Home Blog Page 3

ಮುಂಬಯಿ ಹೊಟೇಲ್ ಉದ್ಯಮಿ ಎಣ್ಣೆಹೊಳೆ ಸಂತೋಷ್ ಶೆಟ್ಟಿ ಕೊ*ಲೆ

0

 

ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ (46)ಯವರನ್ನು ಅದೇ ಹೊಟೇಲ್ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಉತ್ತರ ಪ್ರದೇಶ ಮೂಲದ ಸಿಬ್ಬಂದಿಯೋರ್ವನಿಗೆ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ, ಕತ್ತಿ ಹಿಡಿದುಕೊಂಡು ಬಂದು ಸಂತೋಷ್ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು ಹತ್ಯೆ ಮಾಡಿದ್ದಾನೆ. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕಾರ್ಕಳ ಬಿಜೆಪಿ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತಾ ಸಭೆ

0

ಬಿಜೆಪಿಯ ಸಂಘಟನಾ ಪರ್ವದ ಅಂಗವಾಗಿ ಪಕ್ಷ ಸಂಘಟನೆಯ ವಿವಿಧ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಶಾಸಕರ ಮನೆಯಲ್ಲಿ ವಿಶೇಷ ಸಭೆ ನಡೆಯಿತು.

ಬಿಜೆಪಿ ಪಕ್ಷ ಸಂಘಟನೆ ಮತ್ತು ವಿವಿಧ ಶಕ್ತಿಕೇಂದ್ರ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯತ್ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ ಮಾನ್ಯ ಶಾಸಕರು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ಎಡಪಂಥೀಯರು ವ್ಯವಸ್ಥಿತ ಷಡ್ಯಂತ್ರ ರೂಪಿಸಿ ದಾಳಿ ನಡೆಸುತ್ತಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು, ಹಾಗೂ ನಮ್ಮ ಸಮಾಜದಲ್ಲಿ ಕೂಡ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಕ್ಷೇತ್ರಾಧ್ಯಕ್ಷ ನವೀನ್ ನಾಯಕ ಎಲ್ಲಾ ಶಕ್ತಿ ಕೇಂದ್ರ ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರುಗಳಿಂದ ಪ್ರಸ್ತುತ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ಪಡೆದು ಮುಂದಿನ ಯೋಜನೆಗಳು ಹಾಗೂ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಶಾಸಕ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಮಹಾವೀರ್ ಹೆಗ್ಡೆ, ಜಯರಾಮ್ ಸಾಲಿಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪಕ್ಷದ ಪ್ರಮುಖರಾದ ಮಣಿರಾಜ್ ಶೆಟ್ಟಿ, ರವೀಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ ಶಿವಪುರ, ಕಾರ್ಯದರ್ಶಿಗಳಾದ ಪ್ರವೀಣ್ ಸಾಲಿಯಾನ್, ಕರುಣಾಕರ ಕೋಟ್ಯಾನ್, ಮಂಡಲ ಪದಾಧಿಕಾರಿಗಳು, ಶಕಿಕೇಂದ್ರ ಅಧ್ಯಕ್ಷರುಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಪ್ರಕೋಷ್ಠಾಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಗ್ರಾಮಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಂಡಲ ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನ ಆಭರಣಗಳ ದರದಲ್ಲಿ ವಿಶೇಷ ರಿಯಾಯಿತಿ

0

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕಾರ್ಕಳದ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಆಭರಣಗಳು ವಿಶೇಷ ರಿಯಾಯಿತಿ ದರದಲ್ಲಿ ದೊರೆಯಲಿದೆ.

ಪ್ರತಿ ಗ್ರಾಂ ಬಂಗಾರಕ್ಕೆ ರೂ. 400 ರ ತನಕ ಹಾಗೂ ಪ್ರತಿ ಕ್ಯಾರೆಟ್ ಡೈಮಂಡ್ ಗೆ 5,ಸಾವಿರ ರೂ. ರಿಯಾಯಿತಿ ದೊರೆಯಲಿದೆ. ಬೆಳ್ಳಿಯ ಕಲಾಕೃತಿಗಳು ಪ್ರತಿ ಕೆಜಿಗೆ 3 ಸಾವಿರ ರಿಯಾಯಿತಿ ದರದಲ್ಲಿ ದೊರೆಯಲಿದ್ದು ಬೆಳ್ಳಿಯ ಆಭರಣಗಳು 10% ರಿಯಾಯಿತಿ ದರದಲ್ಲಿ ದೊರೆಯಲಿದೆ. ಈ ಆಫರ್ಸ್ ಆ.31 ವರೆಗೆ ಅನ್ವಯಿಸಲಿದ್ದು, ಕಾರ್ಕಳದ ಜೋಡು ರಸ್ತೆಯಲ್ಲಿರುವ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ಗೆ ಭೇಟಿ ನೀಡಿ ಈ ಕೊಡುಗೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7204429777 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿ

0

 

ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟದಲ್ಲಿ ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಕುತ್ತಿಗೆಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿ ಅದನ್ನು ಕೈಯಲ್ಲಿ ಪಡೆದುಕೊಂಡಿದ್ದಾರೆ. ಈ ಕುರಿತ ವೀಡಿಯೊ ವೈರಲ್ ಆಗಿದೆ.

ಶೂಟಿಂಗ್ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಣ್ಣಾಮಲೈ ವಿಜೇತರಿಗೆ ಪದಕ ಹಾಕುತ್ತಿದ್ದರು. ಆದರೆ ಅಣ್ಣಾಮಲೈ ಪದಕ ಹಾಕಲು ಮುಂದಾದಾಗ ಸೂರ್ಯ ರಾಜ ಬಾಲು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಸಂಶೋಧಕಿ ಜೀನ್ ಜೋಸೆಫ್ ರಾಜ್ಯಪಾಲ ಆರ್.ಎನ್. ರವಿಯವರಿಂದ ಡಾಕ್ಟರೇಟ್ ಪದವಿಯ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ.

0

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ.

ಸಾಕ್ಷಿದಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಹೇಳಿದ್ದ.

ಈ ಕಾರಣಕ್ಕೆ ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಮತ್ತು ಮೊಬೈಲ್‌ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ.

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ

0

 

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು.

‘ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣ ಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ.’ ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಆದರ್ಶ ಎಂ.ಕೆ. ಮತ್ತು ಉಪನ್ಯಾಸಕ ವರ್ಗ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ಅನುರಾಧಾ ಕುರುಂಜಿಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಕೃತ ಭಾಷಾ ಉಪನ್ಯಾಸಕಿಯಾದ ಡಾ. ಸೌಂದರ್ಯ ಲಕ್ಷ್ಮೀ ನಿರ್ವಹಿಸಿದರು.

ನಿಟ್ಟೆ: ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನ

0

 

ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್ & ರೋವರ್ಸ್ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ ಪೋಲಿಸ್ ಠಾಣೆಯ ಸಹಕಾರದೊಂದಿಗೆ ‘ನಶಾ ಮುಕ್ತ ಭಾರತ’ ಅಭಿಯಾನವನ್ನು ಆ. 23 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರಯುಕ್ತ ಬೀದಿ ನಾಟಕ ಮತ್ತು ಜಾಥಾ ಆಯೋಜನೆಯ ಮೂಲಕ ಸಾರ್ವಜನಿಕ ಜಾಗೃತಿಯನ್ನು ಮೂಡಿಸಲಾಯಿತು.

ನಶಾ ಮುಕ್ತ ಭಾರತ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮಕ್ಕೆ ಕಾರ್ಕಳ ಪೋಲೀಸ್ ಠಾಣಾ ಅಧಿಕಾರಿ ಪ್ರಸನ್ನ ಎಂ.ಎಸ್. ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನೆರೆದ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಸನ್ನ ಎಂ.ಎಸ್ ನಶಾ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಜವಬ್ಧಾರಿ ಹೆಚ್ಚಿದೆ, ಭಾರತದಲ್ಲಿ ದಾಖಲಾಗುವ ಮಾದಕ ವ್ಯಸನ ದೂರುಗಳಲ್ಲಿ ವಿದ್ಯಾರ್ಥಿಗಳ ಸಮೂಹ ದೊಡ್ಡದು. ಹಾಗಾಗಿ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದೇ ನಶಾ ಮುಕ್ತ ಭಾರತ ನಿರ್ಮಾಣದ ಮೊದಲ ಮೆಟ್ಟಿಲು ಎಂದು ತಿಳಿಸದರು.

ವಿದ್ಯಾರ್ಥಿ ಶಕ್ತಿ ದೇಶದ ಶಕ್ತಿಆಗಬೇಕೆ ಹೊರತು ಅದು ದೇಶದ ದೌರ್ಬಲ್ಯವಾಗಬಾರದು. ಹಾಗಾಗಿ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗದೆ ಉತ್ತಮ ಸಮಾಜದ ಪಾಲುದಾರರಾಗಬೇಕು ಎಂದು ತಿಳಿಸಿದರು. ಇದರ ಜೊತೆಗೆ ಮಾದಕ ದ್ರವ್ಯ ವ್ಯಸನ ಅಪರಾಧಕ್ಕೆ ಇರುವ ಕಾನೂನು ಮತ್ತು ಶಿಕ್ಷೆಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸುಮನ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞೆಯನ್ನು ಬೋಧಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಕಾರ್ಕಳ ಪೋಲಿಸ್ ಠಾಣಾ ಅಧಿಕಾರಿ ಪ್ರಸನ್ನ ಎಂ.ಎಸ್ ಅವರೊಂದಿಗೆ ಸಾರ್ವಜನಿಕ ಜಾಗೃತಿಗಾಗಿ ಕಾಲೇಜಿನಿಂದ ನಿಟ್ಟೆ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆ ಜಾಥವನ್ನು ನಡೆಸಿದರು.

ಸಭಾ ಕಾರ್ಯಕ್ರಮದಲ್ಲಿ ಕಾರ್ಕಳ ಪೋಲಿಸ್ ಠಾಣೆಯ ರುದ್ರೇಶ್, ರೇಂಜರ್ಸ್ & ರೋವರ್ಸ್ ಘಟಕದ ಸಂಯೋಜಕರಾದ ಪ್ರಕಾಶ್, ಯೂತ್ ರೆಡ್ ಕ್ರಾಸ್ ಸೊಸೈಟಿ ಸಂಯೋಜಕಿ ರಶ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನ ಅಧಿಕಾರಿ ನಮಿರಾಜ್ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಮಧುರಾ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಕಳ: ಬೆಳ್ಳಂಬೆಳಿಗ್ಗೆ ಕುಂಟಲ್ಪಾಡಿಯಲ್ಲಿ ವ್ಯಕ್ತಿಯೋರ್ವನ ಭೀಕರ ಹತ್ಯೆ

0

 

ಕುಂಟಲ್ಪಾಡಿಯ ಆನಂದ್ ಟ್ರೇಡರ್ಸ್ ಮುಂಭಾಗ ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಕುಮಾರ್ ಎಂದು ಗುರ್ತಿಸಲಾಗಿದೆ.

ಬೆಳಗಿನ ಜಾವ 3 ಗಂಟೆ ಆಸುಪಾಸಿಗೆ ಘಟನೆ ನಡೆದಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ವ್ಯಕ್ತಿ ಮೂಲತಃ ಮಂಗಳೂರಿನ ಪಡೀಲ್ ನಿವಾಸಿಯಾಗಿದ್ದು, ಕಾರ್ಕಳದ ಎಸ್.ಜೆ.ಆರ್ಕೆಡ್ ನಲ್ಲಿ ವಾಸವಿದ್ದರು. ಇವರು ಬಡ್ಡಿ ವ್ಯವಹಾರ ಮಾಡುತ್ತಿದ್ದರೆಂದು ತಿಳಿದುಬಂದಿದೆ.

ಕ್ರೈಸ್ಟ್ ಕಿಂಗ್ : ಟೇಬಲ್ ಟೆನ್ನಿಸ್‌ನಲ್ಲಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14/17 ರ ವಯೋಮಿತಿಯ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಆರನೇ ತರಗತಿಯ ಡೆಲ್ಸಿಯಾ ಡಿ’ಸೋಜ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಮೂಡುಬಿದಿರೆ: ಡಿವೈಡರ್‌ ಗೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0

ರಾಷ್ಟ್ರೀಯ ಹೆದ್ದಾರಿ 169 ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಯುವಕ ಸಂದೀಪ್‌ ಸಿದ್ದಕಟ್ಟೆ (25) ಎಂದು ತಿಳಿದು ಬಂದಿದೆ. ಕಾರು ಡಿವೈಡರ್‌ ಗೆ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ನಿವಾಸಿ ಸುಮಿತ್‌ ಮೃತಪಟ್ಟಿದ್ದರು. ಜೊತೆಗಿದ್ದ ಸಂದೀಪ್‌ ಸಹಿತ ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂದೀಪ್‌ ಭಾನುವಾರ ಮದ್ಯಾಹ್ನದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.