Home Blog Page 10

A1 ಸೂಪರ್ ಮಾರ್ಟ್ ಗ್ರಾಹಕರಿಗೆ ಸಿಗಲಿದೆ 1 ಗ್ರಾಂ ಬೆಳ್ಳಿಯ ನಾಣ್ಯ!

0

ಈ ಬಾರಿಯ ದೀಪಾವಳಿ ಹಬ್ಬಕ್ಕೆ ಕಾರ್ಕಳದ A1 ಸೂಪರ್ ಮಾರ್ಟ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದೆ. A1 ಸೂಪರ್ ಮಾರ್ಟ್ ನಲ್ಲಿ 3೦೦೦ಕ್ಕೂ ಆಧಿಕ ಖರೀದಿಗೆ ಉಚಿತವಾಗಿ 1 ಗ್ರಾಂ ಬೆಳ್ಳಿಯ ನಾಣ್ಯ ತಮ್ಮದಾಗಲಿದೆ.

ದೀಪಾವಳಿ ಪ್ರಯುಕ್ತ ಅತ್ಯುತ್ತಮ ಆಫರ್ಸ್, ಡಿಸ್ಕೌಂಟ್ಸ್, ಬೈ ಒನ್ ಗೆಟ್ ಒನ್ ಆಫರ್ಸ್ ಗಳು ಲಭ್ಯವಿದೆ.

ಈ ಆಫರ್ ಅ. 18 ರಿಂದ 22 ರವರೆಗೆ ಇರಲಿದೆ. ಇಂದೇ ಕಾರ್ಕಳ ಪೇಟೆಯ ಅಥವಾ ಜೋಡುರಸ್ತೆ ಸೂಪರ್ ಮಾರ್ಟ್ ಗೆ ಭೇಟಿ ನೀಡಿ. ಬೆಳ್ಳಿಯ ನಾಣ್ಯ ತಮ್ಮದಾಗಿಸಿಕೊಳ್ಳಿ.

ಉಡುಪಿ : ಯುವಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ!

0

 

ಯುವಪ್ರೇಮಿಗಳಿಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಅಂಬಲಪಾಡಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಮೃತ ಯುವತಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದುಬಂದಿದೆ.

ನಗರ ಪೋಲಿಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕ‌ರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಕಂಬಳ ಕ್ಷೇತ್ರದ ಸಾಧಕರಾದ ಬೋಳದಗುತ್ತು ಸಂತೋಷ್ ಶೆಟ್ಟಿ ಅವರಿಗೆ ಸನ್ಮಾನ

0

 

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಕಂಬಳ ಕ್ಷೇತ್ರದ ಸಾಧಕರಾದ ಬೋಳದಗುತ್ತು ಸಂತೋಷ್ ಶೆಟ್ಟಿ ಅವರಿಗೆ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು.

ವೇದಿಕೆಯಲ್ಲಿ ಉದ್ಯಮಿ ಮರಿಮಾರಗುತ್ತು ಅವಿನಾಶ್ ಮಲ್ಲಿ, ಉದ್ಯಮಿ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಸುಲೋಚನಾ ಕೋಟ್ಯಾನ್ ಉಪಸ್ಥಿತಿತರಿದ್ದರು.

ಕಾರ್ಕಳ: ಸಿಂಧೂರ ಪಟಾಕಿ ಸ್ಟಾಲ್ ನ ಪಟಾಕಿ ಖರೀದಿಯಲ್ಲಿ ಭರ್ಜರಿ ಆಫರ್

0

ಸಿಂಧೂರ ಪಟಾಕಿ ಸ್ಟಾಲ್ ನಲ್ಲಿ ಪ್ರತಿ ₹999/- ಖರೀದಿಯ ಮೇಲೆ ಕಾರ್ಕಳದ ವಿವಿಧ ಮಳಿಗೆಗಳಲ್ಲಿ ₹1,150/- ರೂಪಾಯಿವರೆಗಿನ ಆಫರ್ ಸಿಗಲಿದೆ.

ಸಿಂಧೂರ ಪಟಾಕಿ ಸ್ಟಾಲ್ ನಲ್ಲಿ ₹999/- ವರೆಗಿನ ಪಟಾಕಿ ಖರೀದಿಸಿದ ಗ್ರಾಹಕರಿಗೆ ಕಾರ್ಕಳದ ಪ್ರಕಾಶ್ ಹೋಟೆಲ್ ನಲ್ಲಿ 10%, ಹೋಟೆಲ್ ಮಯೂರದಲ್ಲಿ 20%, ಶ್ರೇಷ್ಠ ಸ್ವೀಟ್ಸ್ 10%, ಲಕ್ಷ್ಮಿ ಸಿಲ್ಕ್ಸ್ ನಲ್ಲಿ 20% ಹಾಗೂ ಬಾಲಾಜಿ ಮೊಬೈಲ್ಸ್ ನಲ್ಲಿ ಹೊಸ ಮೊಬೈಲ್ ಖರೀದಿ ಮೇಲೆ 500 ರೂ. ವರೆಗಿನ ರಿಯಾಯಿತಿ ಸಿಗಲಿದೆ.

ಈ ಆಫರ್ ಅ.18 ರಿಂದ 23 ರವರೆಗೆ ಇರಲಿದ್ದು, ಹೊಸ್ಮಾರು, ಬಜಗೋಳಿ, ಕಾರ್ಕಳ ಗಾಂಧಿ ಮೈದಾನ, ಬೆಳ್ಳಣ್, ಸಚ್ಚರಿಪೇಟೆ, ಬೈಲೂರಿನ ಸ್ಟಾಲ್ ಗಳಲ್ಲಿ ಈ ಆಫರ್ ಗಳು ಸಿಗಲಿವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 7349226760, 8792375667, 8971654629

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಯುವ ಉದ್ಯಮಿ ಬೆಳ್ಮಣ್ಣು ಸುರೇಶ್ ದೇವಾಡಿಗ ಅವರಿಗೆ ಸನ್ಮಾನ

0

 

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಯುವ ಉದ್ಯಮಿ ಬೆಳ್ಮಣ್ಣು ಸುರೇಶ್ ದೇವಾಡಿಗ ಅವರಿಗೆ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು.

ಸಮಾರಂಭದ ವೇದಿಕೆಯಲ್ಲಿ ಕೆದಿಂಜೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ತುಕಾರಾಮ ಶೆಟ್ಟಿ, ಹೆಬ್ರಿ ಅಮೃತ ಭಾರತಿ ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ವೀಣೇಶ್ ಅಮೀನ್ ಸಾಂತೂರು, ಸಂಜೀವ ಕೆದಿಂಜೆ, ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ ಉಪಸ್ಥಿತಿತರಿದ್ದರು. ಸಂಘದ ಸದಸ್ಯರಾದ ಪದ್ಮಶ್ರೀ ಪೂಜಾರಿ ಸನ್ಮಾನಿತರ ಪರಿಚಯ ವಾಚಿಸಿದರು.

ನಿಟ್ಟೆ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸ್ಪಿಕ್-ಮೆಕೆ ಮಂಗಳೂರು ಚಾಪ್ಟರ್ ನ ಸಹಯೋಗದೊಂದಿಗೆ ಅ. ೧೩ ರಂದು ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು.

ಸಂಗೀತ ಕಾರ್ಯಕ್ರಮವನ್ನು ಪ್ರಸಿದ್ಧ ಗಾಯಕಿ ವಿದುಷಿ ಅಮೃತಾ ಮುರಳಿ ಅವರು ನಡೆಸಿಕೊಟ್ಟರು. ಅವರಿಗೆ ಮೃದಂಗದಲ್ಲಿ ವಿದ್ವಾನ್ ಬಿ. ಎಸ್. ಪ್ರಶಾಂತ್ ಮತ್ತು ವಯೊಲಿನ್ ನಲ್ಲಿ ವಿದುಷಿ ಅದಿತಿ ಕೃಷ್ಣಪ್ರಕಾಶ್ ಸಹಕರಿಸಿದರು.

ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ಅಂಡ್ ಕಲ್ಚರ್ ಅಮಾಂಗ್ ಯೂತ್ (ಸ್ಪಿಕ್ ಮೆಕೆ) ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತು ಸಂಗೀತಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಕೃಷ್ಣರಾಜ ಜೋಯಿಸ ಕಾರ್ಯಕ್ರಮ ಸಂಯೋಜಿಸಿದರು. ಅಂತಿಮ ವರ್ಷದ ರೊಬೊಟಿಕ್ಸ್ ಮತ್ತು ಎಐ ವಿದ್ಯಾರ್ಥಿನಿ ಫರೀಜಾ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಕಳ: ಸುಧೀಕ್ಷಾ ಪೈ ಅವರಿಗೆ ಪಿಎಚ್.ಡಿ. ಪದವಿ

0

 

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಸುಧೀಕ್ಷಾ ಪೈ ಅವರು “A Psychoanalytical Study of Women Protagonists in Select Novels of Preeti Shenoy” ಎಂಬ ಶೀರ್ಷಿಕೆಯ ಪ್ರಬಂಧವನ್ನು ಯಶಸ್ವಿಯಾಗಿ ನಿರ್ವಹಿಸಿ ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿಯನ್ನು ಪಡೆದಿದ್ದಾರೆ. ಈ ಸಂಶೋಧನೆ ಲೂರ್ದುಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಂಡಿದೆ.

ಸುಧೀಕ್ಷಾ ಪೈ ಅವರು ಬಾಳೆಹೊನ್ನೂರು ನಿವಾಸಿಗಳಾದ ಸುರೇಂದ್ರ ಪೈ ಮತ್ತು ಸುಧಾ ಪೈ ಅವರ ಪುತ್ರಿ. ಅವರು ಕ್ರಿಯೇಟಿವ್ ಪಿಯು ಕಾಲೇಜು, ಕಾರ್ಕಳದ ಉಪನ್ಯಾಸಕರಾದ ಮಹೇಶ್ ಶೆಣೈ ಅವರ ಪತ್ನಿ ಹಾಗೂ ಪರಪ್ಪಾಡಿ ಸರಕಾರಿ ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯರು ಪೂರ್ಣಿಮಾ ಶೆಣೈ ಅವರ ಸೊಸೆಯಾಗಿದ್ದಾರೆ.

ಪ್ರಸ್ತುತ ಅವರು ಕ್ರಿಯೇಟಿವ್ ಪಿಯು ಕಾಲೇಜು, ಕಾರ್ಕಳದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪೂರ್ವದಲ್ಲಿ ಎನ್‌ಎಂಎಎಮ್‌ಐಟಿ (NMAMIT), ನಿಟ್ಟೆ ಸಂಸ್ಥೆಯಲ್ಲಿ ಸಹ ಸೇವೆ ಸಲ್ಲಿಸಿದ್ದಾರೆ.

ಪ್ರೀತಿ ಶೆಣೈ ಅವರ ಕಾದಂಬರಿಗಳಲ್ಲಿನ ಮಹಿಳಾ ನಾಯಕಿಯರ ಮನೋವೈಜ್ಞಾನಿಕ ಅಂಶಗಳ ವಿಶ್ಲೇಷಣೆಯು ಸುಧೀಕ್ಷಾ ಪೈ ಅವರ ಸಂಶೋಧನೆಗೆ ಶೈಕ್ಷಣಿಕ ವಲಯದಿಂದ ವಿಶಿಷ್ಟ ಮೆಚ್ಚುಗೆ ವ್ಯಕ್ತವಾಗಿದೆ.

ನಿಟ್ಟೆಯಲ್ಲಿ ವಿದ್ಯಾರ್ಥಿಗಳಿಂದ ಸತತ ನಾಲ್ಕನೇ ವರ್ಷದ ಕೇಶದಾನ

0

 

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಡಿಪಾರ್ಟ್ಮೆಂಟ್ ಆಫ್ ಕೌನ್ಸೆಲಿಂಗ್, ಸ್ಟೂಡೆಂಟ್ ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿರುವ ಔರಾ ಕ್ಲಬ್ ನ ವಿದ್ಯಾರ್ಥಿಗಳು ಮರ್ಸಿ ಬ್ಯೂಟಿ ಅಕಾಡೆಮಿ, ಮಂಗಳೂರು ಮತ್ತು ಫ್ಲೈಹೈ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ, ಸತತ ನಾಲ್ಕನೇ ವರ್ಷದ ಕೂದಲು ದಾನ ಅಭಿಯಾನವನ್ನು ಅ. 13 ರಂದು ಆಯೋಜಿಸಿದರು.

ದಾನ ಮಾಡಲಾದ ಕೂದಲನ್ನು ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವವರಿಗೆ ಉಚಿತ ವಿಗ್ ತಯಾರಿಸಲು ಉಪಯೋಗಿಸಲಾಗುವುದು. ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಜತ ವರ್ಷದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರಿಗೆ ಸನ್ಮಾನ

0

 

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ರಜತ ವರ್ಷದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರಿಗೆ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು.

ವೇದಿಕೆಯಲ್ಲಿ ಕಂಬಳ ಕ್ಷೇತ್ರದ ಸಾಧಕ ಬೋಳದಗುತ್ತು ಸಂತೋಷ್ ಶೆಟ್ಟಿ, ಉದ್ಯಮಿ ಮರಿಮಾರಗುತ್ತು ಅವಿನಾಶ್ ಮಲ್ಲಿ, ಉದ್ಯಮಿ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷ ಕೀರ್ತನ್ ಪೂಜಾರಿ ಬೋಳ ಉಪಸ್ಥಿತರಿದ್ದರು.

ಸಿ.ಎ.ನಿತ್ಯಾನಂದ ಪ್ರಭುವರವರಿಗೆ ಮಾತೃವಿಯೋಗ

0

ಸಿ.ಎ.ನಿತ್ಯಾನಂದ ಪ್ರಭುವರವರಿಗೆ ಮಾತೃವಿಯೋಗ

ಕಾರ್ಕಳ ಜ್ಞಾನಸುಧಾದಲ್ಲಿ ಶ್ರದ್ಧಾಂಜಲಿ ಸಭೆ

ಕಾರ್ಕಳದ ಪ್ರಸಿದ್ಧ ಲೆಕ್ಕಪರಿಶೋಧಕ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿಯಾಗಿರುವ ಸಿ.ಎ ನಿತ್ಯಾನಂದ ಪ್ರಭುರವರ ತಾಯಿ ಸುಮಿತ್ರಾ ಪ್ರಭು (87) ಅವರು ಆದಿತ್ಯವಾರದಂದು ದೈವಾಧೀನರಾದರು. ಕೆರ್ವಾಶೆಯಲ್ಲಿ ಜನಿಸಿದ ಇವರು ಅಜೆಕಾರ್ ಗುಂಡುರಾಯ ಪ್ರಭುರವನ್ನು ವರಿಸಿ ಅಂಗಡಿ ವ್ಯಾಪಾರದಲ್ಲಿ 40ವರ್ಷಗಳಿಂದ ತೊಡಗಿಸಿಕೊಂಡ ಇವರಿಗೆ ಓರ್ವ ಪುತ್ರನನ್ನು ಹಾಗೂ ಮೂವರು ಪುತ್ರಿಯರನ್ನು, 9 ಮೊಮ್ಮಕ್ಕಳನ್ನು ಹಾಗೂ ಒಂದು ಮರಿಮೊಮ್ಮಗುವನ್ನು ಅಗಲಿದ್ದಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕಾರ್ಕಳ ಜ್ಞಾನಸುಧಾದ ಮುಖ್ಯ ಸಭಾಂಗಣದಲ್ಲಿ ಅಗಲಿದ ದಿವ್ಯಚೇತನ ಸುಮಿತ್ರಾ ಪ್ರಭುರವರಿಗೆ ಸೋಮವಾರದಂದು ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಇದೇ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು, ಉದ್ಯಮಿ ತ್ರಿವಿಕ್ರಮ ಕಿಣಿ, ಸುಮಿತ್ರಾ ಅವರ ಮೊಮ್ಮಗ, ಸಂಸ್ಥೆಯ ಇಂಟರ್ನಲ್ ಅಡಿಟರ್ ಸಿ.ಎ ವಿಘ್ನೇಶ್ ಕಾಮತ್ ಅವರು ಪುಷ್ಪನಮನವನ್ನು ಸಲ್ಲಿಸಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನುಡಿನಮನ ಸಲ್ಲಿಸಿದರು.