Home Blog Page 4

ನ. 9 ರಂದು ಕಾರ್ಕಳದಲ್ಲಿ ನಿತ್ಯಾಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶುಭಾರಂಭ

0

ಕಾರ್ಕಳದಲ್ಲಿ ನ. 9 ರಂದು ನೂತನವಾಗಿ ನಿತ್ಯಾಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶುಭಾರಂಭಗೊಳ್ಳಲಿದೆ.

ಕಾರ್ಕಳದ ಕ್ರೈಸ್ಟ್ ಕಿಂಗ್ ಮೈದಾನದಲ್ಲಿ ಸಂಸ್ಥೆಯ ಉದ್ಘಾಟನಾ ಸಭಾರಂಭ ಕಾರ್ಯಕ್ರಮ ನಡೆಯಲಿದ್ದು, ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಹಾಯಕ ಧರ್ಮ ಗುರು ವಂದನೀಯ ರೋಬಿನ್ ಸಾಂತುಮಾಯೆರ್ ರವರ ದಿವ್ಯ ಹಸ್ತದ ಮೂಲಕ ಉದ್ಘಾಟನೆ ನಡೆಯಲಿದೆ.

ನಿತ್ಯಾಧಾರ ಕೋ ಆಪರೇಟಿವ್ ಸೊಸೈಟಿ ನಿ. ಇದರ ಅಧ್ಯಕ್ಷ ಜೋಕಿಂ ಮೈಕಲ್ ಎಚ್. ಪಿಂಟೋ ಅಧ್ಯಕ್ಷತೆಯಲ್ಲಿ ಈ ಸಮಾರಂಭ ಕಾಯಕ್ರಮ ನಡೆಯಲಿದ್ದು, ಕಾಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಸಹಾಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್., ಜೋನ್ ಡಿ’ಸಿಲ್ವಾ ವೆಟೆರೆನ್ ಕೋ ಆಪರೇಟಿವ್ ಬ್ಯಾಂಕರ್ ಕಾರ್ಕಳ, ಕಾರ್ಕಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಪಿ. ಶೆಣೈ, ಕಾರ್ಕಳ ಬಂಟ್ಸ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಹಾಗೂ ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ (ರಿ) ಮುನಿಯಾಲು ಇದರ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮುನಿಯಾಲು, ಎಸ್. ಜೆ. ಟ್ರಾವೆಲ್ಸ್ ಮಾಲಕ ವಾಲ್ಟರ್ ಡಿ’ಸೋಜಾ, ಕಾರ್ಕಳ ಘಟಕ ಜಮಿಯತುಲ್ ಫಲಾಹ್ ಅಧ್ಯಕ್ಷ ಮಹಮ್ಮದ್ ಗೌಸ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ಕ್ರೈಸ್ಟ್ ಕಿಂಗ್ ಚರ್ಚ್ ನ ಸಹಾಯಕ ಧರ್ಮಗುರುಗಳಾದ ವಂದನೀಯ ಅವಿನಾಶ್ ಪಾಯ್ಸ್ ಅವರಿಂದ ಆಶೀರ್ವಚನ ನಡೆಯಲಿದೆ.

ಸಾರ್ವಜನಿಕರು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸೊಸೈಟಿಯ ಸೌಲಭ್ಯ ಪಡೆದುಕೊಳ್ಳಬೇಕಾಗಿ ಸಂಸ್ಥೆಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

KUPMA ಒಕ್ಕೂಟದ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

0

 

ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಅವರನ್ನು ಉಡುಪಿ ಓಸಿಯನ್‌ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು.

ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್‌ ಸಂಸ್ಥೆಯ ಅಶ್ವತ್‌ ಎಸ್‌. ಎಲ್‌, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್‌ ಸಂಸ್ಥೆಯ ಡಾ. ಗಣನಾಥ್‌ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್‌ ಚಂದ್ರ ಶೆಟ್ಟಿ,
ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್‌ ಶೆಟ್ಟಿ, ಎಕ್ಸಲೆಂಟ್‌ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್‌ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್‌ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು.

ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್‌ ವಿನ್ಸೆಂಟ್‌ ಕ್ರಾಸ್ತ, ಪ್ರೋ. ಆಲ್ಬಂಟ್‌ ರೋಡ್ರಿಗಸ್‌ (ದಂಡತೀರ್ಥ ಸಂಸ್ಥೆ) ನಾಗರಾಜ್‌ ಶೆಟ್ಟಿ ( SR ಸಂಸ್ಥೆ ಹೆಬ್ರಿ), KMES ಸಂಸ್ಥೆಯ ಇಮ್ತಿಯಾಜ್‌ ಭಾಗಿಯಾಗಿದ್ದರು.

ಸಮಿತಿಯ ನೂತನ ಪದಾಧಿಕಾರಿಗಳನ್ನು KUPMA ರಾಜ್ಯ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್‌ ಆಳ್ವರು ಹಾಗೂ ಕಾರ್ಯದರ್ಶಿಗಳಾದ ನರೇಂದ್ರ ನಾಯಕ್‌ ರವರು ಅಭಿನಂದಿಸಿದ್ದಾರೆ.

ಮಣಿಪಾಲ ಜ್ಞಾನಸುಧಾ : ಎನ್.ಸಿ.ಸಿ. ನೌಕಾದಳ ಉದ್ಘಾಟನೆ

0

ಜೀವನದ ಆಕಾಂಕ್ಷೆಗಳ ಜೊತೆಗೆ ದೇಶ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು- ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಕಲ್ಪವೃಕ್ಷದಂತೆ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ: ಕಮಾಂಡರ್ ಅಶ್ವಿನ್ ಎಂ. ರಾವ್

ನಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಆಸೆ ಆಕಾಂಕ್ಷೆ, ಕನಸುಗಳನ್ನು ಸಿಗುವ ಅವಕಾಶಗಳಿಂದ ಈಡೇರಿಸಿಕೊಳ್ಳುವುದರ ಜೊತೆಗೆ, ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಮನಸ್ಸಿನ ನಿಗ್ರಹ ನಮ್ಮ ಹತೋಟಿಗೆ ಬರುವುದು ಶಿಕ್ಷಣದಿಂದ ಮಾತ್ರ. ಅದರೊಂದಿಗೆ ಎನ್.ಸಿ.ಸಿ ಯಂತಹ ಅತ್ಯುತ್ತಮ ಸಂಘಟನೆಯನ್ನು ಸೇರುವ ಮೂಲಕ ಮಕ್ಕಳಲ್ಲಿ ದೇಶಭಕ್ತಿಯ ಭಾವವನ್ನು ಉನ್ನತೀಕರಿಸುತ್ತದೆ ಎಂದು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆದ ಎನ್.ಸಿ.ಸಿ. ನೇವಿ(ನೌಕಾದಳ) ಉದ್ಘಾಟನೆಗೆ(ರೈಸಿಂಗ್ ಡೇ) ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಉದ್ಘಾಟನೆಗೆ ಆಗಮಿಸಿದ ಇನ್ನೋರ್ವ ಅತಿಥಿ ಕಮಾಂಡಿಂಗ್ ಆಫೀಸರ್ 6 KAR NU NCC ಉಡುಪಿಯ ಕಮಾಂಡರ್ ಅಶ್ವಿನ್ ಎಂ. ರಾವ್ ಅವರು ಮಾತನಾಡಿ, ಶ್ವೇತ ವರ್ಣದ ಸಮವಸ್ತ್ರ ಧರಿಸಿ ಬಂದಿರುವ ಎಲ್ಲಾ ಕೆಡಿಟ್ಗಳು ತಮ್ಮ ವ್ಯಕ್ತಿತ್ವವನ್ನು ಸಹ ಅದರಷ್ಟೇ ಉತ್ತಮವಾಗಿ ರೂಪಿಸಿಕೊಂಡು, ‘ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ’ ಎಂಬ ಮಾತಿನಂತೆ ದೇಶಕ್ಕಾಗಿ ಕೊಡುಗೆ ನೀಡುತ್ತಾ ಕಲ್ಪವೃಕ್ಷದಂತೆ ಸಮಾಜಕ್ಕೆ ಮಾದರಿಯ ವ್ಯಕ್ತಿಗಳಾಗಿ ಬೆಳೆಯಿರಿ ಎಂದು ಶುಭಕೋರಿದರು.

ಅತಿಥಿ ಗಣ್ಯರಲ್ಲಿ ಒಬ್ಬರಾದ ಸುಬೇದಾರ್ ಮೇಜರ್ ಗಣಪಯ್ಯ ಶೇರಿಗಾರ್ (ನಿವೃತ್ತ), ಅಧ್ಯಕ್ಷರು, ಮಾಜಿ ಸೈನಿಕರ ವೇದಿಕೆ, ಉಡುಪಿ ಜಿಲ್ಲೆ ಇವರಿಗೆ ಕಾರ್ಯಕ್ರಮದ ವೇದಿಕೆಯಲ್ಲಿ ಈ ನಾಡಿಗಾಗಿ, ಗಡಿಯ ರಕ್ಷಣೆಗಾಗಿ ಹಗಲಿರುಳು ದುಡಿಯುವ ದೇಶದ ಎಲ್ಲಾ ಸೈನಿಕರ ಪರವಾಗಿ ಸನ್ಮಾನಿಸಲಾಯಿತು.

Àgï6 KAR NU NCC, ಉಡುಪಿಯ ಎಕ್ಸಿಕ್ಯೂಟಿವ್ ಆಫೀಸರ್ ಲೆಫ್ಟಿನೆಂಟ್ ಕಮಾಂಡರ್ ಎಂ. ಎ. ಮುಲ್ತಾನಿ, ಅತಿಥಿಗಳಾಗಿ ಭಾಗವಹಿಸಿದ್ದರು. ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರುಗಳಾದ ಹೇಮಂತ್ ಹಾಗೂ ರವಿ ಜಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಶಮಿತ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ: ನ. 15 ರಂದು ಕಾರ್ಕಳದಲ್ಲಿ ಪಟ್ಲ ಸಂಭ್ರಮ; ಶ್ರೀದೇವಿ ಮಹಾತ್ಮೆ ಬಯಲಾಟ

0

 

ಯಕ್ಷಗಾನ, ನಾಟಕ, ದೈವಾರಾಧನೆ, ಮುಂತಾದ ಕ್ಷೇತ್ರದ ಕಲಾವಿದರ ಶ್ರೇಯೋಭಿವೃದ್ದಿಗಾಗಿರುವ ಸಂಘಟನೆ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು ನ. 15 ರಂದು ಕಾರ್ಕಳ ಬಸ್ಸು ನಿಲ್ದಾಣ ಬಳಿಯ ಮಾರಿಗುಡಿ ವಠಾರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕ ಅದ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಸಭಾದ್ಯಕ್ಷತೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ ವಿ.ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ.

ಕಾರ್ಕಳದ ಎಸ್. ಕೆ .ಎಸ್ ಇನ್ಫ್ರಾಪ್ರಾಕ್ಕ್ಚರ್ಸ್ ನ ಸುಜಯ್ ಶೆಟ್ಟಿ, ಅಜೆಕಾರ್ ನಂದ ಕುಮಾರ್ ಹೆಗ್ಡೆ, ಸಾಣೂರು ಯುವರಾಜ ಜೈನ್, ಹಾಗೂ ಕೇಂದ್ರೀಯ ಸಮಿತಿಯ ಪ್ರದಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾದಿಕಾರಿ ಸುದೇಶ್ ಕುಮಾರ್ ರೈ ಇವರಗಳು ಗೌರವ ಉಪಸ್ಥಿತಿ ಇರಲಿದೆ.

ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ವ್ಯವಸಾಯ ಮಾಡಿ ನಿವೃತ್ತರಾದ ದಿ.ವಸಂತ ಆಚಾರ್ ಇವರಿಗೆ ಮರಣೋತ್ತರವಾಗಿ, ಮತ್ತು ನಂದಳಿಕೆ ಜನಾರ್ದನ ಶಾಸ್ತ್ರೀ ಇವರಿಗೆ ಪಟ್ಲ ಪ್ರಶಸ್ತಿ ನೀಡಿ ಗೌರವಿಸಲಿಕ್ಕಿದೆ.

ಪಾವಂಜೆಯ ಜ್ಞಾನಶಕ್ತಿ ಸುಬ್ರಹ್ಮಣ್ಯ ಮೇಳದವರಿಂದ ಕಾಲಮಿತಿಯಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ. ಕಲಾಭಿಮಾನಿಗಳಿಗೆ ಆದರದ ಸ್ವಾಗತ ಎಂದು ಸಂಸ್ಥೆಯ ಅದ್ಯಕ್ಷ ವಿಜಯ ಶೆಟ್ಟಿ, ಕಾರ್ಯದರ್ಶಿ ಮಹಾವೀರ ಪಾಂಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಂದೇ ಮಾತರಂಗೆ 150 ವರ್ಷದ ಸಂಭ್ರಮ : ಕಾರ್ಕಳ ಬಿಜೆಪಿ ವತಿಯಿಂದ ವಂದೇ ಮಾತರಂ ಗಾಯನ

0

ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕ, ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ರವರ ಉಪಸ್ಥಿತಿಯಲ್ಲಿ ಕಾರ್ಕಳದ ಮಂಡಲಾಧ್ಯಕ್ಷ ನವೀನ್ ನಾಯಕ್ ನೇತೃತ್ವದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್‌ ಹೆಗ್ಡೆ, ಯುವಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಸಾದ್‌ ಐಸಿರ ಸೇರಿದಂತೆ ಪಕ್ಷದ ಪ್ರಮುಖರು, ಬಿಜೆಪಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

 

ಕಾರ್ಕಳ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಧರ್ ಭಟ್ ಅವರಿಗೆ ಸನ್ಮಾನ ಶ್ರೀಧರ ಭಟ್ರ ಮೂಲಕ ಬಲಿ ಮೂರ್ತಿ ಸೇವೆಯಲ್ಲಿ ದೇವರ ಪ್ರತಿಬಿಂಬ ಕಾಣುತಿದ್ದೇವೆ-ಗಿರೀಶ್ ರಾವ್

0

ಕಾರ್ಕಳ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಧರ್ ಭಟ್ ಅವರಿಗೆ ಸನ್ಮಾನ

ಶ್ರೀಧರ ಭಟ್ರ ಮೂಲಕ ಬಲಿ ಮೂರ್ತಿ ಸೇವೆಯಲ್ಲಿ ದೇವರ ಪ್ರತಿಬಿಂಬ ಕಾಣುತಿದ್ದೇವೆ-ಗಿರೀಶ್ ರಾವ್

ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 55 ವರ್ಷಗಳಿಂದ ಬಲಿ ಸೇವೆಯನ್ನು ನೀಡುತ್ತಿರುವ ಶ್ರೀಧರ್ ಭಟ್ ರವರಿಗೆ ಈ ವರ್ಷ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಜರಗುವ ವರ್ಷಾವಧಿ ಬಲಿ ಉತ್ಸವ ಮೆರವಣಿಗೆಯ ಸಂದರ್ಭ ಇವರನ್ನು ದೇವಳದ ಆಡಳಿತ ಮಂಡಳಿಯ ಪರವಾಗಿ ಭಕ್ತಿ ಪೂರ್ವಕವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಯವರಾದ ಶ್ರೀ ಸುಬ್ರಹ್ಮಣ್ಯ ತಂತ್ರಿ, ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಮೊಕ್ತೆಸರರಾದ ಗಣೇಶ್ ರಾವ್, ಸುಧೀಂದ್ರರಾವ್, ರಾಮಚಂದ್ರರಾವ, ದಯಾನಂದರಾವ್, ಸೇವಾ ಸಮಿತಿಯ ಸಂಚಾಲಕರಾದ ವೀರೇಂದ್ರ ರಾವ್ ಹಾಗೂ ಸಮಾಜ ಬಂಧುಗಳು ಉಪಸ್ಥಿತರಿದ್ದರು

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: “ಬಾಂಧವ್ಯ” ವಿಶೇಷ ಕಾರ್ಯಕ್ರಮ

0

 

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಬಾಂಧವ್ಯ ನಿರ್ಮಿಸಿದೆ – ಸುರೇಶ್ ಅಬ್ಬನಡ್ಕ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಒಂದು ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಕೌಟುಂಬಿಕ ಬಾಂಧವ್ಯದ ಸಂಬಂಧ ನಿರ್ಮಿಸಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಹೇಳಿದರು.

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ 26ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಬಾಂಧವ್ಯ” ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು ಕನಸನ್ನು ಹೊತ್ತಂತಹ ನಮ್ಮ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆ ಸೂಕ್ತ ವೇದಿಕೆ ನಿರ್ಮಿಸಲು ನಮ್ಮ ಸಂಸ್ಥೆಯೂ ಯೋಜನೆಯನ್ನು ರೂಪಿಸುತ್ತಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಕೀರ್ತನ್ ಬೋಳ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಹರಿಣಿ ಪೂಜಾರಿ, ವೀಣಾ ಆಚಾರ್ಯ, ಹರಿಣಾಕ್ಷಿ ಪೂಜಾರಿ, ಯೋಗೀಶ್ ಆಚಾರ್ಯ, ಶ್ರೀಕಾಂತ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಬೋಳ ಮೊದಲಾದವರಿದ್ದರು.

ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ-ರಾಹುಲ್‌ ಗಾಂಧಿ ಸೀಮಾ, ಸ್ವೀಟಿ, ಸರಸ್ವತಿ ಹೆಸರಿನಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೇಜಿಲ್‌ನ ಮಾಡೆಲ್‌

0

ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ-ರಾಹುಲ್‌ ಗಾಂಧಿ

ಸೀಮಾ, ಸ್ವೀಟಿ, ಸರಸ್ವತಿ ಹೆಸರಿನಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೇಜಿಲ್‌ನ ಮಾಡೆಲ್‌

2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೊಸ ಬಾಂಬ್‌ ಸಿಡಿಸಿದರು.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು. ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲೂ ಇದೇ ರೀತಿಯ ದೂರು ಬಂದಿದ್ದವು. ಈಗ ನಾವು ಹರಿಯಾಣವನ್ನ ಕೇಂದ್ರೀಕರಿಸಿದ್ದೇವೆ ಎಂದು ತಿಳಿಸಿದ್ರು.

ಹರಿಯಾಣ ಚುನಾವಣೆ ವೇಳೆ ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ 52 ರಿಂದ 62 ಸ್ಥಾನಗಳಷ್ಟು ಮುಂದಿತ್ತು. ಅದರಂತೆ ಹರಿಯಾಣ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಸ್ವೀಪ್ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಫಲಿತಾಂಶ ಸಂಪೂರ್ಣ ವಿಭಿನ್ನವಾಗಿತ್ತು. ಹರಿಯಾಣದಲ್ಲಿ ಫಸ್ಟ್‌ ಟೈಮ್‌ ಅಂಚೆ ಮತಗಳು ಮತ್ತು ಸಾಮಾನ್ಯ ಮತಗಳಲ್ಲಿ ವ್ಯತ್ಯಾಸ ಆಗಿರುವುದು ಕಂಡುಬಂದಿತು ಎಂದು ಆರೋಪಿಸಿದರು.

ಕಾಂಗ್ರೆಸ್‌ ಕೇವಲ 22,779 ಮತಗಳಿಂದ ಸೋತಿದೆ. ಆದ್ರೆ ಒಟ್ಟು 1.18 ಲಕ್ಷ ಮತಗಳು ವ್ಯತ್ಯಾಸ ಇದೆ. ಅಷ್ಟೇ ಅಲ್ಲ ಹರಿಯಾಣದಲ್ಲಿ 25 ಲಕ್ಷ ಮತಗಳ ಕಳ್ಳತನ ನಡೆದಿದೆ. ಶೇ.12.5 ರಷ್ಟು ನಕಲಿ ಮತಗಳು, 93,000 ವಿಳಾಸಗಳು ಅಮಾನ್ಯವಾದವುಗಳು ಎಂದು ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ.

ಒಬ್ಬ ಮಹಿಳೆಯಿಂದ 22 ಬಾರಿ ವೋಟ್‌
ಒಬ್ಬ ಮಹಿಳೆ ಸೀಮಾ, ಸ್ವೀಟಿ, ಸರಸ್ವತಿ ಸೇರಿದಂತೆ ಹಲವು ಹೆಸರಿನಲ್ಲಿ 22 ಬಾರಿ ಮತ ಚಲಾಯಿಸಿದ್ದಾಳೆ, 10 ಬೂತ್ ನಲ್ಲಿ ಮತ ಚಲಾವಣೆಯಾಗಿದೆ. ಈ ಮಹಿಳೆ ಬ್ರೇಜಿಲ್‌ನ ಮಾಡೆಲ್‌ ಅನ್ನೋದು ನಂತರ ಗೊತ್ತಾಗಿದೆ. 25 ಲಕ್ಷ ಮತ ಕಳ್ಳತನ ಆಗಿದೆ ಅನ್ನೋದಕ್ಕೆ ಈಕೆಯೇ ಉದಾಹರಣೆ ಎಂದು ದಾಖಲೆ ಸಮೇತ ಸತ್ಯ ಸಂಗತಿಯನ್ನ ಬಿಚ್ಚಿಟ್ಟರು.

ಒಂದೇ ಗುರುತಿನಲ್ಲಿ ಹಲವು ಮತಗಳನ್ನ ಚಲಾಯಿಸಲು ನಕಲಿ ಫೋಟೋಗಳನ್ನ ಬಳಸಲಾಗಿದೆ. ಹರಿಯಾಣ ಚುನಾವಣೆಯ 2 ಕೋಟಿ ಮತಗಳಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ. ಪ್ರತಿ 8 ಮತದಾರರಲ್ಲಿ ಒಂದು ಮತ ನಕಲಿ ಆಗಿದೆ. ಒಂದು ಗುರುತಿನ ಚೀಟಿಯಲ್ಲಿ ಒಂದೇ ಕ್ಷೇತ್ರದಲ್ಲಿ ನೂರು ಮತಗಳು ಕಂಡುಬಂದಿವೆ ಇವೆಲ್ಲವೂ ಮತಗಳ್ಳತನಕ್ಕೆ ಉದಾಹರನೆ ಎಂದು ರಾಗಾ ಬಾಂಬ್‌ ಹಾಕಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪೂರ್ತಿ ಮಾತು 12ನೇ ಸರಣಿ ಕಾರ್ಯಕ್ರಮ

0

ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಮುಖ್ಯ – ಎನ್.ಆರ್.ದಾಮೋದರ ಶರ್ಮ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮ – 12ನ್ನು ನ. 3 ರಂದು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳಾದ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಪ್ರೇರಣೆಯ ಮಾತುಗಳನ್ನಾಡುತ್ತಾ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ. ಪ್ರತಿದಿನ ಹೊಸದಾಗಿ ಕಲಿಯುವ ಮನಸ್ಸು ಬೆಳೆಸಿಕೊಳ್ಳಿ. ಜೀವನದಲ್ಲಿ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಕ್ಷಣಿಕ ಸಂತೋಷಕ್ಕೆ ಹಾತೊರೆಯುವ ಮನಸ್ಸನ್ನು ನಿಯಂತ್ರಿಸಿ, ಜೀವನವನ್ನು ಯಶಸ್ಸಿನ ದಡಕ್ಕೆ ಕರೆದೊಯ್ಯಬೇಕು. ಇತರರ ಮಾತಿಗೆ ಕಿವಿಯಾಗುವ ಮೊದಲು ಆತ್ಮದ ಮಾತನ್ನು ಆಲಿಸೋಣ. ತಾಯಿಯ ತ್ಯಾಗಕ್ಕೆ ಸಮನಾದ ತ್ಯಾಗ, ಪ್ರೀತಿ ಬೇರೊಂದಿಲ್ಲ. ತಂದೆಯ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಭಾರತದ ಜ್ಞಾನ ಪರಂಪರೆ ನಮಗೆ ಹೇಳಿರುವ ಉಪದೇಶಗಳನ್ನು ಅರಿತುಕೊಳ್ಳೋಣ. ಮಾತೃಭೂಮಿಯ ಬಗೆಗಿನ ಪ್ರೀತಿ ಗೌರವ ನಮ್ಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತವೆ ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಹಾಗೂ ಅಶ್ವತ್ ಎಸ್.ಎಲ್ ರವರು ಗೌರವ ಉಪಸ್ಥಿತಿ ವಹಿಸಿದ್ದರು. ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಸ್ಥೆಯ ವತಿಯಿಂದ ಎನ್. ಆರ್. ದಾಮೋದರ ಶರ್ಮರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಕೃತ ಉಪನ್ಯಾಸಕಿ ಡಾ. ಸೌಂದರ್ಯ ಲಕ್ಷ್ಮಿರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರ ಹಸ್ತಾಂತರ

0

 

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಅಲೆವೂರು ಹರೀಶ್ ಕಿಣಿಯವರಿಗೆ ಹಸ್ತಾಂತರಿಸಿದರು.

ಬೆಂಗಳೂರಿನ ಕ್ರೀನ್ಸ್ ರಸ್ತೆಯಲ್ಲಿರುವ ಕೆ.ಪಿ.ಸಿ.ಸಿ ಕಛೇರಿಯಲ್ಲಿ ನಡೆದ ವಿವಿಧ ಜಿಲ್ಲಾದ್ಯಕ್ಷರುಗಳ ಮತ್ತು ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಸಹ ಅಧ್ಯಕ್ಷರಾದ ಮಾಜಿ ರಾಜ್ಯ ಸಭಾ ಸದಸ್ಯ ಹನುಮಂತಯ್ಯ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿ,ರಾಜ್ಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್, ಇನ್ನೊರ್ವ ರಾಜ್ಯ ಉಪಾಧ್ಯಕ್ಷ (ಆಡಳಿತ)ಮುನೀರ್ ಜನ್ಸಾಲೆ ಮೊದಲಾದವರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳಲ್ಲಿ ಅಲೆವೂರು ಹರೀಶ್ ಕಿಣಿ ಅಧ್ಯಕ್ಷರು, ದಿನಕರ್ ಶೆಟ್ಟಿ ಸುಧಾಕರ್ ಪೂಜಾರಿ ಉಪಾಧ್ಯಕ್ಷರು, ಶ್ರೀಧರ್ ಪಿ.ಎಸ್, ಐಡಾ ಗಿಲ್ಬರ್ಟ್ ಡಿ ಸೋಜ, ಗಣೇಶ್ ರಾಜ್,ಅನಿಲ್ ಎಸ್. ಪೂಜಾರಿ ಜಿಲ್ಲಾ ಸಂಯೋಜಕರು, ಅನಿಲ್ ಶೆಟ್ಟಿ ಸರಸ್ಕೃತಿ ವಿನಾಯ್, ಸುಮನ ಎಸ್., ಅಭಿಷೇಕ್ ಎನ್.ಮೂರ್ತಿ ಜಂಟಿ ಸಂಯೋಜಕರಾಗಿ ಆಯ್ಕೆ ಗೊಂಡರೆ ದಯಾನಂದ ಡಿ. ಜಿಲ್ಲಾ ಖಜಾಂಚಿ, ಸದಸ್ಯರಾಗಿ ಗಣೇಶ್, ಬಿ. ಶ್ರೀಧರ್ ಶೇಟ್, ಯೋಗೀಶ್ ಆಚಾರ್ಯ,ಗೋವರ್ಧನ್ ಜೋಗಿ, ಇಕ್ಯಾಲ್ ಮನ್ನ ಸುಪ್ರೀತ್ ಶೆಟ್ಟಿ, ಜಯ ಶೇರಿಗಾರ್, ಪ್ರಭಾಕರ್ ಆಚಾರ್ಯ, ಆದರ್ಶ್ ಯು, ಚಂದ್ರಿಕಾ ಶೆಟ್ಟಿ,ಎಮ್ ಪ್ರೇಮಾನಂದ ಮಿನೇಜಸ್ ಆಗಿ ನೇಮಕಗೊಡರು.