Home Blog Page 94

ಗುತ್ತಿಗೆದಾರರಿಗೂ ನಾಯಕರಿಗೂ ವ್ಯತ್ಯಾಸ ಗೊತ್ತಿಲ್ಲದ ಮಾನ್ಯ ಸುಭದ್ ರಾವ್ ನಮ್ಮ ಬಳಿ ಬನ್ನಿ ಸವಿವರವಾಗಿ ಹೇಳಿಕೊಡುತ್ತೇವೆ-ಸುರೇಶ್‌ ಶೆಟ್ಟಿ ಶಿವಪುರ

0

ಕಾರ್ಕಳ:ಕಾಡುಹೊಳೆ, ಅಂಡಾರು ರಸ್ತೆಯನ್ನು ಕಳಪೆ ಮಟ್ಟದಲ್ಲಿ ಮಾಡಿರುವ ಗುತ್ತಿಗೆದಾರರೂ, ಸ್ಥಳೀಯರೂ ಆದ ಉದಯ್ ಕುಮಾರ್ ಶೆಟ್ಟಿಯವರಿಗೆ ಅವರ ಊರಿನವರೇ ಹುಟ್ಟೂರಿನ ಸನ್ಮಾನ ಮಾಡಿರುವುದೇ ಹೊರತು ಹೊರಗಿನಿಂದ ಬಂದವರಲ್ಲ. ಸ್ಥಳೀಯ ಗ್ರಾಮಸ್ಥರು ನಿಮ್ಮ ನಾಯಕನ ಕಳಪೆ ಕಾಮಗಾರಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಒಂದು ವಿಶಿಷ್ಟ ಹಾಗೂ ಹೊಸತನದ ಮಾದರಿಯಲ್ಲಿ ಸನ್ಮಾನ ಕಾರ್ಯಕ್ರಮ ಮಾಡಿದ್ದಾರೆ. ಅವರು ಎಲ್ಲಿಯೂ ಕೂಡ ಕಾಂಗ್ರೆಸ್ ನಾಯಕರಂತೆ ಅವರದ್ದೇ ನಾಯಕರ ಭಾವಚಿತ್ರ ನೆಲಕ್ಕೆ ಹಾಕಿ ಚಪ್ಪಲಿಯಿಂದ ತುಳಿಯಲಿಲ್ಲ, ಬೆಂಕಿ ಹಾಕಿ ಸುಡಲಿಲ್ಲ. ಸುಡುವುದು, ಚಪ್ಪಲಿಯಲ್ಲಿ ತುಳಿಯುವುದು ಕಾಂಗ್ರೆಸ್‌ನ ಸಂಸ್ಕೃತಿ. ಒಂದು ಒಳ್ಳೆಯ ರೀತಿಯಲ್ಲಿ ಮಾಡಿದ ಪ್ರತಿಭಟನೆ ಕೆಟ್ಟ ಸಂಪ್ರದಾಯ ಹಾಗೂ ಅವಹೇಳನಕಾರಿ ಎಂದು ಟೀಕಿಸುವ ಶುಭದ ರಾವ್‌, ರಾಜ್ಯದ ಉನ್ನತ ಸ್ಥಾನದಲ್ಲಿರುವ ರಾಜ್ಯಪಾಲರ ಬಗ್ಗೆ ಹೀನಾಯ, ವಿಕೃತ ಶಬ್ಧಗಳನ್ನು ಬಳಸುವ ತಮ್ಮದೇ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ತಿಳಿಸಿ ಹೇಳುವುದು ಸೂಕ್ತ.ಮಾನ್ಯ ಸುಭದ್ ರಾವ್ ಅವರೇ ನಿಮಗೆ ಗುತ್ತಿಗೆದಾರ ಯಾರು? ಜನಪ್ರತಿನಿಧಿ ಯಾರು ? ಎಂಬ ವ್ಯತ್ಯಾಸವೇ ಗೊತ್ತಿಲ್ಲ. ಶಾಸಕರಿಗೂ ಗುತ್ತಿಗೆದಾರರಿಗೂ ಇರುವ ವ್ಯತ್ಯಾಸದ ಬಗ್ಗೆ ಮೊದಲು ತಿಳಿಯಿರಿ.

ನಿಮ್ಮ ನಾಯಕ ಗುತ್ತಿಗೆದಾರನಾಗಿದ್ದುಕೊಂಡು ನಾಯಕ ಆಗಿರಬಹುದು. ಆದರೆ ನಮ್ಮ ಶಾಸಕರು ನಾಯಕ ಮಾತ್ರ. ಶಾಸಕರದ್ದು ಏನಿದ್ದರೂ ಪ್ರಸ್ತಾವನೆ ಸಲ್ಲಿಸುವುದು, ಅನುದಾನ ಬಿಡುಗಡೆಗೊಳಿಸುವುದಷ್ಟೇ ಕೆಲಸ. ಶಾಸಕರು ತಂದ ಅನುದಾನವನ್ನು ಕಾರ್ಯಗತಗೊಳಿಸುವುದು ಸಂಬಂಧಪಟ್ಟ ಇಲಾಖೆ ಹಾಗೂ ಗುತ್ತಿಗೆದಾರ. ಒಂದು ವೇಳೆ ಗುತ್ತಿಗೆದಾರ ಪ್ರಾಮಾಣಿಕನಾಗಿದ್ದರೆ ಕಾಮಗಾರಿಯ ಗುಣಮಟ್ಟ ಒಳ್ಳೆಯದಿರುತ್ತದೆ. ಇಲ್ಲದೆ ಇದ್ದಲ್ಲಿ ಕಾಡುಹೊಳೆ ರಸ್ತೆ, ಗುರುವಾಯನಕೆರೆ ರಸ್ತೆ, ಶಕ್ತಿನಗರ ರಸ್ತೆ ತರಹವೇ ಆಗುತ್ತದೆ.
ಕಳಪೆ ಕಾಮಗಾರಿ ವಿಷಯದಲ್ಲಿ ನಾವೆಂದೂ ರಾಜಿ ಮಾಡಿಕೊಂಡಿಲ್ಲ, ಮಾಡುವುದೂ ಇಲ್ಲ. ಯಾರೇ ಕಳಪೆ ಕಾಮಗಾರಿ ಮಾಡಿದ್ದರೂ ಅದರ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ತಪ್ಪಿತಸ್ಥ ಎಂದು ಸಾಬೀತಾದಲ್ಲಿ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ನಮ್ಮ ನಾಯಕರು ಬಹಿರಂಗವಾಗಿಯೇ ಈ ಹಿಂದೆಯೂ ಹೇಳಿದ್ದರು, ಈಗಲೂ ಹೇಳುತ್ತಿದ್ದಾರೆ, ಮುಂದೆಯೂ ಇದೇ ನಿಲುವಾಗಿರುತ್ತದೆ. ಕಳಪೆ ಕಾಮಗಾರಿ ಕುರಿತು ನಮ್ಮ ನಿಲುವು ಸದಾ ಸ್ಪಷ್ಟವಾಗಿದೆ. ನೀವು ಮಾತ್ರ ಗೊಂದಲದಲ್ಲಿದ್ದೀರಿ.

ದಯವಿಟ್ಟು ಮಾನ್ಯ ಸುಭದ್ ರಾವ್ ಅವರೇ, ನೀವೂ ಒಬ್ಬ ಜನಪ್ರತಿನಿಧಿ. ಪುರಸಭಾ ಸದಸ್ಯ ಆದ್ದರಿಂದ ಇದನ್ನೆಲ್ಲ ಸ್ವಲ್ಪ ಅರಿತುಕೊಳ್ಳಬೇಕು ಅಥವಾ ತಿಳಿದವರ ಬಳಿ ಕೇಳಿ ಮಾತನಾಡಬೇಕು. ನೀವು ಚಿಲ್ಲರೆ ವ್ಯಕ್ತಿತ್ವ ತೋರಿಸುತ್ತಾ, ಬರೀ ಸುಳ್ಳು ಹೇಳಿಕೆಗಳನ್ನು ನೀಡುವುದೇ ನಿಮ್ಮ ಕಾಯಕವಾಗಿದೆ. ನಿಮಗೆ ವೇದಿಕೆ ಸಿಕ್ಕರೆ ಸಾಕು ಸುನಿಲ್ ಕುಮಾರ್ ಬಿಟ್ಟರೆ ಬೇರೆ ವಿಚಾರವೇ ಇಲ್ಲ. ನೀವು ಇನ್ನೊಬ್ಬರ ಬಗ್ಗೆ ಮಾತನಾಡುವುದನ್ನು ಬಿಟ್ಟು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳಬೇಕು. ನಿಮಗೊಂದು ಕಿವಿಮಾತು, ಇನ್ನೂ ನಿಮಗೆ ಗುತ್ತಿಗೆದಾರರಿಗೂ ನಾಯಕರಿಗೂ ಇರುವ ವ್ಯತ್ಯಾಸ ಗೊತ್ತಿಲ್ಲ ಎಂದಾದರೆ ನಮ್ಮಲ್ಲಿ ಬನ್ನಿ ನಾವು ನಿಮಗೆ ಅರ್ಥವಾಗುವ ಹಾಗೆ ತಿಳಿ ಹೇಳುತ್ತೇವೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಶಿವಪುರ ಹೇಳಿದ್ದಾರೆ

ಕಾರ್ಕಳ:ಆರ್ ಸಿ ಸಿ ಕೆಲಸಗಾರರಿಗೆ ಅಪಘಾತ ವಿಮೆ

0

ಆರ್ ಸಿ ಸಿ ಕೆಲಸಗಾರರಿಗೆ ಅಪಘಾತ ವಿಮೆ
ಕಾರ್ಕಳ:ಭಾರತೀಯ ಅಂಚೆ ಪುತ್ತೂರು ವಿಭಾಗ ಮತ್ತು ಆರ್ ಸಿ ಸಿ ಗುತ್ತಿಗೆದಾರರ ಸಂಘ ಕಾರ್ಕಳ ಇವರ ಸಹಯೋಗದೊಂದಿಗೆ ಬೃಹತ್ ಅಪಘಾತ ವಿಮೆ ಮೇಳವು ಕಾರ್ಕಳ ಜೋಡುರಸ್ತೆಯ ನವದುರ್ಗ ಕಟ್ಟಡದಲ್ಲಿ ನಡೆಯಿತು, ದೀಪ ಪ್ರಜ್ವಲನೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಾರ್ಕಳ ಪ್ರಧಾನ ಅಂಚೆ ಕಛೇರಿಯ ಅಂಚೆಪಾಲಕರಾದಂತಹ ಮಂಜುನಾಥ ಎಚ್. ಉದ್ಯಮಿ ಸತ್ಯೇಂದ್ರ ಭಟ್,ಸಹಾಯಕ ಅಂಚೆ ಅಧೀಕ್ಷಕರಾಗಿರುವ ಮೋಹನ್ ಬಿ,ಹಿರಿಯ ಗುತ್ತಿಗೆದಾರ ಫೆಲಿಕ್ಸ ಮಾತಾಯಿಸ್, ಕಾರ್ಕಳ ತಾಲೂಕು ಕಾರ್ಯನಿರತಪತ್ರಕರ್ತರ ಸಂಘದ ಅಧ್ಯಕ್ಷ ಮಹಮದ್ ಶರೀಫ್ ,ಆರ್‌ಸಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ದಾಮೋದರ ಆಚಾರ್ಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮ್ಯಾನೇಜರ್ ಸಿಹಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಕಳ ಪ್ರಧಾನ ಅಂಚೆ ಕಚೇರಿಯ ಅಂಚೆಪಾಲಕರಾದ ಮಂಜುನಾಥ್ ಅಂಚೆ ಇಲಾಖೆ ಯೋಜನೆಗಳು ಮತ್ತು ಅಪಘಾತ ವಿಮೆಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ನೀಡಿದರು.

ಈ ವಿಮಾ ಮೇಳದಲ್ಲಿ ಸುಮಾರು 150ಕ್ಕೂ ಹೆಚ್ಚು ಜನ ವಿಮಾ ಪಾಲಿಸಿಯನ್ನು ಪಡೆದುಕೊಂಡರು,
ಮಾಸ್ಟರ್ ಸಮರ್ಥ ಪ್ರಾರ್ಥನೆಯನ್ನು ನೆರವೇರಿಸಿದರು,ಕಾರ್ಯಕ್ರಮದ ನಿರೂಪಣೆ
ಪ್ರಶಾಂತ್ ಆಚಾರ್ಯ ಜೋಗುಳಬೆಟ್ಟು ನೆರವೇರಿಸಿದರು

ಬೈಲೂರು:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0

ಬೈಲೂರು:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸರ್ಕಾರಿ ಪದವಿಪೂರ್ವ ಕಾಲೇಜು ಬೈಲೂರು, ಇಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ 45 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಇದರೊಂದಿಗೆ ವಿಷಯವಾರು ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಸರಕಾರಿ ಪದವಿ ಪೂರ್ವ ಕಾಲೇಜು – ಸಾಣೂರು ಇಲ್ಲಿಯ ಮಾನ್ಯ ಪ್ರಾಂಶುಪಾಲರಾದ ಸುಚೇತಾ ರವರು ಸನ್ಮಾನಿತ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸುವುದರೊಂದಿಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಪ್ರೇರಣೆಯಾಗಬೇಕೆಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಗುರುಮೂರ್ತಿ ತಾಮ್ರಗೌರಿ ಯವರು ವಹಿಸಿದ್ದರು. ಹಿರಿಯ ಉಪನ್ಯಾಸಕರಾದ ಸೀತಾರಾಮ ರವರು ಪ್ರಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರೆ, ಉಪನ್ಯಾಸಕರಾದ ಮಹೇಶ್ ರವರು ವಂದನಾರ್ಪಣೆಗೈದರು. ಸನ್ಮಾನಿತ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನ್ಯಾಸಕರಾದ ರತ್ನಾಕರ ಪೂಜಾರಿಯವರು ವಾಚಿಸಿ, ವಿದ್ಯಾರ್ಥಿ ಸಂಘದ ಸಂಚಾಲಕರಾದ ನರಸಿಂಹ ವರ್ಧನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನಿಟ್ಟೆ:ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ

0

ನಿಟ್ಟೆ:ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ

ಜುಗಾರಿ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಆ.18ರಂದು ನಿಟ್ಟೆ ಗ್ರಾಮ ಹುಣಸೆಕಟ್ಟೆ ಎಂಬಲ್ಲಿ ನಡೆದಿದೆ.ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಉಪನಿರೀಕ್ಷಕ ದಿಲೀಪ್ ಜಿ ಆರ್ ಪೊಲೀಸ್ ನೇತೃತ್ವದಲ್ಲಿ ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸದಾನಂದ, ಗಣೇಶ್ , ಪ್ರಥಮ್, ಜಯರಾಜ್, ಸೂರ್ಯ ಮತ್ತು ರಾಜ ಬಂಧಿತರು.ಇಸ್ಪೀಟು ಆಟಕ್ಕೆ ಬಳಸಿದ ನಗದು ಹಣ 10,200 ರೂ. ಹಣ,ಇಸ್ಪೀಟ್ ಎಲೆಗಳು, ನೆಲಕ್ಕೆ ಹಾಸಿದ 2 ಹಳೆಯ ಪ್ಲಾಸ್ಟಿಕ್ ಗೋಣಿ ಚೀಲ, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಚಿನಡ್ಕ ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ಕಾರ್ಕಳದಿಂದ 2000 ಬಿಜೆಪಿ ಕಾರ್ಯಕರ್ತರು ಭಾಗಿ-ನವೀನ್ ನಾಯಕ್

0

ಕಂಚಿನಡ್ಕ ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ಕಾರ್ಕಳದಿಂದ 2000 ಬಿಜೆಪಿ ಕಾರ್ಯಕರ್ತರು ಭಾಗಿ-ನವೀನ್ ನಾಯಕ್

ಕಾರ್ಕಳ:ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಪ್ರತಿ ಬಾರಿಯೂ ವಿರೋಧಿಸುತ್ತಾ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ ಬಂದಿದೆ. ಆದರೂ ಕೂಡ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಭಾವನೆಗಳಿಗೆ ಬೆಲೆ ಕೊಡದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಜನಪರ ಸರ್ಕಾರ ಅಲ್ಲ, ಜನ ವಿರೋಧಿ ಸರ್ಕಾರ ಎಂದು ಸಾಭೀತಾಗಿದೆ.

ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆಗಸ್ಟ್ 24 ಶನಿವಾರದಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಬೃಹತ್ ಸಾರ್ವಜನಿಕ ಪ್ರತಿಭಟನೆ ಗೆ ಕರೆ ನೀಡಿದ್ದು, ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಾಹನ ಸವಾರರಿಗೆ ಬರ ಎಳೆಯಲು ಮುಂದಾಗಿರುವ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿರುವ ಬಿಜೆಪಿ ಪಕ್ಷವು ನಿರಂತರ ಜನರ ಪರವಾಗಿ ಕೆಲಸ ಮಾಡುವುದನ್ನು ಮುಂದುವರೆಸುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಕಳ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿಯೂ ಭಾರತದ ಸ್ವಾತಂತ್ರ್ಯ ಸಂಭ್ರಮಾಚರಣೆ

0

ಸೌದಿ ಅರೇಬಿಯಾದಲ್ಲಿಯೂ ‘ಭಾರತ ಸ್ವಾತಂತ್ರ್ಯ ಸಂಭ್ರಮಾಚರಣೆ’

Friendly cricketers Al AHSA ಇದರ ಪರವಾಗಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಲೀಲ್ ಕೃಷ್ಣಾಪುರ ವಹಿಸಿದ್ದರು,ಸಮಾಜ ಸೇವಕರಾಗಿ ಗುರುತಿಸಿಕೊಂಡ ಮೊಹಮ್ಮದ್ ಆಲಿ ಜಿನ್ನಾ ತಮಿಳುನಾಡು,ಮೊಹಿದ್ದೀನ್ ಬಾತಿಷಾ ಜಿಕೆ, ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಸಲೀಂ ಗುರುವಾಯನಕೆರೆ,ಗಲ್ಫ್ ಕಮಿಟಿ ಇದರ ಅಧ್ಯಕ್ಷರು ಸ್ವಾತಂತ್ರ್ಯದ ಬಗ್ಗೆ ಒಂದೆರಡು ಹಿತವಚನಗಳನ್ನು ನೀಡಿದರು.ವೇದಿಕೆಯಲ್ಲಿ ಇಸಾಕ್ ಕಣ್ಣೂರ್, ಶಾಮಿಲ್ ಕೈಕಂಬ, ಅಬ್ಬು ಬಜಗೋಳಿ,ಮುಶೀರ್ ಖಾನ್ ಕಾರ್ಕಳ,ನೌಶಾದ್,ಬಷೀರ್,ಶಾಭಿತ್ ಹಾಜರಿದ್ದರು.

ಮಕ್ಕಳಿಗೆ ಆಟೋಟ ಸ್ಪರ್ಧೆ ಹಾಗೂ ಹಿರಿಯರಿಗೆ ಕ್ರಿಕೆಟ್ ಪಂದ್ಯಾ ಕೂಟವನ್ನು ಆಯೋಜಿಸಲಾಗಿತ್ತು ಪ್ರಥಮ ಸ್ಥಾನವನ್ನು ಮುಶೀರ್ ವಾರಿಯರ್ಸ್ ಹಾಗೂ ದ್ವಿತೀಯ ಸ್ಥಾನವನ್ನು ಜಲೀಲ್ ಸ್ಟ್ರೈಕರ್ಸ್ ತನ್ನದಾಗಿಸಿಕೊಂಡಿತು,ಪಂದ್ಯಶ್ರೇಷ್ಠ ಮುಶೀರ್ ಪಾಲಾದರೆ ಸರಣಿಶ್ರೇಷ್ಠ ನೂರಿಸ್ ಪಡೆದುಕೊಂಡರು.ಸ್ವಾಗತ ಭಾಷಣ ಎಂ.ಜಿ. ನಝೀರ್ ನೆರವೇರಿಸಿದರು,ಅಬ್ದುಲ್ ಸಮದ್ ಕಾರ್ಯಕ್ರಮವನ್ನು ನಿರೂಪಿಸಿದರು,ನೂರಿಸ್ ಬಜಾಲ್ ವಂದಿಸಿದರು.

ಕಾರ್ಕಳ:ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

0

ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ದೂರು ದಾಖಲಿಸಿದ್ದಾರೆ.

ಕಾರ್ಕಳ:ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್. ದೂರು ದಾಖಲಿಸಿದ್ದಾರೆ.

ಆ.5ರಂದು ಪರಶುರಾಮ ಥೀಮ್‌ ಪಾರ್ಕ್‌ ನ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಕುರಿತಂತೆ ಏಕವಚನದಲ್ಲಿ ಬೈದು ಅವಮಾನ ಮಾಡಿದ್ದಲ್ಲದೆ,ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಮಣಿಪಾಲ ಠಾಣಾ ಅಪರಾಧ ಕ್ರಮಾಂಕ : 200/2024 ಕಲಂ: ಕಲಂ 224 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

ಕಾರ್ಕಳ:ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧೆ

0

ಕಾರ್ಕಳ:ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧೆ

ಯುವ ಕಾಂಗ್ರೆಸ್​ನಲ್ಲಿ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಯಲಿದ್ದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಸ್ಪರ್ಧಿಸುತ್ತಿದ್ದಾರೆ.

ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ,ಉಡುಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಜೊತೆಗೆ ಶಾರದಾ ಮಹೋತ್ಸವ ಸಮಿತಿ ಬಜಗೋಳಿ ಇದರ ಪ್ರಧಾನ ಕಾರ್ಯದರ್ಶಿಯಾಗಿ,ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತ ರಕ್ಷಣಾ ಸಮಿತಿ(ರಿ.) ಇದರ ಅಧ್ಯಕ್ಷರಾಗಿ, ಪೂರ್ವ ವಿದ್ಯಾರ್ಥಿ ಸಂಘ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ನರ್ಸ್ ಮೇಲೆ ಅತ್ಯಾಚಾರವೆಸಗಿ ಕೊಲೆ

0

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ನಡುವೆ, ನರ್ಸ್ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಬಿಲಾಸ್‌ಪುರದ ಕಾಶಿಪುರ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ನರ್ಸ್, ಪಕ್ಕದ ರಾಜ್ಯ ಉತ್ತರಾಖಂಡದ ಉಧಮ್ ನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಜುಲೈ 30ರ ಸಂಜೆ ಆಸ್ಪತ್ರೆಯಿಂದ ಹೊರಬಂದ ನರ್ಸ್, ಉತ್ತಾರಾಖಂಡದ ರುದ್ರಪುರದ ಇಂದ್ರ ಚೌಕ್‌ನಿಂದ ಇ-ರಿಕ್ಷಾ ಹತ್ತಿ ಮನೆ ಕಡೆ ಹೊರಟ್ಟಿದ್ದರು. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಆದರೆ, ಆಕೆ ಮನೆ ತಲುಪಿರಲಿಲ್ಲ.

ಮರುದಿನ ನರ್ಸ್ ಸಹೋದರಿ ತನ್ನ ಅಕ್ಕ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಇದಾಗಿ 8 ದಿನಗಳ ಬಳಿಕ, ಆಗಸ್ಟ್ 8ರಂದು ಉತ್ತರ ಪ್ರದೇಶ ಪೊಲೀಸರು ದಿಬ್ದಿಬಾ ಗ್ರಾಮದ ಆಕೆಯ ಮನೆಯಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಶವ ಪತ್ತೆ ಹಚ್ಚಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಹಂತಕನ ಪತ್ತೆಗೆ ತಂಡ ರಚಿಸಿದ್ದರು. ಮೃತ ಮಹಿಳೆಯ ಕಳವಾದ ಮೊಬೈಲ್ ಫೋನ್ ಅನ್ನು ಪೊಲೀಸರು ಟ್ರೇಸ್ ಮಾಡಿದಾಗ ಅದು ಧರ್ಮೇಂದ್ರ ಕುಮಾರ್ ಎಂಬಾತನ ಬಳಿ ಇರುವುದು ಗೊತ್ತಾಗಿದೆ. ಇದರಿಂದ ಅತ್ಯಾಚಾರ ಮತ್ತು ಕೊಲೆ ಆರೋಪಿ ಧರ್ಮೇಂದ್ರ ಎಂಬುವುದು ಪೊಲೀಸರಿಗೆ ಖಚಿತವಾಗಿದೆ.

ಪೊಲೀಸರು ಆರೋಪಿ ಧರ್ಮೇಂದ್ರ ಕುಮಾರ್ ಅನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಆತ
ಉತ್ತರ ಪ್ರದೇಶದ ಬರೇಲಿಯ ದಿನಗೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಜುಲೈ 30ರಂದು ಆಸ್ಪತ್ರೆಯಲ್ಲಿ ಕೆಲಸ ಮುಗಿಸಿದ ನರ್ಸ್ ಒಂಟಿಯಾಗಿ ಮನೆಗೆ ಮರಳುತಿದ್ದರು. ಈ ವೇಳೆ ಧರ್ಮೇಂದ್ರ ಕುಮಾರ್ ಆಕೆಯನ್ನು ಅಡ್ಡಗಟ್ಟಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಧಮ್‌ ನಗರ ಎಎಸ್‌ಪಿ ಮಂಜುನಾಥ್ ಟಿಸಿ “ನರ್ಸ್ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದಾಗ, ದಾಳಿ ನಡೆಯುವುದಕ್ಕೂ ಮುನ್ನವೇ ಆಕೆ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ ಎಂಬುವುದು ತಿಳಿದು ಬಂದಿತ್ತು. ನಂತರ ಆಗಸ್ಟ್ 8ರಂದು ಆಕೆಯ ಗ್ರಾಮದ ಸಮೀಪ ಪೊದೆಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಯು ಮಾದಕ ವ್ಯಸನಿಯಾಗಿದ್ದು, ಆತನಿಗೆ ನರ್ಸ್ ಪರಿಚಯವಿರಲಿಲ್ಲ. ಆಕೆ ಹೋಗುತ್ತಿರುವುದನ್ನು ನೋಡಿ ತಡೆದಿದ್ದ. ಆತನಿಂದ ತಪ್ಪಿಸಿಕೊಳ್ಳಲು ನರ್ಸ್ ಪ್ರಯತ್ನಪಟ್ಟರೂ ಆಗಿಲ್ಲ. ಆರೋಪಿ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಲೆ ಮಾಡಿದ್ದ. ಕೃತ್ಯದ ಬಳಿಕ ಆಕೆಯ ಮೊಬೈಲ್, 3 ಸಾವಿರ ರೂಪಾಯಿ ದುಡ್ಡು ಮತ್ತಿತರ ವಸ್ತುಗಳನ್ನು ದೋಚಿ ಪರಿಯಾಗಿದ್ದಾನೆ ಎಂದು ಎಎಸ್‌ಪಿ ಹೇಳಿದ್ದಾರೆ.

ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

0

ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

ನಿಟ್ಟೆ: ಆಗಸ್ಟ್ 15 ರಂದು ಮಣಿಪಾಲದಲ್ಲಿ ಕೆನರಾ ಬ್ಯಾಂಕ್ ನಡೆಸಿದ ಪ್ರತಿಷ್ಠಿತ 3 ನೇ ಆವೃತ್ತಿಯ ಕೆನರಾ ಮ್ಯಾರಥಾನ್ ನಲ್ಲಿ ನಿಟ್ಟೆ ಕ್ರೀಡಾಪಟುಗಳು ಹಲವಾರು ಪದಕಗಳು ಮತ್ತು ನಗದು ಬಹುಮಾನವನ್ನು ಗೆದ್ದಿದ್ದಾರೆ. ಡಾ. ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ನಂದಿನಿ ಹಾಫ್ ಮ್ಯಾರಥಾನ್ (ಮುಕ್ತ ವಿಭಾಗ) ನಲ್ಲಿ ಚಿನ್ನದ ಪದಕವನ್ನು ಪಡೆದರು.

ತೃತೀಯ ಬಿಕಾಂ ವಿದ್ಯಾರ್ಥಿನಿ ಪ್ರತೀಕ್ಷಾ 3 ಕಿ.ಮೀ (ಮುಕ್ತ ವಿಭಾಗ) ನಲ್ಲಿ ಚಿನ್ನದ ಪದಕವನ್ನು ಪಡೆದರು. ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ 3 ಕಿ.ಮೀ (ಜೂನಿಯರ್ ವಿಭಾಗ) ವಿಭಾಗದಲ್ಲಿ ಬೆಳ್ಳಿ ಪದಕ ಪಡೆದರು. ಜೂನಿಯರ್ ವಿಭಾಗದಲ್ಲಿ 9 ನೇ ತರಗತಿಯ ರಕ್ಷಿತ್ ಕಂಚಿನ ಪದಕ ಪಡೆದರು. ಇದರೊಂದಿಗೆ ಕ್ರೀಡಾಪಟುಗಳು ಒಟ್ಟು 27,000 ರೂ.ಗಳ ನಗದು ಬಹುಮಾನವನ್ನು ಗೆದ್ದು ವಿದ್ಯಾಸಂಸ್ಥೆಗೆ ಕೀರ್ತಿ ತಂದಿರುವರು.