Home Blog Page 61

ಅರುಣ್ ಕುಮಾರ್ ಪುತ್ತಿಲ, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಮಂದಿಯ ಗಡಿಪಾರಿಗೆ ಪೊಲೀಸ್ ಇಲಾಖೆ ಆದೇಶ

0

ಅರುಣ್ ಕುಮಾರ್ ಪುತ್ತಿಲ, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಮಂದಿಯ ಗಡಿಪಾರಿಗೆ ಪೊಲೀಸ್ ಇಲಾಖೆ ಆದೇಶ

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಿಂದ ಸಾಲು ಸಾಲು ಅಹಿತಕರ ಘಟನೆಗಳು ನಡೆಯುತ್ತಿದ್ದು, ಮತ್ತೆ ಜಿಲ್ಲೆಯನ್ನು ಶಾಂತಿ ಸುವ್ಯವಸ್ಥೆಗೆ ತರಲು ಇದೀಗ ಪೊಲೀಸರು ಗಡಿಪಾರು ಎಂಬ ಅಸ್ತ್ರ ಉಪಯೋಗಿಸಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖ ಹಿಂದೂ ಫೈರ್ ಬ್ರಾಂಡ್ ಎನಿಸಿಕೊಂಡಿರುವ ಅರುಣ್ ಕುಮಾರ್ ಪುತ್ತಿಲ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಒಟ್ಟು 36 ಜನರಿಗೆ ಗಡಿಪಾರು ನೋಟೀಸ್ ನೀಡಿದೆ.

ಬಂಟ್ವಾಳ ನಗರ ಠಾಣೆಯಲ್ಲಿ ಹಸೈನಾರ್, ಮಹಮ್ಮದ್ ಸಫ್ವಾನ್, ಭುವಿತ್ ಶೆಟ್ಟಿ, ರಾಜೇಶ್, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪವನ್ ಕುಮಾರ್, ಚರಣ್ ರಾಜ್, ಅಬ್ದುಲ್ ಲತೀಫ್, ಮಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್, ಭರತ್ ಕುಮ್ಡೇಲ್ ಹೆಸರು ಉಲ್ಲೇಖವಾದರೆ ಇನ್ನು ವಿಟ್ಲ ಠಾಣೆಯಲ್ಲಿ ಗಣೇಶ್ ಪೂಜಾರಿ, ಅಬ್ದುಲ್ ಖಾದರ್, ಚಂದ್ರಹಾಸ ಎಂಬವರ ಹೆಸರು ಉಲ್ಲೇಖವಾಗಿದೆ.

ಬೆಳ್ತಂಗಡಿ ಭಾಗದ ಪುಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ. ಹೆಸರು ಕಂಡು ಬಂದರೆ, ಬೆಳ್ತಂಗಡಿ ಠಾಣೆಯಲ್ಲಿ ಮನೋಜ್ ಕುಮಾರ್, ಮಹೇಶ್ ಶೆಟ್ಟಿ ತಿಮರೋಡಿ ಹೆಸರು ಉಲ್ಲೇಖವಾಗಿದೆ.

ಪುತ್ತೂರು-ಸುಳ್ಯ ಭಾಗದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್ ಹೆಸರಿದ್ದರೆ, ಕಡಬ ಠಾಣೆಯಲ್ಲಿ ಮಹಮ್ಮದ್ ನವಾಝ್, ಉಪ್ಪಿನಂಗಡಿ ಠಾಣೆಯಲ್ಲಿ ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಸಂದೀಪ್, ಮಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್, ಸುಳ್ಯ ಠಾಣೆಯಲ್ಲಿ ಲತೇಶ್ ಗುಂಡ್ಯ, ಮನೋಹರ ಗುರುತಿಸಿಕೊಂಡಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಸಾದ್, ಶಮೀರ್ ಕೆ. ಮುಂತಾದವರ ಗಡಿಪಾರಿಗೆ ನಿರ್ಧರಿಸಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

0

ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಪ್ರಚೋದನಕಾರಿ ಹೇಳಿಕೆ ವಿಚಾರ; ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಪ್ರಚೋದನಕಾರಿ ಭಾಷಣ ವಿಚಾರಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿರುವುದು ಸದ್ಯಕ್ಕೆ ಎಲ್ಲಾ ಮಾದ್ಯಮಗಳಲ್ಲಿರುವ ಸುದ್ದಿ. ಆದರೆ ಇದರ ನಡುವೆ ಆರ್. ಎಸ್. ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ವಾಗ್ಮಿ ಶ್ರೀಕಾಂತ್ ಶೆಟ್ಟಿ ವಿರುದ್ಧವಾಗಿ ಎಫ್.ಐ. ಆರ್. ಹಾಕಿರುವುದನ್ನು ಖಂಡಿಸಿ ಆರ್. ಎಸ್. ಎಸ್. ಸಂಘಟನೆ ಹೈಕೋರ್ಟ್ ಗೆ ಅಪಿಲು ಹಾಕಿದ ಹಿನ್ನೆಲೆ ಇದೀಗ ಬಿಗ್ ರಿಲೀಫ್ ದೊರೆತಿದೆ.

ಕೆ. ಪ್ರಭಾಕರ್ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ಪರವಾಗಿ ವಾದ ಮಂಡಿಸಿದ ಅರುಣ್ ಶಾಮ್ ಇಬ್ಬರ ಮೇಲೆ ಹಾಕಿರುವ ಕೇಸುಗಳ ಕುರಿತು ವಾದ ಮಂಡಿಸಿದ್ದಾರೆ. ವಾದ ಆಲಿಸಿದ ನ್ಯಾಯವಾದಿ ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಇಬ್ಬರ ಪ್ರಕರಣಕ್ಕೂ ಸಂಬಂಧಪಟ್ಟು ಮುಂದಿನ ವಿಚಾರಣೆ ನಡೆಯುವವರೆಗೆ ಪೊಲೀಸ್ ಇಲಾಖೆ ಇವರಿಬ್ಬರ ವಿರುದ್ಧ ಬಂಧನ ಸೇರಿದಂತೆ ಇತರ ಯಾವುದೇ ಒತ್ತಡ ಹಾಗೂ ಬಲವಂತದ ಕ್ರಮ ಕೈಗೊಳ್ಳಬಾರದೆಂದು ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಜೂನ್ ೧೦ ಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಈದು ಬಂಟರ ಸಂಘ: ವಿದ್ಯಾರ್ಥಿ ವೇತನ ವಿತರಣೆ

0

ಈದು ಬಂಟರ ಸಂಘ:ವಿದ್ಯಾರ್ಥಿ ವೇತನ ವಿತರಣೆ

ಬಂಟರ ಸಂಘ ಈದು ಇದರ ಬಂಟರ ಸಂಘದ ಜೂನ್ ತಿಂಗಳ ಸಭೆ ನಡೆಯಿತು, ಈ ಸಂದರ್ಭದಲ್ಲಿ 1 ನೇ ತರಗತಿಯಿಂದ ಪದವಿ ಯವರೆಗೆ 39 ಬಂಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಈದು ಬಂಟರ ಸಂಘ ಗೌರವ ಅಧ್ಯಕ್ಷರಾದ ಜಗನಾಥ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷರಾದ ಹೊಸ್ಮಾರು ಸೂರ್ಯಶ್ರೀ ಸುರೇಶ್ ಶೆಟ್ಟಿ, ಉಪಾಧ್ಯಕ್ಷರು ಸುನೀತಾ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ್ ಶೆಟ್ಟಿ, ಕೋಶಾಧಿಕಾರಿ ಶುಭಕರ್ ಶೆಟ್ಟಿ, ಹಾಗೂ ಎಲ್ಲಾ ಬಂಟ ಬಾಂಧವರು ಉಪಸ್ಥಿತರಿದ್ದರು.

ಕಾರ್ಕಳ : ಜೆ.ಇ.ಇ ಅಡ್ವಾನ್ಸ್ಡ್‌ನಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

0

ಕಾರ್ಕಳ : ಜೆ.ಇ.ಇ ಅಡ್ವಾನ್ಸ್ಡ್‌ನಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್‌, ತೇಜಸ್ ವಿ. ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್‌, ಸಾನಿಕ ಕೆ. ಎನ್. ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ. ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ‍್ಯಾಂಕ್‌, ಎಂ. ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ ೨೦೭೪೩ ನೇ ರ‍್ಯಾಂಕ್‌, ಸಾಚಿ ಶಿವಕುಮಾರ್ ಕಡಿ ೨೪೭೨೮ ನೇ ರ‍್ಯಾಂಕ್‌, ಶ್ರೀರಕ್ಷಾ ೨೮೧೬೩ ನೇ ರ‍್ಯಾಂಕ್‌, ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ‍್ಯಾಂಕ್‌, ಹರ್ಷಿತ್ ರಾಜು ಹೆಚ್. ಎಂ. ಸಾಮಾನ್ಯ ವಿಭಾಗದಲ್ಲಿ 31140ನೇ ರ‍್ಯಾಂಕ್‌, ಪ್ರೀತಿ ಸಿ. ಎಲ್. ಸಾಮಾನ್ಯ ವಿಭಾಗದಲ್ಲಿ 31939ನೇ ರ‍್ಯಾಂಕ್‌ (OBC ವರ್ಗದಲ್ಲಿ 9271)ನೇ ರ‍್ಯಾಂಕ್‌, ಟಿ ಪ್ರದೀಪ್ ST ವರ್ಗದಲ್ಲಿ 409ನೇ ರ‍್ಯಾಂಕ್‌, ಮೋನಿಕಾ ಕೆ. ಪಿ. ST ವರ್ಗದಲ್ಲಿ 411ನೇ ರ‍್ಯಾಂಕ್‌ ಮತ್ತು ಪ್ರಜ್ವಲ್ ಡಿ. ಎಂ. SC ವರ್ಗದಲ್ಲಿ 5429ನೇ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆಗೈವ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ.

ಕಾಲೇಜಿನ ಆರಂಭದಿಂದಲೂ ದೇಶದ ಅತ್ಯುತ್ತಮ ತಾಂತ್ರಿಕ ವಿಶ್ವವಿದ್ಯಾನಿಲಯಗಳಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳು ದಾಖಲೆಯನ್ನು ಪಡೆಯುತ್ತಿದ್ದು, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಸಂಸ್ಥೆಯು ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.

M. MANJUNATH

HARSHITH RAJU H M

YOGESH DEEPAK NAIK

TEJAS V NAYAK

T PRADEEP

CHETHAN GOWDA N S

PRAJWAL D M

SACHI SHIVAKUMAR KADI

SAANIKA K N

PREETHI C L

SHREERAKSHA

MOHITH M

MONIKA K P

ಕಾರ್ಕಳ : ಜೆ.ಇ.ಇ ಅಡ್ವಾನ್ಸ್ಡ್2025 ಫಲಿತಾಂಶ ಪ್ರಕಟ; ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳಿಗೆ ಹತ್ತು ಸಾವಿರದ ಒಳಗಿನ ರ್ಯಾಂಕ್

0

ಜೆ.ಇ.ಇ ಅಡ್ವಾನ್ಸ್ಡ್2025 ಫಲಿತಾಂಶ ಪ್ರಕಟ

ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ. ಅಡ್ವನ್ಸ್ಡ್ 2025ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ.

ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುವರ್ಣ (2403) (ಕೆಟಗರಿಯಲ್ಲಿ429 ರ್ಯಾಂಕ್), ಮನೋಜ್ ಕಾಮತ್ (3911) (ಜನರಲ್ ಇ.ಡಬ್ಲು.ಎಸ್ 394ರ್ಯಾಂಕ್). ಆಕಾಶ್ ಪ್ರಭು (5105 ), ಚಿಂತನ್ ಮೇಗಾವತ್ (6375 ) (ಕೆಟಗರಿಯಲ್ಲಿ 142 ರ್ಯಾಂಕ್),ವಿಷ್ಣು ಧರ್ಮಪ್ರಕಾಶ್ (8565) ರ್ಯಾಂಕ್ ಗಳಿಸಿದ್ದಾರೆ. ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಗಳಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಎ.ಪಿ.ಜಿ.ಇ.ಟಿ ಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ತರುಣ್ ಎ ಸುವರ್ಣ

ಚಿಂತನ್ J M

ಕೆ. ಮನೋಜ್ ಕಾಮತ್

ವಿಷ್ಣು ಡಿ.

ಆಕಾಶ್ ಎಚ್. ಪ್ರಭು

ಕ್ರೈಸ್ಟ್ ಕಿಂಗ್ : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ “ಶಿಸ್ತು ಮತ್ತು ಜೀವನ” ಮಾಹಿತಿ ಕಾರ್ಯಕ್ರಮ

0

ಕ್ರೈಸ್ಟ್ ಕಿಂಗ್ : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ “ಶಿಸ್ತು ಮತ್ತು ಜೀವನ” ಮಾಹಿತಿ ಕಾರ್ಯಕ್ರಮ

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು: ಏರ್ ವೈಸ್ ಮಾ಼ರ್ಷಲ್ ರಮೇಶ್ ಕಾರ್ಣಿಕ್

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ‘ಶಿಸ್ತು ಮತ್ತು ಜೀವನ’ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾರ್ಕಳದ ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ “ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು. ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಂಡಾಗ ಮಾತ್ರ ಶಿಸ್ತು ಮೂಡಲು ಸಾಧ್ಯ. ಜೀವನದಲ್ಲಿ ಶಿಸ್ತು ಇದ್ದರೆ ಮಾತ್ರ ನಮ್ಮ ಬದುಕಿಗೆ ಸೌಂದರ್ಯ ಮತ್ತು ಅರ್ಥ ಬರುತ್ತದೆ. ನಯ ವಿನಯತೆ ವಿಧೇಯತೆಯು ಉತ್ತಮ ವ್ಯಕ್ತಿತ್ವದ ಲಕ್ಷಣ. ಮಕ್ಕಳು ಸೈನ್ಯ ಸೇರಿ ದೇಶ ಸೇವೆ ಮಾಡುವ ಮನೋಧರ್ಮ ರೂಢಿಸಿಕೊಳ್ಳಬೇಕು. ಏನೇ ಸಮಸ್ಯೆಗಳು ಬಂದರೂ ಜೀವನವನ್ನು ದುರಂತದ ಕಡೆಗೆ ತೆಗೆದುಕೊಂಡು ಹೋಗಬಾರದು” ಎಂದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪಪ್ರಾಚಾರ್ಯರಾದ ಪ್ರಕಾಶ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಪ್ರಚೋದನಕಾರಿ ಪೋಸ್ಟ್ ಹಂಚಿದ ಹಿನ್ನಲೆ:ರತ್ನಾಕರ್ ಅಮೀನ್ ಬಂಧನ ಪ್ರತೀ ಠಾಣೆಯಲ್ಲಿ ಇಬ್ಬರು ಪೊಲೀಸರಿಂದ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ…

0

ಪ್ರಚೋದನಕಾರಿ ಪೋಸ್ಟ್ ಹಂಚಿದ ಹಿನ್ನಲೆ:ರತ್ನಾಕರ್ ಅಮೀನ್ ಬಂಧನ

ಪ್ರತೀ ಠಾಣೆಯಲ್ಲಿ ಇಬ್ಬರು ಪೊಲೀಸರಿಂದ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ…

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿದ ಹಿನ್ನಲೆ, ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್ ಅಮೀನ್ ವಿರುದ್ಧ ಅಜೆಕಾರು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ.

ಕರಾವಳಿಯಲ್ಲಿ ಸಾಲು ಸಾಲು ಕೊಲೆಗಳಾಗುತ್ತಿದ್ದು, ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಪ್ರಚೋದನಕಾರಿ ಭಾಷಣ ಮಾಡುವ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚುತ್ತಿರುವ ಹಲವರ ವಿರುದ್ಧ ಬಲೆ ಬೀಸಿದ್ದಾರೆ.

ಪ್ರತಿ ಠಾಣೆಗಳಲ್ಲೂ ಇಬ್ಬರು ಪೊಲೀಸರು ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸುತ್ತಿದ್ದಾರೆ – ಪೊಲೀಸ್ ವರಿಷ್ಠಾಧಿಕಾರಿ

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಇಬ್ಬರು ಪೊಲೀಸರು ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸುತ್ತಿದ್ದಾರೆ. ಆಕ್ಷೇಪಕಾರಿ ಪೋಸ್ಟ್ ಗಳನ್ನು ವಿನಿಮಯ ಮಾಡುವುದು, ಇತರರೊಂದಿಗೆ ಹಂಚಿಕೊಳ್ಳುವುದು ಮಾಡಬಾರದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೂ ಇವುಗಳ ನಿಯಂತ್ರಣಕ್ಕೆ ಸಿಬ್ಬಂದಿ ಇದ್ದು, ಸಮಸ್ಯೆ ಎದುರಾದರೆ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಹರಿರಾಮ್ ಶಂಕರ್ ಅವರು ಮಾಧ್ಯಮದೊಂದಿಗೆ ನಡೆಸಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಬೈಯ್ಯುವುದು ಆತ್ಮಹತ್ಯೆಗೆ ಪ್ರಚೋದನೆಯಾಗಲ್ಲ ಸುಪ್ರೀಂ ಕೋರ್ಟ್

0

ಬೈಯ್ಯುವುದು ಆತ್ಮಹತ್ಯೆಗೆ ಪ್ರಚೋದನೆಯಾಗಲ್ಲ ಸುಪ್ರೀಂ ಕೋರ್ಟ್

ಬೈಗುಳ ಆತ್ಮಹತ್ಯೆಗೆ ಪ್ರಚೋದನೆಯಲ್ಲ ಎಂದ ಸುಪ್ರೀಂಕೋರ್ಟ್, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಚೋದನೆ ಆರೋಪದಿಂದ ಶಿಕ್ಷಕರೊಬ್ಬರನ್ನು ಖುಲಾಸೆಗೊಳಿಸಿ ಈ ತೀರ್ಪು ನೀಡಿದೆ.

ತಮಿಳುನಾಡಿನಲ್ಲಿ ವಿದ್ಯಾರ್ಥಿಯೊಬ್ಬನ ದೂರಿನ ಮೇರೆಗೆ ಹಾಸ್ಟೆಲ್ ಉಸ್ತುವಾರಿ ಶಿಕ್ಷಕರೊಬ್ಬರು ಮತ್ತೊಬ್ಬ ವಿದ್ಯಾರ್ಥಿಯನ್ನು ನಿಂದಿಸಿದ್ದು, ಆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಹಾಸ್ಟೆಲ್ ಉಸ್ತುವಾರಿ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಮದ್ರಾಸ್ ಹೈಕೋರ್ಟ್ ಆರೋಪವನ್ನು ಎತ್ತಿ ಹಿಡಿದಿತ್ತು. ಅದನ್ನು ಶಿಕ್ಷಕ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ ಪೀಠ, ‘ಯಾರಾದರೂ ಬೈದಾಗ ಇಂತಹ ದುರಂತಕ್ಕೆ ಕಾರಣವಾಗುತ್ತದೆ ಎಂದು ಸಾಮಾನ್ಯ ಜನರೂ ಊಹಿಸಲು ಸಾಧ್ಯವಿಲ್ಲ ಎಂದಿದೆ.

ಕಾರ್ಕಳ : ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

0

ಕಾರ್ಕಳ : ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ಆನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. https://swdhmis.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ದೂ: 08254-230609, ಮೊ: 9480843208 ಹಾಗೂ ಕಾರ್ಕಳ ದೂ: 08258-298134, ಮೊ: 9480843207 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್. ಎಸ್. ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು

0

ಆರ್. ಎಸ್. ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು

ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ. ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12 ರಂದು ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ಸಂಧರ್ಭ, ಕೋಮು ದ್ವೇಷ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಭಾರತೀಯ ನ್ಯಾಯ ಸಂಹಿತೆ ಅಡಿ Cr . ಸಂ. 60/2025, ಸೆಕ್ಷನ್ 353(2)ರಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.