Home Blog Page 30

ಕಾರ್ಕಳ: ಲಯನ್ಸ್ ಜಿಲ್ಲಾ ಪ್ರಾಂತೀಯ 3 ರ ತರಬೇತಿ ಕಾರ್ಯಗಾರ

0

 

ಲಯನ್ಸ್ ಜಿಲ್ಲಾ ಪ್ರಾಂತೀಯ 3 ರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಭವನ ಮೂಡುಬೆಳ್ಳೆ ಇಲ್ಲಿ ಜರಗಿದ್ದು, ಈ ಕಾರ್ಯಾಗಾರವನ್ನು ಲಯನ್ಸ್ ಜಿಲ್ಲೆ 317 ಸಿ ಇದರ ಜಿಲ್ಲಾ ಗವರ್ನರ್ ಲಯನ್ ಸ್ವಪ್ನ ಸುರೇಶ್ ಅವರು ಉದ್ಘಾಟಿಸಿದರು.

ಲಯನ್ಸ್ ಅಂತರಾಷ್ಟ್ರೀಯ ಮಟ್ಟದಲ್ಲಿ ಆಗುವ ಹೊಸ ಹೊಸ ಬದಲಾವಣೆಗಳನ್ನು ಇಂತಹ ಪುನಶ್ಚೇತನ ಶಿಬಿರದ ಮೂಲಕ ಮನದಟ್ಟು ಮಾಡಿಕೊಂಡು ಲಯನ್ ಸಂಸ್ಥೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಲು ಸುವರ್ಣ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ತನ್ನ ಉದ್ಘಾಟನಾ ಮಾತುಗಳನ್ನಾಡಿದರು.

ಪ್ರಥಮ ಜಿಲ್ಲಾ ಉಪಗವರ್ನರ್ ಲಯನ್ ರಾಜೀವ್ ಕೋಟ್ಯಾನ್, ಜಿಲ್ಲಾ ಸಂಯೋಜಕ ಲಯನ್ ರಂಜನ್ ಕಲ್ಕೂರ ತನ್ನ ಅನುಭವದ ಮಾತುಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂತಿಯ ಅಧ್ಯಕ್ಷ ಲಯನ್ ಗಿರೀಶ್ ರಾವ್ ವಹಿಸಿದ್ದರು. ಮುಖ್ಯ ತರಬೇತುದರಾಗಿ ಲಯನ್ ಸುರೇಶ್ ಪ್ರಭು ಹಾಗೂ ಜೆಸಿ ಶ್ರೀಧರ್ ಭಾಗವಹಿಸಿದರು.

ವಲಯ ಅಧ್ಯಕ್ಷರಾದ ಲಯನ್ ಗೀತಾ ರಾವ್, ಲಯನ್ ರೋಷನ್ ಡಿಸಿಲ್ವಾ, ಲಯನ್ ವೇಲೇರಿಯನ್ ಲೋಬೊ ಉಪಸ್ಥಿತರಿದ್ದರು. ಪ್ರಾಂತ್ಯ ಕಾರ್ಯದರ್ಶಿ ವಿಜಯ ಧೀರಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಕಳ:ಶೆಡ್ ನಲ್ಲಿದ್ದ 5 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯೊಂದಿಗೆ ಸಿಸಿಟಿವಿಯನ್ನೂ ಕದ್ದೊಯ್ದ ಕಳ್ಳರು!

0

ಕಾರ್ಕಳ:ಶೆಡ್ ನಲ್ಲಿದ್ದ ಆಡಿಕೆಯೊಂದಿಗೆ ಸಿಸಿಟಿವಿಯನ್ನೂ ಕದ್ದೊಯ್ದ ಕಳ್ಳರು!

ಶೆಡ್ ನಲ್ಲಿದ್ದ ಅಡಿಕೆಯೊಂದಿಗೆ ಸಿಸಿಟಿವಿಯನ್ನೂ ಕಳ್ಳತನಗೈದ ಘಟನೆ ನಡೆದಿದೆ.

ಮುಲ್ಲಡ್ಕ ಗ್ರಾಮದ ರವೀಂದ್ರ ಎಂಬುವವರ ಅಡಿಕೆ ತೋಟದಲ್ಲಿರುವ ಶೆಡ್‌ನ ಬೀಗವನ್ನು ಮುರಿದು ಶೆಡ್‌ನಲ್ಲಿ ಇಟ್ಟಿದ್ದ 5 ಲಕ್ಷ ರೂಪಾಯಿ ಮೌಲ್ಯದ ಸುಲಿದ ಒಣ ಅಡಿಕೆ ಇರುವ 34 ಪ್ಲಾಸ್ಟಿಕ್ ಗೋಣಿಗಳನ್ನು ಹಾಗೂ ಶೆಡ್‌ಗೆ ಅಳವಡಿಸಿದ 6,000/- ರೂಪಾಯಿ ಮೌಲ್ಯದ ಸಿಸಿ ಕ್ಯಾಮರ ಕಳವು ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇಲಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಪ್ರದೀಪ್ ಬೇಲಾಡಿ ಆಯ್ಕೆ

0

ಕಾಂತಾವರ ಗ್ರಾಮದ ಬೇಲಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಪ್ರದೀಪ್ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು.

ಬೇಲಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ಸಭೆಯಲ್ಲಿ ಪ್ರದೀಪ್ ಬೇಲಾಡಿ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಅರುಣ್ ಕೋಟ್ಯಾನ್ ಕೇಪ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪೂಜಾರಿ ಗುಡ್ಡೆಯಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಧೀರಜ್ ಶೆಟ್ಟಿ ಪಡ್ಡಲ್ಲಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಪ್ರತಿನಿಧಿಯಾಗಿ ಪ್ರಶಸ್ತ್ ಶೆಟ್ಟಿ ಮುದಲೆಮನೆ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್.ಎಸ್.ಆರ್ ಅವರು ಸಂಘದ ಕೋಶಾಧಿಕಾರಿಯಾದರು.

ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ನಂತರ ನವರಾತ್ರಿ ಸಂದರ್ಭದಲ್ಲಿ ಶಾಲೆಯಲ್ಲಿ ನಡೆಯಲಿರುವ ಶಾರದಾ ಪೂಜಾ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆಗಳು ಹಾಗೂ ಶಾಲಾ ಅಭಿವೃದ್ಧಿಯ ಕುರಿತಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್.ಎಸ್.ಆರ್, ಹಳೆ ವಿದ್ಯಾರ್ಥಿ ಸಂಘದ ನಿರ್ಗಮಿತ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿಗಳಾದ ರಂಜಿತ್ ಶೆಟ್ಟಿ ಪುಂಚಾಡಿ ಮತ್ತು ಪ್ರಭಾಕರ ಕುಲಾಲ್, ಶಾರದಾ ಪೂಜಾ ಮಹೋತ್ಸವದ ಅರ್ಚಕರಾದ ಸುಧೀರ್ ಭಟ್ ನ್ಯಾಯತೋಟ, ಹಿರಿಯ ಹಳೆ ವಿದ್ಯಾರ್ಥಿಗಳಾದ ಸುರೇಶ್ ಭಟ್ ನ್ಯಾಯತೋಟ, ವಿದ್ಯಾ.ವಿ. ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಕಳ : ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್

0

 

ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ. ಆಗಸ್ಟ್ 23 ಮತ್ತು 24 ರಂದು ಕೇವಲ ಎರಡು ದಿನಗಳ ಕಾಲ ನಡೆಯುವ ಈ ಆಫರ್‌ನಲ್ಲಿ ಆಯ್ಕೆ ಮಾಡಿದ ಪುಸ್ತಕಗಳ ಖರೀದಿಗೆ 50% ರಿಯಾಯಿತಿ ಲಭ್ಯವಿರಲಿದೆ.

‘ಮಹಾ ಓದು’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಈ ಆಫರ್‌ನಲ್ಲಿ ಓದುಗರು ಕನಿಷ್ಠ ಐದು ಪುಸ್ತಕಗಳನ್ನು ಖರೀದಿಸಿದರೆ ಮಾತ್ರ ರಿಯಾಯಿತಿಯ ಸೌಲಭ್ಯ ಪಡೆಯಬಹುದು. MAHA50 ಎಂಬ ಕೂಪನ್ ಕೋಡ್ ಬಳಸಿ ಆನ್‌ಲೈನ್ ಖರೀದಿ ಮಾಡುವವರಿಗೆ ರಿಯಾಯಿತಿ ಅನ್ವಯವಾಗಲಿದೆ.

‘ಪುಸ್ತಕ ಮನೆ’ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಲು ಅವಕಾಶ ಕಲ್ಪಿಸಿದ್ದು, ಗ್ರಾಹಕರು https://pustakamane.com/product-category/pustakamane/ ಮೂಲಕ ನೇರವಾಗಿ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಜೊತೆಗೆ ವಾಟ್ಸಪ್ ಮೂಲಕವೂ ( ‪+91 96064 74289‬ ) ತಮ್ಮ ಆರ್ಡರ್ ಅನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ, ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ

0

ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ, ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ

ಆಡಂಬರರಹಿತ ಆರ್ಥಪೂರ್ಣ ಕಾರ್ಯಕ್ರಮ : ಡಾ.ಸಂಜಯ್

ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನು ಹೊಂದಿದ ಅರ್ಥಪೂರ್ಣ ಆಡಂಬರರಹಿತ ಜ್ಞಾನಸುಧಾದ ಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯ ಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದು ಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ, ಸ್ತ್ರಿರೋಗ ತಜ್ಞ ಡಾ. ಸಂಜಯ್ ಹೇಳಿದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ನಡೆದ ಸಾಮಾಜಿಕ ನೆರವಿನ ಸೇವಾ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಹಾಗೂ ಸ್ವಚ್ಛ ಕಾರ್ಕಳದ ರಾಯಭಾರಿ ಫೆಲಿಕ್ಸ್ ಜೋಸೆಫ್ ವಾಜ್‌ರವರಿಗೆ ತಲಾ 10 ಸಾವಿರ, ಕುಕ್ಕುಂದೂರು, ಹಿರ್ಗಾನ, ಅಜೆಕಾರ್ ಹಾಗೂ ಬೈಲೂರು ಗ್ರಾಮದ 18 ಸ್ವಚ್ಛತಾ ಸಿಬ್ಬಂದಿಗಳಿಗೆ ತಲಾ 5 ಸಾವಿರ ನೀಡಿ ಗೌರವಿಸಲಾಯಿತು. ಕ್ಷಯಪೀಡಿತ 8 ಜನರಿಗೆ ತಲಾ 3 ಸಾವಿರದಂತೆ ರೂ. 24 ಸಾವಿರ, ಅಪಘಾತಕ್ಕೀಡಾದ ಹಳೆವಿದ್ಯಾರ್ಥಿ ಕಿರಣ್ ನಾಯಕ್‌ರವರಿಗೆ ರೂ. 20 ಸಾವಿರ, ತೊರೆಹಡ್ಲು ಶಾಲೆಗೆ ರೂ. 10 ಸಾವಿರ ಸೇರಿದಂತೆ ಈ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 1.6 ಲಕ್ಷ ರೂ. ಧನಸಹಾಯ ಮಾಡಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಸಮಾಜ ಸೇವಕ ವಿಶು ಶೆಟ್ಟಿಯವರು ಯುವಜನತೆ ದುಶ್ಚಟಗಳಿಗೆ ಒಳಗಾಗದೆ ಸದೃಢ ಸಮಾಜದ ಆಸ್ತಿಯಾಗಿ ಸಮಾಜದಲ್ಲಿ ಮಾದರಿಯಾಗಿ ಹೊರ ಹೊಮ್ಮಬೇಕು ಎಂದರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ವಿದ್ಯಾರ್ಥಿಗಳು ಮೌಲಿಕ ವಿಚಾರಧಾರೆಯನ್ನು ಮೈಗೂಡಿಸಿಕೊಂಡಾಗ ನಮ್ಮ ಸಾಮಾಜಿಕ ಸೇವೆಯು ಸಾರ್ಥಕ ಎಂದರು.

ಕಾರ್ಯಕ್ರಮದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯ ರಹಮತ್ತುಲ್ಲಾ, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಮಣಿಪಾಲ್ ಹೈಸ್ಕೂಲ್ ಟ್ರಸ್ಟಿನ ಅಧ್ಯಕ್ಷ ಹಾಗೂ ಸಂಚಾಲಕ ಪ್ರಕಾಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಗಣೇಶ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.

ರಕ್ತದಾನ ಶಿಬಿರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21 ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು, ಹಳೆವಿದ್ಯಾರ್ಥಿ ಸಂಘ ಜ್ಞಾನಸುಧಾ ಹಾಗೂ ಕೆ.ಎಂ.ಸಿ. ಬ್ಲಡ್‌ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ಜರುಗಿತು. ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ.ಗಣೇಶ್ ಮೋಹನ್ ಉದ್ಘಾಟಿಸಿ ರಕ್ತದಾನ ಮಹಾದಾನವಾಗಿದೆ. ಜ್ಞಾನಸುಧಾ ಸಂಸ್ಥೆಯು ಸಂಸ್ಥಾಪಕರ ದಿನಾಚರಣೆಯನ್ನು ಸಾಮಾಜಿಕ ಕಾರ್ಯಕ್ರಮದ ಮೂಲಕ ಕೈಗೊಳ್ಳುತ್ತಿರುವ ಸೇವೆ ಶ್ಲಾಘನೀಯ ಎಂದರು. ರಕ್ತದಾನ ಶಿಬಿರದಿಂದ 83 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು ಮತ್ತು ಹಿತೈಶಿ ದೇವೇಂದ್ರ ನಾಯ್ಕ್ ಉಪಸ್ಥಿತರಿದ್ದರು. ಸಂಸ್ಥೆಯ ಪಿ.ಆರ್.ಒ ಶ ಜ್ಯೋತಿಪದ್ಮನಾಭ ಭಂಡಿ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ವಿನಯಚಂದ್ರ ನಿರೂಪಿಸಿ ವಂದಿಸಿದರು.

 

ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ-ಪ್ರಕರಣ ದಾಖಲು

0

ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ-ಪ್ರಕರಣ ದಾಖಲು

ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ಭಾನು ಮುಷ್ತಾಕ್ ಕುರಿತು ಅವಹೇಳನಕಾರಿಯಾಗಿ ಬರೆದುದಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದೀಪ್ ಶೆಟ್ಟಿ ನಿಟ್ಟೆ ಎಂಬಾತ ತನ್ನ ಫೇಸ್ ಬುಕ್ ಖಾತೆಯಲ್ಲಿ ”ಬೂಕರ್ ಪ್ರಶಸ್ತಿ ಪುರಸ್ಕ್ರತೆ ಭಾನು ಮುಷ್ತಾಕ್ ಇವರಿಂದ ದಸರಾ ಉದ್ಘಾಟನೆ ಎಂಬುದಾಗಿ ಸಿ ಎಂ ಘೋಷಣೆ’‘ ಎಂಬ ಪೋಸ್ಟರ್‌ಗೆ  “ದಸರಾ ಅನ್ನೋದು ಹಿಂದುಗಳ ಸಾಂಸ್ಕೃತಿಕ ಹಬ್ಬ. ಅಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಿಂದೂ ಸಂಪ್ರದಾಯದಂತೆ ನಡೆಯಲ್ಪಡುತ್ತದೆ ಅಂತಹವರಲ್ಲಿ ಸನಾತನ ಹಿಂದೂ ಸಂಸ್ಕೃತಿಯನ್ನು ಒಪ್ಪದ ಆಚರಣೆ ಮಾಡದ ಈಕೆಯಿಂದ ದಸರಾ ಉದ್ಘಾಟನೆ ಮಾಡುವ ದರ್ದು ಏನಿದೆ…..ಹಿಂದೂ ವಿರೋಧಿ ಕಾಂಗ್ರೆಸ್ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪ್ರತಿಯೊಂದು ವಿಚಾರದಲ್ಲೂ ಮುಂದಿರುತ್ತದೆ…’’ ಎಂದು ಪೋಸ್ಟ್ ಮಾಡಿದ್ದ.

ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈಷಮ್ಯ, ವೈರತ್ವ ಉಂಟು ಮಾಡುವ ರೀತಿಯಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವುದಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 100/2025 ಕಲಂ 353(2) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ.

ಮೈಕ್ರೋ ಫೈನಾನ್ಸ್ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲ. ರೂ. ಪರಿಹಾರ : ಮುಖ್ಯಮಂತ್ರಿ

0

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ನೀಡುತ್ತಿರುವಂತೆ, ಖಾಸಗಿ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಕಟಿಸಿದ್ದಾರೆ.

ವಿಧಾನ ಪರಿಷತ್ತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಸಿ.ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ನೀಡುತ್ತಿರಲಿಲ್ಲ. ಈಗ ಅವರಿಗೂ ಪರಿಹಾರ ನೀಡುವ ಆಲೋಚನೆಯಿದೆ. ಈ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಮಾಲೋಚಿಸಿ ಸಧ್ಯದಲ್ಲೇ ಪರಿಹಾರ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ನಟಿ ನೊರಾ ಫತೇಹಿ ರೀತಿ ದೇಹ ಹೊಂದುವಂತೆ ಹಿಂಸೆ : ಪತ್ನಿ ದೂರು

0

ನಟಿ ನೊರಾ ಫತೇಹಿ ರೀತಿ ದೈಹಿಕ ಸೌಂದರ್ಯ ಹೊಂದುವಂತೆ ಪತಿ ಕಿರುಕುಳ ನೀಡುತ್ತಾನೆ ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬಳು ಆರೋಪಿಸಿದ್ದಾಳೆ.

ದೈಹಿಕ ಶಿಕ್ಷಣ ಶಿಕ್ಷಕನಾಗಿರುವ ಪತಿ ತನ್ನನ್ನು ದಪ್ಪ ಹಾಗೂ ಕುರೂಪಿ ಎಂದು ಹಿಂಸಿಸುತ್ತಾನೆ. ಜೊತೆಗೆ ನಿತ್ಯ 3 ಗಂಟೆ ವ್ಯಾಯಾಮ ಮಾಡದಿದ್ದರೆ ಊಟ ನೀಡದೆ ಬೆದರಿಸುತ್ತಾನೆ. ಅಲ್ಲದೆ ವಿವಾಹವಾದಾಗ ತನ್ನ ಪೋಷಕರು 76 ಲಕ್ಷ ವ್ಯಯಿಸಿದ್ದರು. ಈಗ ಮತ್ತೆ ವರದಕ್ಷಿಣೆಗಾಗಿ ಪತಿಯ ಪೋಷಕರು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ತನ್ನ ದೂರಿನಲ್ಲಿ ಮಹಿಳೆ ದಾಖಲಿಸಿದ್ದಾಳೆ.

ಹೊಸ್ಮಾರಿನಲ್ಲಿ ತಿಮರೋಡಿಯನ್ನು ಕರೆದೊಯ್ಯುವಾಗ ಅಡಿಷನಲ್ ಎಸ್ಪಿಯ ಕಾರಿಗೆ ಗ ಬೆಂಬಲಿಗರ ಕಾರು ಢಿಕ್ಕಿ – ಪ್ರಕರಣ ದಾಖಲು

0

 

ಬ್ರಹ್ಮಾವರ ಪೊಲೀಸರು ಪ್ರಕರಣ ಒಂದರ ವಿಚಾರಣೆಗೆ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಕರೆದೊಯುತ್ತಿದ್ದ ವೇಳೆ ಕಾರ್ಕಳ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲೇ ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಅವರ ಹಿಂದೆ ಬರುತ್ತಿದ್ದ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್ ವಾಹನಕ್ಕೆ ಗುದ್ದಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯಕ್ಕೆ ಕಾರು ಸಹಿತ ವಾಹನದಲ್ಲಿದ್ದ ಸೃಜನ್, ಹಿತೇಶ್ ಶೆಟ್ಟಿ, ಸುಜಿತ್ ಮಡಿವಾಳ ಅವರ‌ನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡರು‌.

ಕಾರ್ಕಳ: ಕೇವಲ ಪುಸ್ತಕ ಓದಿದ್ರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿಬೇಕು – ಹೆಚ್ ರಾಜೇಶ್ ಪ್ರಸಾದ್

0

 

ಯಾವುದೇ ಒಂದು ಪ್ರಶ್ನೆಗೆ ಕನಿಷ್ಠ ಸಮಯದಲ್ಲಿ ಅತಿ ಸೂಕ್ತ ಉತ್ತರವನ್ನು , ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಂತಹ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಬಹುದು. ಅದಕ್ಕೆ ಸಿದ್ಧತೆ ನಡೆಸುವುದು ಅತಿ ಮುಖ್ಯ. ಅದು ಪ್ರಾಥಮಿಕ, ಪ್ರೌಢ, ಪಿಯುಸಿ, ಪದವಿ ಹಂತದ ವಿದ್ಯಾಭ್ಯಾಸದ ಜೊತೆ ಜೊತೆಗೆ ನಡೆಯಬೇಕು.ಜಮ್ಮು ಮತ್ತು ಕಾಶ್ಮೀರ ಸರಕಾರದ ಪ್ರಧಾನ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಹೆಚ್ ರಾಜೇಶ್ ಪ್ರಸಾದ್ ಹೇಳಿದರು.

ಅವರು ಎಸ್‌.ವಿ.ಟಿ ವನಿತಾ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ “ಮೌಲ್ಯ ಸಂಗಮ” ವರ್ಷದ ಸರಣಿ ಕಾರ್ಯಕ್ರಮದಡಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.

ಮುಂದಕ್ಕೆ ಮಾತನಾಡಿ, ಪದವಿ ಪಡೆದ ನಂತರ ಅದು ಪೂರ್ಣ ಪ್ರಮಾಣದ ಸಿದ್ಧತೆಯೊಂದಿಗೆ ನಡೆದಾಗ ಯಶಸ್ಸು ಪಡೆಯಬಹುದು. ಕೇವಲ ಪುಸ್ತಕ ಓದಿ್ದರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿ ಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್‌ವಿ ಎಜುಕೇಶನ್ ಟ್ರಸ್ಟಿನ ಕೋಶಾಧಿಕಾರಿ ಐ. ರವೀಂದ್ರನಾಥ ಪೈ , ಉಡುಪಿ ಜಿಲ್ಲಾ ಮಾನವ ಆಯೋಗದ ಅಧ್ಯಕ್ಷರಾದ ಉದಯಕುಮಾರ್, ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ, ಪ್ರೌಢಶಾಲೆ ವಿಭಾಗದ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ ಮತ್ತು ಕಾಲೇಜಿನ ಉಪನ್ಯಾಸಕರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಸ್‌ವಿ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿ ಕೆ. ಪಿ. ಶೆಣೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇತಿಹಾಸ ಉಪನ್ಯಾಸಕರಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಪ್ರತೀಕ್ಷಾ ಆರ್ ವಂದಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಪ್ರಭಾತ್ ರಂಜನ್ ನಿರೂಪಿಸಿದರು.