Home Blog Page 75

ಕ್ರೀಡಾ ವೈಭವ – 2025ರ ಅಧ್ಯಕ್ಷರಾಗಿ ಕರ್ಣ ನೂರಾಳ್ ಬೆಟ್ಟು ಪುನಾರಾಯ್ಕೆ.

0

ಕ್ರೀಡಾ ವೈಭವ – 2025ರ ಅಧ್ಯಕ್ಷರಾಗಿ ಕರ್ಣ ನೂರಾಳ್ ಬೆಟ್ಟು ಪುನಾರಾಯ್ಕೆ.

ಜಿಲ್ಲಾ ಮಲೆಕುಡಿಯ ಸಂಘ (ರಿ.), ಉಡುಪಿ ಇದರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾಗಿ ಕರ್ಣ ನೂರಾಳ್ ಬೆಟ್ಟು, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪಲತಾ, ಶ್ರೀಮತಿ ಶಾರದಾ ಪೇರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ಅಂಡಾರು, ಸಹ ಕಾರ್ಯದರ್ಶಿಯಾಗಿ ಕುಮಾರಿ ಮಲ್ಲಿಕಾ ಕಬ್ಬಿನಾಲೆ, ಕೋಶಾಧಿಕಾರಿಯಾಗಿ ಪ್ರಶಾಂತ್ ನೂರಾಳ್ ಬೆಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಕೆರ್ವಾಶೆ, ಸಹ ಸಂಘಟನಾ ಕಾರ್ಯದರ್ಶಿಯಾಗಿ ಅಕ್ಷಯ್ ನಾಡ್ಪಲು, ಸಂಯೋಜಕರಾಗಿ ವಿಷ್ಣುಮೂರ್ತಿ ಕೆರ್ವಾಶೆ, ಪದ್ಮನಾಭ ಅಂಡಾರು, ಸುಕೇಶ್ ನೂರಾಳ್ ಬೆಟ್ಟು, ಮಧುಸೂದನ್ ಅಂಡಾರು, ಪ್ರದೀಪ್ ನೂರಾಳ್ ಬೆಟ್ಟು, ಮನೋಜ್ ಪೇರಡ್ಕ, ಸುದೀಪ್ ಅಂಡಾರು, ರವಿ ಬಾಲ್ಚಾರು ಕಬ್ಬಿನಾಲೆ, ಕೃಷ್ಣ ಮಾಳ, ಶಿವಾನಂದ ಕೆರ್ವಾಶೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಂತ ಲಾರೆನ್ಸ್ ಬಸಿಲಿಕ ಅತ್ತೂರು ವಾರ್ಷಿಕ ಮಹೋತ್ಸವಕ್ಕೆ ಚಾಲನೆ

0

ಸಂತ ಲಾರೆನ್ಸ್ ಬಸಿಲಿಕ ಅತ್ತೂರು ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ವಾರ್ಷಿಕ ಮಹೋತ್ಸವಕ್ಕೆ ಚಾಲನೆ ಹಾಗೂ ಸಂತ ಸಾಬೆಸ್ಟಿಯನ್ ನರ ಹಬ್ಬದ ಆಚರಣೆ.

ದಿನಾಂಕ 19 -01- 2025 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ಕಲ್ಯಾಣಪುರ ಚರ್ಚ್ನ ವಂದನೀಯ ಡಾ ಜೇನ್ಸಿಲ್ ಆಳ್ವಾ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸಬ್ಬಾಸ್ಟಿಯಾನರ ಪ್ರತಿಮೆಯನ್ನು ಮೆರವಣಿಗೆಯಲ್ಲಿ ತಂದು ಆಶೀರ್ವಚನವನ್ನು ನೀಡಲಾಯಿತು.

ತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು.ಉದ್ಘಾಟಕರಾಗಿ ವಂದನೀಯ ಡಾ ಜೇನ್ಸಿಲ್ ಆಳ್ವಾ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರದ ಪ್ರಧಾನ ಧರ್ಮ ಗುರು ವಂದನಿಯಾ ಆಲ್ಬನ್ ಡಿಸೋಜ, ಸಹಾಯಕ ಧರ್ಮ ಗುರುಗಳಾದ ಲ್ಯಾರಿ ಪಿಂಟೊ, ಆಧ್ಯಾತ್ಮಿಕ ಧರ್ಮ ಗುರುಗಳಾದ ರೋಮನ್ ಮಸ್ಕೇರೆನ್ಹಸ್, ಉಪ ಯಜಕ ವಲೇಶ್ ಆರಾನ್ಹ
ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಕಾರ್ಯದರ್ಶಿ ರೋನಾಲ್ಡ್ ನೋರೊನ್ಹ, 20 ಆಯೋಗದ ಸಂಚಾಲಕರಾದ ಶ್ರೀಮತಿ ಬೆನ್ನಡಿಕ್ಟ ನೋರೊನ್ಹ, ಇವರು ದೀಪ ಬೆಳಗಿಸುವ ಮೂಲಕ ವಾರ್ಷಿಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು.

ತದನಂತರ ಮಾತನಾಡಿದ ವಂದನೀಯ ಡಾ ಜೇನ್ಸಿಲ್ ಆಳ್ವಾ ಮಾತನಾಡಿದ ಸಂತ ಲಾರೆನ್ಸರ ಹಬ್ಬ ಅನೇಕ ವರ್ಷಗಳಿಂದ ಅನೇಕ ಭಕ್ತಾದಿಗಳನ್ನು ಜಾತಿ ಮತ ಧರ್ಮ ಬೇಯುತವಿಲ್ಲದೆ ಆಚರಣೆ ಮಾಡಲಾಗುತ್ತದೆ ಸಂತ ಲಾರೆನ್ಸರು ಅನೇಕ ಆಶೀರ್ವಾದಗಳು ಪವಾಡಗಳು ಈ ಪವಿತ್ರ ಜಾಗದಲ್ಲಿ ನಡೆಯುತ್ತದೆ. ಪ್ರತಿಯೊಬ್ಬರ ಸಹಕಾರವು ಅಗತ್ಯವಾಗಿದೆ ಎಂದು ಶುಭ ಹಾರೈಸಿದರು. ಪಾಲನ ಮಂಡಳಿಯ ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಇವರು ಕಾರ್ಯಕ್ರಮ ನೆರವೇರಸಿದುರು. ಪಾಲನಾ ಮಂಡಳಿ ಕಾರ್ಯದರ್ಶಿ ರೊನಾಲ್ ನೊರೊನ್ಹಾ. ಧನ್ಯವಾದ ಸಮರ್ಪಿಸಿದರು. ಅತ್ತೂರು ಚರ್ಚ್ ಪಾಲನಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

ಪುಲ್ಕೇರಿ ಬೈಪಾಸ್ ರಕ್ತೇಶ್ವರಿ ಸನ್ನಿಧಿಗೆ ಬೆಳ್ಳಿ ಕಲಶ ಅರ್ಪಣೆ.

0

ಪುಲ್ಕೇರಿ ಬೈಪಾಸ್ ರಕ್ತೇಶ್ವರಿ ಸನ್ನಿಧಿಗೆ ಬೆಳ್ಳಿ ಕಲಶ ಅರ್ಪಣೆ.
ಛತ್ರಪತಿ ಫೌಂಡೇಶನ್ ಇದರ ವತಿಯಿಂದ ಕಾರ್ಕಳ ಪುಲ್ಕೇರಿ ಬೈಪಾಸ್ ನಲ್ಲಿರುವ ಇತಿಹಾಸ ಪ್ರಸಿದ್ಧ ರಕ್ತೇಶ್ವರಿ ಸನ್ನಿಧಿಗೆ ಬೆಳ್ಳಿ ಕಲಶದ ಸಮರ್ಪಣೆಯು ನೆರವೇರಿತು.

ಕ್ಷೇತ್ರದ ಪ್ರಮುಖರಾದ ವಸಂತ ಕೋಟ್ಯಾನ್, ಕ್ಷೇತ್ರದ ಅರ್ಚಕರ ಸಮ್ಮುಖದಲ್ಲಿ ಛತ್ರಪತಿ ಫೌಂಡೇಶನ್ ಸಂಸ್ಥಾಪಕರಾದ ಗಿರೀಶ್ ರಾವ್ ಇವರು ಸಮರ್ಪಿಸಿದರು.

 

ಮುಡಾರು ಗ್ರಾಮ ಪಂಚಾಯತ್ ಮಕ್ಕಳ ವಿಶೇಷ ಗ್ರಾಮ ಸಭೆ

0

ಮುಡಾರು ಗ್ರಾಮ ಪಂಚಾಯತ್ ಮಕ್ಕಳ ವಿಶೇಷ ಗ್ರಾಮ ಸಭೆ

ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ನ ವಿ. ಎಸ್ ಆಚಾರ್ಯ ಸಭಾಭವನದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯಿಂದ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಶಾಲಾ ಮಕ್ಕಳ ವಿವಿಧ ಬೇಡಿಕೆಯನ್ನು ಸ್ವೀಕರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಜಯವಂತರಾವ್ ರವರು ಮಕ್ಕಳ ಹಕ್ಕುಗಳ ಕುರಿತು ಮಾಹಿತಿ ಕಾರ್ಯ ಕ್ರಮ ನಡೆಸಿದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಡಿ ಅತಿಕಾರಿ ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮಾಲತಿ ನಾಯ್ಕ್, ವಿನಯ ಡಿ ಬಂಗೇರ, ಶಿವ ಪ್ರಸಾದ್. ಪ್ರಶಾಂತ್ ಕುಮಾರ್, ರಜತ್ ಆರ್. ಮೋಹನ್, ನೋಡೆಲ್ ಅಧಿಕಾರಿಯವರಾದ ಸಿದ್ದಪ್ಪ ತುಡುಬಿನ, ಶಿಶು ಅಭಿವೃದ್ಧಿ ಇಲಾಖೆಯ ಶಾಂಭವಿ. ಆರೋಗ್ಯ ಇಲಾಖೆಯ ಸುಂದರಿ ಬಿಆರ್, ಉಪಸ್ಥಿತರಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಎಸ್ ಕಾರ್ಯಕ್ರಮ ನಿರ್ವಹಿಸಿದರು.

ಯಕ್ಷಗಾನ ಪ್ರದರ್ಶನ ತಡೆ ಪ್ರಯತ್ನಕ್ಕೂ ಕಾಂಗ್ರೆಸ್ ಪಕ್ಷ ಹಾಗು ನಾಯಕರಾದ ಮುನಿಯಾಲು ಉದಯ್ ಕುಮಾರ್ ಶೆಟ್ರಿಗೂ ಯಾವ ಸಂಬಂಧವೂ ಇಲ್ಲ:ಮುಂಡ್ಲಿ ಯುವ ಕಾಂಗ್ರೆಸ್ ಸ್ಪಷ್ಟನೆ.

0

ಯಕ್ಷಗಾನ ಪ್ರದರ್ಶನ ತಡೆ ಪ್ರಯತ್ನಕ್ಕೂ ಕಾಂಗ್ರೆಸ್ ಪಕ್ಷ ಹಾಗು ನಾಯಕರಾದ ಮುನಿಯಾಲು ಉದಯ್ ಕುಮಾರ್ ಶೆಟ್ರಿಗೂ ಯಾವ ಸಂಬಂಧವೂ ಇಲ್ಲ:ಮುಂಡ್ಲಿ ಯುವ ಕಾಂಗ್ರೆಸ್ ಸ್ಪಷ್ಟನೆ.

ಇತ್ತೀಚೆಗೆ ಜಾರ್ಕಳ ಮುಂಡ್ಲಿ ಗ್ರಾಮದಲ್ಲಿ ನಡೆದ ಯಕ್ಷಗಾನ ತಡೆ ಪ್ರಯತ್ನದ ಹಿಂದೆ ಉದಯ್ ಕುಮಾರ್ ಶೆಟ್ರ ಹೆಸರನ್ನು ಎಳೆದು ತರುವ ಮೂಲಕ ತಮ್ಮ ರಾಜಕೀಯ ತೀಟೆಯನ್ನು ತೀರಿಸಿಕೊಳ್ಲುವ ಬಿ.ಜೆ.ಪಿ ನಾಯಕರ ಪ್ರಯತ್ನ ನಾಚಿಕೇಡಿನ ಪರಮಾವಧಿ ಎಂದು ಮುಂಡ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ಪಷ್ಟಪಡಿಸಿದ್ದಾರೆ.
‌‌‌

ಯಕ್ಷಗಾನ ತಡೆ ಪ್ರಯತ್ನಕ್ಕೆ ಪೋಲಿಸರು ಮುಂದಾದಾಗ ಖುದ್ದು ಸಾರ್ವಜನಿಕರ ಮುಂದೆಯೇ ಉದಯ್ ಕುಮಾರ್ ಶೆಟ್ಟಿಯವರು ದೂರವಾಣಿ ಮೂಲಕವಾಗಿ ಅಜೆಕಾರು ಠಾಣಾ ಉಪನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದು ಯಕ್ಷಗಾನ ಯಾವುದೇ ತಡೆಯಿಲ್ಲದೆ ನಡೆಯಲು ಸಹಕಾರ ನೀಡಿದ್ದಾರೆ,ಈ ಬಗ್ಗೆ ಸ್ಪಷ್ಟನೆ ಬೇಕಾದಲ್ಲಿ ಅಲ್ಲಿದ್ದ ಸಾರ್ವಜನಿಕರನ್ನು‌ಅಥವಾ ಸಂಘಟಕರನ್ನು ಸಂಪರ್ಕಿಸಲಿ.

ಗ್ರಾಮದ ಕಾರ್ಯಕ್ರಮಗಳಲ್ಲಿ ಸಾಮರಸ್ಯದಿಂದ ಪಕ್ಷಾತೀತವಾಗಿ ಶ್ರಮವಹಿಸಿ ದುಡಿಯುವ ಗ್ರಾಮಸ್ಥರ ಮಧ್ಯೆ ವೈಷಮ್ಯ ಮೂಡಿಸಿ ರಾಜಕೀಯ ಬೇಳೆ ಬೇಯಿಸುವ ಬಿ.ಜೆ.ಪಿ ನಾಯಕರ ನಡೆಗೆ ನಮ್ಮ ಧಿಕ್ಕಾರವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಯಕ್ಷಗಾನ ತಡೆ ಪ್ರದರ್ಶನ ಬಿ.ಜೆ.ಪಿ ಹಾಗು ಕಾಂಗ್ರೆಸ್ ಮಧ್ಯೆ ರಾಜಕೀಯ ಅಸ್ತ್ರವಾಗಿ ಬಳಕೆ ಬೇಡ:ಕಲಾವಿದ ಸುರೇಶ ಆಚಾರ್ಯ.

0

ಯಕ್ಷಗಾನ ತಡೆ ಪ್ರದರ್ಶನ ಬಿ.ಜೆ.ಪಿ ಹಾಗು ಕಾಂಗ್ರೆಸ್ ಮಧ್ಯೆ ರಾಜಕೀಯ ಅಸ್ತ್ರವಾಗಿ ಬಳಕೆ ಬೇಡ:ಕಲಾವಿದ ಸುರೇಶ ಆಚಾರ್ಯ.

ಮುಂಡ್ಲಿಯಲ್ಲಿ ನಡೆದ ಯಕ್ಷಗಾನ ತಡೆ ಪ್ರಸಂಗ ಇದೀಗ ವಿವಿಧ ಪಕ್ಷಗಳ ರಾಜಕೀಯ ನಾಯಕರ ನಡುವೆ ಕೆಸರೆರೆಚಾಟಕ್ಕೆ ಕಾರಣವಾಗಿದ್ದು ಇದನ್ನು ನಿಲ್ಲಿಸಿದ್ದು ಸ್ಥಳೀಯ ದೂರಿನ ಮೇರೆಗೆ ಎಂದು ಅಜೆಕಾರು ಉಪಠಾಣಾಧಿಕಾರಿ ಈಶ್ವರ ಯಕ್ಷಗಾನ ಸಂಘಕ್ಕೆ ಜಾರಿ ಮಾಡಿರುವ ನೋಟಿಸ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ ಇದರಲ್ಲಿ ಮುನಿಯಾಲು ಉದಯ್ ಕುಮಾರ್ ಶೆಟ್ರ ಹೆಸರನ್ನು ಅನಗತ್ಯವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಎಳೆದು ತರಲಾಗುತ್ತಿದ್ದು ಇದಕ್ಕೆ ನಮ್ಮ ವಿರೋಧವಿದೆ.

ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಯಕ್ಷಗಾನ ಮುಂದುವರೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಅವರ ನಡೆಗೆ ಆಕ್ರೋಶ ವ್ಯಕ್ತಪಡಿಸಿ ನಮಗೆ ಕಾರ್ಯಕ್ರಮ ಮುಂದುವರೆಸಲು ಗರಿಷ್ಠ ಸಹಕಾರ ನೀಡಿದ್ದಾರೆಯೇ ಹೊರತು ತಡೆಯುವ ಪ್ರಯತ್ನ ಯಾರು ಮಾಡಿಲ್ಲ ಎಂದು ಈಶ್ವರ ಯಕ್ಷಗಾನ ಸಂಘದ ಸದಸ್ಯ ಸುರೇಶ್ ಆಚಾರ್ಯ ಸ್ಪಷ್ಡಪಡಿಸಿದ್ದಾರೆ ಅಲ್ಲದೆ ಅನಗತ್ಯವಾಗಿ ಇದರಲ್ಲಿ ರಾಜಕೀಯ ಎಳೆದು ತರಬೇಡಿ ಎಂದು ಮನವಿ ಮಾಡಿದ್ದಾರೆ.

ನಿಟ್ಟೆ:ಪ್ರೀತಿ ಸಾಲ್ಯಾನ್ ಕೆ ಅವರಿಗೆ ಡಾಕ್ಟರೇಟ್

0

ಪ್ರೀತಿ ಸಾಲ್ಯಾನ್ ಕೆ ಅವರಿಗೆ ಡಾಕ್ಟರೇಟ್

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರೀತಿ ಸಾಲ್ಯಾನ್ ಕೆ ಅವರು ‘ಡಿಸೈನ್ & ಇಂಪ್ಲಿಮೆಂಟೇಶನ್ ಆಫ್ ಚೈಲ್ಡ್ ಆಕ್ಟಿವಿಟಿ ಡಿಟೆಕ್ಷನ್ & ಅನಾಮೊಲಿ ಕ್ಲಾಸಿಫಿಕೇಶನ್ ಇನ್ ಹೆಲ್ತ್ಕೇರ್ ಯೂಸಿಂಗ್ ಡೀಪ್ ಲರ್ನಿಂಗ್ ಫ್ರೇಮ್ವರ್ಕ್ ಇನ್ ವೀಡಿಯೋ ಸೀಕ್ವೆನ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಸಂಜೀವ್ ಕುಲ್ಕರ್ಣಿ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.

 

ಕಾರ್ಲೋತ್ಸವದ ತಡೆಗೆ ಶತ ಪ್ರಯತ್ನ ಪಟ್ಟು ಮಾರ್ಯಾದೆ ಕಳೆದು ಕೊಂಡವರಿಂದ ನೈತಿಕತೆಯ ಪಾಠದ ಅಗತ್ಯವಿಲ್ಲ ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ-ಶುಭದರಾವ್

0

ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ:ಪಕ್ಷದ ಮೇಲೆ ಮಿತ್ಯಾರೋಪ ಸಹಿಸಲ್ಲ

ಕಾರ್ಲೋತ್ಸವದ ತಡೆಗೆ ಶತ ಪ್ರಯತ್ನ ಪಟ್ಟು ಮಾರ್ಯಾದೆ ಕಳೆದು ಕೊಂಡವರಿಂದ ನೈತಿಕತೆಯ ಪಾಠದ ಅಗತ್ಯವಿಲ್ಲ -ಶುಭದರಾವ್

ಮುಂಡ್ಳಿ ಪರಿಸರದಲ್ಲಿ ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನಕ್ಕೆ ದ್ವನಿವರ್ಧಕದ ಬಳಕೆಗೆ ಅನುಮತಿ ಪಡೆದಿಲ್ಲ ಎನ್ನುವ ಕಾರಣಕ್ಕೆ ಪೋಲೀಸರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ವೈಯಕ್ತಿಕ ಮನಸ್ಥಾಪದ ಕಾರಣಕ್ಕೆ ಯಾರೋ ನೀಡಿದ ದೂರಿಗೆ ಪಕ್ಷ ಹೊಣೆಯಾಗುದಿಲ್ಲ. ಅದ್ದರಿಂದ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೇಲೆ ಶಾಸಕರು ಮತ್ತು ಕ್ಷೇತ್ರಾದ್ಯಕ್ಷರು ಮಾಡಿದ ಮಿತ್ಯ ಆರೋಪವನ್ನು ಸಹಿಸಲು ಸಾದ್ಯವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಯಕ್ಷಗಾನ ಕರಾವಳಿಯ ಗಂಡು ಕಲೆ, ನಮ್ಮ ಸಂಸ್ಕೃತಿಯ ಪ್ರತೀಕ, ಅದಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದೆ, ಅದರ ಪ್ರದರ್ಶನವನ್ನು ಮತ್ತು ಕಲವಿದರನ್ನು ಕಾಂಗ್ರೆಸ್ ನಿರಂತರ ಪ್ರೋತ್ಸಾಹಿಸುತ್ತಾ ಬಂದಿದ್ದೇವೆ, ಅದರ ಪ್ರದರ್ಶನವನ್ನು ಯಾರು ತಡೆದರೂ‌ ನಮ್ಮ ಆಕ್ಷೇಪವಿದೆ ಒಂದು ವೇಳೆ ಕಾಂಗ್ರೆಸ್ ನಾಯಕ ತಡೆದಿದ್ದರೆ ಯಾರೆಂದು ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಆದರೆ ಈ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎನ್ನುವುದು ಶಾಸಕರ ಮತ್ತು ಕ್ಷೇತ್ರಾದ್ಯಕ್ಷರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ, ತಡೆಯೊಡ್ಡುವ ಚಾಳಿ ಕಾಂಗ್ರೆಸಿಗಿಲ್ಲ ಅದು ಬಿಜೆಪಿಯ ಸಂಸ್ಕೃತಿ ಎನ್ನುವುದು ಇತೀಚಿಗೆ ನಡೆದ ಕಾರ್ಲೋತ್ಸವದ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ಕಾರ್ಲೋತ್ಸವದ ಕಾರ್ಯಕ್ರಮಕ್ಕೆ ತಡೆ ಮಾಡುವ ಪ್ರಯತ್ನ ಪಟ್ಟು ಕೈ ಸುಟ್ಟುಕೊಂಡಿರುವ ಬಿಜೆಪಿ‌ ನಾಯಕರ ಮಾನ‌ ಬೀದಿ ಪಾಲಾಗಿದೆ.ಎರಡನೇ ಸಾಲಿನ ನಾಯಕರು ಬೆಳೆದರೆ ನಮಗೆ ಕಷ್ಟ ಎಂದು ತನ್ನ ಪಕ್ಷ ಅಧಿಕಾರಕ್ಕೆ ಬರಲು ಹಗಲು ರಾತ್ರಿ ದುಡಿದ ಪಕ್ಷದ ಹಿರಿಯ, ಕಿರಿಯ ನಾಯಕರು ಮತ್ತು ಸಾರ್ವಜನಿಕರ ಸಹಕಾರದಲ್ಲಿ ಅಯೋಜಿಸಿದ್ದ ಕಾರ್ಲೋತ್ಸವಕ್ಕೆ ಎಷ್ಟೆಲ್ಲಾ ತಡೆ ನೀಡಿದ್ದರು ಎನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ.ಈ ಕಾರ್ಯಕ್ರಮಕ್ಕೆ ತಡೆಯೊಡ್ಡುವ ಮೂಲಕ ಮನೆಯವರನ್ನೆ ಪರಸ್ಪರ ಎತ್ತಿ ಕಟ್ಟುವ ಪ್ರಯತ್ನ ಮಾಡಿರುವುದೂ ಗುಟ್ಟಾಗಿ ಉಳಿದಿಲ್ಲ ಎಂದರು.

ಕಾರ್ಯಕ್ರಮ ಯಾವುದೇ ಆಗಿರಲಿ, ಯಾರೇ ಮಾಡಿರಲಿ ಅದರ ಹಿಂದೆ ಅನೇಕರ ಶ್ರಮವಿದೆ ಅದನ್ನು ಅರ್ಧಕ್ಕೆ ನಿಲ್ಲಿಸುವ ಪ್ರಯತ್ನ ಶತ್ರುಗಳು ಮಾಡಬಾರದು. ಆದರೆ ಬಿಜೆಪಿಯ ಕೆಲ ನಾಯಕರಿಂದ ಅದಕ್ಕೆ ತಡೆಯಾದಾಗ ಕಾಂಗ್ರೆಸ್ ಆಯೋಜಕರ ಬೆನ್ನಿಗೆ ನಿಂತು ಕಾರ್ಯಕ್ರಮ ಸಾಂಗವಾಗಿ ನೆರವೇರಲು ಸಹಕಾರ ಮಾಡಿದೆ ಎನ್ನುವುದನ್ನು ಶಾಸಕರು ಮತ್ತು ಕ್ಷೇತ್ರದ್ಯಾಕ್ಷರು ನೆನಪು‌ ಮಾಡಿಕೊಳ್ಳಲಿ ಎಂದು ಶುಭದರಾವ್ ತಿಳಿಸಿದ್ದಾರೆ

ರಾಷ್ಟ್ರೀಯ ಶಾಲಾ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟ-ದ್ವಿತೀಯ ಸ್ಥಾನವನ್ನು ಪಡೆದ ಕಾರ್ಕಳದ ದ್ರುವಿ

0

ಆಂದ್ರ ಪ್ರದೇಶದ ವಿಜಯವಾಡದಲ್ಲಿ ಆಯೋಜಿಸಿದ 68ನೇ ರಾಷ್ಟ್ರೀಯ ಶಾಲಾ ಬಾಲಕಿಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿಯ ಪದಕದ ಗೌರವಕ್ಕೆ ಪಾತ್ರವಾದ ಕರ್ನಾಟಕದ ರಾಜ್ಯ ಬಾಲಕಿಯರ ತಂಡವನ್ನು ಪ್ರತಿನಿಧಿಸಿ ಕಾರ್ಕಳ ಎಸ್. ಎನ್.ವಿ. ಕಾಲೇಜಿನ ವಿದ್ಯಾರ್ಥಿ ಸಾಂತ್ರಬೆಟ್ಟು ಕುಮಾರಿ ದ್ರುವಿ ಇವರಿಗೆ ಜೋಡುರಸ್ತೆಯ ದುರ್ಗಾ ಫ್ರೆಂಡ್ಸ್ ವಾಲಿಬಾಲ್ ಕ್ರೀಡಾಂಗಣದಲ್ಲಿ ಭವ್ಯವಾದ ಸ್ವಾಗತವನ್ನು ನೀಡಲಾಯಿತು.

ಕ್ರೀಡಾ ಪ್ರೋತ್ಸಾಹಕ ಶುಭದರಾವ್ ಅಭಿನಂದನಾ ಮಾತುಗಳನ್ನಾಡಿ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿದರೆ ಅವರಿಗೆ ಸಾಧನೆ ಮಾಡುವಲ್ಲಿ ಪ್ರೇರಣೆಯಗುತ್ತದೆ, ದ್ರುವಿ ಶಾಲಾ ವಿಭಾಗದ ಪಂದ್ಯದಲ್ಲಿ ರಾಷ್ಟ್ರದ ಮಟ್ಟದ ಸಾಧನೆ ಮಾಡಿದ ಕಾರ್ಕಳದ ಪ್ರಥಮ ವಿದ್ಯಾರ್ಥಿನಿ ಆಗಿದ್ದಾರೆ.ಅವರ ಸಾಧನೆ ಶ್ಲಾಘನೀಯ ನಾವೆಲ್ಲರೂ ಹೆಮ್ಮೆ ಪಡುತ್ತೇವೆ ಎಂದರು.

ವಾಲಿಬಾಲ್ ತರಬೇತುದಾರದ ಸಂತೋಷ್ ಡಿ’ಸೋಜ, ಜೀವನ್ ಡಿ’ ಸಿಲ್ವಾ, ಜಯರಾಜ್ ಪೂಜಾರಿ, ವೆಂಕಟೇಶ್ ಪ್ರಭು, ಕ್ರೀಡಾ ಪ್ರೋತ್ಸಾಹಕ ಸಂದೇಶ್ ವರ್ಮ , ಪ್ರತಿಮಾ ಡಿ’ಸೋಜಾ,‌ ದ್ರುವಿ ಪೋಷಕ ದಂಪತಿಗಳಾದ ರಾಜೇಂದ್ರ ಪ್ರಸಾದ್ ಮತ್ತು ಪ್ರಿಯಾ ಹಾಗೂ ದುರ್ಗಾ ಪ್ರೆಂಡ್ಸ್ ತಂಡದ ಆಟಗಾರು ಉಪಸ್ಥಿತರಿದ್ದರು.

ಕಾರ್ಕಳ:ರಕ್ತದಾನ ಶಿಬಿರ-ಉಚಿತ ಕಣ್ಣಿನ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಉಚಿತ ಕನ್ನಡಕ ವಿತರಣೆ

0

ಬಂಡಿಮಠ ಫೌಂಡೇಶನ್ ಕಾರ್ಕಳ ಇದರ ವತಿಯಿಂದ ಕಾರ್ಕಳ ಮೆಡಿಕಲ್ ಹೆಲ್ಪ್ ಲೈನ್ (ರಿ.) ಇದರ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು,ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಹಯೋಗದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಇದರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಪೊರೆಶಸ್ತ್ರ ಚಿಕಿತ್ಸೆ ಮತ್ತು ಉಚಿತ ಕನ್ನಡಕ ವಿತರಣೆ ಜ.14 ಮಂಗಳವಾರ ಮದೀನ ಮಸೀದಿ ಸಭಾಂಗಣ ತಾಲೂಕು ಆಫೀಸ್ ರಸ್ತೆ ಕಾರ್ಕಳ ಇಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದೆ.