತ ಕಲಾ ಸಂಘದ ಉದ್ಘಾಟನಾ ಕಾರ್ಯಕ್ರಮ

0

 

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಲಲಿತ ಕಲಾ ಸಂಘದ ಪ್ರಸ್ತುತ ಸಾಲಿನ ಉದ್ಘಾಟನೆಯನ್ನು ಕಾರ್ಕಳದ ಸಂಗೀತ ಶಿಕ್ಷಕರಾಗಿರುವ ಶ್ರೀಮತಿ ಪೂರ್ಣಿಮಾ ಗೋರೆಯವರು ನೆರವೇರಿಸಿದರು.

ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ಭರತ ನಾಟ್ಯದಲ್ಲಿ ವಿದ್ಯಾರ್ಥಿನಿಯರು ಸೂಕ್ತ ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವೇದಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದರು.

ಲಲಿತ ಕಲಾ ಸಂಘದ ನಿರ್ದೇಶಕರಾದ ಶ್ರೀಯುತ ಸೀತಾರಾಮ್ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿಸಿದರು. ವಿದ್ಯಾರ್ಥಿ ನಾಯಕಿ ಸುರಕ್ಷಾ ವಂದಿಸಿದರು. ಕು.ಇಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಅಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ: ಸೇವಾ ಪಾಕ್ಷಿಕ ಅಭಿಯಾನ-ಕುಂಬಾರಿಕೆ ಪರಿಣತರಿಗೆ ಸನ್ಮಾನ

0

 

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಶ್ರೀಮತಿ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಮಾರು 50 ವರ್ಷಗಳಿಂದ ಕುಂಬಾರಿಕೆ ವೃತ್ತಿಯಲ್ಲಿ ತೊಡಗಿರುವ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಕಡಾರಿ ಬೊಗ್ಗು (ಅಣ್ಣು)ಮೂಲ್ಯ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ಕುಂಬಾರಿಕೆ ಉತ್ಪನ್ನಗಳನ್ನು ಖರೀದಿಸಲಾಯಿತು.

ಈ ಸಂದರ್ಭದಲ್ಲಿ ಸೇವಾಪಾಕ್ಷಿಕ ಸಂಚಾಲಕ ರವೀಂದ್ರ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮ ನಿರ್ಭರ ಭಾರತ ಕನಸು ಸಾಕಾರಗೊಳ್ಳುತ್ತದೆ ಎಂದರು.

ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಅವರು ಮಾತನಾಡಿ, ಸೇವಾ ಪಾಕ್ಷಿಕದ ನಿರಂತರ ಸೇವಾ ಕಾರ್ಯಗಳು ಮಹಿಳಾ ಮೋರ್ಚಾದಿಂದ ನಡೆಯುತ್ತಿದ್ದು, ನಮ್ಮ ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದು, ಇದರಿಂದ ಉತ್ತಮ ಆರೋಗ್ಯ ವೃದ್ಧಿ ಮಾತ್ರವಲ್ಲದೆ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಬೋಳ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕವಿತಾ ಹರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಸುಮಾ ರವಿಕಾಂತ್, ವಿನುತಾ ಆಚಾರ್ಯ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಜತ್, ಮಹಿಳಾ ಮೋರ್ಚಾ ನಗರ ಶಕ್ತಿ ಕೇಂದ್ರ ಅಧ್ಯಕ್ಷರಾದ ಮಮತಾ ಸುವರ್ಣ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿಗಾರ್,,ಮುಡಾರು ಪಂಚಾಯತ್ ಅಧ್ಯಕ್ಷರಾದ ಶೃತಿ ಅದಿಕಾರಿ,ಮಾಳ ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ಮಾಲತಿ ನಾಯ್ಕ್, ಸರಸ್ವತಿ ಆಚಾರ್ಯ, ಸುಂದರಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಚಿತ್ರಾ, ಶುಭ ಜಗದೀಶ್, ಹರಿಣಿ, ಕುಶಲ, ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.
9900782313

 

ಸೆ.21 ರಂದು ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅಹ್ವಾನ

0

 

ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರ, ಮಹಿಳಾ ಮೋರ್ಚಾ ವತಿಯಿಂದ ಸೆ.21 ರಂದು ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ಬೆಳ್ಮಣ್ ಶ್ರೀಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಇದರ ಪ್ರಯುಕ್ತ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್‌ ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ವಿಕಸಿತ ಭಾರತ ವಿಷಯದ ಕುರಿತು ಚಿತ್ರಕಲೆ ಹಾಗು ಅಭಯ ರಾಣಿ ಉಳ್ಳಾಲದ ಅಬ್ಬಕ್ಕ ವಿಷಯದ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ ಬಹುಮಾನವಾಗಿ 2 ಸಾವಿರ ರೂ., ದ್ವಿತೀಯ ಬಹುಮಾನ 1500 ರೂ. ತೃತೀಯ ಬಹುಮಾನವಾಗಿ ಸಾವಿರ ರೂ. ಸಿಗಲಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ:
1. ಹೈಸ್ಕೂಲ್‌ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.
2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.
3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್‌ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.
4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.
5. ಸ್ಪರ್ಧಿಗಳು 18 ಸೆಪ್ಟೆಂಬರ್‌ ಒಳಗೆ ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.

ಮೈಸೂರು ದಸರಾ ಉದ್ಘಾಟನೆಗೆ ಕವನದ ಮೂಲಕ ʼಬಾಗಿನʼ ನೀಡಿದ ಬಾನು ಮುಷ್ತಾಕ್‌

0

 

ಮೈಸೂರು: ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ ಎಂದು ಬಾನು ಮುಷ್ತಾಕ್‌ ಆಶಿಸಿದ್ದಾರೆ.

ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಬಹುಮಾನ ವಿಜೇತೆ ಬಾನು ಮುಷ್ತಾಕ್ ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು, ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಬಾಸ್ಕೆಟ್‌ಬಾಲ್ : ಕಾರ್ಕಳ ಜ್ಞಾನಸುಧಾದ ಭುವನ್ ರಾಜ್ಯಮಟ್ಟಕ್ಕೆ

0

 

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಚದುರಂಗ : ಕಾರ್ಕಳ ಜ್ಞಾನಸುಧಾದ ಆಜ್ಲೀನ್ ರಾಜ್ಯಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವಕಾಲೇಜು ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯ ಅಜ್ಲೀನ್ ಅನ್ನ ಅರಹ್ನ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ÷್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.