ಅ. 10 ರಿಂದ 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ ಪಿ. ಶೆಟ್ಟಿ ಹಾಗೂ ಡಾ.ಎನ್.ಎಸ್.ಎಎಂ ಪ್ರಥಮ ದರ್ಜೆ ಕಾಲೇಜಿನ ನಂದಿನಿ ಆಯ್ಕೆಯಾಗಿದ್ದಾರೆ.
ಈ ಸ್ಪರ್ಧೆಯು ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಸ್ಪರ್ಧೆ 2025-2026 ರ ಅರ್ಹತಾ ಸ್ಪರ್ಧೆಯಾಗಿಯೂ ಕಾರ್ಯನಿರ್ವಹಿಸುತ್ತದೆ.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಅಕ್ಟೋಬರ್ 4 ರಂದು ಸಾಸ್ತಾನದ ಕೋಡಿ ಬೀಚ್ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತು.
ಈ ಉಪಕ್ರಮವು 114 ಎನ್ಎಸ್ಎಸ್ ಸ್ವಯಂಸೇವಕರ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಅವರು ಕರಾವಳಿಯ ಸೌಂದರ್ಯವನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸಿದರು.
ಸುಡುವ ಬೆಳಗಿನ ಸೂರ್ಯನಿಂದ ವಿಚಲಿತರಾಗದೆ, ವಿದ್ಯಾರ್ಥಿ ಸ್ವಯಂಸೇವಕರು ಪ್ಲಾಸ್ಟಿಕ್ ಬಾಟಲಿಗಳು, ಹಳೆಯ ಪಾದರಕ್ಷೆಗಳು, ಕಾಗದದ ಕಸ, ಡೈಪರ್ಗಳು ಮತ್ತು ಇತರ ಜೈವಿಕ ವಿಘಟನೀಯವಲ್ಲದ ವಸ್ತುಗಳನ್ನು ಒಳಗೊಂಡಿರುವ 60 ಚೀಲಗಳ ತ್ಯಾಜ್ಯವನ್ನು ಸಂಗ್ರಹಿಸಿದರು.
ಕೋಡಿ ಗ್ರಾಮ ಪಂಚಾಯತ್, ಶೆಟ್ಟಿ ಆಗ್ರೋ ಸೆಂಟರ್, ಐರೋಡಿ ಮತ್ತು ಸಾಸ್ತಾನಾದ ಎನ್ಜಿಒ ಬೇರು ಕೋಸ್ಟ್ ಕ್ಲಿಯರ್ ನ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಾಮೂಹಿಕ ಸೇವಾ ಮನೋಭಾವವನ್ನು ಹೆಚ್ಚಿಸಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತವು ಉದಾರ ಮನೋಭಾವದೊಂದಿಗೆ ಎಲ್ಲಾ ಸ್ವಯಂಸೇವಕರಿಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ವ್ಯವಸ್ಥೆ ಮಾಡಿತು.
ಕಾರ್ಕಳ:ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಅಕ್ಟೋಬರ್ 4 ರಂದು ಸಾಸ್ತಾನದ ಕೋಡಿ ಬೀಚ್ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತು.
ಈ ಉಪಕ್ರಮವು 114 ಎನ್ಎಸ್ಎಸ್ ಸ್ವಯಂಸೇವಕರ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಅವರು ಕರಾವಳಿಯ ಸೌಂದರ್ಯವನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸಿದರು.
ಸುಡುವ ಬೆಳಗಿನ ಸೂರ್ಯನಿಂದ ವಿಚಲಿತರಾಗದೆ, ವಿದ್ಯಾರ್ಥಿ ಸ್ವಯಂಸೇವಕರು ಪ್ಲಾಸ್ಟಿಕ್ ಬಾಟಲಿಗಳು, ಹಳೆಯ ಪಾದರಕ್ಷೆಗಳು, ಕಾಗದದ ಕಸ, ಡೈಪರ್ಗಳು ಮತ್ತು ಇತರ ಜೈವಿಕ ವಿಘಟನೀಯವಲ್ಲದ ವಸ್ತುಗಳನ್ನು ಒಳಗೊಂಡಿರುವ 60 ಚೀಲಗಳ ತ್ಯಾಜ್ಯವನ್ನು ಸಂಗ್ರಹಿಸಿದರು.
ಕೋಡಿ ಗ್ರಾಮ ಪಂಚಾಯತ್, ಶೆಟ್ಟಿ ಆಗ್ರೋ ಸೆಂಟರ್, ಐರೋಡಿ ಮತ್ತು ಸಾಸ್ತಾನಾದ ಎನ್ಜಿಒ ಬೇರು ಕೋಸ್ಟ್ ಕ್ಲಿಯರ್ ನ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಾಮೂಹಿಕ ಸೇವಾ ಮನೋಭಾವವನ್ನು ಹೆಚ್ಚಿಸಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತವು ಉದಾರ ಮನೋಭಾವದೊಂದಿಗೆ ಎಲ್ಲಾ ಸ್ವಯಂಸೇವಕರಿಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ವ್ಯವಸ್ಥೆ ಮಾಡಿತು.
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ವೇದಿಕೆ ಎನ್. ಎಸ್. ಎಸ್ – ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅತಿಥಿಗಳ ಸಂದೇಶ
ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳದಲ್ಲಿ ಅ 07 ರಂದು ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಾರುತಿ, ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಇವರು ಮಾತನಾಡಿ ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು.
ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು.
ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ರವರು ‘ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ’ ಎಂದರು.
ಉದ್ಯಮಿ ವಿಜಯ್ ಶೆಟ್ಟಿ ರವರು ಮಾತನಾಡುತ್ತಾ ‘ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ’ ಎಂದು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ’ ಎಂದರು.
ನಂದಿನಿ ಶೆಟ್ಟಿ, ನ್ಯಾಯವಾದಿ ಮತ್ತು ನೋಟರಿ, ಕಾರ್ಕಳ ಇವರು ‘ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.
ವರ್ಮ ಅಜ್ರಿ, ವಿಶ್ರಾಂತ ಪ್ರಾಂಶುಪಾಲರು, ಎಂ.ಪಿ.ಎಂ ಕಾಲೇಜು, ಕಾರ್ಕಳ ಇವರು ‘ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು’ ಎಂದು ಹೇಳಿದರು.
ಅನ್ನಪೂರ್ಣ ಕಾಮತ್, ಪ್ರಾಂಶುಪಾಲರು, ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇವರು ಎನ್.ಎಸ್.ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿ, ವಂದಿಸುತ್ತಾ ‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್.ಎಸ್.ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ’ ಎಂದರು.
ಪೌರ ಕಾರ್ಮಿಕರಿಗೆ ಸನ್ಮಾನ
ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್.ಎಸ್.ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷರ್ 7 ದಿನಗಳ ಎನ್.ಎಸ್.ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು. ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ದ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ ರವರು ಗೌರವ ಉಪಸ್ಥಿತಿ ವಹಿಸಿದ್ದರು.
ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣ ವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸ್ ತಂಡ ಯಶಸ್ವಿಯಾಗಿದೆ. 2012 ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಪೋಷಕರ ವಶಕ್ಕೆ ನೀಡಲಾಗಿದೆ.
13ವರ್ಷಗಳ ಹಿಂದೆ ಮುಂಡ್ಕೂರು ಪ್ರಭಾಕರ ಪ್ರಭು ಎಂಬವರ ಮಗ ಅನಂತ ಕೃಷ್ಣ ಪ್ರಭು(16) ಎಂಬಾತ ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಅನಂತ ಕೃಷ್ಣ ಪ್ರಭು, ಮನೆಯವರಿಗೆ ಮುಖ ತೋರಿಸಲು ಸಾಧ್ಯವಾಗದೆ ಮತ್ತು ಮನೆಯವರಿಗೆ ಈ ವಿಚಾರ ತಿಳಿಯಬಾರದು ಎಂಬ ಕಾರಣಕ್ಕೆ ಊರು ಬಿಟ್ಟು ನಾಪತ್ತೆಯಾಗಿದ್ದನು.
ಪ್ರಭಾಕರ ಪ್ರಭು ಅವರ ಒಬ್ಬನೇ ಮಗನಾಗಿರುವ ಅನಂತಕೃಷ್ಣ ಪ್ರಭು ಗಾಗಿ ಮನೆಯವರು ಹಲವು ಕಡೆ ಹುಡುಕಾಟ ನಡೆಸಿದರು. ಯಾವುದೇ ಸುಳಿವು ಸಿಗದೇ ಇದ್ದಾಗ ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಅನಂತ ಕೃಷ್ಣ ಪ್ರಭು ಪತ್ತೆಯಾಗಿರಲಿಲ್ಲ.
ಮನೆ ಬಿಟ್ಟು ಹೋದ ಅನಂತಕೃಷ್ಣ ಪ್ರಭು, ಬಳಿಕ ಮೈಸೂರು, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಕಡೆ ಕೆಲಸ ಮಾಡಿ ಸಾಕಷ್ಟು ಕಷ್ಟ ಅನುಭವಿಸಿದನು.
ಬಳಿಕ ಹಾಸನದ ಸಕಲೇಶಪುರದ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡನು. ಅಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದ ಈತನಿಗೆ ಕಾರ್ಖಾನೆ ಮಾಲಕರು ವಿದ್ಯಾಭ್ಯಾಸ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಿದರು. ಅದರಂತೆ ಬಹಳಷ್ಟು ಶ್ರಮಪಟ್ಟು ಉತ್ತಮ ಶಿಕ್ಷಣ ಪಡೆದ ಅನಂತಕೃಷ್ಣ ಪ್ರಭು(29), ಪ್ರಸ್ತುತ ಬೆಂಗಳೂರಿನಲ್ಲಿ ಇಂಟಿರಿಯರ್ ಡಿಸೈನರ್ ಆಗಿ ಕಾರ್ಯನಿರ್ವಹಿಸು ತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗಾಗಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಈ ತಂಡ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿತು.
ಕಳೆದ ಎರಡು ತಿಂಗಳಿನಿಂದ ಈ ಪ್ರಕರಣದ ಹಿಂದೆ ಬಿದ್ದ ತಂಡ, ಮುಂಬೈ, ಬೆಂಗಳೂರು ಸೇರಿದಂತೆ ಹಲವು ಕಡೆ ಹುಡುಕಾಟ ನಡೆಸಿತು. ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಖಚಿತ ಮಾಹಿತಿಯಂತೆ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದ ಅನಂತಕೃಷ್ಣನನ್ನು ಪತ್ತೆ ಹಚ್ಚಿತು.
ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕ ಸುದರ್ಶನ್ ದೊಡಮನಿ, ಉಡುಪಿ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕ ಈರಣ್ಣ ಶಿರಗುಂಪಿ, ಸಿಬ್ಬಂದಿ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
.
ಇದು ಸಂಘಟಿತ ಅಪರಾಧ ಚಟುವಟಿಕೆಯಂತೆ ಗೋಚರಿಸುತ್ತದೆ-ಹರ್ಷವರ್ಧನ್ ನಿಟ್ಟೆ
ನಿಟ್ಟೆಯ ಯುವಕ ಅಭಿಲಾಷ್ ಅವರ ಆತ್ಮಹತ್ಯೆ ಅತ್ಯಂತ ದುಃಖಕರ ಹಾಗೂ ಆತಂಕಕಾರಿ. ಅಭಿಲಾಷ್ ತನ್ನ ಸಾವಿನ ಮುನ್ನ 7 ಪುಟಗಳ ಡೆತ್ ನೋಟ್ ಬರೆದಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ, ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಆತ ಅದರಲ್ಲಿ ನಾಲ್ಕು ಜನರನ್ನು ತಮ್ಮ ಸಾವಿಗೆ ಹೊಣೆಗಾರರೆಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾನೆ.
ಅಲ್ಲದೆ, ಸಂಬಂಧಿಸಿದ ದಾಖಲೆಗಳನ್ನು ತಮ್ಮ ಮೊಬೈಲ್ ಫೋನ್ನಲ್ಲಿ ಸಂಗ್ರಹಿಸಿರುವುದಾಗಿ ಬರೆದಿದ್ದಾನೆ. ಈ ವ್ಯಕ್ತಿಗಳು ಅಭಿಲಾಷ್ ಅವರ ಖಾಸಗಿ ಚಿತ್ರಗಳು ಮತ್ತು ವೀಡಿಯೊಗಳ ಮೂಲಕ ಬ್ಲಾಕ್ಮೇಲ್ ಮಾಡಿ, ಹಣಕ್ಕಾಗಿ ಕಿರುಕುಳ ನೀಡಿ, ಕೊಲೆಗೈಯುವ ಬೆದರಿಕೆ ನೀಡಿದ್ದರೆಂಬ ವಿಷಯಗಳು ಸಹ ಬಹಿರಂಗವಾಗಿವೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಇಂತಹ ಪ್ರಕರಣಗಳು ಮುಂದೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ.
ಈ ಘಟನೆ ಸಾಮಾನ್ಯ ಆತ್ಮಹತ್ಯೆಯ ಪ್ರಕರಣವಲ್ಲ. ಇದು ಸಂಘಟಿತ ಅಪರಾಧ ಚಟುವಟಿಕೆಯ ಭಾಗವಾಗಿದ್ದು, ಯುವಕರನ್ನು ಬಲೆಗೆಳೆಯುವ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆ ಎಂದು ಮೇಲ್ನೋಟಕ್ಕೆ ಗೋಚರಿಸುತ್ತದೆ. ಅನೇಕ ಅಮಾಯಕ ಯುವಕರು ಈ ರೀತಿಯ ಕೃತ್ಯಗಳ ಬಲಿಪಶುಗಳಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿ, ಶೀಘ್ರ ಹಾಗೂ ಗಂಭೀರ ತನಿಖೆ ನಡೆಸಿ, ಈ ಘಟನೆಯ ಹಿಂದೆ ಕಾರ್ಯನಿರ್ವಹಿಸುತ್ತಿರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡುತ್ತೇನೆ.
ಈ ಸಂದರ್ಭದಲ್ಲಿ ಇಡೀ ಸಮಾಜ ಅಭಿಲಾಷ್ ಅವರ ಕುಟುಂಬದೊಂದಿಗೆ ಬೆಂಬಲವಾಗಿ ನಿಲ್ಲುತ್ತದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನ್ಯಾಯ ಒದಗಿಸಬೇಕೆಂದು ಉಡುಪಿ ಮತ್ತು ದ. ಕ. ಜಿಲ್ಲೆ ವಿಶ್ವಕರ್ಮ ಒಕ್ಕೂಟ (ರಿ.) ಇದರ ಪ್ರತಿನಿಧಿ,ನಿಟ್ಟೆ ಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ (ರಿ.) ಅಧ್ಯಕ್ಷ ಹರ್ಷವರ್ಧನ್ ನಿಟ್ಟೆ ಒತ್ತಾಯಿಸಿದ್ದಾರೆ.
ಅ. 05 ರಂದು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಆಸುಪಾಸಿನಲ್ಲಿರುವ ಅನೇಕ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ ಹಾಗೂ ಪರಿಸರ ಶುದ್ಧೀಕರಣದ ಜೊತೆಗೆ ಸ್ಥಳೀಯ ಜನರಿಗೆ ಸ್ವಚ್ಛತೆಯ ಮಹತ್ವವನ್ನು ಬೋಧಿಸುವ ಜಾಗೃತಿ ಅಭಿಯಾನವೂ ನಡೆಯಿತು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿಯಾಗಿರುವ ಫೆಲಿಕ್ಸ್ ಜೋಸೆಫ್ ವಾಜ್ ರವರು ಶುಭ ಹಾರೈಸಿದರು. ಕಾರ್ಕಳ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ‘ ಸ್ವಚ್ಛತೆ ಎನ್ನುವುದು ಕೇವಲ ದೈಹಿಕ ಶುದ್ಧತೆಗೆ ಸೀಮಿತವಲ್ಲ. ನಮ್ಮ ಮನಸ್ಸಿನ, ಸಮಾಜದ ಮತ್ತು ಸಂಸ್ಕೃತಿಯ ಶುದ್ಧತೆಯ ಪ್ರತೀಕವೂ ಹೌದು. ಯುವಕರು ಇಂತಹ ಚಟುವಟಿಕೆಗಳ ಮೂಲಕ ಸಾಮಾಜಿಕ ಬದಲಾವಣೆಗೆ ಪ್ರೇರಣೆಯಾಗುತ್ತಾರೆ ‘ ಎಂದು ಹೇಳಿದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿ ಮಾತನಾಡಿ ‘ಸ್ವಚ್ಛತೆಯು ಕೇವಲ ಕಾರ್ಯವಲ್ಲ. ಅದು ಜೀವನಶೈಲಿ ಆಗಬೇಕು. ಯುವಕರು ಇಂತಹ ಸಾಮಾಜಿಕ ಜವಾಬ್ದಾರಿಗಳಲ್ಲಿ ತೊಡಗಿದಾಗ ಸಮಾಜದ ಬೆಳವಣಿಗೆ ಖಚಿತ’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಲ್ಲಿ ಓರ್ವರಾದ ಅಶ್ವತ್ ಎಸ್.ಎಲ್, ಎನ್.ಎಸ್.ಎಸ್ ಶಿಬಿರಾಧಿಕಾರಿ ಉಮೇಶ್, ಉಪನ್ಯಾಸಕ – ಉಪನ್ಯಾಸಕೇತರ ವರ್ಗದವರು, ಸುಮಾರು 150ಕ್ಕಿಂತಲೂ ಹೆಚ್ಚು ವಿದ್ಯಾರ್ಥಿ – ವಿದ್ಯಾರ್ಥಿನಿಯರು ಪಾಲ್ಗೊಂಡು, ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿದರು. ಈ ಸ್ವಚ್ಛತಾ ಆಂದೋಲನಕ್ಕೆ ಕಾರ್ಕಳ ಪುರಸಭೆಯ ಸಂಪೂರ್ಣ ಸಹಕಾರ ದೊರಕಿತು.
ಸಭಾ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಲೋಹಿತ್ ಎಸ್.ಕೆ ರವರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಭಾಗವಹಿಸಿದ ಎಲ್ಲರನ್ನು ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.
ದೇಶದ ರಕ್ಷಣಾ ಕ್ಷೇತ್ರದಲ್ಲಿ ಜಲಸೇನೆಯ ಕೊಡುಗೆ ಗಣನೀಯವಾದದ್ದು. ಸೇನೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮವನ್ನು ಬೆಳೆಸಿ ನಾಯಕತ್ವದ ಗುಣವನ್ನು ಉದ್ದೀಪನಗೊಳಿಸುವ ಎನ್.ಸಿ.ಸಿಯ ಕಾರ್ಯ ಮಹತ್ತರವಾದದ್ದು ಎಂದು ಉಡುಪಿಯ ಎನ್.ಸಿ.ಸಿ ನೇವಲ್ ವಿಭಾಗದ ಕಮಾಂಡರ್ ಅಶ್ವಿನ್ ಎಂ ರಾವ್ ತ್ತಿಳಿಸಿದರು.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಎನ್.ಸಿ.ಸಿ ನೇವಲ್ ಘಟಕವನ್ನು ಸಂಸ್ಥೆಯ ಪ್ರಾಂಶುಪಾಲ ಹಾಗೂ ಎನ್.ಸಿ.ಸಿ ಕ್ಷೇಮಪಾಲನಾಧಿಕಾರಿಗೆ ಎನ್.ಸಿ.ಸಿ. ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು.
ಇದೇ ಸಂದರ್ಭ ಎನ್.ಸಿ.ಸಿಯ ಧ್ವಜದ ಮಹತ್ವವನ್ನು, ಧ್ಯೇಯೋದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಮಾತನಾಡಿ ಸಂಸ್ಥೆಯಲ್ಲಿ ಓದಿದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಯು ಎನ್.ಸಿ.ಸಿ. ಕೋಟದಡಿಯಲ್ಲಿ ತನ್ನ ಮೊದಲ ಪ್ರಯತ್ನದಲ್ಲಿಯೇ ಎಂ.ಬಿ.ಬಿ.ಎಸ್ ಪ್ರವೇಶಾತಿ ಪಡೆದಲ್ಲಿ ಸಂಸ್ಥೆಯ ವತಿಯಿಂದ ಭಾರತೀಯ ಸೇನೆಗೆ ರೂ.10ಸಾವಿರವನ್ನು ಕೊಡುಗೆಯಾಗಿ ನೀಡಲಾಗುವುದು ಎಂದು ಘೋಷಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್ ಎನ್.ಸಿ.ಸಿಯ ಪಿ.ಐ. ಅಧಿಕಾರಿ ಅಮಿತ್ ರಾವತ್, ನಿವೃತ್ತ ಶಿಕ್ಷಕಿ ಸಾವಿತ್ರಿ ಮನೋಹರ್, ಸಂಸ್ಥೆಯ ಪಿ.ಆರ್.ಒ ಜ್ಯೋತಿಪದ್ಮನಾಭ್ ಭಂಡಿ, ಲೆಫ್ಟಿನೆಂಟ್ ಮಂಜುನಾಥ್ ಮುದೂರ್ ಉಪಸ್ಥಿತರಿದ್ದರು.
ಎನ್.ಸಿ.ಸಿ ಕ್ಷೇಮಪಾಲನಾಧಿಕಾರಿ ಕೃಷ್ಣಪ್ರಸಾದ್ ಸ್ವಾಗತಿಸಿ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರ ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ನಡೆಯಿತು. ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಆತ್ಮನಿರ್ಭರ ಭಾರತದ ಅಭಿಯಾನದ ಜಿಲ್ಲಾ ವಕ್ತಾರ ಶ್ರೀಕಾಂತ್ ನಾಯಕ್ ಈ ಅಭಿಯಾನದ ಕಾರ್ಯಯೋಜನೆಗಳ ಮಾಹಿತಿ ನೀಡಿದರು.
ಈ ಅಭಿಯಾನದ ಮಂಡಲ ಸಂಚಾಲಕ ಅನಂತಕೃಷ್ಣ ಶೆಣೈ ಸ್ವಾಗತಿಸಿದರು. ರವೀಂದ್ರ ಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿ ಆತ್ಮ ನಿರ್ಭರ ಭಾರತ ಯೋಜನೆಯ ಉದ್ದೇಶ ಹಾಗೂ ಅದರ ಅಗತ್ಯತೆಯ ಬಗ್ಗೆ ವಿವರಿಸಿದರು. ಕಾರ್ಕಳ ಬಿಜೆಪಿಯ ಮಂಡಲಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ಬಂದರೂ ದೇಶ ಇನ್ನೂ ಸಂಪೂರ್ಣ ಸ್ವಾವಲಂಬಿಯಾಗಿಲ್ಲ, ನಾವೆಲ್ಲರೂ ಸ್ವದೇಶಿ ವಸ್ತುಗಳ ಬಳಕೆಗೆ ಒತ್ತು ನೀಡಬೇಕು, ನಮ್ಮ ಸ್ಥಳೀಯ ಕೈಗಾರಿಕೆ, ವ್ಯಾಪಾರ ಉದ್ಯಮಗಳಿಗೆ ನಾವು ಹೆಚ್ಚಿನ ಬೆಂಬಲ ನೀಡಬೇಕು ಹಾಗೂ ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.
ವಿದೇಶಿ ವಸ್ತುಗಳ ಮೋಹವನ್ನು ಬಿಟ್ಟು ಸ್ವದೇಶೀ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಮುಂದೆ ಈ ಅಭಿಯಾನದಡಿಯಲ್ಲಿ ಕಾರ್ಕಳ ಕ್ಷೇತ್ರಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುಲಾಗುವುದು. ಪ್ರಧಾನಿ ಆಶಯದಂತೆ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಕಳ ಬಿಜೆಪಿ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದರು. ಕಾರ್ಯದರ್ಶಿ ಪ್ರವೀಣ್ ಸಾಲಿಯಾನ್ ಆತ್ಮನಿರ್ಭರ ಭಾರತ್ ಸಂಕಲ್ಪದ ಪ್ರತಿಜ್ಞಾ ವಿಧಿ ಭೋಧಿಸಿದರು, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ ವಂದಿಸಿದರು, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಶ ಜಯರಾಮ್ ಸಾಲಿಯಾನ್, ಮಾಲಿನಿ ಜೆ ಶೆಟ್ಟಿ, ಸುರೇಶ ಶೆಟ್ಟಿ ಶಿವಪುರ, ರಮೇಶ್ ಶೆಟ್ಟಿ ಶಿವಪುರ, ಮಂಡಲ ಪಧಾಧಿಕಾರಿಗಳು, ವಿವಿಧ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಪಧಾಧಿಕಾರಿಗಳು ಉಪಸ್ಥಿತರಿದ್ದರು.