Home Blog Page 7

ಮುಖ್ಯ ನ್ಯಾಯಮೂರ್ತಿಗಳ ಮೇಲಿನ ದಾಳಿ ಯತ್ನವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿರುವುದು ಇದು ಬಿಜೆಪಿ ಮನಸ್ಥಿತಿಯ ಪ್ರತಿಫಲನವಾಗಿದೆ : ಪ್ರದೀಪ್ ಬೇಲಾಡಿ

0

 

ದೇಶದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿಯೇ ಶೂ ಎಸೆಯುವ ಪ್ರಯತ್ನ ನಡೆದಿರುವುದು ಖಂಡನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.

ಈ ಘಟನೆಯು ನ್ಯಾಯಾಂಗದ ಮೇಲಿನ ಕೋಮುವಾದಿ ಶಕ್ತಿಗಳ ದಾಳಿಯಾಗಿದೆ, ಸಾರ್ವಬೌಮ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಈ ಘಟನೆಯು ಕಪ್ಪು ಚುಕ್ಕೆಯಾಗಿದೆ, ಭಾರತದ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ಶೂ ಎಸೆತದ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದಿದ್ದಾರೆ.

ಮಾನ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಪ್ರಯತ್ನಿಸಿದವನು ವೃತ್ತಿಯಲ್ಲಿ ವಕೀಲನಾಗಿದ್ದು, ಆತ ಬಿಜೆಪಿ ಪರವಾಗಿರುವ ಸಂಘಟನೆಗಳ ಸದಸ್ಯನಾಗಿದ್ದಾನೆ ಎಂದು ತಿಳಿದು ಬಂದಿದೆ, ಬಿಜೆಪಿ ಪರವಾಗಿರುವ ವೈಚಾರಿಕತೆಯನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಬಿಜೆಪಿ ಕೇಂದ್ರದಲ್ಲಿ ಆಡಳಿತಕ್ಕೆ ಬಂದಾಗಿನಿಂದಲೂ ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ, ಬಿಜೆಪಿ ಪರವಾಗಿರುವ ಸಂಘಟನೆಗಳ ಅಸಹಿಷ್ಣುತೆ ಮಿತಿ ಮೀರಿದ್ದು, ಇದಕ್ಕೆ ಕಡಿವಾಣ ಹಾಕಬೇಕಿರುವ ಕೇಂದ್ರ ಸರ್ಕಾರವೇ ಇದನ್ನು ಪೋಷಿಸುತ್ತಿರುವಂತಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಘಟನೆಯನ್ನು ವಿರೋದ ಪಕ್ಷಗಳು ಖಂಡಿಸಿವೆ, ಆದರೆ ಆಡಳಿತ ಪಕ್ಷ ಬಿಜೆಪಿಯಾಗಲಿ, ಅದರ ಸಂಸದರು, ಕೇಂದ್ರ ಮಂತ್ರಿಗಳಾಗಲಿ, ಶಾಸಕರಾಗಲಿ ಖಂಡಿಸದೇ ಮೌನವಾಗಿರುವುದರ ಅರ್ಥ ಮೌನಂ ಸಮ್ಮತಿ ಲಕ್ಷಣಮ್ ಆಗಿದೆಯೇ ಎಂದವರು ಪ್ರಶ್ನೆ ಮಾಡಿದ್ದಾರೆ.

ಮರದಿಂದ ಹಣ್ಣು ಬಿದ್ದರೂ ಮಾದ್ಯಮ ಹೇಳಿಕೆ ಬಿಡುಗಡೆ ಮಾಡುವ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಮುಖ್ಯ ನ್ಯಾಯಾದೀಶರ ಮೇಲಿನ ಶೂ ದಾಳಿಯ ಘಟನೆಯನ್ನು ಖಂಡಿಸದೇ ಇರುವುದು ಅವರ ಮನಸ್ಥಿತಿಯನ್ನು ಸೂಚಿಸುತ್ತದೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಈ ಘಟನೆಯನ್ನು ಸಂಭ್ರಮಿಸುತ್ತಿರುವುದು ಇದು ಬಿಜೆಪಿಯ ಮನಸ್ಥಿಯ ಪ್ರತಿಫಲನವಾಗಿದೆ ಎಂದು ಪ್ರದೀಪ್ ಬೇಲಾಡಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚೇತನಾ ವಿಶೇಷ ಶಾಲೆಯಲ್ಲಿ ಸಿದ್ಧಗೊಳಿಸಿದ ಹಣತೆಗಳು ಮಾರಾಟಕ್ಕೆ ಬಿಡುಗಡೆ

0

ಈ ಬಾರಿಯ ದೀಪಾವಳಿಗೆ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ಬಣ್ಣ ಬಣ್ಣದ ಹಾಗೂ ವಿವಿಧ ಆಕಾರಗಳೊಂದಿಗೆ ಸಿದ್ಧಗೊಳಿಸಿದ ಮಣ್ಣಿನ ಹಣತೆಗಳನ್ನು ಶಾಲಾ ಶಾರದ ಪೂಜಾ ಕಾರ್ಯಕ್ರಮದಂದು ನಮ್ಮ ಶಾಲಾ ದಾನಿಗಳು ಹಾಗೂ ಹಿತೈಷಿಗಳು ಆದ ಕಾರ್ಕಳ ಕಮಲಾಕ್ಷ ಕಾಮತ್, ಚಾರ್ಟಡ್ ಅಕೌಟೆಂಟ್ ಕಾರ್ಕಳ ಇವರು ದೀಪ ಬೆಳಗಿಸಿ, ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಇದು ಒಳ್ಳೆಯ ಕಾರ್ಯ ಯೋಜನೆ ಎಂದು ಶ್ಲಾಘಿಸಿದರು.

ಸಿದ್ಧಗೊಳಿಸಿದ ಮಣ್ಣಿನ ಬಣ್ಣದ ಹಣತೆಗಳನ್ನು ಕಳೆದ 3 ವರ್ಷದಿಂದ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳು ತಯಾರಿಸುತ್ತಿದ್ದು, ಕಳೆದ 2 ವರ್ಷವೂ ದೀಪಾವಳಿ ಹಬ್ಬ ಪ್ರಾರಂಭವಾಗುವ ಮೊದಲೇ ರಾಜ್ಯದ ಮೂಲೆ ಮೂಲೆಗಳಿಗೆ ಎಲ್ಲಾ ಹಣತೆಗಳು ಮಾರಾಟವಾಗಿರುವುದು ವಿಶೇಷ. ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಬದುಕಲು ನಡೆಸುವ ಪ್ರಯತ್ನದಲ್ಲಿ ಇದೀಗ ಕೇವಲ ಹತ್ತು ರೂಪಾಯಿಂದ ಪ್ರಾರಂಭಗೊಳ್ಳುವ ಈ ಬಣ್ಣದ ಹಣತೆಗಳನ್ನು ಶಾಲೆಗೆ ಭೇಟಿ ನೀಡಿ ನಿಮ್ಮ ಆಯ್ಕೆಯ ಹಣತೆಗಳನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ವಿನಂತಿಸಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ. ಗಣಪತಿ ಪೈ, ಕಾರ್ಯದರ್ಶಿ ರಘುನಾಥ್ ಶೆಟ್ಟಿ, ಕೋಶಾಧಿಕಾರಿ ವಿಜಯ್ ಕುಮಾರ್ ಅತಿಥಿ ಗಣ್ಯರು, ಶಾಲಾ ಹಿತೈಷಿಗಳು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9480531469, 7619255170

ಅಹಿಂಸೆಯಿಂದ ಸಾರ್ಥಕ ಬದುಕು ಸಾಧ್ಯ: ಬಾಲಕೃಷ್ಣ ರಾವ್

0

 

ಅಹಿಂಸೆ ಮತ್ತು ಸತ್ಯಪಾಲನೆಯಿ೦ದ ಬದುಕಿನ ಸಾರ್ಥಕತೆ ಸಾಧ್ಯ ಎ೦ದು ಪ್ರಿನ್ಸಿಪಾಲ್ ಕೆ.ಬಾಲಕೃಷ್ಣ ರಾವ್ ಅಭಿಪ್ರಾಯ ಪಟ್ಟರು. ಅವರು ಕೆ.ಎಮ್.ಇ.ಎಸ್. ವಿದ್ಯಾ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆತರಣೆಯ ಸಂದರ್ಭದಲ್ಲಿ ಮಹಾತ್ಮ ಗಾ೦ಧೀಜಿಯವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಅರ್ಪಿಸುತ್ತಾ ಮಾತನಾಡಿದರು. ಗಾಂಧಿಜಿಯರ ತತ್ವಗಳು ಸರ್ವಕಾಲೀಕ. ಗಾ೦ಧೀಜಿಯವರ ಆದರ್ಶ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಪ್ರಪ೦ಚದಾದ್ಯ೦ತ ಅವರ ಅನುಯಾಯಿಗಳಿದ್ದಾರೆ. ಕಾನೂನು ಪದವಿ ಪಡೆದು ಭಾರತೀಯ ಪ್ರಜೆಗಳಲ್ಲಿ ಸ್ವಾತಂತ್ಯದ ಕಿಡಿಯನ್ನು ಹೊತ್ತಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದರು.

ಅಸ್ಪಶ್ರತೆಯನ್ನು ನಿವಾರಿಸುವ ಪಣ ತೊಟ್ಟು ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಂಡರು.” ಎಂದು ತಮ್ಮ ಭಾಷಣದಲ್ಲಿ ನುಡಿದರು.

ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಲೊಲಿಟ ಡಿ’ಸಿಲ್ವ ಸ್ವಾಗತಿಸಿದರು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ನಿವೇದಿತ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಉಪನ್ಯಾಸಕರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಸ್ಥೆಯ ಆವರಣವನ್ನು ಸ್ವಚ್ಛಗೊಳಿಸಿ ಶ್ರಮದಾನ ಮಾಡಿದರು.

ಲಯನ್ಸ್ ಕ್ಲಬ್ ಕಾರ್ಕಳ ಸೆಂಟ್ರಲ್ ಉದ್ಘಾಟನಾ ಹಾಗೂ ಪದಗ್ರಹಣ ಸಮಾರಂಭ

0

 

ಲಯನ್ಸ್ ಕ್ಲಬ್ ಕಾರ್ಕಳ ಸೆಂಟ್ರಲ್ ಇದರ ಉದ್ಘಾಟನಾ ಹಾಗೂ ಪದಗ್ರಹಣ ಸಮಾರಂಭ ಅ.5 ರಂದು ಕಾರ್ಕಳ ಇನ್ ಹೋಟೆಲ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ವಾಯ್ಸ್ ಆಫ್ ಆರಾದನ ಸಂಸ್ಥೆಯ ಹೆಜ್ಜೆ ಗೆಜ್ಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದ.ಕ. ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಪದ್ಮಪ್ರಸಾದ್ ಜೈನ್ ರವರು ದೀಪ ಬೆಳಗಿಸಿ ಚಾಲನೆ ನೀಡಿ ಶುಭಹಾರೈಸಿದರು.

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ Ln. ಗಿರೀಶ್ ರಾವ್, ವಾಯ್ಸ್ ಆಫ್ ಆರಾದನ ಸಂಸ್ಥೆಯ ನಿರ್ದೇಶಕಿಯರಾದ ಪದ್ಮಶ್ರೀ ಭಟ್, Ln. ವಲೇರಿಯನ್ ಹಾಗೂ ಕಾರ್ಕಳ ಲಯನ್ಸ್ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷರಾದ Ln. ಅರುಣ್ ಶೆಟ್ಟಿಗಾರ್, ಕಾರ್ಯದರ್ಶಿ ದತ್ತಾತ್ರೇಯ, ಕೋಶಾಧಿಕಾರಿ Ln. ಮಂಜುನಾಥ್ ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವ ನ್ಯಾಯವಾದಿ ಸಾವು; ಇನ್ನೋರ್ವ ನ್ಯಾಯವಾದಿ ವಶಕ್ಕೆ

0

 

ಯುವ ನ್ಯಾಯವಾದಿ, ಸಿಪಿಎಂ ಕುಂಬಳೆ ಸ್ಥಳೀಯ ಸಮಿತಿಯ ಸದಸ್ಯೆಯಾಗಿದ್ದ ಬತ್ತೇರಿ ನಿವಾಸಿ ರಂಜಿತಾ ಕುಮಾರಿ ಸೆ.30 ರಂದು ತನ್ನ ಕಚೇರಿಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ನ್ಯಾಯವಾದಿಯೋರ್ವನನ್ನು ತಿರುವನಂತಪುರದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂತಾರ ಟಿಕೆಟ್ ಸಿಗದೇ ಈಜಲು ಹೋಗಿ ಇಬ್ಬರು ಯುವಕರ ಸಾವು

0

 

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಚಿತ್ರ ಮಂದಿರದಲ್ಲಿ ಇತ್ತೀಚಿಗೆ ತೆರೆಕಂಡ ಸಿನೆಮಾ ಕಾಂತಾರ ವೀಕ್ಷಣೆಗೆ ತೆರಳಿದ್ದ ನಾಲ್ವರು ಯುವಕರು ಟಿಕೆಟ್ ಸಿಗದೇ ಇದ್ದುದರಿಂದ ಮಸ್ಕಿಯ ಮುಖ್ಯ ಕಾಲುವೆಗೆ ಈಜಲು ತೆರಳಿದ್ದು, ಆ ವೇಳೆ ಇಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.

ಪಟ್ಟಣದ ವೆಂಕಟೇಶ ಬಸವರಾಜ್ ಮುಚಿಗೇರ್ ಮತ್ತು ಯಲ್ಲಾಲಿಂಗ ಈರಣ್ಣ ಮೃತಪಟ್ಟವರು. ಶನಿವಾರ ಮದ್ಯಾಹ್ನ ಸಿನೆಮಾ ನೋಡಲು ತೆರಳಿದ್ದ ಯುವಕರಿಗೆ ಸಿಗದೇ ಇರುವುದರಿಂದ ಊಟ ಮಾಡಲು ತೆರಳಿದ್ದು, ಪಕ್ಕದಲ್ಲಿದ್ದ ಕಾಲುವೆಗೆ ಈಜಲು ಇಳಿದಿದ್ದರು. ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಹೋಗಿದ್ದು, ಕವಿತಾಳ ಪಟ್ಟಣದ ಹತ್ತಿರದ ವಿತರಣೆ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಆರೋಪಿಯ ಜಾಮೀನು ಅರ್ಜಿ ವಜಾ

0

 

ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ, ಜಾಮೀನು ಕೋರಿ ಮೂರನೇ ಆರೋಪಿ ಮಂಜುನಾಥ್/ಹರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಆತ ಅನಾರೋಗ್ಯದ ಕಾರಣ ನೀಡಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರರ ಪರ ಸರ್ಕಾರಿ ಅಭಿಯೋಜಕರು ವಾದಿಸಿ, ಆರೋಪಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದರು. ನ್ಯಾಯಾಧೀಶರು ಅವರ ವಾದವನ್ನು ಪುರಸ್ಕರಿಸಿದ್ದಾರೆ.

ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

0

 

ಸೇವಾ ಪಾಕ್ಷಿಕದ ಅಂಗವಾಗಿ ಇಂದು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಶಾಸಕರಾದ ವಿ. ಸುನೀಲ್ ಕುಮಾರ್ ಭಾರತಾಂಬೆಗೆ ಪುಷ್ಪಾರ್ಚನೆ ಗೈದು, ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಕಾರ್ಕಳ ಮಂಡಲ ಬಿಜೆಪಿಯ ಅಧ್ಯಕ್ಷರಾದ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ್ ಹೆಗ್ಡೆ, ಕೆ .ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಚಿತಾ ಶೆಣೈ ಪಾಲ್ಗೊಂಡಿದ್ದರು.

ಈ ಶಿಬಿರದಲ್ಲಿ 250 ಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಿಸಿಕೊಂಡರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಜೊತೆಗೆ ಕಣ್ಣಿನ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚರ್ಮರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು (ENT) ಹಾಗೂ ಇಸಿಜಿ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ಸೇವೆ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ವಿ. ಸುನೀಲ್ ಕುಮಾರ್, “ಸೇವಾ ಪಕ್ಷೀಕೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಸೇವೆಗೆ ತೊಡಗಿರುವುದು ಪ್ರಶಂಸನೀಯ. ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ್ ಡಿ. ಬಂಗೇರ, ಮಿಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ರಜತ್ ಮುಡಾರು, ಮೂಡಾರು ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಸಾಲಿಯಾನ್, ಮಿಯಾರು, ಗ್ರಾಮ ಸಮಿತಿ ಅಧ್ಯಕ್ಷರು ಶರಣ್ ಕೆ ಶೆಟ್ಟಿ, ನಲ್ಲೂರು ಗ್ರಾಮ ಸಮಿತಿ ಅಧ್ಯಕ್ಷರಾದ ಪವನ್ ಜೈನ್, ಮಾಳ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.

oplus_2
oplus_2

ಹೆಬ್ರಿ ಆರಕ್ಷಕ ಠಾಣೆಗೆ ಲ್ಯಾಪ್ಟಾಪ್ ಕೊಡುಗೆ : ಎಸ್.ಆರ್. ಹೆಬ್ರಿ

0

 

ಹೆಬ್ರಿಯ ಆರಕ್ಷಕ ಠಾಣೆಗೆ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಲ್ಯಾಪ್ಟಾಪನ್ನು ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಅವರ ಠಾಣೆಯ ಉಪನಿರೀಕ್ಷಕರಾದ ರವಿ ಬಿ.ಕೆ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ.ಎನ್‌.ಶೆಟ್ಟಿ, ಹೆಬ್ರಿಯ ಖ್ಯಾತ ಉದ್ಯಮಿ ಸತೀಶ್ ಪೈ, ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಮಹಾಂತೇಶ್ ಜಾಬಗೌಡ ಮತ್ತು ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಗಣತಿಗೆ ತೆರಳಿದ್ದ ಶಿಕ್ಷಕಿ ಸಹಿತ 7 ಮಂದಿಗೆ ನಾಯಿ ದಾಳಿ

0

 

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಸಹಿತ 7 ಮಂದಿಗೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ ಘಟನೆ ಹಾಸನದ ಬೇಲೂರಿನಲ್ಲಿ ನಡೆದಿದೆ.

ದಾಳಿ ನಡೆಸಿದ ನಾಯಿಗಳ ಪೈಕಿ 2 ನಾಯಿಗಳನ್ನು ಸ್ಥಳೀಯರೇ ಹೊಡೆದು ಕೊಂದಿದ್ದಾರೆ. ಬೇಲೂರಿನ ಜೈ ಭೀಮ್ ನಗರದ ನವೀನ್ ಅವರ ಮನೆಯಲ್ಲಿ ಗಣತಿಗೆ ಹೋಗಿದ್ದಾಗ ಬೀದಿಯಲ್ಲಿದ್ದ 10ಕ್ಕೂ ಹೆಚ್ಚು ಬೀದಿನಾಯಿಗಳು ಶಿಕ್ಷಕಿ, ಅವರ ಪತಿ ಮೇಲೆ ದಾಳಿ ಮಾಡಿವೆ. ರಕ್ಷಣೆಗೆ ಮುಂದಾದವರ ಮೇಲೆಯೂ ದಾಳಿ ಮಾಡಿವೆ. ರಕ್ಷಣೆಗೆ ಮುಂದಾದವರ ಮೇಲೂ ದಾಳಿ ಮಾಡಿವೆ. ಅಲ್ಲಿಯೇ ಇದ್ದ 5 ವರ್ಷದ ಕಿಶನ್ ಎಂಬಾ ಬಾಲಕನ ಮೇಲೂ ದಾಳಿ ಮಾಡಿದ್ದೂ, ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಅವರನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕರು ಬಂದು ಗಾಯಾಳುಗಳನ್ನು ವಿಚಾರಿಸಿ ಸಾಂತ್ವನ ತಿಳಿಸಿದರು.