Home Blog Page 3

ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ

ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿನಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು.

ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ ಅಭ್ಯಾಸ ಮತ್ತು ಮಾರ್ಗದರ್ಶನದ ಫಲವಾಗಿ ಈ ಮಹತ್ವದ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಆದ್ಯ ಎಸ್. ಪಡ್ರೆ ಅವರ ಈ ಸಾಧನೆಗೆ ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಆದ್ಯ ಅವರು ಇನ್ನೂ ಹೆಚ್ಚಿನ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಲಿ ಎಂಬ ಹಾರೈಕೆಯನ್ನು ವ್ಯಕ್ತಪಡಿಸಿದ್ದಾರೆ.

ನಿಟ್ಟೆ ಡಾ. ವಿನಯ ಹಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

ನಿಟ್ಟೆ ಡಾ. ವಿನಯ ಹಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರು, ನಿಟ್ಟೆ ವಿ.ವಿ. ಕುಲಪತಿಗಳು, ಶಿಕ್ಷಣ ತಜ್ಙರು, ಸಾವಿರಾರು ಜನರ ಉದ್ಯೋಗದಾತರು, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರು, ನಮ್ಮ ಮಾರ್ಗದರ್ಶಕರಾದ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ. ವಿನಯ ಹೆಗ್ಟೆಯವರು ನಿಟ್ಟೆಯಂತಹಾ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿ ಇಂದು ತಾಂತ್ರಿಕ, ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಸ್ಪತ್ರೆಗಳು, ಲೆಮಿನಾ ಪೌಂಡ್ರೀಸ್ ಮುಂತಾದ ಕೈಗಾರಿಕೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಗಿದವರು ಮತ್ತು ಸಾವಿರಾರು ಜನರಿಗೆ ಉದ್ಯೋಗದಾತರಾಗಿ ದೇಶದ ಆರ್ಥಿಕತೆ ಬಹಳಷ್ಟು ಕೊಡುಗೆ ನೀಡಿದವರು, ಶಿಕ್ಷಣ ತಜ್ಙರಾಗಿ, ಯಶಸ್ವಿ ಉದ್ಯಮಿಯಾಗಿ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಾ ಮೇರು ವ್ಯಕ್ತಿತ್ವನ್ನು ಹೊಂದಿದ್ದ ಅವರ ಅಗಲುವಿಕೆಯು ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೂ ತುಂಬಲಾರದ ನಷ್ಟವಾಗಿದೆ. ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರಣಿಸಲಿ, ಹಾಗೂ ಅವರ ಕುಟುಂಬ ವರ್ಗಕ್ಕೆ , ಅಪಾರ ಅಭಿಮಾನಿಗಳಿಗೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯು ದೊರಕಲಿ ಎಂದು ಉದಯ ಶೆಟ್ಟಿ ಮುನಿಯಾಲು ಅವರು ತಮ್ಮ ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ – ಶುಭದರಾವ್

 

ಇತೀಚಿಗೆ ನಡೆದ ಮಂಗಳೂರು ಕಂಬಳದಲ್ಲಿ ಕಂಬಳ ಬೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ ಕಡಂಬರನ್ನು ಕಂಬಳದ ವೇದಿಕೆಯಲ್ಲಿ ವ್ಯಕ್ತಿಯೊರ್ವರು ಸಾರ್ವಜನಿಕವಾಗಿ ಅವಹೇಳ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಆ ವ್ಯಕ್ತಿಯು ತಕ್ಷಣ ಕ್ಷಮೆ ಯಾಚಿಸುವಂತೆ ಆಗ್ರಹಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಬಳ‌ ಕ್ಷೇತ್ರಕ್ಕೆ ಗುಣಪಾಲ ಕಡಂಬರ ಕೊಡುಗೆ ಅಪಾರ. ಕಂಬಳಕ್ಕಾಗಿ ತನ್ನ ಬದುಕನ್ನೆ ಮುಡುಪಾಗಿಟ್ಟ ಶ್ರೇಷ್ಠ ವ್ಯಕ್ತಿ, ಅವರ ಗಟ್ಟಿ ನಿರ್ಧಾರಗಳಿಂದ ಕಂಬಳದಲ್ಲಿ ಶಿಸ್ತು ಪಾಲನೆಯಾಗುತ್ತಿದೆ, ಕಂಬಳದ ಬೆಳವಣಿಗೆಗೆ ಅಕಾಡೆಮಿಯನ್ನು ಪ್ರಾರಂಬಿಸಿ‌, ಅನೇಕ‌ ಉದಯೋನ್ಮುಖ ಓಟಗಾರು ಮತ್ತು ಪರಿಚಾರಕರು ಬೆಳೆಯಲು ಕಾರಣರಾದರು. ಅನೇಕ ಹೊಸ ಕಂಬಳಗಳ ಪ್ರಾರಂಭಕ್ಕೂ ಅವರು ಕಾರಣಕರ್ತರಾಗಿದ್ದಾರೆ.

ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಲ್ಲಿ ಕಂಬಳದ ಇತಿಹಾಸವನ್ನು ಕೇಳಲು ಸಾವಿರಾರು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಅಂತಹ ವ್ಯಕ್ತಿಯ ಧ್ವನಿ ಅಡಗಿಸಲು‌ ಯಾರಿಂದಲೂ ಸಾದ್ಯವಿಲ್ಲ, ಕಡಂಬರ ಜೊತೆ ಲಕ್ಷಾಂತರ ಕಂಬಳ ಅಭಿಮಾನಿಗಳು ಇದ್ದೇವೆ. ಅವಮಾನ ಮಾಡಿದ ವ್ಯಕ್ತಿಯನ್ನು ಕಂಬಳ ಕೂಟಕ್ಕೆ ಬಹಿಷ್ಕರಿಸಬೇಕು ಎಂದು ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆಯವರಿಗೆ ಪ್ರಶಸ್ತಿ

 

ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕ್ರಿಯೇಟಿವ್ ಕಾಲೇಜಿನಲ್ಲಿ ಜರುಗಿತು. ಕಾರ್ಕಳದಲ್ಲಿ ಸಮಾಜ ಸೇವೆಯನ್ನು ಗೈಯ್ಯುತ್ತಿರುವ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾದ ಪ್ರಕಾಶ್ ರಾವ್ ಕವಡೆಯವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕ್ರೈಸ್ಟ್ ಕಿಂಗ್:ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಹೆಬ್ರಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಕುಮಾರ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಕ್ರೈಸ್ಟ್ ಕಿಂಗ್:ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಉಪನಿರ್ದೇಶಕರ ಕಛೇರಿ ಉಡುಪಿ ಇವರ ಜಂಟಿ ಸಹಯೋಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಹೆಬ್ರಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಕುಮಾರ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

 

ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ ಸಂವಾದಕ್ಕೆ ವೇದಿಕೆ, ನುಡಿಯ ಚಿಂತನೆಗೆ ಒತ್ತು

ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು.

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ ಎಂದರು. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ ಸ್ಪಷ್ಟವಾಗುತ್ತದೆ ಎಂದರು.

ತಾಲೂಕಿನಲ್ಲಿ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ಸಾಗುತ್ತಿರುವುದು ಸಂತಸದ ಸಂಗತಿ. ಮುಂದಿನ ಪೀಳಿಗೆಗೆ ಕನ್ನಡ ಸಾಹಿತ್ಯದ ಮೇಲಿನ ಆಸಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತುಗಳು ಹೊಸ ಪ್ರಯತ್ನಗಳನ್ನು ಕೈಗೊಳ್ಳಬೇಕಿದೆ ಎಂದು ಅವರು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಡಾ. ಮಾಲತಿ ಜಿ. ಪ್ರಭು ಅವರ ‘ನನ್ನೊಳಗಿನ ನಾನು’, ಆರ್. ರಮೇಶ್ ಪ್ರಭು ಅವರ ‘ಮನದಾಳದ ಮುತ್ತುಗಳು’ ಹಾಗೂ ಶ್ರೀಧರ್ ಗೋರೆ ನೆಲ್ಯಾಡಿ ಅವರ ‘ದ್ರೇಷ್ಕಾಣ ಫಲ ಸಂಚಯ’ ಎಂಬ ಮೂರು ಹೊಸ ಕೃತಿಗಳನ್ನು ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಬಿ. ಪದ್ಮನಾಭ ಗೌಡ ಅವರು ಲೋಕಾರ್ಪಣೆಗೊಳಿಸಿದರು.

ಸಮ್ಮೇಳನದ ಅಂಗವಾಗಿ ಕ್ರಿಯೇಟಿವ್ ಪುಸ್ತಕ ಮನೆ ಜೋಡುರಸ್ತೆಯಿಂದ ಆರಂಭವಾದ ಭುವನೇಶ್ವರಿ ದೇವಿಯ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿತು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಹರಿಷತ್ ಧ್ವಜಾರೋಹಣ ಮಾಡಿದರು. ಮೆರವಣಿಗೆಗೆ ಕಾರ್ಕಳ ಯಕ್ಷ ಕಲಾರಂಗದ ಅಧ್ಯಕ್ಷ ವಿಜಯ್ ಶೆಟ್ಟಿ ಚಾಲನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮ್ಮೇಳನದ ಆಶಯವನ್ನು ವಿವರಿಸಿದರು.

ಸಮಾರೋಪದ ನುಡಿಗಳನ್ನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕರಲ್ಲಿ ಒಬ್ಬರಾದ ಅಶ್ವತ್ ಎಸ್. ಎಲ್. ರವರು ಮಾತನಾಡಿ, ಸಾಹಿತ್ಯವು ಸಮಾಜದ ಮನೋವಿಕಾಸಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಿದೆ ಎಂದು ಹೇಳಿದರು. ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಹಾಗೂ ಸಂವೇದನೆಯನ್ನು ಗಟ್ಟಿಗೊಳಿಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಹೊಸ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಓದು ಮತ್ತು ಆಸಕ್ತಿಯನ್ನು ಹೆಚ್ಚಿಸುವತ್ತ ಸಂಘಟನೆಗಳು ಹಾಗೂ ಶಿಕ್ಷಣಸಂಸ್ಥೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ. ಕೆ. ಗುಣಪಾಲ ಕಡಂಬ, ಶಿಕ್ಷಣಾಧಿಕಾರಿ ಗಿರಿಜಮ್ಮ ಎಸ್.ಆರ್., ಸಾಹಿತಿ ಎಚ್. ದುಂಡಿರಾಜ್, ಜ್ಞಾನಸುಧ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ನ್ಯಾಯವಾದಿ ಎಂ.ಕೆ. ಸುವೃತ್ ಕುಮಾರ್, ವಿವಿಧ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿದರು. ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರ್ವಹಿಸಿದರು.

 

ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ

ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.

ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಅವರು ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

ಅಷ್ಟೇ ಅಲ್ಲ ತಮಿಳು ಧಾರಾವಾಹಿಯಲ್ಲೂ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು. ತಮಿಳಿನ ʻಗೌರಿʼ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ʻಕನಕʼ ಹಾಗೂ ʻದುರ್ಗಾʼ ಎನ್ನುವ ದ್ವಿಪಾತ್ರದಲ್ಲಿ ಅವರು ನಟಿಸುತ್ತಿದ್ದರು.

ನಂದಿನಿ ಅವರ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.

ನಂದಿನಿ ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ನಂದಿನಿ ತಂದೆ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ ನಿಧನ ಬಳಿಕ ಆ ಕೆಲಸ ತಾನು ಮಾಡುವಂತೆ ಮನೆಯವರು ಒತ್ತಾಯಿಸಿದ್ದರು. ಆದ್ರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲವಂತೆ.

ಅಲ್ಲದೇ ಅನಾರೋಗ್ಯ ಸಮಸ್ಯೆಯಿಂದ ನೊಂದಿದ್ದ ನಂದಿನಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಉನ್ನಾವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

ಉನ್ನಾವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗಾರ್‌ಗೆವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯ ಮೇರೆಗೆ ಸೆಂಗಾರ್‌ಗೆ ಕೋರ್ಟ್‌ 4 ವಾರಗಳ ನೋಟಿಸ್ ಜಾರಿ ಮಾಡಿದೆ. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯೂ ಮಧ್ಯಪ್ರವೇಶಿಸಲು ನ್ಯಾಯಾಲಯವು ಅವಕಾಶ ನೀಡಿದೆ.ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರಬೇಕು ಎಂದು ಕೋರ್ಟ್‌ ಹೇಳಿತ್ತು.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಡಿ.23 ರಂದು ಅಮಾನತುಗೊಳಿಸಿ ಜಾಮೀನು ನೀಡಿತ್ತು. ಜಾಮೀನು ನೀಡಿದ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

 

ಸ್ವರ್ಣ ಪ್ರಕಾಶ್ ನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷ “ಜಾಯ್ ಫಾರ್ ಆಲ್” ಆಫರ್‌

ಸ್ವರ್ಣ ಪ್ರಕಾಶ್ ನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷ “ಜಾಯ್ ಫಾರ್ ಆಲ್” ಆಫರ್‌

ಈ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಸ್ವರ್ಣ ಪ್ರಕಾಶ ಜುವೆಲ್ಲರ್ಸ್ “ಜಾಯ್ ಫಾರ್ ಆಲ್” ಆಫರ್‌ ಮೂಲಕ ನಿಮ್ಮ ಆಭರಣ ಕನಸುಗಳನ್ನು ಸಾಕಾರಗೊಳಿಸುತ್ತಿದೆ. ಡೈಮಂಡ್ ಆಭರಣಗಳ ಮೇಲೆ ಪ್ರತೀ ಕ್ಯಾರಟ್ಗೆ ₹9,999ರವರೆಗೆ ರಿಯಾಯಿತಿ, ಚಿನ್ನದ ಆಭರಣಗಳ ಮೇಲೆ ಪ್ರತೀ ಗ್ರಾಂಗೆ ಫ್ಲಾಟ್ ₹199 ರಿಯಾಯಿತಿ ಹಾಗೂ ಹಳೆಯ ಚಿನ್ನ ವಿನಿಮಯಕ್ಕೆ ಹೆಚ್ಚುವರಿ ₹99 ಲಾಭ ದೊರೆಯುತ್ತದೆ.

ಡಿಸೆಂಬರ್ 24 ರಿಂದ ಜನವರಿ 1ರವರೆಗೆ ಮಾತ್ರ ಮಾನ್ಯವಾದ ಈ ಆಫರ್‌ನಲ್ಲಿ, ಕುಟುಂಬವೇ ಸೇರಿ ಬಂದು, ಪ್ರೀತಿ, ಕೃತಜ್ಞತೆ ಮತ್ತು ಹೊಸ ಆರಂಭಗಳನ್ನು ಹೊಳೆಯುವ ಆಭರಣಗಳ ಮೂಲಕ ಸಂಭ್ರಮಿಸಲು ಆಹ್ವಾನಿಸಲಾಗಿದೆ.

ಇಂದೇ ಭೇಟಿ ನೀಡಿ ಸ್ವರ್ಣ ಪ್ರಕಾಶ್ ಜ್ಯುವೆಲ್ಲರ್ಸ್ ಜೋಡುರಸ್ತೆ ಕಾರ್ಕಳ.