Home Blog Page 17

ನಿಟ್ಟೆ: ಎನ್.ಸಿ.ಸಿ ಕೆಡೆಟ್ ಗಳ ಸಾಧನೆ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕದ ಕೆಡೆಟ್ಗಳಾದ ಕೆಡೆಟ್ ಕ್ಯಾಪ್ಟನ್ ಸ್ವಸ್ತಿಕ್ ಎಸ್ ದೇವಾಡಿಗ (7 ನೇ ಸೆಮಿಸ್ಟರ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗ), ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ (7 ನೇ ಸೆಮಿಸ್ಟರ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗ) ಮತ್ತು ಲೀಡಿಂಗ್ ಕೆಡೆಟ್ ಮೊನಿಶ್ ಪಿ ಎಂ (5 ನೇ ಸೆಮಿಸ್ಟರ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗ), ಅಖಿಲ ಭಾರತ ನೌಕಾ ಸೈನಿಕ ಶಿಬಿರ 2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದರು.

ಸೆಪ್ಟೆಂಬರ್ 1 ರಿಂದ 12 ರ ನಡುವೆ ಲೋನಾವಾಲಾದ ಐಎನ್ಎಸ್ ಶಿವಾಜಿಯಲ್ಲಿ ಈ ಶಿಬಿರವು ನಡೆಯಿತು. ಆರೋಗ್ಯ ಮತ್ತು ನೈರ್ಮಲ್ಯ ಪರೀಕ್ಷೆಯಲ್ಲಿ ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ ಮತ್ತು ಲೀಡಿಂಗ್ ಕೆಡೆಟ್ ಮೋನಿಶ್ ಪಿಎಂ ಕಂಚಿನ ಪದಕಗಳನ್ನು ಗೆದ್ದರು. ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವು AINSC2025 ರ ಒಟ್ಟಾರೆ ಅತ್ಯುತ್ತಮ ನಿರ್ದೇಶನಾಲಯ ಗೌರವವನ್ನು ಗೆದ್ದುಕೊಂಡಿತು.

ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಮುದ್ರಾಡಿ ಕೇಶವ ಆಚಾರ್ಯ ಆಯ್ಕೆ

0

 

ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಸೈನಿಕ ಮುದ್ರಾಡಿ ಕೇಶವ ಆಚಾರ್ಯ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ನಡೆದಿದೆ.

ಮುದ್ರಾಡಿ ಕೇಶವ ಆಚಾರ್ಯ ಸೇನೆಯಲ್ಲಿ ನಿವೃತ್ತರಾದ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಸಮಾಜಮುಖಿ ಚಿಂತನೆಯೊಂದಿಗೆ ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆ ಯೋಚನೆಯನ್ನು ಹೊಂದಿದ್ದಾರೆ. ಗೌರವಾಧ್ಯಕ್ಷರಾಗಿ ರಾಮಕೃಷ್ಣ ಆಚಾರ್ಯ ಹೆಬ್ರಿ, ಉಪಾಧ್ಯಕ್ಷರಾಗಿ ಸದಾಶಿವ ಆಚಾರ್ಯ ರಾಗಿಹಕ್ಲು, ಪ್ರಧಾನ ಕಾರ್ಯದರ್ಶಿಯಾಗಿ ಪ್ರೌಢಶಾಲಾ ಶಿಕ್ಷಕ ಹೆಬ್ರಿಯ ಎಚ್.ಎಂ.ಶಶಿಶಂಕರ್‌, ಜೊತೆ ಕಾರ್ಯದರ್ಶಿಯಾಗಿ ಸುರೇಂದ್ರ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ ಆಚಾರ್ಯ ಮಠದಬೆಟ್ಟು, ಕೋಶಾಧಿಕಾರಿಯಾಗಿ ಎಳಗೋಳಿ ರವೀಂದ್ರ ಪುರೋಹಿತ್‌ ಹೆಬ್ರಿ, ಸದಸ್ಯರಾಗಿ ರಾಘವೇಂದ್ರ ಆಚಾರ್ಯ ರಾಗಿಹಕ್ಲು, ಜಗನ್ನಾಥ ಆಚಾರ್ಯ ಸೇಳಂಜೆ, ನಾರಾಯಣ ಆಚಾರ್ಯ ಕುಚ್ಚೂರು, ಪತ್ರಕರ್ತ ಸುಕುಮಾರ ಆಚಾರ್ಯ ಖಜಾನೆ, ಗಣೇಶ ಆಚಾರ್ಯ ಹೆಬ್ರಿ, ಪ್ರಶಾಂತ ಆಚಾರ್ಯ ಮಠದಬೆಟ್ಟು, ಭಾಸ್ಕರ ಆಚಾರ್ಯ ಸೀತಾನದಿ, ಗಣಪತಿ ಆಚಾರ್ಯ ಕನ್ಯಾನ ಆಯ್ಕೆಯಾಗಿದ್ದಾರೆ.

ನಿಟ್ಟೆ : ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿಗೆ 5,000 ಮತ್ತು 3,000 ಮೀ. ಓಟದಲ್ಲಿ ಬೆಳ್ಳಿ

0

 

ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 ರಿಂದ 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ 5,000 ಮೀಟರ್ ಓಟ ಮತ್ತು 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಇದೇ ವಯೋವಿಭಾಗದಲ್ಲಿ 100 ಮೀಟರ್ ಓಟ ಮತ್ತು 4×100 ಮೀ ರಿಲೇಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸ್ತುತಿ ಪಿ ಶೆಟ್ಟಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿರುವರು.

ಸಮುದಾಯದ ಅಭಿವೃದ್ಧಿಗೆ ಇದು ಅವಶ್ಯವಾಗಿದೆ

0

 

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸುವಂತೆ‌ ಶುಭದರಾವ್‌ ಮನವಿ

ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ‌ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು, ಯಾವುದೇ ಗೊಂದಲಗಳಿಲ್ಲದೆ ತಮ್ಮ ಸೇವೆಯಲ್ಲಿ ಮುಂದುವರೆಯುತ್ತಿರುವುದು ಕಂಡು ಬಂದಿದೆ.

ಈ ಸಮೀಕ್ಷೆಯು ರಾಜ್ಯದ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಸಮೀಕ್ಷೆಯ ಸಂದರ್ಭದಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಜನತೆ ಸೂಕ್ತ ಮಾಹಿತಿಯನ್ನು ಯಾವುದೇ ಅಂಜಿಕೆ ಇಲ್ಲದೆ ನೀಡುವ ಮೂಲಕ ಸರಕಾರದ ಈ ಜನಗಣತಿಗೆ

ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳ ಕುರಿತು ಜ್ಞಾನ ಹಂಚಿಕೆ ಅಧಿವೇಶನ: ವಾಸ್ತು ಶಾಸ್ತ್ರದ ಒಳನೋಟ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗವು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್ (ಐಕೆಎಸ್) ಸಹಯೋಗದೊಂದಿಗೆ “ಸಿವಿಲ್ ಎಂಜಿನಿಯರಿಂಗ್ ನಲ್ಲಿ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳು: ವಾಸ್ತು ಶಾಸ್ತ್ರದ ಒಳನೋಟಗಳು” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಸೆ.೨೫ ರಂದು ಆಯೋಜಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸಿವಿಲ್ ಎಂಜಿನಿಯರ್ ಎ.ಆರ್. ಸತೀಶ್ ರಾವ್ ಇಡ್ಯ ಕಾರ್ಯಕ್ರಮಕ್ಕೆ ಶುಭಕೋರಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ಪ್ರಾಚೀನ ವಾಸ್ತುಶಿಲ್ಪದ ಜ್ಞಾನವನ್ನು ಆಧುನಿಕ ಸಿವಿಲ್ ಎಂಜಿನಿಯರಿಂಗ್ ಅಭ್ಯಾಸಗಳೊಂದಿಗೆ ಬೆರೆಸುವ ಮಹತ್ವವನ್ನು ವಿವರಿಸಿದರು.

ತಾಂತ್ರಿಕ ಅಧಿವೇಶನಗಳಲ್ಲಿ ಸಿವಿಲ್ ಎಂಜಿನಿಯರ್ ಎ.ಆರ್. ಸತೀಶ್ ರಾವ್ ಇಡ್ಯ ಅವರು “ಪರಿಹಾರ ವಾಸ್ತು: ಪ್ರಾಯೋಗಿಕ ದೃಷ್ಟಿಕೋನ” ಕುರಿತು ಗೋಷ್ಠಿಯನ್ನು ನೀಡಿದರು. ಇದು ಸಾಮಾನ್ಯ ನಿರ್ಮಾಣ ಸವಾಲುಗಳಿಗೆ ಪರಿಹಾರಗಳನ್ನು ತೋರಿಸಿತು.

ಉಡುಪಿಯ ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ.ಗೋಪಾಲಾಚಾರ್ ಅವರು ವಾಸ್ತು ಶಾಸ್ತ್ರ ತತ್ವಗಳ ಅನಿವಾರ್ಯತೆಯ ಬಗ್ಗೆ ವಿದ್ವತ್ಪೂರ್ಣ ಒಳನೋಟಗಳನ್ನು ಒದಗಿಸುವ ಮೂಲಕ “ವಾಸ್ತುವಿನ ಅನಿವಾರ್ಯತೆ” ಕುರಿತು ಮಾತನಾಡಿದರು.

ಮಧ್ಯಾಹ್ನದ ಅಧಿವೇಶನಗಳಲ್ಲಿ, ಮಣಿಪಾಲದ ಮುನಿಯಾಲ್ ಆಯುರ್ವೇದಿಕ್ ಕಾಲೇಜಿನ ಪ್ರೊ.ಹರಿ ಪ್ರಸಾದ್ ಭಟ್ಹೆ ರ್ಗಾ, ಮನೆ ನಿರ್ಮಾಣದ ಪ್ರಾಯೋಗಿಕ ಸಲಹೆಗಳೊಂದಿಗೆ “ವಸತಿ ಕಟ್ಟಡ ವಾಸ್ತು ಮಾರ್ಗದರ್ಶನ” ವನ್ನು ಹಂಚಿಕೊಂಡರು.

ವಾಸ್ತು ಸಲಹೆಗಾರ ಮತ್ತು ಸಿವಿಲ್ ಎಂಜಿನಿಯರ್ ಎ.ಮುರಳೀಧರ್ ಹೆಗಡೆ ಅವರ ಸಮಾರೋಪ ತಾಂತ್ರಿಕ ಉಪನ್ಯಾಸವು “ವಾಸ್ತು ಕುರಿತ ಆಧುನಿಕ ದೃಷ್ಟಿಕೋನಗಳು” ಸಾಂಪ್ರದಾಯಿಕ ಜ್ಞಾನವನ್ನು ಸಮಕಾಲೀನ ಎಂಜಿನಿಯರಿಂಗ್ ಪರಿಹಾರಗಳೊಂದಿಗೆ ಬೆಸೆಯಿತು.

ಐಕೆಎಸ್ ನಿರ್ದೇಶಕ ಡಾ.ಸುಧೀರ್ ರಾಜ್ ಕೆ ಅವರು ಸಿವಿಲ್ ಎಂಜಿನಿಯರಿಂಗ್ ನ ಭವಿಷ್ಯವನ್ನು ಹೆಚ್ಚಿಸುವಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಗಳ ಪ್ರಸ್ತುತತೆಯನ್ನು ತಿಳಿಸಿದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಕಾರಂತ್ ಹಾಗೂ ತುಷಾರ್ ಎಸ್ ಶೆಟ್ಟಿ ಕಾರ್ಯಾಗಾರವನ್ನು ಸಂಯೋಜಿಸಿದರು.

ಕಾರ್ಕಳ: ಜೇಸಿಐ ಕಾರ್ಕಳ ರೂರಲ್‌ ವತಿಯಿಂದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ವಿವಿಧ ಅಂಗಗಳು ಹಾಗೂ ಕಾರ್ಯ ವೈಖರಿ ಪರಿಚಯ ಕಾರ್ಯಕ್ರಮ

0

 

ಜೇಸಿಐ ಕಾರ್ಕಳ ರೂರಲ್‌ ಹಾಗೂ ಎಸ್.ಡಿ.ಎಂ.ಸಿ. ಯ ಸಹಯೋಗದೊಂದಿಗೆ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ವಿವಿಧ ಅಂಗಗಳು ಹಾಗೂ ಕಾರ್ಯ ವೈಖರಿ ಪರಿಚಯಿಸುವ ಕಾರ್ಯಕ್ರಮವು ಕಾರ್ಕಳದ ನ್ಯಾಯಾಲಯದ ಸಂಕೀರ್ಣ ದಲ್ಲಿ ಯಶಸ್ವಿಯಾಗಿ ನಡೆಯಿತು.

10ನೇ ತರಗತಿಯ ಸುಮಾರು 100 ವಿದ್ಯಾರ್ಥಿಗಳಿಗೆ ಹಿರಿಯ ವಕೀಲರಾದ ಸನತ್ ಕುಮಾರ್ ಜೈನ್ ರವರು ಕಾನೂನಿನ ಬಗ್ಗೆ ಅರಿವು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಜೆಸಿಐ ಕಾರ್ಕಳ ರೂರಲ್ ನ ಅಧ್ಯಕ್ಷರಾದ ಜೆಸಿ ಅರುಣ್ ಪೂಜಾರಿ ಮಾಂಜ, ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರು ಹಾಗೂ ಪೂರ್ವಧ್ಯಕ್ಷರಾದ ಜೆಸಿ ವೀಣಾ ರಾಜೇಶ್, ಹಿರಿಯ ವಕೀಲರಾದ ಸನತ್ ಕುಮಾರ್ ಜೈನ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಆನoದ್ರಾಯ ನಾಯಕ್ ,ಮುಖ್ಯೋಪಾಧ್ಯಾಯರಾದ ದಿವಾಕರ್ ಪಟ್ಲ, ಶಿಕ್ಷಕರಾದ ಪ್ರತಿಮಾ ನಾಯಕ್, ಸುಪ್ರಿಯಾ, ಜೆಜೆಸಿ ರಿಯಾ ಹಾಗೂ ಜೆಸಿಐ ಸದಸ್ಯರು ಉಪಸ್ಥಿತರಿದ್ದರು.

 

ಕ್ರೈಸ್ಟ್ ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅಗತ್ಯತೆ ಉಪನ್ಯಾಸ ಕಾರ್ಯಕ್ರಮ

0

 

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಜೀವ ವಿಮೆಯ ವಿಧಗಳು ಮತ್ತು ಅವುಗಳ ಅಗತ್ಯತೆಯ ಕುರಿತು ಉಪನ್ಯಾಸ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ವಿಭಾಗದ ಅಭಿವೃದ್ಧಿ ಅಧಿಕಾರಿ ಅಶ್ವಿತ್ ನಾಯ್ಕ್ ಅವರು ಸಂಪನ್ಮೂಲ ಅಧಿಕಾರಿಗಳಾಗಿ ಮಾತನಾಡಿ “ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯವಾಗಿದ್ದು, ವಿಮೆ ಮಾಡಿಸುವ ಮೊದಲು ಅದರ ನಿಯಮ ನಿಬಂಧನೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ವಿಮಾಕ್ಷೇತ್ರದಲ್ಲಿ ಪೂರ್ಣಕಾಲಿಕ, ಅರೆಕಾಲಿಕ ಮುಂತಾದ ಅನೇಕ ಉದ್ಯೋಗಾವಕಾಶಗಳಿದ್ದು, ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರ ಪ್ರವೇಶಿಸುವಾಗ ಇವುಗಳನ್ನು ಬಳಸಿಕೊಳ್ಳಬೆಕು” ಎಂದು ಹೇಳಿ ವಿಮಾ ಕ್ಷೇತ್ರದ ಸಂಪೂರ್ಣ ಮಾಹಿತಿ ನೀಡಿದರು.

ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರೇಯಾ ಸ್ವಾಗತಿಸಿ ಲೆರಿಕ್ ವಂದಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು

ನಿಟ್ಟೆಯ ತಾಂತ್ರಿಕ ಕಾಲೇಜಿನಲ್ಲಿ ನಡೆದ ಎಐನ್ನೋವೇಶನ್ II 2025 ಕೋಡ್4ಭಾರತ್ ಹ್ಯಾಕಥಾನ್

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.23 ಹಾಗೂ 24 ರಂದು ಸತತ 24 ಗಂಟೆಗಳ ಹ್ಯಾಕಥಾನ್ ‘ಎಐನ್ನೋವೇಶನ್ II 2025’ ನ್ನು ಹಮ್ಮಿಕೊಳ್ಳಲಾಯಿತು.

ಸಾಮಾಜಿಕ ಅಗತ್ಯಗಳಿಗೆ ಪರಿಣಾಮಕಾರಿ, ತಂತ್ರಜ್ಞಾನ-ಚಾಲಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಈ ಕಾರ್ಯಕ್ರಮವು ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿತು.

ಸಮಾರೋಪ ಸಮಾರಂಭದಲ್ಲಿ ಕಿಂಡ್ರೆಲ್ ಸಂಸ್ಥೆಯ ಗ್ಲೋಬಲ್ ಡೆಲಿವರಿ ಲೀಡರ್ಶಿಪ್ ನ ಹಿರಿಯ ಉಪಾಧ್ಯಕ್ಷ ಶಂಕರ ಶ್ರೀನಿವಾಸನ್ ಅತಿಥಿಗಳಾಗಿ ಭಾಗವಹಿಸಿ ‘ಇಂತಹ ಹ್ಯಾಕಥಾನ್ ಗಳು ಉತ್ತಮ ಐಡಿಯಾಗಳನ್ನು ಹೊರತರುವಲ್ಲಿ ಸಹಕಾರಿಯಾಗುತ್ತವೆ. ಈ ರೀತಿಯ ಸ್ಪರ್ಧೆಗಳಲ್ಲಿ ಹೊರಹೊಮ್ಮಿದ ಯೋಜನೆಗಳು ನಿತ್ಯಜೀವನದಲ್ಲಿ ಕಮರ್ಶಿಯಲೈಸ್ ಆಗುವ ಹಂತವನ್ನು ಕಾಣಬೇಕಾಗಿದೆ. ಈ ಐಡಿಯಾಗಳು ಕೇವಲ ಸ್ಪರ್ಧೆಗಷ್ಟೇ ಸೀಮಿತವಾಗಿರದೆ ಸಮಾಜಕ್ಕೆ ಪ್ರಯೋಜನಕಾರಿಯಾಗಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಆಡಳಿತ ವಿಭಾಗದ ಪ್ರೊ-ಚಾನ್ಸಲರ್ ವಿಶಾಲ್ ಹೆಗ್ಡೆ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ವಿದ್ಯಾರ್ಥಿಗಳು ವಿವಿಧ ಬಗೆಯ ಸಾಮಾಜಿಕ ಸಮಸ್ಯೆಗಳಿಗೆ ವಿನೂತನ ಚಿಂತನೆಯೊಂದಿಗೆ ಪರಿಹಾರ ಕಂಡುಕೊಳ್ಳಬೇಕು. ಇಂತಹ ಹ್ಯಾಕಥಾನ್ ಗಳು ವಿದ್ಯಾರ್ಥಿಗಳ ಆಲೋಚನಾಶಕ್ತಿಯನ್ನು ವೃದ್ದಿಸುತ್ತದೆ’ ಎಂದರು.

ವೇದಿಕೆಯಲ್ಲಿ ಕಿಂಡ್ರೆಲ್ ಸಂಸ್ಥೆಯ ಡೆಲಿವರಿ ಮ್ಯಾನೇಜ್ಮೆಂಟ್ ಮತ್ತು ಇಂಡಿಯಾ ಯೂನಿವರ್ಸಿಟಿ ಲೀಡರ್ ವಿಭಾಗದ ನಿರ್ದೇಶಕ ಡಾ. ರಾಜ್ ಮೋಹನ್ ಸಿ. ಮೈಕ್ರೋಸಾಫ್ಟ್ ಸಂಸ್ಥೆಯ ಡೇಟಾ ಮತ್ತು ಎಐ ಪ್ರೋಗ್ರಾಂ ಮುಖ್ಯಸ್ಥ ಸುಮಿತ್ ರಂಜನ್,ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ್ ಉಪಸ್ಥಿತರಿದ್ದು ವಿಜೇತರಿಗೆ ಅತಿಥಿಗಳೊಡಗೂಡಿ ಬಹುಮಾನಗಳನ್ನು ವಿತರಿಸಿದರು.

ಸೇಂಟ್ ಜೋಸೆಫ್ ಕಾಲೇಜಿನ ರಿಯನ್ ಜೇಡನ್ ವಾಲ್ಡರ್, ಸಲೋಮಿ ಡಿಸೌಜಾ, ಮ್ಯಾಕ್ ರಿಯಾನ್ ಡಿಸೋಜಾ ಮತ್ತು ಮಿಲ್ಟನ್ ಬ್ರಾಗ್ಸ್ ಅವರನ್ನು ಒಳಗೊಂಡ ನಲ್ ಪಾಯಿಂಟರ್ಸ್ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು.

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅನನ್ಯಾ ಭಟ್, ಪ್ರತೀಕ್ ಪ್ರಕಾಶ್ ಕಿಣಿ, ಸುಜನ್ ಕುಮಾರ್ ಶೆಟ್ಟಿ ಮತ್ತು ಲಕ್ಷ್ಮೀಶ್ ಎಂ ಪ್ರಭು ಅವರನ್ನೊಳಗೊಂಡ ಬಯೋ ಇನ್ನೋವೇಟರ್ಸ್ ತಂಡವು ದ್ವಿತೀಯ ಸ್ಥಾನವನ್ನು ಪಡೆದರೆ, ಎಜೆ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಜ್ಞಾನೇಶ್, ಮಿಲನ್ ಸಿಐ, ಹಿಮಾಂಶು ಹೆಗ್ಡೆ ಮತ್ತು ಗೌರೇಶ್ ಜಿ ಪೈ ಅವರನ್ನೊಳಗೊಂಡ ಅನ್ಡಿಫೈನ್ಡ್ ತಂಡವು ಎರಡನೇ ರನ್ನರ್ಸ್ ಅಪ್ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಕಾರ್ಯಕ್ರಮವನ್ನು ಕೌನ್ಸೆಲಿಂಗ್, ವೆಲ್ಫೇರ್, ಟ್ರೈನಿಂಗ್ & ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಜಿ ಕುಮಾರ್, ಕೌನ್ಸಿಲರ್ ಅಂಕಿತ್ ಎಸ್ ಕುಮಾರ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಶಶಾಂಕ್ ಶೆಟ್ಟಿ ಇವರು ಸಂಯೋಜಿಸಿದರು. ವಿದ್ಯಾರ್ಥಿ ನಂದನ್ ಪೈ ಅತಿಥಿಗಳನ್ನು ಸ್ವಾಗತಿಸಿದರು. ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನುಷಾ ಆರ್ ಶರತ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ :SVT ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಉದ್ಘಾಟನೆ

0

 

ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳಿಗೆ ‘ಯುವ ಸ್ಪಂದನ’ ಕೇಂದ್ರ ಸಂಪರ್ಕಿಸಿ, ಸಹಾಯ ತೆಗೆದುಕೊಳ್ಳಿ, ಪರಿಹಾರ ಕಂಡುಕೊಳ್ಳಿ ಎಂದು ಉಡುಪಿ ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕೆ ಸುನೀತಾ ತಿಳಿಸಿದರು.

ಇವರು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಪೋಕ್ಸೋ ಕಾಯಿದೆ ಹೇಗೆ ಸಹಾಯ ಮಾಡುತ್ತದೆ ಎಂದು ಮಾಹಿತಿ ನೀಡಿದರು. ಶಿಕ್ಷಣ,ವ್ಯಕ್ತಿತ್ವ ಬೆಳವಣಿಗೆ, ಸಂಬಧಗಳು, ಸುರಕ್ಷತೆ, ಲಿಂಗ, ಲಿಂಗತ್ವ, ಲೈಂಗಿಕತೆ, ಆರೋಗ್ಯ ಮತ್ತು ಜೀವನ ಶೈಲಿಯ ಬಗ್ಗೆ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೋ| ಗೀತಾ. ಜಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ನಿರ್ದೇಶಕಿ ವಿನುತಾ ಕಾಮತ್ ಅತಿಥಿಗಳನ್ನು ಪರಿಚಯಿಸಿ, ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಾಯಕಿಯರಾದ ದಿಶಾ, ಸುಶ್ಮಿತಾ ಉಪಸ್ಥಿತರಿದ್ದರು. ಮಂಜುಳಾ ವಂದಿಸಿದರು. ಸಹನಾ ಕಾರ್ಯಕ್ರಮ ನಿರೂಪಿಸಿದರು.

ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮ : ವಿಶ್ವದಕಿರಿಯ ಮುಖ್ಯೋಪಾಧ್ಯಾಯ ಪಶ್ಚಿಮ ಬಂಗಾಳದ ಬಾಬರ್ ಅಲಿ ಭಾಗಿ

0

 

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಹೇಳುತ್ತಾ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು.

ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಬೋಧಕ – ಬೋಧಕೇತರ ವರ್ಗದವರು, ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.