Home Blog Page 65

ಕಾರ್ಕಳ:ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ.

0

ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ.

ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ
ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು.

ನುಡಿನಮನ ಸಲ್ಲಿಸಿದ ಶಿಕ್ಷಕ ರಾಜೇಂದ್ರ ಭಟ್ ಕೆ ಅವರು ಗೋವಿಂದ ರಾವ್ ಅವರು ಕೇವಲ ಗ್ರಂಥಪಾಲಕ ಮಾತ್ರ ಆಗಿರದೇ ಗ್ರಂಥಾಲಯಕ್ಕೆ ಬಂದ ಹಿರಿಯ, ಕಿರಿಯ ಓದುಗರನ್ನು ಪ್ರೋತ್ಸಾಹಿಸುವ ಮತ್ತು ಮಾರ್ಗದರ್ಶನ ಮಾಡುವ ಕೆಲಸವನ್ನು ಮಾಡುತ್ತಿದ್ದರು. ನನ್ನ ಮತ್ತು ನನ್ನಂತಹ ನೂರಾರು ಓದುಗರ ಬಾಲ್ಯ, ಹದಿಹರೆಯ ಮತ್ತು ಯೌವ್ವನಗಳನ್ನು ಪುಸ್ತಕಗಳ ಓದಿನ ಮೂಲಕ
ಶ್ರೀಮಂತಗೊಳಿಸಿದ ಕೀರ್ತಿಯು ಅವರಿಗೆ ಸಲ್ಲುತ್ತದೆ. ಅದೇ ರೀತಿ ಕಾರ್ಕಳದ ಗಾಂಧಿ ಮೈದಾನದ ವಿಸ್ತಾರವಾದ ಗ್ರಂಥಾಲಯದ ಕಟ್ಟಡ ನಿರ್ಮಾಣವಾಗಲು ಅವರು ಓದುಗರ ಮೂಲಕ ಕಾರ್ಡ್ ಚಳುವಳಿಯನ್ನು ಮಾಡಿದ್ದು ಪರೋಕ್ಷವಾಗಿ ಕಾರಣ ಆಗಿತ್ತು. ಹಾಗೆಯೇ ಅವಿಭಜಿತ ಕರಾವಳಿ ಜಿಲ್ಲೆಗಳ ಮಟ್ಟದ ಚೆಸ್ ಫೆಡರೇಶನ್ ಸ್ಥಾಪನೆ ಮಾಡಿ ಅಖಿಲಭಾರತ ಮಟ್ಟದ ಚೆಸ್ ಟೂರ್ನಿ ಸಂಘಟನೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ನಿವೃತ್ತ ಪ್ರಾಂಶುಪಾಲರಾದ ಮಿತ್ರಪ್ರಭಾ ಹೆಗ್ಡೆ ಅವರು ಮಾತಾಡಿ ನನಗೆ ಮತ್ತು ನನ್ನ ಕಾಲೇಜಿನ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಬೇಕಾಗುವ ನೂರಾರು ಪುಸ್ತಕಗಳನ್ನು ಒದಗಿಸಿ ಅವರು ಮಹದುಪಕಾರ ಮಾಡಿದ್ದಾರೆ ಎಂದರು.

ಅದೇ ರೀತಿ ನಿವೃತ್ತ ಶಿಕ್ಷಕ ಮತ್ತು ಸಾಮಾಜಿಕ ಕಾರ್ಯಕರ್ತರಾದ ಬಿಪಿನಚಂದ್ರ ಪಾಲ್ ಅವರು ಮಾತಾಡಿ ತನ್ನ ಮತ್ತು ಗೋವಿಂದ ರಾಯರ ದೀರ್ಘಕಾಲದ ಒಡನಾಟವನ್ನು ಸ್ಮರಿಸಿ ಅವರು ನಿಜವಾದ ಅರ್ಥದಲ್ಲಿ ಒಬ್ಬ ಗ್ರಂಥ ಸೇವಕರಾಗಿದ್ದರು ಮತ್ತು ನನ್ನ ಪತ್ರಿಕೋದ್ಯಮಕ್ಕೆ ಬೇಕಾದ ಗ್ರಂಥಗಳನ್ನು ಹುಡುಕಿ ನನಗೆ ಕೊಡುತ್ತಿದ್ದರು ಎಂದರು.

ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಮಾತನಾಡಿ ಗೋವಿಂದರಾಯರು ಇಂದಿನ ಸಮಾಜಕ್ಕೆ ಉನ್ನತವಾದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಜ್ಞಾನಸತ್ರವನ್ನು ಅವರ ಮಕ್ಕಳು ಕ್ಷಮಾ ರಾವ್, ಶುಭದ್ ರಾವ್, ಡಾಕ್ಟರ್ ಶರದ್ ರಾವ್ ಅವರು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು. ಮಾಜಿ ಸಚಿವರು ಮತ್ತು ಪೂರ್ವ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗೋವಿಂದರಾಯರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದರು.

ಛತ್ರಪತಿ ಫೌಂಡೇಶನ್
ಅಧ್ಯಕ್ಷರಾದ ಗಿರೀಶ್ ರಾವ್ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿ ವಂದಿಸಿದರು

ಕಾರ್ಕಳ:ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ-ಮೇ.08ರಿಂದ16:ಮಹೋತ್ಸವ-ಶ್ರೀ ಮನ್ಮಹಾರಥೋತ್ಸವ

0

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ಕಾರ್ಕಳ

ಮೇ.08ರಿಂದ16:ಮಹೋತ್ಸವ-ಶ್ರೀ ಮನ್ಮಹಾರಥೋತ್ಸವ

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ಕಾರ್ಕಳ ಇಲ್ಲಿ 08-05-2025 ಗುರುವಾರದಿಂದ 16-05-2025 ಶುಕ್ರವಾರದವರೆಗೆ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇoದ್ರ ಸರಸ್ವತೀ ಮಹಾಸ್ವಾಮೀಜಿ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಇವರ ದಿವ್ಯ ಉಪಸ್ಥಿತಿಯಲ್ಲಿ ಮಹೋತ್ಸವ ಮತ್ತು ಶ್ರೀಮನ್ಮಹಾರಥೋತ್ಸವ ನಡೆಯಲಿದೆ.

ಕಾರ್ಯಕ್ರಮದ ವಿವರ
ಕಾರ್ಯಕ್ರಮದ ವಿವರ

ಕ್ರೈಸ್ಟ್ ಕಿಂಗ್:ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ರ‍್ಯಾಂಕ್ ವಿಜೇತರಿಗೆ ಸನ್ಮಾನ

0

ಕ್ರೈಸ್ಟ್ ಕಿಂಗ್:ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ರ‍್ಯಾಂಕ್ ವಿಜೇತರಿಗೆ ಸನ್ಮಾನ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಪಡೆದ ಸುದೀಕ್ಷಾ ಶೆಟ್ಟಿ. ಎಂಟನೇ ರ‍್ಯಾಂಕ್ ಪಡೆದ ಚರಣ್‌ರಾಜ್, ನಾರಾಯಣಿ ಜಿ ಕಿಣಿ, ಒಂಬತ್ತನೇ ರ‍್ಯಾಂಕ್ ಪಡೆದ ಡ್ಯಾರೆಲ್ ವಿನೋಲ್ ಮೊರಾಸ್ ಹಾಗೂ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದ ಅನಂತ್.ಎನ್.ಕೆ ಮತ್ತು ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಪ್ರಕೃತಿ ಪಿ ಗುಡಿಗಾರ್, ಎಂಟನೇ ರ‍್ಯಾಂಕ್ ಪಡೆದ ಆದಿಶ್ರೀ ಎಂ.ಆಚಾರ್ಯ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಕರ್ನಾಟಕ ಸರಕಾರದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಕ್ರೈಸ್ಟ್ ಕಿಂಗ್ ಚರ್ಚ್ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್, ಉದ್ಯಮಿ ವಿವೇಕಾನಂದ ಶೆಣೈ, ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ ಮನೋಹರ್, ಕಾರ್ಕಳ ಜೈನ್ ಮಿಲನ್ ಮಾಜಿ ಅಧ್ಯಕ್ಷೆ ಹಾಗೂ ನಿವೃತ್ತ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಮಾಲತಿ ವಸಂತ್‌ರಾಜ್, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷೆ ಶ್ರೀಮತಿ ಹುಮೈರಾ ಅತಿಥಿಗಳಾಗಿದ್ದರು.

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಕಳ:40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

0

ಕಾರ್ಕಳ:40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು.

40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು ಸಾಮೂಹಿಕವಾಗಿ ನೆರವೇರಿತು.ದೇವಳದ ಆಡಳಿತ ಮಂಡಳಿ ಮತ್ತು ಬ್ರಹ್ಮೋಪದೇಶ ಸಮಿತಿಯ ನೇತೃತ್ವದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ 1200 ಜನ ಭಾಗವಹಿಸಿದ್ದರು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಸಂಘ ಕಾರ್ಕಳ ಹೆಬ್ರಿ ಇದರ ಸಂಚಾಲಕರಾದ ವಿಜಯ ಶೆಟ್ಟಿ,ಅತ್ತೂರು ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ರಮೇಶ್ ರಾವ್ ಬೆಂಗಳೂರು. ಭಾಗವಹಿಸಿದ್ದರು. ಅತಿಥಿ ಗಣ್ಯರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಶುಭನುಡಿಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಮಾತನಾಡಿ ಮರಾಠ ಸಮಾಜದ ಸಂಸ್ಕಾರದ ಸಂಸ್ಕೃತಿಯೇ ಬ್ರಹ್ಮೋಪದೇಶ. ಈ ಸಂಸ್ಕಾರವನ್ನು ಯುವ ಪೀಳಿಗೆಗೆ ದೇವಸ್ಥಾನದ ವತಿಯಿಂದ ಹಮ್ಮಿಕೊಂಡು ನಾವೆಲ್ಲ ಪುನೀತರಾಗಿದ್ದೇವೆ ಎಂದರು.ಈ ಪುಣ್ಯ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸಿದರು. ಬ್ರಹ್ಮೋಪದೇಶ ಸಮಿತಿಯ ಅಧ್ಯಕ್ಷರಾದ ರಾಜಾಜಿರಾವ್ ಸ್ವಾಗತಿಸಿ ಕಾರ್ಯದರ್ಶಿ ಪ್ರಕಾಶ್ ರಾವ್ ಸೆಪ್ಟೆಕರ್ ಧನ್ಯವಾದ ನೀಡಿದರು.

ಪೆಹಲ್ಗಾಮ್ ಹಿಂದು ನರಮೇಧ- ಮಲ್ಪೆ ಕಡಲ ತೀರದಲ್ಲಿ ಅಭಿನವ ಭಾರತ ಸೊಸೈಟಿಯ 25 ಯುವಕರಿಂದ ಸದ್ಗತಿಗಾಗಿ ತರ್ಪಣ, ಗೀತಾ ತ್ರಿಷ್ಟುಪ್ ಹೋಮ

0

ಪೆಹಲ್ಗಾಮ್ ಹಿಂದು ನರಮೇಧ- ಮಲ್ಪೆ ಕಡಲ ತೀರದಲ್ಲಿ ಅಭಿನವ ಭಾರತ ಸೊಸೈಟಿಯ 25 ಯುವಕರಿಂದ ಸದ್ಗತಿಗಾಗಿ ತರ್ಪಣ, ಗೀತಾ ತ್ರಿಷ್ಟುಪ್ ಹೋಮ

ಪೆಹಲ್ಗಾಂ ಘಟನೆ ಇಡೀ ದೇಶವನ್ನು ತಲ್ಲಣ ಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ. ಈ ನಡುವೆ ಉಡುಪಿಯ ಅಭಿನವ ಭಾರತ ಎಂಬ ರಾಷ್ಟ್ರವಾದಿ ಸಂಘಟನೆ ಉಡುಪಿಯ ಕಡಲ ತೀರದಲ್ಲಿ ತರ್ಪಣ ನೀಡಿ ಹೋಮ ನಡೆಸಿ, ನಾವೆಲ್ಲರೂ ನೊಂದ ಕುಟುಂಬದ ಮಕ್ಕಳು ಎಂಬ ಭಾವವನ್ನು ತೋರಿದ್ದಾರೆ.

ಪೆಹೆಲ್ಗಾಮ್ ನಲ್ಲಿ ನಡೆದ ಹಿಂದೂ ನರಮೇಧದಲ್ಲಿ ಮೃತಪಟ್ಟವರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಲಾಯ್ತು. ಹೋಮ ಮತ್ತು ತರ್ಪಣ ನೀಡುವ ಮೂಲಕ ಅಪರ ಧಾರ್ಮಿಕ ವಿಧಿ ಉಡುಪಿಯ ಕಡಲ ತೀರದಲ್ಲಿ ನಡೆದಿದೆ. ಮಲ್ಪೆಯ ಹನೂಮಾನ್ ವಿಠೋಭ ರುಕುಮಾಯಿ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಎಲ್ಲಾ ವಿಧಿಗಳು ನೆರವೇರಿದವು.

ಘಟನೆಯಲ್ಲಿ ಮೃತಪಟ್ಟ 25 ಜನ ಹಿಂದೂಗಳ ಭಾವಚಿತ್ರವನ್ನು ಇಟ್ಟು ಪುಷ್ಪಾರ್ಚನೆಗೈದು ಹೋಮವನ್ನು ನೆರವೇರಿಸಲಾಯ್ತು. ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಾಲು ತಂತ್ರಿಗಳ ನೇತೃತ್ವದಲ್ಲಿ, ಎಲ್ಲಾ ಧಾರ್ಮಿಕ ವಿಧಿ ವಿಧಾನಗಳು ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಗೀತಾ ತ್ರಿಷ್ಟುಪ್ ಹೋಮ ನೆರವೇರಿಸಿ ಪೂರ್ಣಾಹುತಿ ಮಾಡಲಾಯ್ತು. ಯಾತನಾಮಯ ಮರಣದಿಂದ ಮಡಿದ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಕ್ಕೆ ನೋವು ಕಡಿಮೆಯಾಗಿ ಶ್ರೇಯಸ್ಸಾಗಲಿ ಎಂದು ಪ್ರಾರ್ಥಿಸಲಾಯ್ತು.

ಬ್ರಹ್ಮಶ್ರೀ ವೇದಮೂರ್ತಿ ವಿದ್ವಾನ್ ಸೂರಾಲು ತಂತ್ರಿಗಳು ಮಾತನಾಡಿ, ಸಮಾಜದಲ್ಲಿ ಒಬ್ಬರಿಗೊಬ್ಬರು ಆಗಬೇಕು ಜೊತೆಯಾಗಿ ಸಮಷ್ಠಿ ಭಾವ ಬರಬೇಕು. ವೈದಿಕ, ಉಪನಿಷತ್ತು ಕಾಲದ ವ್ಯವಸ್ಥೆ ಪುನರ್ಜೀವ ಆಗಬೇಕು. ಉಪನಿಷತ್ತು ಕಾಲದ ಸಮಷ್ಟಿ ಭಾವ ಬಂದರೆ ಚಂದ. ದೇಶದ ಬೇರೆ ಬೇರೆ ಕಡೆಯ ಜನ ಪೆಹೆಲ್ಗಾಮ್ ನಲ್ಲಿ ಮರಣ ಹೊಂದಿದ್ದಾರೆ. ಹಿಂದು ಎಂದು ಕೊಲ್ಲಲ್ಪಟ್ಟಿದ್ದಾರೆ. ಅವರಿಗೆಲ್ಲರಿಗೂ ಸದ್ಗತಿ ಸಿಗಲಿ. ಪಾರಮಾರ್ಥಿಕ ಭಾವದಿಂದ ಒಳ್ಳೆಯ ಮನಸ್ಸಿನಿಂದ ಯುವಕರು ಎರಡು ಕೈಯಲ್ಲಿ ಸಮುದ್ರದ ನೀರನ್ನು ತರ್ಪಣ ನೀಡಿದ್ದಾರೆ. ಸಮಷ್ಟಿ ಭಾವದಿಂದ ಗೀತಾ ತ್ರಿಷ್ಟುಪ್ ಹೋಮ ಮಾಡಲಾಗಿದೆ. ಭಗವಂತ ಉಲ್ಲೇಖಿಸಿದ ಮಹಾ ಮಂತ್ರ ಗಳಲ್ಲಿ ಒಂದು ಗೀತಾ ತ್ರಿಷ್ಟುಪ್, ಮೋಕ್ಷದಾಯಿಕವಾದ ಮಂತ್ರವಿದು. 25ಮಂದಿ ಮೃತರ ಜನ್ಮಸ್ಥಾನ, ಜಾತಿ ಗಮನಕ್ಕೆ ತೆಗೆದುಕೊಳ್ಳದೆ ಸಮಷ್ಟಿ ಭಾವದಿಂದ ಅವರಿಗೆಲ್ಲರಿಯೂ ಸದ್ಗತಿ ನೀಡುವ ಕ್ರಿಯೆ ಮಾಡಿದ್ದೇವೆ ಎಂದರು.

ಅಭಿನವ ಭಾರತ ಸೊಸೈಟಿ ಸಂಘಟನೆ ಈ ಕಾರ್ಯಕ್ರಮವು ಆಯೋಜನೆ ಮಾಡಿದ್ದು, 25 ಕುಟುಂಬಗಳ ಪರವಾಗಿ ಅಭಿನವ ಭಾರತ ಸೊಸೈಟಿ ಇದರ 25 ಯುವಕರು ಈ ಅಪರ ಕ್ರಿಯೆಯ ವಿಧಿಯನ್ನು ನೆರವೇರಿಸಿದರು. ಗೀತಾ ತ್ರಿಷ್ಟುಪ್ ಮಂತ್ರವನ್ನು ಸಾವಿರ ಸಂಖ್ಯೆಯ ಜಪ ಮಾಡಿ‌ ಹೋಮ ನಡೆಸಲಾಗಿದೆ. ಜಾತಿ ಮತ ಸಂಪ್ರದಾಯ ಭೂಪ್ರದೇಶ ಎಲ್ಲವನ್ನು ಮೀರಿ ಮೃತರ ಆತ್ಮಕ್ಕೆ ಹಿಂದೂ ಧರ್ಮದ ಮಾದರಿಯಲ್ಲಿ ಧಾರ್ಮಿಕ ವಿಧಿಯನ್ನು ನಡೆಸಲಾಯಿತು.

ಹೋಮದ ಬಗ್ಗೆ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಜಾತಿ ವ್ಯವಸ್ಥೆಯಲ್ಲಿ ಹಂಚಿಹೋದ ಹಿಂದೂ‌ ಸಮಾಜ ದುರ್ಬಲವಾಗಿದೆ. ಅಲ್ಪಸಂಖ್ಯಾತ ಸಮಯದಾಯಕ್ಕೆ ಹೆದರಿ ಬದುಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹಿಂದೂ ರಾಷ್ಟ್ರದಲ್ಲಿ‌‌ ಹಿಂದೂಗಳ ಹೆಸರು ಕೇಳಿ ಹತ್ಯೆ ಮಾಡುತ್ತಾರೆ. ಹಿಂದೂಗಳು ಭಯೋತ್ಪಾದಕರ ಕಾಟ‌ ಇದೆ ಎಂದು ಕಾಶ್ಮೀರಕ್ಕೆ ಹೋಗೋದಿಲ್ಲ ಎನ್ನುವಂತಾಗಿದೆ. ಇದು ಹಿಂದೂಗಳ ದುಸ್ಥಿತಿ. ಬಹುಸಂಖ್ಯಾತ ಸಮಾಜ ಅಲ್ಪಸಂಖ್ಯಾತ ಸಮುದಾಯಕ್ಕೆ ಹೆದರಿ ಬದುಕುವಂತಾಗಿದೆ. ಹಿಂದೂ ಸಮಾಜದಲ್ಲಿ ಒಗ್ಗಟ್ಟಿಲ್ಲ, ಏಕತೆ ಬರಬೇಕಾದರೆ ಒಂದೇ ಕುಟುಂಬ ಎಂಬ ಭಾವನೆ ಬರಬೇಕು. ಈ‌ ಏಕತಾ ಭಾವನೆಗಾಗಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿದೆ. ನಮ್ಮ ಕುಟುಂಬದವರು ಮೃತಪಟ್ಟರೆ ಪ್ರತೀ ವರ್ಷ ಶ್ರಾದ್ಧ ಮಾಡುತ್ತೇವೆ. ಪ್ರತೀ ವರ್ಷ ಪಿತೃ ಹೆಸರಲ್ಲಿ ತರ್ಪಣ ಬಿಡುತ್ತೇವೆ. ಆದರೆ ಪಹಲ್ಗಾಮ್ ಘಟನೆ ನಡೆದು ಎರಡು ವಾರದಲ್ಲಿ ಸಮಾಜಕ್ಕೆ ಈ ಘಟನೆ ಮರೆತುಹೋಗಿದೆ. ಪೆಹೆಲ್ಗಾಮ್ ನಲ್ಲಿ ನಡೆದ ಘಟನೆ ಬಗ್ಗೆ ಯೋಚನೆ ಮಾಡುವಂತಾಗಿದೆ. ಬಹಳಷ್ಟು ಜನರಿಗೆ ಮೃತರ ಸಂಖ್ಯೆ ಕೂಡ ನೆನಪಿಲ್ಲ. ನಾವೆಲ್ಲ ಎಚ್ಚೆತ್ತುಕೊಂಡು ಇಂತಹ ಘಟನೆಗಳಿಗೆ ತಕ್ಕ ಉತ್ತರ ನೀಡಬೇಕಿದೆ ಎಂದರು.

ನೂರಾರು ಸಾರ್ವಜನಿಕರು ಈ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು.
ಮೃತರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ಹನುಮಾನ್ ರುಕುಮಾಯಿ ವಿಠೋಭಾ ಮಂದಿರದಲ್ಲಿ ಹಿಂದೂ ಸಮಾಜದ ಪರವಾಗಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಗ್ರ ಚಟುವಟಕೆಗೈದವರಿಗೆ ವಿರೋಧಿಗಳಿಗೆ ತಕ್ಕ ಪಾಠವಾಗಲಿ ಎಂದು ಪ್ರಾರ್ಥಿಸಲಾಯಿತು.

ಶ್ರೀ ವಿಠೋಬಾ ರುಕುಮಾಯಿ ಹನುಮಾನ್ ಮಂದಿರ ಮಲ್ಪೆ, ಇವರ ಸಹಯೋಗದಲ್ಲಿ ನಡೆದ ಈ ಒಂದು ರಾಷ್ಟ್ರಾಭಿಮಾನದ ಕಾರ್ಯಕ್ರಮದಲ್ಲಿ ಉದ್ಯಮಿ ಅಜಯ್ ಪಿ. ಶೆಟ್ಟಿ, ಧಾರ್ಮಿಕ ಮುಂದಾಳು ರಾಘವೇಂದ್ರ ರಾವ್ ಅಭಿನವ ಭಾರತ ಸೊಸೈಟಿಯ ಪ್ರಮುಖರಾದ ಗುರುಪ್ರಸಾದ್ ನಾರಾವಿ, ಸಂತೋಷ್ ನಂದಳಿಕೆ, ರಮೇಶ್ ಶೆಟ್ಟಿ ತೆಳ್ಳಾರು, ಪ್ರಸಾದ್ ಮಿಯ್ಯಾರು ಇವರು ಉಪಸ್ಥಿತರಿದ್ದರು.

ಕ್ರೈಸ್ಟ್ ಕಿಂಗ್: ಗ್ರೂಮಿಂಗ್ ಕ್ಲಾಸ್ ಹಾಗೂ ಕಿಚನ್ ಲ್ಯಾಬ್ ಉದ್ಘಾಟನೆ ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಕ್ಕಾಗ ಮುಂದೆ ಸಮಾಜದಲ್ಲಿ ಶಾಂತಿಯಿಂದ ಬದುಕಲು ಸಾಧ್ಯ: ಜಯಪ್ರಕಾಶ್ ಹೆಗ್ಡೆ

0

ಕ್ರೈಸ್ಟ್ ಕಿಂಗ್: ಗ್ರೂಮಿಂಗ್ ಕ್ಲಾಸ್ ಹಾಗೂ ಕಿಚನ್ ಲ್ಯಾಬ್ ಉದ್ಘಾಟನೆ

ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಕ್ಕಾಗ ಮುಂದೆ ಸಮಾಜದಲ್ಲಿ ಶಾಂತಿಯಿಂದ ಬದುಕಲು ಸಾಧ್ಯ: ಜಯಪ್ರಕಾಶ್ ಹೆಗ್ಡೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ವಿನೂತನ ಪರಿಕಲ್ಪನೆಯಾದ ‘ಗ್ರೂಮಿಂಗ್ ತರಗತಿ’ ಇದರ ಪಠ್ಯಪುಸ್ತಕ ಬಿಡುಗಡೆ ಹಾಗೂ ಕಿಚನ್ ಲ್ಯಾಬ್ ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಗ್ರೂಮಿಂಗ್ ಪಠ್ಯಪುಸ್ತಕವನ್ನು ಬಿಡುಗಡೆಗೊಳಿಸಿದರು.

ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಮಕ್ಕಳು ಮಾತೃಭಾಷೆಯನ್ನು ಪ್ರೀತಿಸಬೇಕು. ಹೊರ ಪ್ರಪಂಚದ ಅರಿವಿಗೆ ಮಕ್ಕಳು ಮಾತೃಭಾಷೆಯ ಜೊತೆಗೆ ಬೇರೆ ಭಾಷೆಗಳನ್ನೂ ಕಲಿಯಬೇಕು. ಪತ್ರಿಕೆಗಳ ಅಂಕಣಗಳು, ಇತರ ಪುಸ್ತಕಗಳನ್ನು ಓದಿ ಜ್ಞಾನಿಗಳಾದಾಗ ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯ. ಮಕ್ಕಳಿಗೆ ಸರಿಯಾದ ಸಂಸ್ಕಾರ ಸಿಕ್ಕಾಗ ಸಮಾಜದಲ್ಲಿ ಶಾಂತಿಯಿAದ ಬದುಕಲು ಸಾಧ್ಯ, ಈ ಸಂಸ್ಕಾರ ಶಾಲೆಗಳಲ್ಲಿ ಸಿಗಬೇಕು” ಎಂದು ಹೇಳಿದರು.

ಕಿಚನ್ ಲ್ಯಾಬ್ ಉದ್ಘಾಟಕರಾಗಿ ಆಗಮಿಸಿದ್ದ ಕ್ರೈಸ್ಟ್ ಕಿಂಗ್ ಚರ್ಚ್ನ ಧರ್ಮಗುರುಗಳಾದ ರೆ.ಫಾ.ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ಆಶೀರ್ವಚನ ನೀಡಿ ಮಾತನಾಡಿ “ನಾವು ನಮ್ಮನ್ನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು. ಆಗ ಬದುಕು ಸವಿಯಾಗುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ಆರಂಭಿಸಿರುವ ಈ ಕಾರ್ಯ ಶ್ಲಾಘನೀಯ” ಎಂದು ಹೇಳಿದರು.

ಉದ್ಯಮಿ ವಿವೇಕಾನಂದ ಶೆಣೈ ಅವರು ಮಾತನಾಡಿ “ತಂದೆ ತಾಯಿಯನ್ನು ಕೊನೆಗಾಲದಲ್ಲಿ ನೋಡಿಕೊಳ್ಳುವ ಕಾರ್ಯ ಪುಣ್ಯಫಲದಿಂದ ಬರುವಂತದ್ದು. ಮಕ್ಕಳು ತಮ್ಮ ತಂದೆ ತಾಯಿಯನ್ನು ಗೌರವಿಸುವುದು ಮಾತ್ರವಲ್ಲದೆ ವೃದ್ಧಾಪ್ಯದಲ್ಲಿಯೂ ಪ್ರೀತಿ ಗೌರವಗಳಿಂದ ನೋಡಿಕೊಳ್ಳಬೇಕು. ಅಂತಹ ಸಂಸ್ಕಾರ ಬೆಳೆಸುವ ಶಿಕ್ಷಣವನ್ನು ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ನೀಡುತ್ತಿದೆ” ಎಂದು ಹೇಳಿದರು.

ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ ಮತ್ತು ಗೈಡ್ಸ್ನ ಕಾರ್ಕಳ ತಾಲೂಕು ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ ಮನೋಹರ್, ಕಾರ್ಕಳ ಜೈನ್ ಮಿಲನ್ ಮಾಜಿ ಅಧ್ಯಕ್ಷೆ ಹಾಗೂ ನಿವೃತ್ತ ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಮಾಲತಿ ವಸಂತ್‌ರಾಜ್, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷೆ ಶ್ರೀಮತಿ ಹುಮೈರಾ ಸಂದರ್ಭೋಚಿತವಾಗಿ ಮಾತನಾಡಿ ಸಂಸ್ಥೆಯ ನೂತನ ಪರಿಕಲ್ಪನೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ಪ್ರತೀ ಮಗುವೂ ಭಗವಂತನ ಪ್ರತೀಕ. ಮಕ್ಕಳು ವಿದ್ಯಾವಂತರಾದರೆ ಸಾಲದು ಪ್ರಜ್ಞಾವಂತರಾಗಬೇಕು. ಆಗ ದೇಶ ಸುಭಿಕ್ಷವಾಗಲು ಸಾಧ್ಯ. ಮಕ್ಕಳಿಗೆ ಧರ್ಮಾತೀತ, ಜಾತ್ಯಾತೀತ, ಮೇಲು ಕೀಳು ವರ್ಗರಹಿತ ಸಮಾನ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಧ್ಯೇಯ” ಎಂದು ಹೇಳಿದರು.

ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಕಾಶ್ ಕುಂದರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ವಿಜೇತ ಸ್ವಾಗತಿಸಿ ಆಶಾಜ್ಯೋತಿ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಎಸ್ ಎಸ್ ಎಲ್ ಸಿ ಫಲಿತಾಂಶ:ಎಸ್.ವಿ.ಟಿ. 95.92 % ಫಲಿತಾಂಶ

0

ಕಾರ್ಕಳ :2024-25ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 95.92 % ಫಲಿತಾಂಶ ದಾಖಲಾಗಿದೆ.

ಸನ್ವಿತ್ 583 ಅಂಕಗಳನ್ನು ಪಡೆದು 93.28% ಶಾಲೆಗೆ ಪ್ರಥಮ , ಭೀಮರಾಯ ಜೋಗಿನ 573 ಅಂಕಗಳನ್ನು ಪಡೆದು 91.68% ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಸಿದ್ದಲಿಂಗ ಸ್ವಾಮಿ 566 ಅಂಕಗಳನ್ನು ಪಡೆದು 90.56% ತೃತೀಯ ಸ್ಥಾನ ಪಡೆದಿರುತ್ತಾರೆ.

ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು , ಹಿರಿಯ ಸಹಶಿಕ್ಷಕರು, ಉಪನ್ಯಾಸಕರು ಹಾಗೂ ಅಧ್ಯಾಪಕವೃಂದ ಅಭಿನಂದಿಸಿರುತ್ತಾರೆ.

 

ವೀಶ್ವರಿ
533 – 85.28%
ಶಾಹಿದಾ ಬಾನು
539 – 86.24%
ಮಾನ್ಯ ಹೇಮನಗೌಡ
550 – 88%
ಅರ್ಪಿತಾ
557 – 89.12%
ಜಯೇಶ್ ಶೆಟ್ಟಿಗಾರ್
558 – 89.28%
ಸಿದ್ದಲಿಂಗ ಸ್ವಾಮಿ
566 – 90.56%
ಭೀಮರಾಯ ಜೋಗಿನ
573 – 91.68%
ಸನ್ವಿತ್
583 – 93.28%

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

0

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.

ಕಳೆದ ಬಾರಿ ಸಾನ್ವಿರಾವ್ ಎಂಬ ವಿದ್ಯಾರ್ಥಿನಿ 598 ಅಂಕಗಳನ್ನು ಗಳಿಸುವುದರ ಮೂಲಕ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಗುರುತಿಸಿಕೊಂಡಿರುವುದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಸಿಎ ಫೌಂಡೇಶನ್ ನಲ್ಲಿ 13 ವಿದ್ಯಾರ್ಥಿಗಳಲ್ಲಿ 07 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುವುದಲ್ಲದೆ, CSEET ಪರೀಕ್ಷೆಯಲ್ಲಿ 34 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಅರ್ಹತೆಯನ್ನು ಪಡೆದುಕೊಂಡಿರುವುದು ವಾಣಿಜ್ಯ ವಿಭಾಗದ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಹತ್ತಾರು ಕ್ರೀಯಾಶೀಲ ಕಾರ್ಯಕ್ರಮಗಳೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಅವರ ಉತ್ತಮ ಭವಿಷ್ಯಕ್ಕೆ ಸಂಸ್ಥೆ ಕಾರಣವಾಗಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡುವ ಈ ಉಚಿತ ಶಿಕ್ಷಣ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : +919980924567

ಕಾರ್ಕಳ:ಪುಲ್ಕೇರಿ ಫ್ರೆಂಡ್ಸ್ ಕ್ಲಬ್ 48ನೇ ವಾರ್ಷಿಕೋತ್ಸವ

0

ಪುಲ್ಕೇರಿ ಫ್ರೆಂಡ್ಸ್ ಕ್ಲಬ್ 48ನೇ ವಾರ್ಷಿಕೋತ್ಸವ

ಪುಲ್ಕೇರಿ ಫ್ರೆಂಡ್ಸ್ ಕ್ಲಬ್ ಇದರ 48ನೇ ವಾರ್ಷಿಕೋತ್ಸವ ಇಂದು ರಾತ್ರಿ ರಜತಶ್ರೀ ರಂಗ ಮಂದಿರ ಪುಲ್ಕೇರಿ ಬೈಪಾಸ್ ಕಾರ್ಕಳ ಇಲ್ಲಿ ನಡೆಯಲಿದೆ.

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

0

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ:ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.

2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ :8147454906

2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್‌ಚಂದ್ರ ನಾಯಕ್ 597 ಅಂಕಗಳೊAದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ ಸಹನಾ ನಾಯಕ್ ಹಾಗೂ ತನ್ವಿ ರಾವ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 3ನೇ ಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳಾದ ವಿ. ಯಶಸ್ವಿ ನಾಯ್ಕ್ (591 ಅಂಕ) ಹಾಗೂ ಪ್ರಜ್ಞಾ ಹೆಗ್ಡೆ (591)ಗಳಿಸಿದ್ದಾರೆ. ಈ ಬಾರಿ 2025ರ ಜನವರಿಯಲ್ಲಿ ನಡೆದ ಸಿ.ಎಸ್.ೆಇ.ಇ.ಟಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ.

ಪಠ್ಯೇತರ ಚಟುವಟಿಕೆಯಲ್ಲಿ ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಕಾರ್ಯಚರಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿ ಈಗಾಗಲೇ ರಿತಿಕಾ ಕಾಮತ್, ವೃದ್ಧಿ ಶೆಟ್ಟಿ ಮತ್ತು ಸಮಿಯಾ ಹೆಗ್ಡೆ ರಾಜ್ಯಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಬಾಸ್ಕೆಟ್ ಬಾಲ್, ತ್ರೋಬಾಲ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಫೂಟ್ಬಾಲ್ ಮತ್ತು ಅಥ್ಲೇಟಿಕ್ಸ್ ತರಬೇತಿ ಪಡೆದು ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿರುತ್ತಾರೆ. ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ಹೆಚ್ಚಿಸಲು ವ್ಯಾಪಾರ ಮೇಳಗಳನ್ನು ಹಾಗೂ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಗುತ್ತಿದೆ.